ದಕ್ಷಿಣ ಭಾರತದ ಸುಪ್ರಸಿದ್ಧ ಧಾರ್ಮಿಕ ಕ್ಷೇತ್ರವಾದ ತಾಲೂಕಿನ ತೂಬಗೆರೆ ಹೋಬಳಿಯ ಶ್ರೀ ಘಾಟಿ ಕ್ಷೇತ್ರದಲ್ಲಿ ನೆಲೆಸಿರುವ ಶ್ರೀ ಸುಬ್ರಹ್ಮಣ್ಯ ಸ್ವಾಮಿಯ ಬ್ರಹ್ಮರಥೋತ್ಸವ ಕಾರ್ಯಕ್ರಮವು ಜ.16ನೇ ಮಂಗಳವಾರ ಮಧ್ಯಾಹ್ನ 12-15ರಿಂದ 12-30 ಗಂಟೆಗೆ ಸಲ್ಲುವ ಶುಭ ಮೇಷ ಲಗ್ನ ಮುಹೂರ್ತದಲ್ಲಿ ನಡೆಯಲಿದೆ.
ಚಿನ್ನಾಭರಣ ಕಳವು ಸೇರಿದಂತೆ ಯಾವುದೇ ಅಪರಾಧ ಕೃತ್ಯಗಳು ನಡೆಯದಂತೆ ತಡೆಯಲು ದ್ರೋಣ್ ಕ್ಯಾಮೆರಾ ಮತ್ತು ದೇವಾಲಯದ ಸುತ್ತಾಮುತ್ತಾ ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸಲಾಗಿದೆ.
ಬ್ರಹ್ಮರಥೋತ್ಸವಕ್ಕೆ ಬರುವ ಸಹಸ್ರಾರು ಭಕ್ತಾಧಿಗಳಿಗೆ ಮೊಬೈಲ್ ಶೌಚಾಲಯ ವ್ಯವಸ್ಥೆ ಕಲ್ಪಿಸಲಾಗಿದ್ದು, ಶುಧ್ಧ ಕುಡಿಯುವ ನೀರಿನ ಟ್ಯಾಂಕರ್ಗಳನ್ನು ವ್ಯವಸ್ಥೆ ಮಾಡಲಾಗಿದೆ ಎಂದು ದೇವಾಲಯದ ಆಡಳಿತ ಮಂಡಳಿ ತಿಳಿಸಿದೆ.
ಸಂಚಾರ ದಟ್ಟಣೆ ನಿಯಂತ್ರಿಸಲು ದೇವಾಲಯದಿಂದ 1 ಕಿ.ಮೀ ಅಂತರದಲ್ಲೇ 14 ಕಡೆ ಬೈಕ್, ಕಾರು, ಬಸ್ ಗಳಿಗೆ ಪ್ರತ್ಯೇಕ ಪಾರ್ಕಿಂಗ್ ವ್ಯವಸ್ಥೆ ಕಲ್ಪಿಸಲಾಗಿದೆ.
ಘಾಟಿ ಬ್ರಹ್ಮರಥೋತ್ಸವಕ್ಕೆ ಬಿಗಿ ಪೊಲೀಸ್ ಭದ್ರತೆ ಒದಗಿಸಲಿದ್ದು, 500ಮಂದಿ ಪೊಲೀಸ್ ಸಿಬ್ಬಂದಿ, 100 ಮಂದಿ ಗೃಹ ರಕ್ಷಕ ಸಿಬ್ಬಂದಿ, 3 ಜಿಲ್ಲಾ ಸಶಸ್ತ್ರ ಪಡೆಯಿಂದ 3 ತುಕಡಿ, ಕರ್ನಾಟಕ ರಾಜ್ಯ ಮೀಸಲು ಪಡೆಯಿಂದ ಒಂದು ತುಕಡಿಯನ್ನ ಭದ್ರತೆಗೆ ನಿಯೋಜನೆ ಮಾಡಲಾಗಿದೆ.
ಅಗತ್ಯವಿರುವ ಕಡೆ ಬ್ಯಾರಿಕೇಡ್ ವ್ಯವಸ್ಥೆ ಸಹ ಮಾಡಲಾಗಿದೆ ಎಂದು ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣಾ ಇನ್ಸ್ ಪೆಕ್ಟರ್ ಮುನಿಕೃಷ್ಣ ಅವರು ತಿಳಿಸಿದ್ದಾರೆ.
