ಜ.21 ಹಾಗೂ 22 ರಂದು ನಗರದ ಆರ್.ಎಲ್ ಜಾಲಪ್ಪ ತಾಂತ್ರಿಕ ಮಹಾವಿದ್ಯಾಲಯದಲ್ಲಿ ರಾಜ್ಯ ಮಟ್ಟದ ಟೇಕ್ವಾಂಡೋ ಪಂದ್ಯಾವಳಿ ನಡೆಯಲಿದೆ.
ಪಂದ್ಯಾವಳಿಯಲ್ಲಿ ಒಟ್ಟು 18 ಜಿಲ್ಲೆಗಳು ಹಾಗೂ 34 ಕ್ಲಬ್ ಗಳಿಂದ 1,150 ಸ್ಪರ್ಧಾಳುಗಳು ಭಾಗವಹಿಸಲಿದ್ದಾರೆ ಎಂದು ಕರ್ನಾಟಕ ಟೇಕ್ವಾಂಡೊ ಅಸೋಸಿಯೇಷನ್ ಅಧ್ಯಕ್ಷ ಟಿ. ಪ್ರವೀಣಕುಮಾರ್ ತಿಳಿಸಿದರು.
ನಗರದ ಪ್ರವಾಸಿ ಮಂದಿರದಲ್ಲಿ ಶುಕ್ರವಾರ ಪತ್ರಿಕಾಗೋಷ್ಠಿ ಉದ್ದೇಶಿಸಿ ಮಾತನಾಡಿದರು. ಭಾರತ ಸರ್ಕಾರ, ಭಾರತೀಯ ಒಲಿಂಪಿಕ್ ಅಸೋಸಿಯೇಷನ್ ಹಾಗೂ ರಾಜ್ಯ ಟೆಕ್ವಾಂಡೋ ಅಸೋಸಿಯೇಷನ್ ವತಿಯಿಂದ ಎರಡು ದಿನಗಳ 39ನೇ ರಾಜ್ಯಮಟ್ಟದ ಸಬ್ ಜೂನಿಯರ್, ಜೂನಿಯರ್ ಹಾಗೂ ಸೀನಿಯರ್ ಮಟ್ಟದ ಟೆಕ್ವಾಂಡೋ ಪಂದ್ಯಾವಳಿ ನಡೆಯಲಿದೆ ಎಂದರು.
ಅಸೋಸಿಯೇಷನ್ ಕಾರ್ಯದರ್ಶಿ ಕೃಷ್ಣಮೂರ್ತಿ ಮಾತನಾಡಿ, ಪಂದ್ಯಾವಳಿಯಲ್ಲಿ 8 ರಿಂದ 50 ವರ್ಷ ವಯೋಮಾನದವರು ಭಾಗವಹಿಸಲಿದ್ದಾರೆ. ವಿಜೇತರಿಗೆ ಚಿನ್ನದ ಪದಕ ನೀಡಲಾಗುವುದು. ರಾಜ್ಯಮಟ್ಟದಲ್ಲಿ ವಿಜೇತರಾದವರನ್ನು ಪುದುಚೇರಿ ಹಾಗೂ ವಿಶಾಖಪಟ್ಟಣದಲ್ಲಿ ನಡೆಯುವ ರಾಷ್ಟ್ರ ಮಟ್ಟದ ಟೇಕ್ವಾಂಡೋ ಪಂದ್ಯಾವಳಿಗೆ ಕಳುಹಿಸಿಕೊಡಲಾಗುವುದು ಎಂದರು.
ವಿಶಾಖಪಟ್ಟಣದಲ್ಲಿ ಜೂನಿಯರ್( 8 ವರ್ಷದಿಂದ 17 ವರ್ಷದೊಳಗಿನ) , ಪುದುಚೇರಿಯಲ್ಲಿ ಸೀನಿಯರ್(17 ವರ್ಷಕ್ಕಿಂತ ಮೇಲ್ಪಟ್ಟು) ಚಾಂಪಿಯನ್ ಶಿಪ್ ನಡೆಯಲಿದೆ. ಇಲ್ಲಿ ಗೆದ್ದವರು ಅಂತಾರಾಷ್ಟ್ರೀಯ ಮಟ್ಟಕ್ಕೆ ಆಯ್ಕೆಯಾಗಲಿದ್ದಾರೆ ಎಂದು ತಿಳಿಸಿದರು.
ತೀರ್ಪು ಹಾಗೂ ಅಂಕಗಳನ್ನು ಪ್ರದರ್ಶಿಸಲು
ಅಂತಾರಾಷ್ಟ್ರೀಯ ಪಂದ್ಯಾವಳಿಯಲ್ಲಿ ಬಳಸುವ ಎಲೆಕ್ಟ್ರಾನಿಕ್ ಸಾಧನಗಳನ್ನು ಇಲ್ಲಿ ಬಳಸುತ್ತಿರುವುದು ವಿಶೇಷ ಎಂದು ಹೇಳಿದರು.
