ಜ.21 ಹಾಗೂ 22 ರಂದು ನಗರದ ಆರ್.ಎಲ್ ಜಾಲಪ್ಪ ತಾಂತ್ರಿಕ ಮಹಾವಿದ್ಯಾಲಯದಲ್ಲಿ ರಾಜ್ಯ ಮಟ್ಟದ ಟೇಕ್ವಾಂಡೋ ಪಂದ್ಯಾವಳಿ ನಡೆಯಲಿದೆ.
ಪಂದ್ಯಾವಳಿಯಲ್ಲಿ ಒಟ್ಟು 18 ಜಿಲ್ಲೆಗಳು ಹಾಗೂ 34 ಕ್ಲಬ್ ಗಳಿಂದ 1,150 ಸ್ಪರ್ಧಾಳುಗಳು ಭಾಗವಹಿಸಲಿದ್ದಾರೆ ಎಂದು ಕರ್ನಾಟಕ ಟೇಕ್ವಾಂಡೊ ಅಸೋಸಿಯೇಷನ್ ಅಧ್ಯಕ್ಷ ಟಿ. ಪ್ರವೀಣಕುಮಾರ್ ತಿಳಿಸಿದರು.
ನಗರದ ಪ್ರವಾಸಿ ಮಂದಿರದಲ್ಲಿ ಶುಕ್ರವಾರ ಪತ್ರಿಕಾಗೋಷ್ಠಿ ಉದ್ದೇಶಿಸಿ ಮಾತನಾಡಿದರು. ಭಾರತ ಸರ್ಕಾರ, ಭಾರತೀಯ ಒಲಿಂಪಿಕ್ ಅಸೋಸಿಯೇಷನ್ ಹಾಗೂ ರಾಜ್ಯ ಟೆಕ್ವಾಂಡೋ ಅಸೋಸಿಯೇಷನ್ ವತಿಯಿಂದ ಎರಡು ದಿನಗಳ 39ನೇ ರಾಜ್ಯಮಟ್ಟದ ಸಬ್ ಜೂನಿಯರ್, ಜೂನಿಯರ್ ಹಾಗೂ ಸೀನಿಯರ್ ಮಟ್ಟದ ಟೆಕ್ವಾಂಡೋ ಪಂದ್ಯಾವಳಿ ನಡೆಯಲಿದೆ ಎಂದರು.
ಅಸೋಸಿಯೇಷನ್ ಕಾರ್ಯದರ್ಶಿ ಕೃಷ್ಣಮೂರ್ತಿ ಮಾತನಾಡಿ, ಪಂದ್ಯಾವಳಿಯಲ್ಲಿ 8 ರಿಂದ 50 ವರ್ಷ ವಯೋಮಾನದವರು ಭಾಗವಹಿಸಲಿದ್ದಾರೆ. ವಿಜೇತರಿಗೆ ಚಿನ್ನದ ಪದಕ ನೀಡಲಾಗುವುದು. ರಾಜ್ಯಮಟ್ಟದಲ್ಲಿ ವಿಜೇತರಾದವರನ್ನು ಪುದುಚೇರಿ ಹಾಗೂ ವಿಶಾಖಪಟ್ಟಣದಲ್ಲಿ ನಡೆಯುವ ರಾಷ್ಟ್ರ ಮಟ್ಟದ ಟೇಕ್ವಾಂಡೋ ಪಂದ್ಯಾವಳಿಗೆ ಕಳುಹಿಸಿಕೊಡಲಾಗುವುದು ಎಂದರು.
ವಿಶಾಖಪಟ್ಟಣದಲ್ಲಿ ಜೂನಿಯರ್( 8 ವರ್ಷದಿಂದ 17 ವರ್ಷದೊಳಗಿನ) , ಪುದುಚೇರಿಯಲ್ಲಿ ಸೀನಿಯರ್(17 ವರ್ಷಕ್ಕಿಂತ ಮೇಲ್ಪಟ್ಟು) ಚಾಂಪಿಯನ್ ಶಿಪ್ ನಡೆಯಲಿದೆ. ಇಲ್ಲಿ ಗೆದ್ದವರು ಅಂತಾರಾಷ್ಟ್ರೀಯ ಮಟ್ಟಕ್ಕೆ ಆಯ್ಕೆಯಾಗಲಿದ್ದಾರೆ ಎಂದು ತಿಳಿಸಿದರು.
ತೀರ್ಪು ಹಾಗೂ ಅಂಕಗಳನ್ನು ಪ್ರದರ್ಶಿಸಲು
ಅಂತಾರಾಷ್ಟ್ರೀಯ ಪಂದ್ಯಾವಳಿಯಲ್ಲಿ ಬಳಸುವ ಎಲೆಕ್ಟ್ರಾನಿಕ್ ಸಾಧನಗಳನ್ನು ಇಲ್ಲಿ ಬಳಸುತ್ತಿರುವುದು ವಿಶೇಷ ಎಂದು ಹೇಳಿದರು.
ಒಟ್ಟು 7 ಅಂಕಣಗಳಲ್ಲಿ ತಲಾ ಎರಡು ನಿಮಿಷದ ಮೂರು ಪಂದ್ಯಗಳು ನಡೆಯಲಿವೆ ಎಂದರು.
