ಜಾತ್ಯಾತೀತ ಜನತಾದಳ ದೊಡ್ಡಬಳ್ಳಾಪುರ ತಾಲೂಕು ವತಿಯಿಂದ ಜೆಡಿಎಸ್ ಕಾರ್ಯಕರ್ತರ ಸಭೆಯನ್ನು ಜ.10(ಶನಿವಾರ)ರಂದು ದೊಡ್ಡಬಳ್ಳಾಪುರ ನಗರದ ಒಕ್ಕಲಿಗರ ಸಮುದಾಯ ಭವನದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಜೆಡಿಎಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ಹರೀಶ್ ಗೌಡ ಹೇಳಿದರು.
ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಜೆಡಿಎಸ್ ಪಕ್ಷದ ಸಂಘಟನೆ ಹಾಗೂ ಬಲವರ್ಧನೆಗಾಗಿ ಕಾರ್ಯಕರ್ತರ ಸಭೆಯನ್ನು ಹಮ್ಮಿಕೊಳ್ಳಲಾಗಿದೆ.. ಮುಖ್ಯ ಅತಿಥಿಗಳಾಗಿ ಕರ್ನಾಟಕ ರಾಜ್ಯ ಜೆಡಿಎಸ್ ಕೋರ್ ಕಮಿಟಿ ಅಧ್ಯಕ್ಷರಾದ ಜೆ.ಕೆ ಕೃಷ್ಣಾರೆಡ್ಡಿ ಭಾಗವಹಿಸಲಿದ್ದಾರೆ ಎಂದರು.
ಸಭೆಯ ಉದ್ದೇಶ ಮುಂಬರುವ ಸ್ಥಳೀಯ ಸಂಸ್ಥೆಗಳ ಚುನಾವಣೆಗಳ ಪೂರ್ವ ಸಿದ್ಧತೆಯ ಬಗ್ಗೆ ಚರ್ಚೆ, ಹಿತದೃಷ್ಟಿಯಿಂದ ಪಕ್ಷದ ಕಾರ್ಯಕರ್ತರ ಹಾಗೂ ಸ್ಥಳೀಯ ನಾಯಕರ ನಾಡಿಮಿಡಿತವನ್ನು ಅರಿಯುವುದು. ರಾಜ್ಯ ನಾಯಕರ ಮಾರ್ಗದರ್ಶನದಲ್ಲಿ ಪಕ್ಷದ ಮುಂದಿನ ಗುರಿಗಳ ಬಗ್ಗೆ ಚರ್ಚೆ ಮಾಡಲಾಗುತ್ತದೆ. ಆದ್ದರಿಂದ ಪಕ್ಷದ ಎಲ್ಲಾ ಹಿರಿಯ ಮುಖಂಡರು, ಪದಾಧಿಕಾರಿಗಳು, ಕಾರ್ಯಕರ್ತರು ಭಾಗವಹಿಸಬೇಕು ಎಂದು ಮನವಿ ಮಾಡಿದರು ಎಂದು ಹೇಳಿದರು.
ಎನ್ ಡಿಎ ಆದ ಮೇಲೆ ನಮ್ಮ ತಾಲೂಕಿನಲ್ಲಿ ಪಕ್ಷ ಯಾವ ಸ್ಥಿತಿಯಲ್ಲಿದೆ ಎಂಬ ತಿಳಿಯಲು ಸಭೆಯನ್ನ ಆಯೋಜನೆ ಮಾಡಲಾಗಿದೆ. ಜಾಲಪ್ಪನವರು ಪಕ್ಷದಿಂದ ಹೋದಾಗಿನಿಂದ ತಾಲೂಕಿನಲ್ಲಿ ಜೆಡಿಎಸ್ ಪಕ್ಷ ಅಧಿಕಾರ ಚುಕ್ಕಾಣಿ ಹಿಡಿಯಲು ಆಗುತ್ತಿಲ್ಲ. ಅದಕ್ಕೆ ಕಾರಣಗಳನ್ನು ಹುಡುಕಲು ಸಭೆ ಕರೆಯಲಾಗಿದೆ.
