ಜ.21ರಿಂದ ಆರ್.ಎಲ್.ಜಾಲಪ್ಪ ತಾಂತ್ರಿಕ ಮಹಾವಿದ್ಯಾಲಯದಲ್ಲಿ ರಾಜ್ಯ ಮಟ್ಟದ ಟೇಕ್ವಾಂಡೋ ಸ್ಪರ್ಧೆ

ಜ.21 ಹಾಗೂ 22 ರಂದು ನಗರದ ಆರ್.ಎಲ್ ಜಾಲಪ್ಪ ತಾಂತ್ರಿಕ ಮಹಾವಿದ್ಯಾಲಯದಲ್ಲಿ ರಾಜ್ಯ ಮಟ್ಟದ ಟೇಕ್ವಾಂಡೋ ಪಂದ್ಯಾವಳಿ ನಡೆಯಲಿದೆ.

ಪಂದ್ಯಾವಳಿಯಲ್ಲಿ ಒಟ್ಟು 18 ಜಿಲ್ಲೆಗಳು ಹಾಗೂ 34 ಕ್ಲಬ್ ಗಳಿಂದ 1,150 ಸ್ಪರ್ಧಾಳುಗಳು ಭಾಗವಹಿಸಲಿದ್ದಾರೆ ಎಂದು ಕರ್ನಾಟಕ ಟೇಕ್ವಾಂಡೊ ಅಸೋಸಿಯೇಷನ್ ಅಧ್ಯಕ್ಷ ಟಿ. ಪ್ರವೀಣಕುಮಾರ್ ತಿಳಿಸಿದರು.

ನಗರದ ಪ್ರವಾಸಿ ಮಂದಿರದಲ್ಲಿ ಶುಕ್ರವಾರ ಪತ್ರಿಕಾಗೋಷ್ಠಿ ಉದ್ದೇಶಿಸಿ ಮಾತನಾಡಿದರು. ಭಾರತ‌ ಸರ್ಕಾರ, ಭಾರತೀಯ ಒಲಿಂಪಿಕ್ ಅಸೋಸಿಯೇಷನ್ ಹಾಗೂ ರಾಜ್ಯ ಟೆಕ್ವಾಂಡೋ ಅಸೋಸಿಯೇಷನ್ ವತಿಯಿಂದ ಎರಡು ದಿನಗಳ 39ನೇ ರಾಜ್ಯಮಟ್ಟದ ಸಬ್ ಜೂನಿಯರ್, ಜೂನಿಯರ್ ಹಾಗೂ‌ ಸೀನಿಯರ್ ಮಟ್ಟದ ಟೆಕ್ವಾಂಡೋ ಪಂದ್ಯಾವಳಿ‌ ನಡೆಯಲಿದೆ ಎಂದರು.

ಅಸೋಸಿಯೇಷನ್ ಕಾರ್ಯದರ್ಶಿ ಕೃಷ್ಣಮೂರ್ತಿ ಮಾತನಾಡಿ, ಪಂದ್ಯಾವಳಿಯಲ್ಲಿ 8 ರಿಂದ 50 ವರ್ಷ ವಯೋಮಾನದವರು ಭಾಗವಹಿಸಲಿದ್ದಾರೆ. ವಿಜೇತರಿಗೆ‌ ಚಿನ್ನದ ಪದಕ ನೀಡಲಾಗುವುದು. ರಾಜ್ಯಮಟ್ಟದಲ್ಲಿ ವಿಜೇತರಾದವರನ್ನು ಪುದುಚೇರಿ ಹಾಗೂ ವಿಶಾಖಪಟ್ಟಣದಲ್ಲಿ ನಡೆಯುವ ರಾಷ್ಟ್ರ ಮಟ್ಟದ ಟೇಕ್ವಾಂಡೋ ಪಂದ್ಯಾವಳಿಗೆ ಕಳುಹಿಸಿಕೊಡಲಾಗುವುದು ಎಂದರು.

ವಿಶಾಖಪಟ್ಟಣದಲ್ಲಿ ಜೂನಿಯರ್( 8 ವರ್ಷದಿಂದ 17 ವರ್ಷದೊಳಗಿನ) , ಪುದುಚೇರಿಯಲ್ಲಿ ಸೀನಿಯರ್(17 ವರ್ಷಕ್ಕಿಂತ ಮೇಲ್ಪಟ್ಟು) ಚಾಂಪಿಯನ್ ಶಿಪ್ ನಡೆಯಲಿದೆ. ಇಲ್ಲಿ ಗೆದ್ದವರು ಅಂತಾರಾಷ್ಟ್ರೀಯ ಮಟ್ಟಕ್ಕೆ ಆಯ್ಕೆಯಾಗಲಿದ್ದಾರೆ ಎಂದು ತಿಳಿಸಿದರು.

ತೀರ್ಪು ಹಾಗೂ ಅಂಕಗಳನ್ನು ಪ್ರದರ್ಶಿಸಲು
ಅಂತಾರಾಷ್ಟ್ರೀಯ ಪಂದ್ಯಾವಳಿಯಲ್ಲಿ ಬಳಸುವ ಎಲೆಕ್ಟ್ರಾನಿಕ್ ಸಾಧನಗಳನ್ನು ಇಲ್ಲಿ ಬಳಸುತ್ತಿರುವುದು ವಿಶೇಷ ಎಂದು ಹೇಳಿದರು.

