ಜ.16 ಶ್ರೀ ಘಾಟಿ ಸುಬ್ರಹ್ಮಣ್ಯ ಬ್ರಹ್ಮರಥೋತ್ಸವ: ಬ್ರಹ್ಮರಥೋತ್ಸವಕ್ಕೆ ಬಿಗಿ ಪೊಲೀಸ್‌ ಭದ್ರತೆ

ದಕ್ಷಿಣ ಭಾರತದ ಸುಪ್ರಸಿದ್ಧ ಧಾರ್ಮಿಕ‌ ಕ್ಷೇತ್ರವಾದ ತಾಲೂಕಿನ ತೂಬಗೆರೆ ಹೋಬಳಿಯ ಶ್ರೀ ಘಾಟಿ ಕ್ಷೇತ್ರದಲ್ಲಿ ನೆಲೆಸಿರುವ ಶ್ರೀ ಸುಬ್ರಹ್ಮಣ್ಯ ಸ್ವಾಮಿಯ ಬ್ರಹ್ಮರಥೋತ್ಸವ ಕಾರ್ಯಕ್ರಮವು ಜ.16ನೇ ಮಂಗಳವಾರ ಮಧ್ಯಾಹ್ನ 12-15ರಿಂದ 12-30 ಗಂಟೆಗೆ ಸಲ್ಲುವ ಶುಭ ಮೇಷ ಲಗ್ನ ಮುಹೂರ್ತದಲ್ಲಿ ನಡೆಯಲಿದೆ.

ಷಷ್ಠಿಯ ದಿನದಂದು ಮುಂಜಾನೆ 3ರಿಂದ ದೇವಸ್ಥಾನದಲ್ಲಿ ಪೂಜಾ ಕಾರ್ಯಗಳು ಆರಂಭವಾಗಲಿವೆ. ಅಭಿಷೇಕ ಕಾರ್ಯಗಳು ಪ್ರಾರಂಭಗೊಂಡು, 5:30ಕ್ಕೆ ಮಹಾಮಂಗಳಾರತಿ ನೆರವೇರಲಿದೆ. ಗರ್ಭಗುಡಿಯಲ್ಲಿನ ಸುಬ್ರಹ್ಮಣ್ಯ ಸ್ವಾಮಿ ಹಾಗೂ ಲಕ್ಷ್ಮೀನರಸಿಂಹಸ್ವಾಮಿ ಮೂರ್ತಿಗಳಿಗೆ ಪ್ರಾತಃ ಕಾಲದಲ್ಲಿ ಕ್ಷೀರಾಭಿಷೇಕ, ಪಂಚಾಮೃತಾಭಿಷೇಕ, ರುದ್ರಾಭಿಷೇಕ, ಶ್ರೀಗಂದಾಭಿಷೇಕ, ಭಸ್ಮದಭಿಷೇಕದೊಂದಿಗೆ ಹೂವಿನ ಅಲಂಕಾರ ನೆರವೇರಿಸಲಾಗುತ್ತಿದೆ. ರಾತ್ರಿ 8:30ರವರೆಗೂ ಭಕ್ತರಿಗೆ ದರ್ಶನ ವ್ಯವಸ್ಥೆ ದೊರೆಯಲಿದೆ.

ಸಿಸಿಟಿವಿ ಕಣ್ಗಾವಲು

ಚಿನ್ನಾಭರಣ ಕಳವು ಸೇರಿದಂತೆ ಯಾವು‌ದೇ‌ ಅಪರಾಧ ಕೃತ್ಯಗಳು ನಡೆಯದಂತೆ ತಡೆಯಲು ದ್ರೋಣ್‌ ಕ್ಯಾಮೆರಾ ಮತ್ತು ದೇವಾಲಯದ ಸುತ್ತಾಮುತ್ತಾ ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸಲಾಗಿದೆ.

ಬ್ರಹ್ಮರಥೋತ್ಸವಕ್ಕೆ ಬರುವ ಸಹಸ್ರಾರು ಭಕ್ತಾಧಿಗಳಿಗೆ ಮೊಬೈಲ್‌ ಶೌಚಾಲಯ ವ್ಯವಸ್ಥೆ ಕಲ್ಪಿಸಲಾಗಿದ್ದು, ಶುಧ್ಧ ಕುಡಿಯುವ ನೀರಿನ ಟ್ಯಾಂಕರ್‌ಗಳನ್ನು ವ್ಯವಸ್ಥೆ ಮಾಡಲಾಗಿದೆ ಎಂದು ದೇವಾಲಯದ ಆಡಳಿತ ಮಂಡಳಿ ತಿಳಿಸಿದೆ.

