ಜ.21ರಿಂದ ಆರ್.ಎಲ್.ಜಾಲಪ್ಪ ತಾಂತ್ರಿಕ ಮಹಾವಿದ್ಯಾಲಯದಲ್ಲಿ ರಾಜ್ಯ ಮಟ್ಟದ ಟೇಕ್ವಾಂಡೋ ಸ್ಪರ್ಧೆ

ಜ.21 ಹಾಗೂ 22 ರಂದು ನಗರದ ಆರ್.ಎಲ್ ಜಾಲಪ್ಪ ತಾಂತ್ರಿಕ ಮಹಾವಿದ್ಯಾಲಯದಲ್ಲಿ ರಾಜ್ಯ ಮಟ್ಟದ ಟೇಕ್ವಾಂಡೋ ಪಂದ್ಯಾವಳಿ ನಡೆಯಲಿದೆ.

ಪಂದ್ಯಾವಳಿಯಲ್ಲಿ ಒಟ್ಟು 18 ಜಿಲ್ಲೆಗಳು ಹಾಗೂ 34 ಕ್ಲಬ್ ಗಳಿಂದ 1,150 ಸ್ಪರ್ಧಾಳುಗಳು ಭಾಗವಹಿಸಲಿದ್ದಾರೆ ಎಂದು ಕರ್ನಾಟಕ ಟೇಕ್ವಾಂಡೊ ಅಸೋಸಿಯೇಷನ್ ಅಧ್ಯಕ್ಷ ಟಿ. ಪ್ರವೀಣಕುಮಾರ್ ತಿಳಿಸಿದರು.

ನಗರದ ಪ್ರವಾಸಿ ಮಂದಿರದಲ್ಲಿ ಶುಕ್ರವಾರ ಪತ್ರಿಕಾಗೋಷ್ಠಿ ಉದ್ದೇಶಿಸಿ ಮಾತನಾಡಿದರು. ಭಾರತ‌ ಸರ್ಕಾರ, ಭಾರತೀಯ ಒಲಿಂಪಿಕ್ ಅಸೋಸಿಯೇಷನ್ ಹಾಗೂ ರಾಜ್ಯ ಟೆಕ್ವಾಂಡೋ ಅಸೋಸಿಯೇಷನ್ ವತಿಯಿಂದ ಎರಡು ದಿನಗಳ 39ನೇ ರಾಜ್ಯಮಟ್ಟದ ಸಬ್ ಜೂನಿಯರ್, ಜೂನಿಯರ್ ಹಾಗೂ‌ ಸೀನಿಯರ್ ಮಟ್ಟದ ಟೆಕ್ವಾಂಡೋ ಪಂದ್ಯಾವಳಿ‌ ನಡೆಯಲಿದೆ ಎಂದರು.

ಅಸೋಸಿಯೇಷನ್ ಕಾರ್ಯದರ್ಶಿ ಕೃಷ್ಣಮೂರ್ತಿ ಮಾತನಾಡಿ, ಪಂದ್ಯಾವಳಿಯಲ್ಲಿ 8 ರಿಂದ 50 ವರ್ಷ ವಯೋಮಾನದವರು ಭಾಗವಹಿಸಲಿದ್ದಾರೆ. ವಿಜೇತರಿಗೆ‌ ಚಿನ್ನದ ಪದಕ ನೀಡಲಾಗುವುದು. ರಾಜ್ಯಮಟ್ಟದಲ್ಲಿ ವಿಜೇತರಾದವರನ್ನು ಪುದುಚೇರಿ ಹಾಗೂ ವಿಶಾಖಪಟ್ಟಣದಲ್ಲಿ ನಡೆಯುವ ರಾಷ್ಟ್ರ ಮಟ್ಟದ ಟೇಕ್ವಾಂಡೋ ಪಂದ್ಯಾವಳಿಗೆ ಕಳುಹಿಸಿಕೊಡಲಾಗುವುದು ಎಂದರು.

