ಜ.21ರಿಂದ ಆರ್.ಎಲ್.ಜಾಲಪ್ಪ ತಾಂತ್ರಿಕ ಮಹಾವಿದ್ಯಾಲಯದಲ್ಲಿ ರಾಜ್ಯ ಮಟ್ಟದ ಟೇಕ್ವಾಂಡೋ ಸ್ಪರ್ಧೆ

ಜ.21 ಹಾಗೂ 22 ರಂದು ನಗರದ ಆರ್.ಎಲ್ ಜಾಲಪ್ಪ ತಾಂತ್ರಿಕ ಮಹಾವಿದ್ಯಾಲಯದಲ್ಲಿ ರಾಜ್ಯ ಮಟ್ಟದ ಟೇಕ್ವಾಂಡೋ ಪಂದ್ಯಾವಳಿ ನಡೆಯಲಿದೆ.

ಪಂದ್ಯಾವಳಿಯಲ್ಲಿ ಒಟ್ಟು 18 ಜಿಲ್ಲೆಗಳು ಹಾಗೂ 34 ಕ್ಲಬ್ ಗಳಿಂದ 1,150 ಸ್ಪರ್ಧಾಳುಗಳು ಭಾಗವಹಿಸಲಿದ್ದಾರೆ ಎಂದು ಕರ್ನಾಟಕ ಟೇಕ್ವಾಂಡೊ ಅಸೋಸಿಯೇಷನ್ ಅಧ್ಯಕ್ಷ ಟಿ. ಪ್ರವೀಣಕುಮಾರ್ ತಿಳಿಸಿದರು.

ನಗರದ ಪ್ರವಾಸಿ ಮಂದಿರದಲ್ಲಿ ಶುಕ್ರವಾರ ಪತ್ರಿಕಾಗೋಷ್ಠಿ ಉದ್ದೇಶಿಸಿ ಮಾತನಾಡಿದರು. ಭಾರತ‌ ಸರ್ಕಾರ, ಭಾರತೀಯ ಒಲಿಂಪಿಕ್ ಅಸೋಸಿಯೇಷನ್ ಹಾಗೂ ರಾಜ್ಯ ಟೆಕ್ವಾಂಡೋ ಅಸೋಸಿಯೇಷನ್ ವತಿಯಿಂದ ಎರಡು ದಿನಗಳ 39ನೇ ರಾಜ್ಯಮಟ್ಟದ ಸಬ್ ಜೂನಿಯರ್, ಜೂನಿಯರ್ ಹಾಗೂ‌ ಸೀನಿಯರ್ ಮಟ್ಟದ ಟೆಕ್ವಾಂಡೋ ಪಂದ್ಯಾವಳಿ‌ ನಡೆಯಲಿದೆ ಎಂದರು.

ಅಸೋಸಿಯೇಷನ್ ಕಾರ್ಯದರ್ಶಿ ಕೃಷ್ಣಮೂರ್ತಿ ಮಾತನಾಡಿ, ಪಂದ್ಯಾವಳಿಯಲ್ಲಿ 8 ರಿಂದ 50 ವರ್ಷ ವಯೋಮಾನದವರು ಭಾಗವಹಿಸಲಿದ್ದಾರೆ. ವಿಜೇತರಿಗೆ‌ ಚಿನ್ನದ ಪದಕ ನೀಡಲಾಗುವುದು. ರಾಜ್ಯಮಟ್ಟದಲ್ಲಿ ವಿಜೇತರಾದವರನ್ನು ಪುದುಚೇರಿ ಹಾಗೂ ವಿಶಾಖಪಟ್ಟಣದಲ್ಲಿ ನಡೆಯುವ ರಾಷ್ಟ್ರ ಮಟ್ಟದ ಟೇಕ್ವಾಂಡೋ ಪಂದ್ಯಾವಳಿಗೆ ಕಳುಹಿಸಿಕೊಡಲಾಗುವುದು ಎಂದರು.

