ದಕ್ಷಿಣ ಭಾರತದ ಸುಪ್ರಸಿದ್ಧ ಧಾರ್ಮಿಕ ಕ್ಷೇತ್ರವಾದ ತಾಲೂಕಿನ ತೂಬಗೆರೆ ಹೋಬಳಿಯ ಶ್ರೀ ಘಾಟಿ ಕ್ಷೇತ್ರದಲ್ಲಿ ನೆಲೆಸಿರುವ ಶ್ರೀ ಸುಬ್ರಹ್ಮಣ್ಯ ಸ್ವಾಮಿಯ ಬ್ರಹ್ಮರಥೋತ್ಸವ ಕಾರ್ಯಕ್ರಮವು ಜ.16ನೇ ಮಂಗಳವಾರ ಮಧ್ಯಾಹ್ನ 12-15ರಿಂದ 12-30 ಗಂಟೆಗೆ ಸಲ್ಲುವ ಶುಭ ಮೇಷ ಲಗ್ನ ಮುಹೂರ್ತದಲ್ಲಿ ನಡೆಯಲಿದೆ.
ಚಿನ್ನಾಭರಣ ಕಳವು ಸೇರಿದಂತೆ ಯಾವುದೇ ಅಪರಾಧ ಕೃತ್ಯಗಳು ನಡೆಯದಂತೆ ತಡೆಯಲು ದ್ರೋಣ್ ಕ್ಯಾಮೆರಾ ಮತ್ತು ದೇವಾಲಯದ ಸುತ್ತಾಮುತ್ತಾ ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸಲಾಗಿದೆ.
ಬ್ರಹ್ಮರಥೋತ್ಸವಕ್ಕೆ ಬರುವ ಸಹಸ್ರಾರು ಭಕ್ತಾಧಿಗಳಿಗೆ ಮೊಬೈಲ್ ಶೌಚಾಲಯ ವ್ಯವಸ್ಥೆ ಕಲ್ಪಿಸಲಾಗಿದ್ದು, ಶುಧ್ಧ ಕುಡಿಯುವ ನೀರಿನ ಟ್ಯಾಂಕರ್ಗಳನ್ನು ವ್ಯವಸ್ಥೆ ಮಾಡಲಾಗಿದೆ ಎಂದು ದೇವಾಲಯದ ಆಡಳಿತ ಮಂಡಳಿ ತಿಳಿಸಿದೆ.
ಸಂಚಾರ ದಟ್ಟಣೆ ನಿಯಂತ್ರಿಸಲು ದೇವಾಲಯದಿಂದ 1 ಕಿ.ಮೀ ಅಂತರದಲ್ಲೇ 14 ಕಡೆ ಬೈಕ್, ಕಾರು, ಬಸ್ ಗಳಿಗೆ ಪ್ರತ್ಯೇಕ ಪಾರ್ಕಿಂಗ್ ವ್ಯವಸ್ಥೆ ಕಲ್ಪಿಸಲಾಗಿದೆ.
ಘಾಟಿ ಬ್ರಹ್ಮರಥೋತ್ಸವಕ್ಕೆ ಬಿಗಿ ಪೊಲೀಸ್ ಭದ್ರತೆ ಒದಗಿಸಲಿದ್ದು, 500ಮಂದಿ ಪೊಲೀಸ್ ಸಿಬ್ಬಂದಿ, 100 ಮಂದಿ ಗೃಹ ರಕ್ಷಕ ಸಿಬ್ಬಂದಿ, 3 ಜಿಲ್ಲಾ ಸಶಸ್ತ್ರ ಪಡೆಯಿಂದ 3 ತುಕಡಿ, ಕರ್ನಾಟಕ ರಾಜ್ಯ ಮೀಸಲು ಪಡೆಯಿಂದ ಒಂದು ತುಕಡಿಯನ್ನ ಭದ್ರತೆಗೆ ನಿಯೋಜನೆ ಮಾಡಲಾಗಿದೆ.
ಅಗತ್ಯವಿರುವ ಕಡೆ ಬ್ಯಾರಿಕೇಡ್ ವ್ಯವಸ್ಥೆ ಸಹ ಮಾಡಲಾಗಿದೆ ಎಂದು ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣಾ ಇನ್ಸ್ ಪೆಕ್ಟರ್ ಮುನಿಕೃಷ್ಣ ಅವರು ತಿಳಿಸಿದ್ದಾರೆ.