ಒಟ್ಟು 7 ಅಂಕಣಗಳಲ್ಲಿ ತಲಾ ಎರಡು ನಿಮಿಷದ ಮೂರು ಪಂದ್ಯಗಳು ನಡೆಯಲಿವೆ ಎಂದರು.
ನಾರಾಯಣಸ್ವಾಮಿ ಮಾತನಾಡಿ, 2008 ರಲ್ಲಿ ಜಿಲ್ಲೆಯಲ್ಲಿ ಟೆಕ್ವಾಂಡೋ ತರಬೇತಿ ಆರಂಭಿಸಲಾಯಿತು. ಪ್ರಸ್ತುತ ಜಿಲ್ಲೆಯ ನಾಲ್ಕೂ ತಾಲೂಕುಗಳಲ್ಲಿ ಟೆಕ್ವಾಂಡೋ ಕ್ರೀಡೆ ಚಾಲ್ತಿಯಲ್ಲಿದೆ. ಗ್ರಾಮಾಂತರ ಜಿಲ್ಲೆಯಿಂದ ಪಂದ್ಯಾವಳಿಯಲ್ಲಿ ಒಟ್ಟು 125 ಸ್ಪರ್ಧಾಳುಗಳು ಭಾಗವಹಿಸಲಿದ್ದಾರೆ. ರಾಷ್ಟ್ರಮಟ್ಟದಲ್ಲಿ ಸಬ್ ಜೂನಿಯರ್, ಕೆಡೆಟ್, ಜೂನಿಯರ್, ಸಿನಿಯರ್ ಎಂಬ ನಾಲ್ಕು ವಿಭಾಗದಲ್ಲಿ ಪಂದ್ಯ ನಡೆಯಲಿದೆ ಎಂದು ವಿವರಿಸಿದರು.
2026-27ನೇ ಸಾಲಿನ ರಾಜ್ಯ ಬಜೆಟ್ ಮಂಡನೆಗೆ ದಿನಾಂಕ ಫಿಕ್ಸ್ ಆಗಿದೆ. ಸಿಎಂ ಕುರ್ಚಿ ಕಾಳಗದ ನಡುವೆಯೇ ಹಣಕಾಸು ಖಾತೆಯನ್ನ ಹೊಂದಿರುವ…
ಕೊಡಗಿನ ಬೆಡಗಿ ಬಹುಭಾಷಾ ನಟಿ ರಶ್ಮಿಕಾ ಮಂದಣ್ಣ ಮತ್ತು ಟಾಲಿವುಡ್ ನಟ ವಿಜಯ್ ದೇವರಕೊಂಡ ಹಲವು ವರ್ಷಗಳಿಂದ ಡೇಟಿಂಗ್ನಲ್ಲಿದ್ದಾರೆ ಎನ್ನುವುದು…
ಕಂಪನಿಗಳಲ್ಲಿ ಖಾಲಿ ಇರುವ ಹುದ್ದೆಗಳ ನೇಮಕ ಮಾಡಿಕೊಳ್ಳುವ ಸಂದರ್ಭದಲ್ಲಿ ಸ್ಥಳೀಯ ಅಭ್ಯರ್ಥಿಗಳಿಗೆ ಮೊದಲ ಆದ್ಯತೆ ನೀಡಲು ಜಿಲ್ಲಾ ಉಸ್ತುವಾರಿ ಸಚಿವರಾದ…
ಬಾಗೇಪಲ್ಲಿ ಕಾಂಗ್ರೆಸ್ ಶಾಸಕ ಎಸ್ ಎನ್ ಸುಬ್ಬಾರೆಡ್ಡಿ ಆಯ್ಕೆ ಅಸಿಂಧು ಎಂದು ಕರ್ನಾಟಕ ಹೈಕೋರ್ಟ್ ಆದೇಶ ನೀಡಿದೆ. ಚುನಾವಣಾ ಆಯೋಗ…
ನಮ್ಮ ಕಾರ್ಯಕರ್ತರನ್ನು ಮುಟ್ಟಬೇಡಿ, ಆಸೆ ಆಮಿಷವೊಡ್ಡಿ ನಿಮ್ಮ ಪಕ್ಷಕ್ಕೆ ಸೇರಿಸಿಕೊಳ್ಳಬೇಡಿ. ನಮ್ಮ ಕಾರ್ಯಕರ್ತರನ್ನು ನಿಮ್ಮ ಪಕ್ಷಕ್ಕೆ ಸೇರಿಸುತ್ತೇವೆ ಎಂದು ಹೇಳಿಲ್ಲ.…
ಮೊಬೈಲ್ ಚಾರ್ಜ್ ಆಗುತ್ತಿರುವಾಗ ಶಾರ್ಟ್ ಸರ್ಕಿಟ್ ಆಗಿ ಮನೆಯಲ್ಲಿ ದಟ್ಟಹೊಗೆ ಆವರಿಸಿಕೊಂಡು ಕೆಲಕಾಲ ಎಲ್ಲರಲ್ಲಿ ಆತಂಕ ಮೂಡಿಸಿದ್ದ ಘಟನೆ ದೊಡ್ಡಬಳ್ಳಾಪುರ…