ಪಾರ್ಕಿಂಗ್ ವ್ಯವಸ್ಥೆ

ಸಂಚಾರ ದಟ್ಟಣೆ ನಿಯಂತ್ರಿಸಲು ದೇವಾಲಯದಿಂದ 1 ಕಿ.ಮೀ ಅಂತರದಲ್ಲೇ 14 ಕಡೆ ಬೈಕ್, ಕಾರು, ಬಸ್‌ ಗಳಿಗೆ ಪ್ರತ್ಯೇಕ ಪಾರ್ಕಿಂಗ್‌ ವ್ಯವಸ್ಥೆ ಕಲ್ಪಿಸಲಾಗಿದೆ.

ಪೊಲೀಸ್ ಭದ್ರತೆ

ಘಾಟಿ ಬ್ರಹ್ಮರಥೋತ್ಸವಕ್ಕೆ ಬಿಗಿ ಪೊಲೀಸ್‌ ಭದ್ರತೆ ಒದಗಿಸಲಿದ್ದು, 500ಮಂದಿ ಪೊಲೀಸ್ ಸಿಬ್ಬಂದಿ, 100 ಮಂದಿ ಗೃಹ ರಕ್ಷಕ‌‌ ಸಿಬ್ಬಂದಿ, 3 ಜಿಲ್ಲಾ ಸಶಸ್ತ್ರ ಪಡೆಯಿಂದ 3 ತುಕಡಿ, ಕರ್ನಾಟಕ ರಾಜ್ಯ ಮೀಸಲು ಪಡೆಯಿಂದ ಒಂದು‌ ತುಕಡಿಯನ್ನ ಭದ್ರತೆಗೆ ನಿಯೋಜನೆ ಮಾಡಲಾಗಿದೆ.

ಅಗತ್ಯವಿರುವ ಕಡೆ ಬ್ಯಾರಿಕೇಡ್ ವ್ಯವಸ್ಥೆ ಸಹ ಮಾಡಲಾಗಿದೆ ಎಂದು ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣಾ ಇನ್ಸ್ ಪೆಕ್ಟರ್ ಮುನಿಕೃಷ್ಣ ಅವರು ತಿಳಿಸಿದ್ದಾರೆ.

ಸಾರಿಗೆ ವ್ಯವಸ್ಥೆ

ಜ.16ರಂದು ತಾಲೂಕಿನ ಇತಿಹಾಸ ಪ್ರಸಿದ್ಧ ಶ್ರೀ ಘಾಟಿ ಸುಬ್ರಹ್ಮಣ್ಯ ಸ್ವಾಮಿ ಜಾತ್ರಾ ಮಹೋತ್ಸವದ ಪ್ರಯುಕ್ತ ಕೆ.ಎಸ್.ಆರ್.ಟಿ.ಸಿ ವತಿಯಿಂದ ಘಾಟಿಯಿಂದ ದೊಡ್ಡಬಳ್ಳಾಪುರ, ಬೆಂಗಳೂರು, ಚಿಕ್ಕಬಳ್ಳಾಪುರ, ಗೌರಿಬಿದನೂರು, ಕೋಲಾರ ಹಾಗೂ ಮುಂತಾದ ಸ್ಥಳಗಳಿಗೆ 84 ವಿಶೇಷ ಬಸ್ ವ್ಯವಸ್ಥೆ ಮಾಡಲಾಗಿದೆ ಎಂದು ಕೆ.ಎಸ್.ಆರ್.ಟಿ.ಸಿ ದೊಡ್ಡಬಳ್ಳಾಪುರ ಘಟಕದ ವ್ಯವಸ್ಥಾಪಕ ಎಸ್.ಆರ್.ಸಂತೋಷ್ ತಿಳಿಸಿದ್ದಾರೆ.

‘ಶಕ್ತಿ ಯೋಜನೆ’ ಅಡಿಯಲ್ಲಿ ಮಹಿಳಾ ಪ್ರಯಾಣಿಕರು ಉಚಿತವಾಗಿ ನಿಗಮದ ಬಸ್ಸುಗಳಲ್ಲಿ ಪ್ರಯಾಣಿಸುವ ಅವಕಾಶವಿರುತ್ತದೆ. ಪ್ರಯಾಣಿಕರು ಇದರ ಸದುಪಯೋಗ ಪಡೆದುಕೊಳ್ಳಬೇಕು. ಸುಖಕರ ಹಾಗೂ ಸುರಕ್ಷಿತ ಪ್ರಯಾಣಕ್ಕೆ ಕೆ.ಎಸ್.ಆರ್.ಟಿ.ಸಿ ಬಸ್ಸುಗಳಲ್ಲಿಯೇ ಪ್ರಯಾಣಿಸಲು ಕೋರಲಾಗಿದೆ.

