ಜ.21ರಿಂದ ಆರ್.ಎಲ್.ಜಾಲಪ್ಪ ತಾಂತ್ರಿಕ ಮಹಾವಿದ್ಯಾಲಯದಲ್ಲಿ ರಾಜ್ಯ ಮಟ್ಟದ ಟೇಕ್ವಾಂಡೋ ಸ್ಪರ್ಧೆ

ಜ.21 ಹಾಗೂ 22 ರಂದು ನಗರದ ಆರ್.ಎಲ್ ಜಾಲಪ್ಪ ತಾಂತ್ರಿಕ ಮಹಾವಿದ್ಯಾಲಯದಲ್ಲಿ ರಾಜ್ಯ ಮಟ್ಟದ ಟೇಕ್ವಾಂಡೋ ಪಂದ್ಯಾವಳಿ ನಡೆಯಲಿದೆ.

ಪಂದ್ಯಾವಳಿಯಲ್ಲಿ ಒಟ್ಟು 18 ಜಿಲ್ಲೆಗಳು ಹಾಗೂ 34 ಕ್ಲಬ್ ಗಳಿಂದ 1,150 ಸ್ಪರ್ಧಾಳುಗಳು ಭಾಗವಹಿಸಲಿದ್ದಾರೆ ಎಂದು ಕರ್ನಾಟಕ ಟೇಕ್ವಾಂಡೊ ಅಸೋಸಿಯೇಷನ್ ಅಧ್ಯಕ್ಷ ಟಿ. ಪ್ರವೀಣಕುಮಾರ್ ತಿಳಿಸಿದರು.

ನಗರದ ಪ್ರವಾಸಿ ಮಂದಿರದಲ್ಲಿ ಶುಕ್ರವಾರ ಪತ್ರಿಕಾಗೋಷ್ಠಿ ಉದ್ದೇಶಿಸಿ ಮಾತನಾಡಿದರು. ಭಾರತ‌ ಸರ್ಕಾರ, ಭಾರತೀಯ ಒಲಿಂಪಿಕ್ ಅಸೋಸಿಯೇಷನ್ ಹಾಗೂ ರಾಜ್ಯ ಟೆಕ್ವಾಂಡೋ ಅಸೋಸಿಯೇಷನ್ ವತಿಯಿಂದ ಎರಡು ದಿನಗಳ 39ನೇ ರಾಜ್ಯಮಟ್ಟದ ಸಬ್ ಜೂನಿಯರ್, ಜೂನಿಯರ್ ಹಾಗೂ‌ ಸೀನಿಯರ್ ಮಟ್ಟದ ಟೆಕ್ವಾಂಡೋ ಪಂದ್ಯಾವಳಿ‌ ನಡೆಯಲಿದೆ ಎಂದರು.

ಅಸೋಸಿಯೇಷನ್ ಕಾರ್ಯದರ್ಶಿ ಕೃಷ್ಣಮೂರ್ತಿ ಮಾತನಾಡಿ, ಪಂದ್ಯಾವಳಿಯಲ್ಲಿ 8 ರಿಂದ 50 ವರ್ಷ ವಯೋಮಾನದವರು ಭಾಗವಹಿಸಲಿದ್ದಾರೆ. ವಿಜೇತರಿಗೆ‌ ಚಿನ್ನದ ಪದಕ ನೀಡಲಾಗುವುದು. ರಾಜ್ಯಮಟ್ಟದಲ್ಲಿ ವಿಜೇತರಾದವರನ್ನು ಪುದುಚೇರಿ ಹಾಗೂ ವಿಶಾಖಪಟ್ಟಣದಲ್ಲಿ ನಡೆಯುವ ರಾಷ್ಟ್ರ ಮಟ್ಟದ ಟೇಕ್ವಾಂಡೋ ಪಂದ್ಯಾವಳಿಗೆ ಕಳುಹಿಸಿಕೊಡಲಾಗುವುದು ಎಂದರು.