ವಿಶಾಖಪಟ್ಟಣದಲ್ಲಿ ಜೂನಿಯರ್( 8 ವರ್ಷದಿಂದ 17 ವರ್ಷದೊಳಗಿನ) , ಪುದುಚೇರಿಯಲ್ಲಿ ಸೀನಿಯರ್(17 ವರ್ಷಕ್ಕಿಂತ ಮೇಲ್ಪಟ್ಟು) ಚಾಂಪಿಯನ್ ಶಿಪ್ ನಡೆಯಲಿದೆ. ಇಲ್ಲಿ ಗೆದ್ದವರು ಅಂತಾರಾಷ್ಟ್ರೀಯ ಮಟ್ಟಕ್ಕೆ ಆಯ್ಕೆಯಾಗಲಿದ್ದಾರೆ ಎಂದು ತಿಳಿಸಿದರು.

ತೀರ್ಪು ಹಾಗೂ ಅಂಕಗಳನ್ನು ಪ್ರದರ್ಶಿಸಲು
ಅಂತಾರಾಷ್ಟ್ರೀಯ ಪಂದ್ಯಾವಳಿಯಲ್ಲಿ ಬಳಸುವ ಎಲೆಕ್ಟ್ರಾನಿಕ್ ಸಾಧನಗಳನ್ನು ಇಲ್ಲಿ ಬಳಸುತ್ತಿರುವುದು ವಿಶೇಷ ಎಂದು ಹೇಳಿದರು.

ಒಟ್ಟು 7 ಅಂಕಣಗಳಲ್ಲಿ ತಲಾ ಎರಡು‌ ನಿಮಿಷದ ಮೂರು ಪಂದ್ಯಗಳು ನಡೆಯಲಿವೆ ಎಂದರು.
ನಾರಾಯಣಸ್ವಾಮಿ ಮಾತನಾಡಿ, 2008 ರಲ್ಲಿ ಜಿಲ್ಲೆಯಲ್ಲಿ ಟೆಕ್ವಾಂಡೋ‌ ತರಬೇತಿ ಆರಂಭಿಸಲಾಯಿತು. ಪ್ರಸ್ತುತ ಜಿಲ್ಲೆಯ ನಾಲ್ಕೂ ತಾಲೂಕುಗಳಲ್ಲಿ ಟೆಕ್ವಾಂಡೋ ಕ್ರೀಡೆ ಚಾಲ್ತಿಯಲ್ಲಿದೆ. ಗ್ರಾಮಾಂತರ ಜಿಲ್ಲೆಯಿಂದ ಪಂದ್ಯಾವಳಿಯಲ್ಲಿ ಒಟ್ಟು 125 ಸ್ಪರ್ಧಾಳುಗಳು ಭಾಗವಹಿಸಲಿದ್ದಾರೆ. ರಾಷ್ಟ್ರಮಟ್ಟದಲ್ಲಿ ಸಬ್ ಜೂನಿಯರ್, ಕೆಡೆಟ್, ಜೂನಿಯರ್, ಸಿನಿಯರ್ ‌ಎಂಬ ನಾಲ್ಕು ವಿಭಾಗದಲ್ಲಿ ಪಂದ್ಯ‌ ನಡೆಯಲಿದೆ ಎಂದು ವಿವರಿಸಿದರು.

Ramesh Babu

Journalist

Recent Posts

ಜೂ.05 ರಿಂದ ಮೂರು ದಿನಗಳ ಕಾಲ ಮಾವು, ಹಲಸು ಮತ್ತು ಇತರೆ ಹಣ್ಣುಗಳ ಪ್ರದರ್ಶನ ಮತ್ತು ಮಾರಾಟ ಮೇಳ

ಮಾವು ಮತ್ತು ಹಲಸು ಹಣ್ಣಿನ ಋತುಮಾನದ ಈ ಸಂದರ್ಭದಲ್ಲಿ ತೋಟಗಾರಿಕೆ ಇಲಾಖೆ ವತಿಯಿಂದ ರೈತರಿಗೆ ಹಾಗೂ ಗ್ರಾಹಕರಿಗೆ ಅನುಕೂಲವಾಗಲೆಂದು ಒಂದೇ…