ಜ.16ರಂದು ತಾಲೂಕಿನ ಇತಿಹಾಸ ಪ್ರಸಿದ್ಧ ಶ್ರೀ ಘಾಟಿ ಸುಬ್ರಹ್ಮಣ್ಯ ಸ್ವಾಮಿ ಜಾತ್ರಾ ಮಹೋತ್ಸವದ ಪ್ರಯುಕ್ತ ಕೆ.ಎಸ್.ಆರ್.ಟಿ.ಸಿ ವತಿಯಿಂದ ಘಾಟಿಯಿಂದ ದೊಡ್ಡಬಳ್ಳಾಪುರ, ಬೆಂಗಳೂರು, ಚಿಕ್ಕಬಳ್ಳಾಪುರ, ಗೌರಿಬಿದನೂರು, ಕೋಲಾರ ಹಾಗೂ ಮುಂತಾದ ಸ್ಥಳಗಳಿಗೆ 84 ವಿಶೇಷ ಬಸ್ ವ್ಯವಸ್ಥೆ ಮಾಡಲಾಗಿದೆ ಎಂದು ಕೆ.ಎಸ್.ಆರ್.ಟಿ.ಸಿ ದೊಡ್ಡಬಳ್ಳಾಪುರ ಘಟಕದ ವ್ಯವಸ್ಥಾಪಕ ಎಸ್.ಆರ್.ಸಂತೋಷ್ ತಿಳಿಸಿದ್ದಾರೆ.
‘ಶಕ್ತಿ ಯೋಜನೆ’ ಅಡಿಯಲ್ಲಿ ಮಹಿಳಾ ಪ್ರಯಾಣಿಕರು ಉಚಿತವಾಗಿ ನಿಗಮದ ಬಸ್ಸುಗಳಲ್ಲಿ ಪ್ರಯಾಣಿಸುವ ಅವಕಾಶವಿರುತ್ತದೆ. ಪ್ರಯಾಣಿಕರು ಇದರ ಸದುಪಯೋಗ ಪಡೆದುಕೊಳ್ಳಬೇಕು. ಸುಖಕರ ಹಾಗೂ ಸುರಕ್ಷಿತ ಪ್ರಯಾಣಕ್ಕೆ ಕೆ.ಎಸ್.ಆರ್.ಟಿ.ಸಿ ಬಸ್ಸುಗಳಲ್ಲಿಯೇ ಪ್ರಯಾಣಿಸಲು ಕೋರಲಾಗಿದೆ.
ದೊಡ್ಡಬಳ್ಳಾಪುರ: ಕೇವಲ 200 ರೂಪಾಯಿ ಬಾಕಿ ಹಣ ಕೇಳಿದ್ದಕ್ಕೆ ಕಾಫಿ-ಟೀ ಅಂಗಡಿ ಮಾಲೀಕನ ಮೇಲೆ ದೊಣ್ಣೆಯಿಂದ ಹಲ್ಲೆ ನಡೆಸಿ ಕೊಲೆ…
ಬೆಂಗಳೂರು: ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ 2025–26ನೇ ಹಣಕಾಸು ವರ್ಷದಲ್ಲಿ ಪ್ರಯಾಣಿಕರ ಸಂಚಾರ ಮತ್ತು ಸರಕು ಸಾಗಣೆ ಎರಡೂ ವಿಭಾಗಗಳಲ್ಲಿ…
ರೌಡಿಯಿಸಂ, ಗೂಂಡಾಗಿರಿ, ದೌರ್ಜನ್ಯದಿಂದ ಏನೂ ಪ್ರಯೋಜನವಿಲ್ಲ. ನೆಮ್ಮದಿ ಕಳೆದುಕೊಂಡು, ಕುಟಂಬದಿಂದ ದೂರಾವಾಗಿ ಭಯಭೀತಿಯಲ್ಲಿ ಜೀವನ ಮಾಡಬೇಕಷ್ಟೇ. ಹೀಗಾಗಿ ಅಕ್ರಮ, ಅನೈತಿಕ,…
ಚಿಕ್ಕಬಳ್ಳಾಪುರ: ಜಿಲ್ಲೆಯ ತಾಲೂಕಿನ ಅರಸನಹಳ್ಳಿಯಲ್ಲಿ ತಡರಾತ್ರಿ ಭೀಕರ ಘಟನೆಯೊಂದು ನಡೆದಿದೆ. ಮದುವೆ ಕಾರ್ಯಕ್ರಮವಿದ್ದ ಮನೆಯ ಮುಂದೆ ನಿಲ್ಲಿಸಿದ್ದ ವಾಹನಗಳಿಗೆ ಕಿಡಿಗೇಡಿಗಳು…
ಶನೇಶ್ವರ ಜಯಂತಿ ಹಾಗೂ ಅಮಾವಾಸ್ಯೆ ಒಂದೇ ದಿನ ಬಂದಿರುವ ಹಿನ್ನೆಲೆ ದೊಡ್ಡಬಳ್ಳಾಪುರ ತಾಲೂಕಿನ ಮಧುರೆ ಶನೇಶ್ವರ ದೇವಸ್ಥಾನದಲ್ಲಿ ಅಪಾರ ಭಕ್ತಸಾಗರ…
ಬೆಂಗಳೂರು: ಬೆಂಗಳೂರು ನಗರ ಹಾಗೂ ಗ್ರಾಮಾಂತರ ಭಾಗಗಳಿಗೆ ಪ್ರಯಾಣಿಸುವ ಸಾರ್ವಜನಿಕರಿಗೆ ಅನುಕೂಲವಾಗುವಂತೆ ಬಿಎಂಟಿಸಿ(Bangalore Metropolitan Transport Corporation) ಮೇ 18ರಿಂದ…