ಜ.21ರಿಂದ ಆರ್.ಎಲ್.ಜಾಲಪ್ಪ ತಾಂತ್ರಿಕ ಮಹಾವಿದ್ಯಾಲಯದಲ್ಲಿ ರಾಜ್ಯ ಮಟ್ಟದ ಟೇಕ್ವಾಂಡೋ ಸ್ಪರ್ಧೆ

ಜ.21 ಹಾಗೂ 22 ರಂದು ನಗರದ ಆರ್.ಎಲ್ ಜಾಲಪ್ಪ ತಾಂತ್ರಿಕ ಮಹಾವಿದ್ಯಾಲಯದಲ್ಲಿ ರಾಜ್ಯ ಮಟ್ಟದ ಟೇಕ್ವಾಂಡೋ ಪಂದ್ಯಾವಳಿ ನಡೆಯಲಿದೆ.

ಪಂದ್ಯಾವಳಿಯಲ್ಲಿ ಒಟ್ಟು 18 ಜಿಲ್ಲೆಗಳು ಹಾಗೂ 34 ಕ್ಲಬ್ ಗಳಿಂದ 1,150 ಸ್ಪರ್ಧಾಳುಗಳು ಭಾಗವಹಿಸಲಿದ್ದಾರೆ ಎಂದು ಕರ್ನಾಟಕ ಟೇಕ್ವಾಂಡೊ ಅಸೋಸಿಯೇಷನ್ ಅಧ್ಯಕ್ಷ ಟಿ. ಪ್ರವೀಣಕುಮಾರ್ ತಿಳಿಸಿದರು.

ನಗರದ ಪ್ರವಾಸಿ ಮಂದಿರದಲ್ಲಿ ಶುಕ್ರವಾರ ಪತ್ರಿಕಾಗೋಷ್ಠಿ ಉದ್ದೇಶಿಸಿ ಮಾತನಾಡಿದರು. ಭಾರತ‌ ಸರ್ಕಾರ, ಭಾರತೀಯ ಒಲಿಂಪಿಕ್ ಅಸೋಸಿಯೇಷನ್ ಹಾಗೂ ರಾಜ್ಯ ಟೆಕ್ವಾಂಡೋ ಅಸೋಸಿಯೇಷನ್ ವತಿಯಿಂದ ಎರಡು ದಿನಗಳ 39ನೇ ರಾಜ್ಯಮಟ್ಟದ ಸಬ್ ಜೂನಿಯರ್, ಜೂನಿಯರ್ ಹಾಗೂ‌ ಸೀನಿಯರ್ ಮಟ್ಟದ ಟೆಕ್ವಾಂಡೋ ಪಂದ್ಯಾವಳಿ‌ ನಡೆಯಲಿದೆ ಎಂದರು.

ಅಸೋಸಿಯೇಷನ್ ಕಾರ್ಯದರ್ಶಿ ಕೃಷ್ಣಮೂರ್ತಿ ಮಾತನಾಡಿ, ಪಂದ್ಯಾವಳಿಯಲ್ಲಿ 8 ರಿಂದ 50 ವರ್ಷ ವಯೋಮಾನದವರು ಭಾಗವಹಿಸಲಿದ್ದಾರೆ. ವಿಜೇತರಿಗೆ‌ ಚಿನ್ನದ ಪದಕ ನೀಡಲಾಗುವುದು. ರಾಜ್ಯಮಟ್ಟದಲ್ಲಿ ವಿಜೇತರಾದವರನ್ನು ಪುದುಚೇರಿ ಹಾಗೂ ವಿಶಾಖಪಟ್ಟಣದಲ್ಲಿ ನಡೆಯುವ ರಾಷ್ಟ್ರ ಮಟ್ಟದ ಟೇಕ್ವಾಂಡೋ ಪಂದ್ಯಾವಳಿಗೆ ಕಳುಹಿಸಿಕೊಡಲಾಗುವುದು ಎಂದರು.