26 minutes ago

ಟಿವಿಎಸ್ ಎಕ್ಸ್‌ಎಲ್-100 ಕಳವು: ಕಳ್ಳನ ಕೈಚಳಕ ಸಿಸಿಟಿವಿಯಲ್ಲಿ ಸೆರೆ

ದೊಡ್ಡಬಳ್ಳಾಪುರ ನಗರದ ಡಿ ಕ್ರಾಸ್ ಬಳಿ ನಿಲ್ಲಿಸಿದ್ದ ಟಿವಿಎಸ್ ಎಕ್ಸ್‌ಎಲ್-100 ವಾಹನವನ್ನು ಕಳ್ಳನೊಬ್ಬ ಕಳವು ಮಾಡಿಕೊಂಡು ಹೋಗಿರುವ ಘಟನೆ ಬುಧವಾರ…

4 hours ago

KPCC ನೂತನ ಅಧ್ಯಕ್ಷರಾಗಿ ‌ಬಿ.ಕೆ ಹರಿಪ್ರಸಾದ್ ನೇಮಕ

ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ(KPCC)ಯ ನೂತನ ಅಧ್ಯಕ್ಷರಾಗಿ ‌ಬಿ.ಕೆ ಹರಿಪ್ರಸಾದ್ ಅವರನ್ನು ನೇಮಕ ಮಾಡಲಾಗಿದೆ. ಡಿಕೆ ಶಿವಕುಮಾರ್ ಅವರು ಬುಧವಾರ…

19 hours ago

ಶಾಲಾ-ಕಾಲೇಜು ಹುಡುಗರಿಗೂ ಉಚಿತ ಬಸ್ ಪಾಸ್ ಘೋಷಿಸಿದ ಸಿಎಂ ಡಿಕೆಶಿ

ಡಿ.ಕೆ ಶಿವಕುಮಾರ್ ಅವರು ಬುಧವಾರ ರಾಜ್ಯದ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಬೆನ್ನಲ್ಲೇ ರಾಜ್ಯದ ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ ನೀಡಿದ್ದಾರೆ.…

19 hours ago

ಎಸ್.ಐ.ಆರ್ ಬಗ್ಗೆ ಗೊಂದಲ, ಭಯ ಬೇಡ: ಮತದಾರರ ಪಟ್ಟಿ ಪರಿಷ್ಕರಣೆಗೆ ಸಾರ್ವಜನಿಕರ ಸಹಕಾರ ಅಗತ್ಯ- ಎಸಿ ಟಿ.ಆರ್ ಮಂಜುನಾಥ

ದೊಡ್ಡಬಳ್ಳಾಪುರ ತಾಲ್ಲೂಕಿನಲ್ಲಿ ಜೂನ್ 20 ರಿಂದ ಎಸ್‌ಐಆರ್‌ ಪ್ರಕ್ರಿಯೆ ಅಧಿಕೃತವಾಗಿ ಆರಂಭವಾಗಲಿದೆ. ತಾಲ್ಲೂಕಿನಲ್ಲಿ 2,23,457 ಮಂದಿ ಮತದಾರರಿದ್ದಾರೆ. ಈ ಪೈಕಿ…

20 hours ago

ಸಿಎಂ ಆದ ಬಳಿಕ ಜನತೆಗೆ ಕೃತಜ್ಞತೆ ಸಲ್ಲಿಸಿದ ಡಿ.ಕೆ. ಶಿವಕುಮಾರ್

ಬೆಂಗಳೂರು: ಕರ್ನಾಟಕದ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಬಳಿಕ ಡಿ.ಕೆ. ಶಿವಕುಮಾರ್ ಅವರು ತಮ್ಮ ಸಾಮಾಜಿಕ ಜಾಲತಾಣಗಳಲ್ಲಿ ಭಾವನಾತ್ಮಕ ಸಂದೇಶ ಹಂಚಿಕೊಂಡಿದ್ದಾರೆ.…

21 hours ago