ವಿಶಾಖಪಟ್ಟಣದಲ್ಲಿ ಜೂನಿಯರ್( 8 ವರ್ಷದಿಂದ 17 ವರ್ಷದೊಳಗಿನ) , ಪುದುಚೇರಿಯಲ್ಲಿ ಸೀನಿಯರ್(17 ವರ್ಷಕ್ಕಿಂತ ಮೇಲ್ಪಟ್ಟು) ಚಾಂಪಿಯನ್ ಶಿಪ್ ನಡೆಯಲಿದೆ. ಇಲ್ಲಿ ಗೆದ್ದವರು ಅಂತಾರಾಷ್ಟ್ರೀಯ ಮಟ್ಟಕ್ಕೆ ಆಯ್ಕೆಯಾಗಲಿದ್ದಾರೆ ಎಂದು ತಿಳಿಸಿದರು.

ತೀರ್ಪು ಹಾಗೂ ಅಂಕಗಳನ್ನು ಪ್ರದರ್ಶಿಸಲು
ಅಂತಾರಾಷ್ಟ್ರೀಯ ಪಂದ್ಯಾವಳಿಯಲ್ಲಿ ಬಳಸುವ ಎಲೆಕ್ಟ್ರಾನಿಕ್ ಸಾಧನಗಳನ್ನು ಇಲ್ಲಿ ಬಳಸುತ್ತಿರುವುದು ವಿಶೇಷ ಎಂದು ಹೇಳಿದರು.

ಒಟ್ಟು 7 ಅಂಕಣಗಳಲ್ಲಿ ತಲಾ ಎರಡು‌ ನಿಮಿಷದ ಮೂರು ಪಂದ್ಯಗಳು ನಡೆಯಲಿವೆ ಎಂದರು.
ನಾರಾಯಣಸ್ವಾಮಿ ಮಾತನಾಡಿ, 2008 ರಲ್ಲಿ ಜಿಲ್ಲೆಯಲ್ಲಿ ಟೆಕ್ವಾಂಡೋ‌ ತರಬೇತಿ ಆರಂಭಿಸಲಾಯಿತು. ಪ್ರಸ್ತುತ ಜಿಲ್ಲೆಯ ನಾಲ್ಕೂ ತಾಲೂಕುಗಳಲ್ಲಿ ಟೆಕ್ವಾಂಡೋ ಕ್ರೀಡೆ ಚಾಲ್ತಿಯಲ್ಲಿದೆ. ಗ್ರಾಮಾಂತರ ಜಿಲ್ಲೆಯಿಂದ ಪಂದ್ಯಾವಳಿಯಲ್ಲಿ ಒಟ್ಟು 125 ಸ್ಪರ್ಧಾಳುಗಳು ಭಾಗವಹಿಸಲಿದ್ದಾರೆ. ರಾಷ್ಟ್ರಮಟ್ಟದಲ್ಲಿ ಸಬ್ ಜೂನಿಯರ್, ಕೆಡೆಟ್, ಜೂನಿಯರ್, ಸಿನಿಯರ್ ‌ಎಂಬ ನಾಲ್ಕು ವಿಭಾಗದಲ್ಲಿ ಪಂದ್ಯ‌ ನಡೆಯಲಿದೆ ಎಂದು ವಿವರಿಸಿದರು.

Ramesh Babu

Journalist

Recent Posts

ಕಾಲೇಜಿನಿಂದ ಸಹೋದರನನ್ನು ಮನೆಗೆ ಕರೆದುಕೊಂಡು ಬರುವಾಗ ಜೆಸಿಬಿ ಹಾಗೂ ಬೈಕ್ ನಡುವೆ ಅಪಘಾತ: ಬೈಕ್ ನಲ್ಲಿದ್ದ ಅಣ್ಣ ಸಾವು, ತಮ್ಮನಿಗೆ ಗಾಯ

ಜೆಸಿಬಿ ಹಾಗೂ ಬೈಕ್ ನಡುವೆ ಅಪಘಾತ ಸಂಭವಿಸಿ ಓರ್ವ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದು, ಮತ್ತೋರ್ವನಿಗೆ ಗಾಯಗಳಾಗಿರುವ ಘಟನೆ ನಿನ್ನೆ…