ವಿಶಾಖಪಟ್ಟಣದಲ್ಲಿ ಜೂನಿಯರ್( 8 ವರ್ಷದಿಂದ 17 ವರ್ಷದೊಳಗಿನ) , ಪುದುಚೇರಿಯಲ್ಲಿ ಸೀನಿಯರ್(17 ವರ್ಷಕ್ಕಿಂತ ಮೇಲ್ಪಟ್ಟು) ಚಾಂಪಿಯನ್ ಶಿಪ್ ನಡೆಯಲಿದೆ. ಇಲ್ಲಿ ಗೆದ್ದವರು ಅಂತಾರಾಷ್ಟ್ರೀಯ ಮಟ್ಟಕ್ಕೆ ಆಯ್ಕೆಯಾಗಲಿದ್ದಾರೆ ಎಂದು ತಿಳಿಸಿದರು.

ತೀರ್ಪು ಹಾಗೂ ಅಂಕಗಳನ್ನು ಪ್ರದರ್ಶಿಸಲು
ಅಂತಾರಾಷ್ಟ್ರೀಯ ಪಂದ್ಯಾವಳಿಯಲ್ಲಿ ಬಳಸುವ ಎಲೆಕ್ಟ್ರಾನಿಕ್ ಸಾಧನಗಳನ್ನು ಇಲ್ಲಿ ಬಳಸುತ್ತಿರುವುದು ವಿಶೇಷ ಎಂದು ಹೇಳಿದರು.

ಒಟ್ಟು 7 ಅಂಕಣಗಳಲ್ಲಿ ತಲಾ ಎರಡು‌ ನಿಮಿಷದ ಮೂರು ಪಂದ್ಯಗಳು ನಡೆಯಲಿವೆ ಎಂದರು.
ನಾರಾಯಣಸ್ವಾಮಿ ಮಾತನಾಡಿ, 2008 ರಲ್ಲಿ ಜಿಲ್ಲೆಯಲ್ಲಿ ಟೆಕ್ವಾಂಡೋ‌ ತರಬೇತಿ ಆರಂಭಿಸಲಾಯಿತು. ಪ್ರಸ್ತುತ ಜಿಲ್ಲೆಯ ನಾಲ್ಕೂ ತಾಲೂಕುಗಳಲ್ಲಿ ಟೆಕ್ವಾಂಡೋ ಕ್ರೀಡೆ ಚಾಲ್ತಿಯಲ್ಲಿದೆ. ಗ್ರಾಮಾಂತರ ಜಿಲ್ಲೆಯಿಂದ ಪಂದ್ಯಾವಳಿಯಲ್ಲಿ ಒಟ್ಟು 125 ಸ್ಪರ್ಧಾಳುಗಳು ಭಾಗವಹಿಸಲಿದ್ದಾರೆ. ರಾಷ್ಟ್ರಮಟ್ಟದಲ್ಲಿ ಸಬ್ ಜೂನಿಯರ್, ಕೆಡೆಟ್, ಜೂನಿಯರ್, ಸಿನಿಯರ್ ‌ಎಂಬ ನಾಲ್ಕು ವಿಭಾಗದಲ್ಲಿ ಪಂದ್ಯ‌ ನಡೆಯಲಿದೆ ಎಂದು ವಿವರಿಸಿದರು.

Ramesh Babu

Journalist

Recent Posts

ರಾಷ್ಟ್ರೀಯ ಸಾಹಿತ್ಯ ಸೌರಭದಲ್ಲಿ ಕವಿ ರವಿಕುಮಾರ್ ಅವರ ‘ಅಂಚಿನ ತೊರೆ’ ಕವನ ಸಂಕಲನ ಲೋಕಾರ್ಪಣೆ

ಉಡುಪಿ: ಉಡುಪಿ ಜಿಲ್ಲೆಯ ಕೋಟದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ರಾಜ್ಯ ಜ್ಞಾನಗಂಗಾ ಸಾಹಿತ್ಯ…

6 hours ago

ನಾಡಕಚೇರಿ ಸರ್ವರ್ ಪದೇ ಪದೇ ಡೌನ್: ರಾಜ್ಯಾದ್ಯಂತ ಜನರಿಗೆ ಸಂಕಷ್ಟ – ತುರ್ತು ಪರಿಹಾರಕ್ಕೆ ಸರ್ಕಾರ ಮುಂದಾಗಬೇಕಿದೆ