ಈ ಸಭೆ ಬಲ ಪ್ರದರ್ಶನ ಸಭೆಯಲ್ಲ, ಕಾರ್ಯಕರ್ತರ ಸಭೆ ಇದು ಎಂದು ಹೇಳಿದರು..
ಈ ವೇಳೆ ನಗರಸಭೆ ಸದಸ್ಯರಾದ ತಾ.ನ ಪ್ರಭುದೇವ್, ವಡ್ಡರಹಳ್ಳಿ ರವಿ, ಡಾ. ವಿಜಯ್ ಕುಮಾರ್, ಪಿಎಲ್ ಡಿ ಬ್ಯಾಂಕ್ ಉಪಾಧ್ಯಕ್ಷ ರಾಮಚಂದ್ರಬಾಬು, ಕೆಂಪರಾಜು, ಸತ್ಯನಾರಾಯಣ, ಶಾಂತಮ್ಮ ಸೇರಿದಂತೆ ಇತರರು ಉಪಸ್ಥಿತರಿದ್ದರು.
ಉಡುಪಿ: ಉಡುಪಿ ಜಿಲ್ಲೆಯ ಕೋಟದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ರಾಜ್ಯ ಜ್ಞಾನಗಂಗಾ ಸಾಹಿತ್ಯ…
ಬೆಂಗಳೂರು: ರಾಜ್ಯದ ಸಾರ್ವಜನಿಕರಿಗೆ ಅಗತ್ಯ ಪ್ರಮಾಣಪತ್ರಗಳು ಮತ್ತು ಕಂದಾಯ ಇಲಾಖೆಯ ವಿವಿಧ ಸೇವೆಗಳನ್ನು ಒದಗಿಸುವ ನಾಡಕಚೇರಿ ಸೇವೆ ಕಳೆದ ಕೆಲವು…
ದೊಡ್ಡಬಳ್ಳಾಪುರ: ತಾಲೂಕಿನ ಮಧುರನಹೊಸಹಳ್ಳಿ ಗ್ರಾಮದಲ್ಲಿ ವರ್ಷದ ಮೊದಲ ಹಬ್ಬವೆಂದು ಪರಿಗಣಿಸಲ್ಪಡುವ ಆಷಾಡ ಏಕಾದಶಿಯನ್ನು ಭಕ್ತಿ, ಸಂಭ್ರಮ ಹಾಗೂ ಸಾಂಪ್ರದಾಯಿಕ ವೈಭವದೊಂದಿಗೆ…
ದೊಡ್ಡಬಳ್ಳಾಪುರ: ಬಾಶೆಟ್ಟಿಹಳ್ಳಿ ಸಮೀಪದ ಯಲಹಂಕ–ಹಿಂದೂಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಯೂ-ಟರ್ನ್ ಪಡೆಯುವ ವೇಳೆ ಟ್ರಕ್ ಏಕಾಏಕಿ ಕೆಟ್ಟು ನಿಂತ ಪರಿಣಾಮ ಕೆಲಕಾಲ…
ಬೆಂಗಳೂರು ಗ್ರಾಮಾಂತರ: ರಾಜ್ಯದ ಪ್ರಮುಖ ಸಂಪರ್ಕ ಮಾರ್ಗಗಳಲ್ಲಿ ಒಂದಾಗಿರುವ 84 ಕಿ.ಮೀ. ಉದ್ದದ ದಾಬಸ್ಪೇಟೆ–ಹೊಸಕೋಟೆ ರಾಷ್ಟ್ರೀಯ ಹೆದ್ದಾರಿ-648ರಲ್ಲಿ ಸಾರ್ವಜನಿಕರ ಸುರಕ್ಷಿತ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ-2026ರ (ಎಸ್ಐಆರ್) ಪ್ರಕ್ರಿಯೆ ಬಿರುಸಿನಿಂದ ಸಾಗುತ್ತಿದ್ದು, ಜಿಲ್ಲೆಯಾದ್ಯಂತ ಒಟ್ಟು 15,721 ಮೃತರ…