2 hours ago

ಸರ್ಕಾರಿ ಆಸ್ಪತ್ರೆಯಲ್ಲಿ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮೀ ಚೌಧರಿ ರೌಂಡ್ಸ್​

ದೊಡ್ಡಬಳ್ಳಾಪುರ ನಗರದ ಸಾರ್ವಜನಿಕ ಆಸ್ಪತ್ರೆಗೆ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮೀ ಚೌಧರಿ ಇಂದು ದಿಢೀರ್ ಭೇಟಿ ನೀಡಿ, ಆಸ್ಪತ್ರೆಯಲ್ಲಿನ…

3 hours ago

ಮಕ್ಕಳ ಹಕ್ಕುಗಳ ಸಂರಕ್ಷಣೆ ಕುರಿತು ಗ್ರಾಮ ಸಭೆ

ದೊಡ್ಡಬಳ್ಳಾಪುರ ತಾಲೂಕಿನ ಹಾದ್ರೀಪುರ ಗ್ರಾಮದ ಸರ್ಕಾರಿ ಶಾಲೆಯಲ್ಲಿ ಮಕ್ಕಳ ಹಕ್ಕುಗಳ ಸಂರಕ್ಷಣೆ ಕುರಿತು ಗ್ರಾಮ ಸಭೆಯನ್ನು ಆಯೋಜಿಸಲಾಗಿತ್ತು. ಗ್ರಾಮ ಸಭೆಯಲ್ಲಿ…

18 hours ago

ಡಿ.25ರಂದು ದಕ್ಷಿಣ ಭಾರತದ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವರ ಬ್ರಹ್ಮರಥೋತ್ಸವ: ಬ್ರಹ್ಮರಥೋತ್ಸವವನ್ನು ಸುಸೂತ್ರವಾಗಿ ನಡೆಸಲು ಸಕಲ ಸಿದ್ಧತೆ: ಯಾವೆಲ್ಲಾ ಸಿದ್ಧತೆ ನಡೆಸಲಾಗಿದೆ ಎಂಬ ಮಾಹಿತಿ ಇಲ್ಲಿದೆ ನೋಡಿ…

ಡಿ.25ರಂದು ದಕ್ಷಿಣ ಭಾರತದ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವರ ಬ್ರಹ್ಮರಥೋತ್ಸವ ನಡೆಯಲಿದೆ.... ಬ್ರಹ್ಮರಥೋತ್ಸವವನ್ನು ಸುಸೂತ್ರವಾಗಿ ನಡೆಸಲು…

19 hours ago

ಗೃಹಲಕ್ಷ್ಮಿ ಹಣ ಶೀಘ್ರ ಬಿಡುಗಡೆ- ಸಿಎಂ ಸಿದ್ದರಾಮಯ್ಯ

ದ್ವೇಷ ಭಾಷಣ ತಡೆ ಮಸೂದೆಯ ಬಗ್ಗೆ ಬಿಜೆಪಿಗೆ ಮಾತ್ರ ಏಕೆ ಆತಂಕ? ದ್ವೇಷ ಭಾಷಣ ತಡೆ ಮಸೂದೆ ಕೆಲವರನ್ನು ಗುರಿಯಾಗಿಸಿಕೊಂಡು…

1 day ago

ದಲಿತ ಯುವಕನ ಮದುವೆಯಾಗಿದ್ದಕ್ಕೆ ತಂದೆಯೇ 7 ತಿಂಗಳ ಗರ್ಭಿಣಿ ಮಗಳನ್ನು ಭೀಕರವಾಗಿ ಹತ್ಯೆ

ದಲಿತ ಯುವಕನ ಮದುವೆಯಾಗಿದ್ದಕ್ಕೆ ತಂದೆಯೇ 7 ತಿಂಗಳ ಗರ್ಭಿಣಿ ಮಗಳನ್ನು ಭೀಕರವಾಗಿ ಹತ್ಯೆ ಮಾಡಿದ ಘಟನೆ ಸಂಬಂಧ ಎಸ್​​ಪಿ ಗುಂಜನ್…

1 day ago