Ramesh Babu

Journalist

Recent Posts

ಸ್ಥಳೀಯ ಸಂಸ್ಥೆಗಳಲ್ಲಿ ಚುರುಕಾಗಬೇಕಿದೆ ಬಿಎಂಸಿ: ಕೆರೆ, ಕುಂಟೆ, ಗೋಮಾಳ, ಅರಣ್ಯ ಸಂರಕ್ಷಣೆಗೆ ನಿರ್ಲಕ್ಷ್ಯ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿರುವ ನೈಸರ್ಗಿಕ ಸಂಪನ್ಮೂಲ ಹಾಗೂ ಜೀವ ವೈವಿಧ್ಯ ಸಂರಕ್ಷಣೆಗಾಗಿ ರಚಿಸಲಾಗಿರುವ ಜೀವ ವೈವಿಧ್ಯ…

17 hours ago

ಅಪರೂಪದ ದುಬಾರಿ ಖಾಯಿಲೆಗಳು…….

ಇದಕ್ಕೊಂದು ಪರಿಹಾರ ರೂಪಿಸಬಹುದೇ...... ಅಪರೂಪದ ದುಬಾರಿ ಖಾಯಿಲೆಗಳು.......... ಆಗಾಗ ಬದುಕು ಬಟ್ಟೆ ಒಗೆಯುವಂತೆ ಎತ್ತೆತ್ತಿ ಒಗೆಯುತ್ತದೆ. ಅನಿರೀಕ್ಷಿತಗಳು ಸಂಭವಿಸಿ ತುಂಬಾ…

2 days ago

ಮತದಾರರ ಪಟ್ಟಿ ಪರಿಷ್ಕರಣೆ ಚುರುಕು: 7.96 ಲಕ್ಷ ಮತದಾರರ ಹೆಸರು ಅಂತಿಮ ಹಂತಕ್ಕೆ

ಬೆಂಗಳೂರು ಗ್ರಾಮಾಂತರ: ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆಗೆ ಸಂಬಂಧಿಸಿದಂತೆ ಸೋಮವಾರ ಕರಡು ಮತದಾರರ ಪಟ್ಟಿ ಪ್ರಕಟವಾಗಿದ್ದು, ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ…

2 days ago

ಕ್ರೀಡಾ ಪ್ರತಿಭೆಗಳ ಅನಾವರಣಕ್ಕೆ ನ್ಯಾಷನಲ್ ಪ್ರೈಡ್ ಶಾಲೆಯಲ್ಲಿ ಹೊಸ ವೇದಿಕೆ ಒಂದೇ ಆವರಣದಲ್ಲಿ ಬಾಕ್ಸಿಂಗ್, ಕುಸ್ತಿ, ಜೂಡೋ, ಕಬ್ಬಡಿ, ಬ್ಯಾಡ್ಮಿಂಟನ್, ಸ್ಕೇಟಿಂಗ್ ಸೌಲಭ್ಯ

ದೊಡ್ಡಬಳ್ಳಾಪುರ: ವಿದ್ಯಾರ್ಥಿಗಳಲ್ಲಿ ಕ್ರೀಡಾ ಪ್ರತಿಭೆಯನ್ನು ಗುರುತಿಸಿ, ಅವರಿಗೆ ಉತ್ತಮ ತರಬೇತಿ ಹಾಗೂ ಅವಕಾಶ ಕಲ್ಪಿಸುವ ಉದ್ದೇಶದಿಂದ ನಗರದ ನ್ಯಾಷನಲ್ ಪ್ರೈಡ್…

3 days ago

ಶಾಲೆ ಬಿಟ್ಟ ಮಕ್ಕಳ ಪತ್ತೆಗೆ ಅಭಿಯಾನ: ವಲಸೆ ಕಾರ್ಮಿಕರ ಮಕ್ಕಳನ್ನು ಶಾಲೆಗೆ ಕರೆತರಲು ಕ್ರಮ

  ಪ್ರತಿಯೊಂದು ಮಗುವಿಗೂ ಶಿಕ್ಷಣ ದೊರೆಯಬೇಕು ಎಂಬ ಸರ್ಕಾರದ ಆಶಯದ ನಡುವೆಯೂ ನಾನಾ ಕಾರಣಗಳಿಂದ ಶಾಲೆಯಿಂದ ಹೊರಗುಳಿದಿರುವ ಹಾಗೂ ಶಾಲೆಗೆ…

4 days ago

ಪಾಕಿಸ್ತಾನಿ ಗ್ಯಾಂಗ್‌ ಜೊತೆ ಸಂಪರ್ಕ ಆರೋಪ: ದೊಡ್ಡಬಳ್ಳಾಪುರದಲ್ಲಿ ವ್ಯಕ್ತಿ ಬಂಧನ

ದೊಡ್ಡಬಳ್ಳಾಪುರ: ಪಾಕಿಸ್ತಾನಿ ಗ್ಯಾಂಗ್‌ಸ್ಟರ್‌ಗಳೊಂದಿಗೆ ಇನ್‌ಸ್ಟಾಗ್ರಾಂ ಮೂಲಕ ಸಂಪರ್ಕದಲ್ಲಿದ್ದ ಆರೋಪದ ಮೇರೆಗೆ ದೊಡ್ಡಬಳ್ಳಾಪುರ ನಗರ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ. ದೊಡ್ಡಬಳ್ಳಾಪುರ ನಗರದ…

4 days ago