ಜ.16ರಂದು ತಾಲೂಕಿನ ಇತಿಹಾಸ ಪ್ರಸಿದ್ಧ ಶ್ರೀ ಘಾಟಿ ಸುಬ್ರಹ್ಮಣ್ಯ ಸ್ವಾಮಿ ಜಾತ್ರಾ ಮಹೋತ್ಸವದ ಪ್ರಯುಕ್ತ ಕೆ.ಎಸ್.ಆರ್.ಟಿ.ಸಿ ವತಿಯಿಂದ ಘಾಟಿಯಿಂದ ದೊಡ್ಡಬಳ್ಳಾಪುರ, ಬೆಂಗಳೂರು, ಚಿಕ್ಕಬಳ್ಳಾಪುರ, ಗೌರಿಬಿದನೂರು, ಕೋಲಾರ ಹಾಗೂ ಮುಂತಾದ ಸ್ಥಳಗಳಿಗೆ 84 ವಿಶೇಷ ಬಸ್ ವ್ಯವಸ್ಥೆ ಮಾಡಲಾಗಿದೆ ಎಂದು ಕೆ.ಎಸ್.ಆರ್.ಟಿ.ಸಿ ದೊಡ್ಡಬಳ್ಳಾಪುರ ಘಟಕದ ವ್ಯವಸ್ಥಾಪಕ ಎಸ್.ಆರ್.ಸಂತೋಷ್ ತಿಳಿಸಿದ್ದಾರೆ.
‘ಶಕ್ತಿ ಯೋಜನೆ’ ಅಡಿಯಲ್ಲಿ ಮಹಿಳಾ ಪ್ರಯಾಣಿಕರು ಉಚಿತವಾಗಿ ನಿಗಮದ ಬಸ್ಸುಗಳಲ್ಲಿ ಪ್ರಯಾಣಿಸುವ ಅವಕಾಶವಿರುತ್ತದೆ. ಪ್ರಯಾಣಿಕರು ಇದರ ಸದುಪಯೋಗ ಪಡೆದುಕೊಳ್ಳಬೇಕು. ಸುಖಕರ ಹಾಗೂ ಸುರಕ್ಷಿತ ಪ್ರಯಾಣಕ್ಕೆ ಕೆ.ಎಸ್.ಆರ್.ಟಿ.ಸಿ ಬಸ್ಸುಗಳಲ್ಲಿಯೇ ಪ್ರಯಾಣಿಸಲು ಕೋರಲಾಗಿದೆ.
ರಾಜ್ಯದ ಮಹತ್ವಾಕಾಂಕ್ಷಿ ನೀರಾವರಿ ಯೋಜನೆಗಳಿಗೆ ಜಲಸಂಪನ್ಮೂಲ ಸಚಿವ ಎನ್. ಚಲುವರಾಯಸ್ವಾಮಿ ಅವರು ಅಭೂತಪೂರ್ವ ವೇಗ ನೀಡಿದ್ದಾರೆ. ಒಂದೆಡೆ ಮೇಕೆದಾಟು ಯೋಜನೆ…
ದೊಡ್ಡಬಳ್ಳಾಪುರ: ಪತಿಯೊಂದಿಗೆ ಲಾಡ್ಜ್ಗೆ ತೆರಳಿದ್ದ 21 ವರ್ಷದ ಪತ್ನಿ ಅನುಮಾನಾಸ್ಪದವಾಗಿ ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರದಲ್ಲಿ ನಡೆದಿದೆ. ಮೃತರನ್ನು ಗೌರಿಬಿದನೂರು ತಾಲೂಕಿನ…
ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲಾ ಯುವ ಕಾಂಗ್ರೆಸ್ ಸಮಿತಿಯ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಹಾಗೂ ಜಿಲ್ಲಾ ಸಹ ಆಡಳಿತ ಉಸ್ತುವಾರಿಯಾಗಿ…
ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರದ (ಡಿಪಿಎ) ಅಧ್ಯಕ್ಷರಾಗಿರುವ ಮಾಜಿ ಶಾಸಕ ಟಿ.ವೆಂಕಟರಮಣಯ್ಯ ಅವರು ಶಿಷ್ಟಾಚಾರದ ಹೆಸರಿನಲ್ಲಿ ಸರ್ಕಾರಿ ಕಾರ್ಯಕ್ರಮಗಳಲ್ಲಿ ಅನಗತ್ಯವಾಗಿ…
ದೊಡ್ಡಬಳ್ಳಾಪುರ: ರೈತರಿಂದ ಖರೀದಿಸುವ ಹಾಲಿನ ಖರೀದಿ ದರವನ್ನು ಪ್ರತಿ ಲೀಟರ್ಗೆ 10 ಹೆಚ್ಚಿಸುವಂತೆ ಒತ್ತಾಯಿಸಿ ಬೆಂಗಳೂರು ಹಾಲು ಒಕ್ಕೂಟ (ಬಮೂಲ್)…
ಭಾರತ ರತ್ನ ಡಾ. ಸರ್ ಎಂ. ವಿಶ್ವೇಶ್ವರಯ್ಯನವರ 165ನೇ ಜಯಂತಿ ಅಂಗವಾಗಿ ಮೈಸೂರಿನ ಭಾರತೀಯ ಎಂಜಿನಿಯರ್ಗಳ ಸಂಸ್ಥೆ ವತಿಯಿಂದ ಸಂಸ್ಥೆಯ…