ನಾರಾಯಣಸ್ವಾಮಿ ಮಾತನಾಡಿ, 2008 ರಲ್ಲಿ ಜಿಲ್ಲೆಯಲ್ಲಿ ಟೆಕ್ವಾಂಡೋ ತರಬೇತಿ ಆರಂಭಿಸಲಾಯಿತು. ಪ್ರಸ್ತುತ ಜಿಲ್ಲೆಯ ನಾಲ್ಕೂ ತಾಲೂಕುಗಳಲ್ಲಿ ಟೆಕ್ವಾಂಡೋ ಕ್ರೀಡೆ ಚಾಲ್ತಿಯಲ್ಲಿದೆ. ಗ್ರಾಮಾಂತರ ಜಿಲ್ಲೆಯಿಂದ ಪಂದ್ಯಾವಳಿಯಲ್ಲಿ ಒಟ್ಟು 125 ಸ್ಪರ್ಧಾಳುಗಳು ಭಾಗವಹಿಸಲಿದ್ದಾರೆ. ರಾಷ್ಟ್ರಮಟ್ಟದಲ್ಲಿ ಸಬ್ ಜೂನಿಯರ್, ಕೆಡೆಟ್, ಜೂನಿಯರ್, ಸಿನಿಯರ್ ಎಂಬ ನಾಲ್ಕು ವಿಭಾಗದಲ್ಲಿ ಪಂದ್ಯ ನಡೆಯಲಿದೆ ಎಂದು ವಿವರಿಸಿದರು.
ಸೇವೆಗಾಗಿ ಬಾಳು ಭಾರತ ಸೇವಾದಳ ಬೆಂಗಳೂರು ಗ್ರಾಮಾಂತರ ಜಿಲ್ಲೆ, ಭಾರತ ಸೇವಾದಳ ದೇವನಹಳ್ಳಿ ತಾಲೂಕು ಘಟಕ, ಕರ್ನಾಟಕ ರಾಜ್ಯ ಪ್ರಾಥಮಿಕ…
ಭೂದಾಖಲೆಗಳ ತಿದ್ದುಪಡಿಗಾಗಿ ಸಾರ್ವಜನಿಕರಿಂದ ಹಣಕ್ಕೆ ಬೇಡಿಕೆಯಿಟ್ಟಿದ್ದ ಗ್ರಾಮ ಆಡಳಿತಾಧಿಕಾರಿಯೊಬ್ಬರು ಲೋಕಾಯುಕ್ತ ಪೊಲೀಸರ ಕಾರ್ಯಾಚರಣೆಯಲ್ಲಿ ಸಿಕ್ಕಿಬಿದ್ದಿದ್ದಾರೆ. ಉತ್ತರ ಕನ್ನಡ ಜಿಲ್ಲೆಯ ಜೋಯಿಡಾ…
ಸಣ್ಣಪುಟ್ಟ ಜಗಳಗಳಿಂದ ಕೋರ್ಟಿನ ಮೆಟ್ಟಿಲೇರಿ ದೂರಾವಾಗಲು ನಿರ್ಧರಿಸಿದ್ದ ನಾಲ್ವರು ದಂಪತಿಗಳನ್ನು ಶನಿವಾರ ನಡೆದ ಲೋಕಾಅದಾಲತ್ ನಲ್ಲಿ ನ್ಯಾಯಾಧೀಶರುಗಳು ಹೇಳಿದ ಬುದ್ಧಿಮಾತಿನಿಂದ…
ಕೊಲ್ಲಿ ದೇಶಗಳಲ್ಲಿ ಯುದ್ಧದ ಪರಿಸ್ಥಿತಿ ಹಿನ್ನೆಲೆಯಲ್ಲಿ ಉಂಟಾದ ಗೃಹ ಬಳಕೆ ಹಾಗೂ ವಾಣಿಜ್ಯ ಬಳಕೆ ಗ್ಯಾಸ್ ಸಿಲಿಂಡರ್ ಗಳ ಪೂರೈಕೆ…
ಗೃಹಬಳಕೆ ಸಿಲಿಂಡರ್ ಅನ್ನು ವಾಣಿಜ್ಯ ಉದ್ದೇಶಕ್ಕಾಗಿ ಬಳಸಿದ್ದಲ್ಲಿ ಸೂಕ್ತ ಕಾನೂನುಕ್ರಮ ಕೈಗೊಳ್ಳಲು ಆಹಾರ ಸಚಿವರು ಸೂಚಿಸಿದ್ದು, ಅದರಂತೆ ಗೃಹ ಬಳಕೆ…
ವಾಣಿಜ್ಯ ಗ್ಯಾಸ್ ಸಿಲಿಂಡರ್ ಸಮಸ್ಯೆ ಹಿನ್ನೆಲೆ ಆಹಾರ ಸಚಿವ ಕೆ.ಎಚ್.ಮುನಿಯಪ್ಪ ಪ್ರತಿಕ್ರಿಯೆ. ಈ ಸಮಸ್ಯೆ ಇನ್ನು ಒಂದು ವಾರಗಳ ಕಾಲ…