ಜ.18 (ಶನಿವಾರ) ಬೆಸ್ಕಾಂ ಗ್ರಾಹಕರ ಕುಂದು-ಕೊರತೆ ನಿವಾರಣಾ ಸಭೆ ಹಾಗೂ ಸುರಕ್ಷತಾ ದಿನ ಆಯೋಜನೆ

ದೊಡ್ಡಬಳ್ಳಾಪುರ ನಗರ ಉಪವಿಭಾಗ ವ್ಯಾಪ್ತಿಯ ವಿದ್ಯುತ್ ಸರಬರಾಜಿಗೆ ಸಂಬಂಧಿಸಿದಂತೆ ಜ.18ರ ಶನಿವಾರದಂದು ಮಧ್ಯಾಹ್ನಾ 3ಗಂಟೆಗೆ ನಗರದ ಎಪಿಎಂಸಿ ಯಾರ್ಡ್ ಎದುರಿನ ಬೆಸ್ಕಾಂ ದೊಡ್ಡಬಳ್ಳಾಪುರ ನಗರ ಉಪವಿಭಾಗ ಕಚೇರಿಯಲ್ಲಿ ಗ್ರಾಹಕರ ಕುಂದು-ಕೊರತೆ ನಿವಾರಣಾ ಸಭೆ ಹಾಗೂ ಸುರಕ್ಷತಾ ದಿನವನ್ನು ಆಯೋಜಿಸಲಾಗಿದೆ ಎಂದು ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು(ವಿ), ಬೆವಿಕಂ(ವಿ),‌ ನಗರ ಉಪ-ವಿಭಾಗ, ದೊಡ್ಡಬಳ್ಳಾಪುರ‌ ಇವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ…

ಗ್ರಾಹಕರಲ್ಲಿ ಕುಂದು-ಕೊರತೆ/ ನ್ಯೂನ್ಯತೆಗಳು ಇದ್ದಲ್ಲಿ ಪರಸ್ಪರ ಚರ್ಚಿಸಿ ಸ್ನೇಹಪೂರ್ವಕವಾಗಿ ಪರಿಹರಿಸಿಕೊಳ್ಳಲು ಉತ್ತಮ ಸಲಹೆ/ ಅಭಿಪ್ರಾಯಗಳನ್ನು ವಿನಿಮಯ ಮಾಡಿಕೊಳ್ಳುವ ಸಲುವಾಗಿ ಕಂಪನಿಯ ಆದೇಶದಂತೆ ಶನಿವಾರದಂದು ಗ್ರಾಹಕರ ಕುಂದು-ಕೊರತೆ ನಿವಾರಣಾ ಸಭೆ ಹಾಗೂ ಸುರಕ್ಷತಾ ದಿನವನ್ನು ಆಯೋಜಿಸಲಾಗುತ್ತಿದೆ ಎಂದು ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು(ವಿ), ಬೆವಿಕಂ(ವಿ),‌ ನಗರ ಉಪ-ವಿಭಾಗ, ದೊಡ್ಡಬಳ್ಳಾಪುರ‌ ಇವರು ಹೇಳಿದ್ದಾರೆ.

ನಗರ ಉಪವಿಭಾಗ ವ್ಯಾಪ್ತಿಗೆ ಒಳಪಡುವ (o&M-1 o&M-2, ಬಾಶೆಟ್ಟಿಹಳ್ಳಿ, ಮೆಳೇಕೋಟೆ ಕ್ರಾಸ್ ಶಾಖೆ) ವಿದ್ಯುತ್ ಗ್ರಾಹಕರು ಸಭೆಯಲ್ಲಿ ಪಾಲ್ಗೊಂಡು ಕಂಪನಿಯೊಂದಿಗೆ ಸಹಕರಿಸಲು ಕೋರಲಾಗಿದೆ ಎಂದು ತಿಳಿಸಿದ್ದಾರೆ.