ಬೆಂಗಳೂರು: ರಾಜ್ಯದ ಸಾರ್ವಜನಿಕರಿಗೆ ಅಗತ್ಯ ಪ್ರಮಾಣಪತ್ರಗಳು ಮತ್ತು ಕಂದಾಯ ಇಲಾಖೆಯ ವಿವಿಧ ಸೇವೆಗಳನ್ನು ಒದಗಿಸುವ ನಾಡಕಚೇರಿ ಸೇವೆ ಕಳೆದ ಕೆಲವು…

13 hours ago

ಮಧುರನಹೊಸಹಳ್ಳಿಯಲ್ಲಿ ವಿಜೃಂಭಣೆಯಿಂದ ಆಷಾಡ ಏಕಾದಶಿ ಆಚರಣೆ

ದೊಡ್ಡಬಳ್ಳಾಪುರ: ತಾಲೂಕಿನ ಮಧುರನಹೊಸಹಳ್ಳಿ ಗ್ರಾಮದಲ್ಲಿ ವರ್ಷದ ಮೊದಲ ಹಬ್ಬವೆಂದು ಪರಿಗಣಿಸಲ್ಪಡುವ ಆಷಾಡ ಏಕಾದಶಿಯನ್ನು ಭಕ್ತಿ, ಸಂಭ್ರಮ ಹಾಗೂ ಸಾಂಪ್ರದಾಯಿಕ ವೈಭವದೊಂದಿಗೆ…

14 hours ago

ಬಾಶೆಟ್ಟಿಹಳ್ಳಿ ಯೂ-ಟರ್ನ್‌ನಲ್ಲಿ ಕೆಟ್ಟು ನಿಂತ ಟ್ರಕ್: ಯಲಹಂಕ–ಹಿಂದೂಪುರ ಹೆದ್ದಾರಿಯಲ್ಲಿ ಭಾರೀ ಟ್ರಾಫಿಕ್ ಜಾಮ್

ದೊಡ್ಡಬಳ್ಳಾಪುರ: ಬಾಶೆಟ್ಟಿಹಳ್ಳಿ ಸಮೀಪದ ಯಲಹಂಕ–ಹಿಂದೂಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಯೂ-ಟರ್ನ್ ಪಡೆಯುವ ವೇಳೆ ಟ್ರಕ್ ಏಕಾಏಕಿ ಕೆಟ್ಟು ನಿಂತ ಪರಿಣಾಮ ಕೆಲಕಾಲ…

1 day ago

ಹೆದ್ದಾರಿ ಸ್ಕೈವಾಕ್‌ಗಳ ಕನಸು ಇನ್ನೂ ಅಪೂರ್ಣ…: ದಾಬಸ್‌ಪೇಟೆ–ಹೊಸಕೋಟೆ ಹೆದ್ದಾರಿಯಲ್ಲಿ ಆಮೆಗತಿಯ ಕಾಮಗಾರಿ: ಜೀವ ಕೈಯಲ್ಲಿ ಹಿಡಿದು ರಸ್ತೆ ದಾಟುವ ಜನರು

ಬೆಂಗಳೂರು ಗ್ರಾಮಾಂತರ: ರಾಜ್ಯದ ಪ್ರಮುಖ ಸಂಪರ್ಕ ಮಾರ್ಗಗಳಲ್ಲಿ ಒಂದಾಗಿರುವ 84 ಕಿ.ಮೀ. ಉದ್ದದ ದಾಬಸ್‌ಪೇಟೆ–ಹೊಸಕೋಟೆ ರಾಷ್ಟ್ರೀಯ ಹೆದ್ದಾರಿ-648ರಲ್ಲಿ ಸಾರ್ವಜನಿಕರ ಸುರಕ್ಷಿತ…

2 days ago

ಬೆಂಗಳೂರು ಗ್ರಾಮಾಂತರದಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ ಬಿರುಸು: 15,721 ಮೃತರ ಹೆಸರು ಪತ್ತೆ

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ-2026ರ (ಎಸ್ಐಆರ್) ಪ್ರಕ್ರಿಯೆ ಬಿರುಸಿನಿಂದ ಸಾಗುತ್ತಿದ್ದು, ಜಿಲ್ಲೆಯಾದ್ಯಂತ ಒಟ್ಟು 15,721 ಮೃತರ…

2 days ago