ವಿಶಾಖಪಟ್ಟಣದಲ್ಲಿ ಜೂನಿಯರ್( 8 ವರ್ಷದಿಂದ 17 ವರ್ಷದೊಳಗಿನ) , ಪುದುಚೇರಿಯಲ್ಲಿ ಸೀನಿಯರ್(17 ವರ್ಷಕ್ಕಿಂತ ಮೇಲ್ಪಟ್ಟು) ಚಾಂಪಿಯನ್ ಶಿಪ್ ನಡೆಯಲಿದೆ. ಇಲ್ಲಿ ಗೆದ್ದವರು ಅಂತಾರಾಷ್ಟ್ರೀಯ ಮಟ್ಟಕ್ಕೆ ಆಯ್ಕೆಯಾಗಲಿದ್ದಾರೆ ಎಂದು ತಿಳಿಸಿದರು.

ತೀರ್ಪು ಹಾಗೂ ಅಂಕಗಳನ್ನು ಪ್ರದರ್ಶಿಸಲು
ಅಂತಾರಾಷ್ಟ್ರೀಯ ಪಂದ್ಯಾವಳಿಯಲ್ಲಿ ಬಳಸುವ ಎಲೆಕ್ಟ್ರಾನಿಕ್ ಸಾಧನಗಳನ್ನು ಇಲ್ಲಿ ಬಳಸುತ್ತಿರುವುದು ವಿಶೇಷ ಎಂದು ಹೇಳಿದರು.

ಒಟ್ಟು 7 ಅಂಕಣಗಳಲ್ಲಿ ತಲಾ ಎರಡು‌ ನಿಮಿಷದ ಮೂರು ಪಂದ್ಯಗಳು ನಡೆಯಲಿವೆ ಎಂದರು.
ನಾರಾಯಣಸ್ವಾಮಿ ಮಾತನಾಡಿ, 2008 ರಲ್ಲಿ ಜಿಲ್ಲೆಯಲ್ಲಿ ಟೆಕ್ವಾಂಡೋ‌ ತರಬೇತಿ ಆರಂಭಿಸಲಾಯಿತು. ಪ್ರಸ್ತುತ ಜಿಲ್ಲೆಯ ನಾಲ್ಕೂ ತಾಲೂಕುಗಳಲ್ಲಿ ಟೆಕ್ವಾಂಡೋ ಕ್ರೀಡೆ ಚಾಲ್ತಿಯಲ್ಲಿದೆ. ಗ್ರಾಮಾಂತರ ಜಿಲ್ಲೆಯಿಂದ ಪಂದ್ಯಾವಳಿಯಲ್ಲಿ ಒಟ್ಟು 125 ಸ್ಪರ್ಧಾಳುಗಳು ಭಾಗವಹಿಸಲಿದ್ದಾರೆ. ರಾಷ್ಟ್ರಮಟ್ಟದಲ್ಲಿ ಸಬ್ ಜೂನಿಯರ್, ಕೆಡೆಟ್, ಜೂನಿಯರ್, ಸಿನಿಯರ್ ‌ಎಂಬ ನಾಲ್ಕು ವಿಭಾಗದಲ್ಲಿ ಪಂದ್ಯ‌ ನಡೆಯಲಿದೆ ಎಂದು ವಿವರಿಸಿದರು.

Ramesh Babu

Journalist

Recent Posts

ಜು.7 ರಂದು ಕೆಲ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ

ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಜು.7 ರಂದು 66/11 ಕೆವಿ ಡಿಕ್ರಾಸ್ ಉಪ ವಿದ್ಯುತ್ ಕೇಂದ್ರದಿಂದ ಹೊರವೊಮ್ಮುವ F15-Tropical Flavours ಮತ್ತು 220/66/11ಕೆವಿ…

4 hours ago

ಬ್ಲಾಕ್‌ಸ್ಪಾಟ್‌ಗಳೀಗ ಸುಂದರ ತಾಣ: ಕಸ ಸುರಿಯುತ್ತಿದ್ದ ಪ್ರದೇಶಗಳಿಗೆ ಸುಣ್ಣ ಬಣ್ಣ ಬಳಿದು ಅಲಂಕಾರ: ಹೊಸ ಪ್ರಯೋಗಕ್ಕೆ ಮುಂದಾದ ನಗರಸಭೆ