Ramesh Babu

Journalist

Recent Posts

ಯುವ ಆಪದ್ ಮಿತ್ರ ಯೋಜನೆ: ವಿಪತ್ತು ನಿರ್ವಹಣೆ ಕುರಿತು ಒಂದು ವಾರ ತರಬೇತಿ ಶಿಬಿರ

ಯುವ ಆಪದ್ ಮಿತ್ರ ಯೋಜನೆಯ ಅಂಗವಾಗಿ ಕಾಲೇಜಿನ ವಿದ್ಯಾರ್ಥಿಗಳು ದೊಡ್ಡಬಳ್ಳಾಪುರದ ಅನಿಬೆಸೆಂಟ್ ಸ್ಕೌಟ್ಸ್ ಮತ್ತು ಗೈಡ್ಸ್ ರಾಜ್ಯ ತರಬೇತಿ ಮತ್ತು…

9 hours ago

ಮಹಿಳೆಯರನ್ನು ಮಂಚಕ್ಕೆ ಕರೆದ ಆರೋಪ: ಮೂಡುಬಿದಿರೆ ಪೊಲೀಸ್ ಇನ್ಸ್‌ಪೆಕ್ಟರ್ ಸಂದೇಶ್ ಪಿ.ಜಿ ಅಮಾನತು

ಪೊಲೀಸ್ ಠಾಣೆಗೆ ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ದೂರು ಕೊಡಲು ಬಂದ ಮಹಿಳೆಯರನ್ನು ಮಂಚಕ್ಕೆ ಕರೆಯುತ್ತಾರೆ ಎಂಬ ಆರೋಪದ ಮೇರೆಗೆ ಮೂಡುಬಿದಿರೆ…

10 hours ago

ಮುಂಗಾರು ಪೂರ್ವ ಮಳೆ: ಮಳೆಯಲ್ಲಿ ಸಾಲುಗಟ್ಟಿ ನಿಂತ ರಾಗಿ‌ ಮಾರಾಟ ಮಾಡಲು ಬಂದ ಟ್ರ್ಯಾಕ್ಟರ್ ಗಳು

ಇಂದು ಸಂಜೆ ಸುಮಾರು 4:30ರಲ್ಲಿ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಪ್ರಾರಂಭವಾದ ಮಳೆಯು ಸತತವಾಗಿ 7ಗಂಟೆಯವರೆಗೆ ಬಿದ್ದಿದ್ದು, ಜನ ಜೀವನ ಅಸ್ತವ್ಯಸ್ತಗೊಂಡಿತು. ಅದೇರೀತಿ…

11 hours ago

ರಣ ಬಿಸಿಲಿನಿಂದ ಕಂಗೆಟ್ಟಿದ್ದ ಜನ: ಧರೆಗಿಳಿದ ವರ್ಷದ ಮೊದಲ ಮಳೆ: ಬಿಸಿಲಿನ ಬೇಗೆಗೆ ಬೆಂದಿದ್ದ ಭೂಮಿ ತಂಪು ತಂಪು: ಗುಡುಗು ಸಹಿತ ಬಿದ್ದ ಮಳೆ ಹನಿಗೆ ಜನ ಫುಲ್ ಖುಷ್

ಬಿಸಿಲಿನ ತಾಪ ಹೆಚ್ಚಾಗುತ್ತಿದ್ದ ಸಂದರ್ಭದಲ್ಲಿ ದೊಡ್ಡಬಳ್ಳಾಪುರ ನಗರದ ಕೆಲವು ಪ್ರದೇಶಗಳಲ್ಲಿ ಮಂಗಳವಾರ ಸಂಜೆ ವರ್ಷದ ಮೊದಲ ಮಳೆ ಸುರಿಯಿತು. ಬಂಗಾಳ…

12 hours ago

ನಾಳೆ (ಮಾ.18) ಎಸ್.ಎಸ್.ಎಲ್.ಸಿ ಪರೀಕ್ಷೆ -01: ಬೆಂ. ಗ್ರಾ ಜಿಲ್ಲೆಯಲ್ಲಿ 14,314 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಣಿ

2025-26ನೇ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆಗಳು ಮಾರ್ಚ್ 18 ಬುಧವಾರದಿಂದ ಏಪ್ರಿಲ್ 02 ಗುರುವಾರದ ವರೆಗೆ ಬೆಳಿಗ್ಗೆ 10:15 ಗಂಟೆಯಿಂದ ಮಧ್ಯಾಹ್ನ…

14 hours ago

ನೂತನ ಶಾಲಾ ಕಟ್ಟಡ ಮತ್ತು ಅಂಗನವಾಡಿ ಕೇಂದ್ರ ಉದ್ಘಾಟನೆ

ದೊಡ್ಡಬಳ್ಳಾಪುರ: ನಗರದ 4 ನೇ ವಾರ್ಡ್‌ನ ವಿನಾಯಕ ನಗರದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ ಆವರಣದಲ್ಲಿ ಅಸ್ಟಿಮೊ ಫೈ ಕಂಪನಿಯ…

20 hours ago