ಒಟ್ಟು 7 ಅಂಕಣಗಳಲ್ಲಿ ತಲಾ ಎರಡು‌ ನಿಮಿಷದ ಮೂರು ಪಂದ್ಯಗಳು ನಡೆಯಲಿವೆ ಎಂದರು.
ನಾರಾಯಣಸ್ವಾಮಿ ಮಾತನಾಡಿ, 2008 ರಲ್ಲಿ ಜಿಲ್ಲೆಯಲ್ಲಿ ಟೆಕ್ವಾಂಡೋ‌ ತರಬೇತಿ ಆರಂಭಿಸಲಾಯಿತು. ಪ್ರಸ್ತುತ ಜಿಲ್ಲೆಯ ನಾಲ್ಕೂ ತಾಲೂಕುಗಳಲ್ಲಿ ಟೆಕ್ವಾಂಡೋ ಕ್ರೀಡೆ ಚಾಲ್ತಿಯಲ್ಲಿದೆ. ಗ್ರಾಮಾಂತರ ಜಿಲ್ಲೆಯಿಂದ ಪಂದ್ಯಾವಳಿಯಲ್ಲಿ ಒಟ್ಟು 125 ಸ್ಪರ್ಧಾಳುಗಳು ಭಾಗವಹಿಸಲಿದ್ದಾರೆ. ರಾಷ್ಟ್ರಮಟ್ಟದಲ್ಲಿ ಸಬ್ ಜೂನಿಯರ್, ಕೆಡೆಟ್, ಜೂನಿಯರ್, ಸಿನಿಯರ್ ‌ಎಂಬ ನಾಲ್ಕು ವಿಭಾಗದಲ್ಲಿ ಪಂದ್ಯ‌ ನಡೆಯಲಿದೆ ಎಂದು ವಿವರಿಸಿದರು.

Ramesh Babu

Journalist

Recent Posts

ನೇಪಾಳದ ದಂಗೆ……

ಕೋವಿಡ್ ನಂತರದ ವಿಶ್ವದಲ್ಲಿ ನಡೆಯುತ್ತಿರುವ ಘಟನೆಗಳನ್ನು ನೋಡಿದರೆ ಜಗತ್ತು ಬದಲಾವಣೆಯ ಹಾದಿಯಲ್ಲಿರುವಂತೆ ಕಾಣುತ್ತಿದೆ. ಕೆಲವು ಆಕ್ರಮಣಕಾರಿ ಯುದ್ಧಗಳು, ಮುಂದುವರಿದ ಭಯೋತ್ಪಾದನಾ…

4 hours ago

22 ವರ್ಷದ ಯುವಕ‌ ಮನೆಯಲ್ಲಿ ನೇಣಿಗೆ ಶರಣು

22 ವರ್ಷದ ಯುವಕ‌ ಮನೆಯಲ್ಲೇ ನೇಣಿಗೆ ಶರಣಾಗಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ‌ ತೂಬಗೆರೆ ಹೋಬಳಿಯ ನಾರಸಿಂಹನಹಳ್ಳಿ ಗ್ರಾಮದಲ್ಲಿ ಕಳೆದ ರಾತ್ರಿ…

7 hours ago

ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯ ಮುಖ್ಯಾಂಶಗಳು

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಇಂದು ಕೃಷ್ಣಾದಲ್ಲಿ ನಡೆದ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಪ್ರಗತಿ…

17 hours ago

ನಟ ಪ್ರಥಮ್ ಗೆ ಜೀವ ಬೆದರಿಕೆ, ಹಲ್ಲೆ ಯತ್ನ ಪ್ರಕರಣ: ಆರೋಪಿ ಯಶಸ್ವಿನಿ‌ ಗೌಡ, ಬೇಕರಿ ರಘುಗೆ ನ್ಯಾಯಾಂಗ ಬಂಧನ: ಸತ್ಯಕ್ಕೆ ಸಿಕ್ಕ ಜಯ ಎಂದ ಪ್ರಥಮ್

ದೊಡ್ಡಬಳ್ಳಾಪುರದಲ್ಲಿ ನಟ ಪ್ರಥಮ್ ಗೆ ಜೀವ ಬೆದರಿಕೆ ಹಾಗೂ ಹಲ್ಲೆ ಯತ್ನ ಪ್ರಕರಣಕ್ಕೆ ಸಂಬಂಧಸಿದಂತೆ, ಇಂದು ಆರೋಪಿಗಳಾದ ಯಶಸ್ವಿನಿ‌ ಗೌಡ,…

18 hours ago

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ 25 ಪ್ರವಾಸಿ ತಾಣಗಳು ಗುರುತು

ಬೆಂಗಳೂರು ಗ್ರಾಮಾಂತರ ಜಿಲ್ಲೆಗೆ ಸಂಬಂಧಿಸಿದಂತೆ ಐತಿಹಾಸಿಕ, ಧಾರ್ಮಿಕ, ನೈಸರ್ಗಿಕ ಹಾಗೂ ಹೆಚ್ಚು ಪ್ರವಾಸಿಗರು ಭೇಟಿ ನೀಡುವ ಪ್ರಮುಖ ಒಟ್ಟು 25…

21 hours ago

ವಸತಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆ ಮುಖ್ಯಾಂಶಗಳು

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಇಂದು ಕೃಷ್ಣಾದಲ್ಲಿ ನಡೆದ ವಸತಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆಯ ಮುಖ್ಯಾಂಶಗಳು; • ಪ್ರಧಾನಮಂತ್ರಿ…

23 hours ago