ದೊಡ್ಡಬಳ್ಳಾಪುರ ನಗರದ ರಸ್ತೆ ಬದಿ, ಖಾಲಿ ಜಾಗಗಳು ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ಕಸದ ರಾಶಿ ಕಾಣುವುದು ಸಾಮಾನ್ಯ ದೃಶ್ಯವಾಗಿತ್ತು. ಸ್ವಚ್ಛತಾ…

4 hours ago

ಅಯೋಧ್ಯೆಯಲ್ಲಿ ಆರ್‌ಎಸ್‌ಎಸ್‌, ಬಿಜೆಪಿ ಪರವಾಗಿರುವವರಿಂದಲೇ ಲೂಟಿ: ಮಲ್ಲಿಕಾರ್ಜುನ ಖರ್ಗೆ ಆರೋಪ

ಬೆಂಗಳೂರು ಗ್ರಾಮಾಂತರ: ಅಯೋಧ್ಯೆಯಲ್ಲಿ ಆರ್‌ಎಸ್‌ಎಸ್‌ ಹಾಗೂ ಬಿಜೆಪಿ ಪರವಾಗಿರುವವರಿಂದಲೇ ಭಾರೀ ಪ್ರಮಾಣದ ಲೂಟಿ ನಡೆದಿದೆ ಎಂದು ರಾಜ್ಯಸಭೆ ವಿರೋಧ ಪಕ್ಷದ…

17 hours ago

ಇದು ಡಿ.ಕೆ. ಶಿವಕುಮಾರ್ ಸರ್ಕಾರವಲ್ಲ, ಜನರ ಸರ್ಕಾರ, ಸಂವಿಧಾನದ ಆಶಯಗಳಿಗೆ ಬದ್ಧವಾಗಿರುವ ಸರ್ಕಾರ- ಸಿಎಂ ಡಿಕೆಶಿ

ಸಂವಿಧಾನ ಶಿಲ್ಪಿ ಭಾರತರತ್ನ ಡಾ. ಬಿ.ಆರ್. ಅಂಬೇಡ್ಕರ್ ಅವರು ಯಾವುದೇ ಒಂದು ಸಮುದಾಯಕ್ಕಾಗಿ ಮಾತ್ರ ಹೋರಾಟ ನಡೆಸಿಲ್ಲ. ದೇಶದ ಪ್ರತಿಯೊಬ್ಬ…

17 hours ago

ಡಾ.ಬಿ.ಆರ್. ಅಂಬೇಡ್ಕರ್ ಪ್ರತಿಮೆ ಅನಾವರಣ: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಸಿಎಂ ಡಿಕೆಶಿ ಭಾಗಿ

ಬೆಂಗಳೂರು ಗ್ರಾಮಾಂತರ ಜಿಲ್ಲಾ ಆಡಳಿತ ಭವನದ ಆವರಣದಲ್ಲಿ ನಿರ್ಮಿಸಲಾಗಿರುವ ಸಂವಿಧಾನಶಿಲ್ಪಿ, ಭಾರತರತ್ನ ಡಾ. ಬಿ.ಆರ್. ಅಂಬೇಡ್ಕರ್ ಅವರ ಭವ್ಯ ಪ್ರತಿಮೆ…

20 hours ago

ನಾಳೆ ಡಾ.ಬಿ.ಆರ್. ಅಂಬೇಡ್ಕರ್ ಪ್ರತಿಮೆ ಅನಾವರಣ: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಸಿಎಂ ಡಿಕೆಶಿ ಭಾಗಿ: ಸಿದ್ಧತೆ ಪರಿಶೀಲಿಸಿದ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಚ್.ಮುನಿಯಪ್ಪ

ಬೆಂಗಳೂರು ಗ್ರಾಮಾಂತರ ಜಿಲ್ಲಾ ಆಡಳಿತ ಭವನದ ಆವರಣದಲ್ಲಿ ನಿರ್ಮಿಸಲಾಗಿರುವ ಸಂವಿಧಾನಶಿಲ್ಪಿ, ಭಾರತರತ್ನ ಡಾ. ಬಿ.ಆರ್. ಅಂಬೇಡ್ಕರ್ ಅವರ ಭವ್ಯ ಪ್ರತಿಮೆ…

2 days ago