ಜ.21ರಿಂದ ಆರ್.ಎಲ್.ಜಾಲಪ್ಪ ತಾಂತ್ರಿಕ ಮಹಾವಿದ್ಯಾಲಯದಲ್ಲಿ ರಾಜ್ಯ ಮಟ್ಟದ ಟೇಕ್ವಾಂಡೋ ಸ್ಪರ್ಧೆ

ಜ.21 ಹಾಗೂ 22 ರಂದು ನಗರದ ಆರ್.ಎಲ್ ಜಾಲಪ್ಪ ತಾಂತ್ರಿಕ ಮಹಾವಿದ್ಯಾಲಯದಲ್ಲಿ ರಾಜ್ಯ ಮಟ್ಟದ ಟೇಕ್ವಾಂಡೋ ಪಂದ್ಯಾವಳಿ ನಡೆಯಲಿದೆ.

ಪಂದ್ಯಾವಳಿಯಲ್ಲಿ ಒಟ್ಟು 18 ಜಿಲ್ಲೆಗಳು ಹಾಗೂ 34 ಕ್ಲಬ್ ಗಳಿಂದ 1,150 ಸ್ಪರ್ಧಾಳುಗಳು ಭಾಗವಹಿಸಲಿದ್ದಾರೆ ಎಂದು ಕರ್ನಾಟಕ ಟೇಕ್ವಾಂಡೊ ಅಸೋಸಿಯೇಷನ್ ಅಧ್ಯಕ್ಷ ಟಿ. ಪ್ರವೀಣಕುಮಾರ್ ತಿಳಿಸಿದರು.

ನಗರದ ಪ್ರವಾಸಿ ಮಂದಿರದಲ್ಲಿ ಶುಕ್ರವಾರ ಪತ್ರಿಕಾಗೋಷ್ಠಿ ಉದ್ದೇಶಿಸಿ ಮಾತನಾಡಿದರು. ಭಾರತ‌ ಸರ್ಕಾರ, ಭಾರತೀಯ ಒಲಿಂಪಿಕ್ ಅಸೋಸಿಯೇಷನ್ ಹಾಗೂ ರಾಜ್ಯ ಟೆಕ್ವಾಂಡೋ ಅಸೋಸಿಯೇಷನ್ ವತಿಯಿಂದ ಎರಡು ದಿನಗಳ 39ನೇ ರಾಜ್ಯಮಟ್ಟದ ಸಬ್ ಜೂನಿಯರ್, ಜೂನಿಯರ್ ಹಾಗೂ‌ ಸೀನಿಯರ್ ಮಟ್ಟದ ಟೆಕ್ವಾಂಡೋ ಪಂದ್ಯಾವಳಿ‌ ನಡೆಯಲಿದೆ ಎಂದರು.

ಅಸೋಸಿಯೇಷನ್ ಕಾರ್ಯದರ್ಶಿ ಕೃಷ್ಣಮೂರ್ತಿ ಮಾತನಾಡಿ, ಪಂದ್ಯಾವಳಿಯಲ್ಲಿ 8 ರಿಂದ 50 ವರ್ಷ ವಯೋಮಾನದವರು ಭಾಗವಹಿಸಲಿದ್ದಾರೆ. ವಿಜೇತರಿಗೆ‌ ಚಿನ್ನದ ಪದಕ ನೀಡಲಾಗುವುದು. ರಾಜ್ಯಮಟ್ಟದಲ್ಲಿ ವಿಜೇತರಾದವರನ್ನು ಪುದುಚೇರಿ ಹಾಗೂ ವಿಶಾಖಪಟ್ಟಣದಲ್ಲಿ ನಡೆಯುವ ರಾಷ್ಟ್ರ ಮಟ್ಟದ ಟೇಕ್ವಾಂಡೋ ಪಂದ್ಯಾವಳಿಗೆ ಕಳುಹಿಸಿಕೊಡಲಾಗುವುದು ಎಂದರು.

ವಿಶಾಖಪಟ್ಟಣದಲ್ಲಿ ಜೂನಿಯರ್( 8 ವರ್ಷದಿಂದ 17 ವರ್ಷದೊಳಗಿನ) , ಪುದುಚೇರಿಯಲ್ಲಿ ಸೀನಿಯರ್(17 ವರ್ಷಕ್ಕಿಂತ ಮೇಲ್ಪಟ್ಟು) ಚಾಂಪಿಯನ್ ಶಿಪ್ ನಡೆಯಲಿದೆ. ಇಲ್ಲಿ ಗೆದ್ದವರು ಅಂತಾರಾಷ್ಟ್ರೀಯ ಮಟ್ಟಕ್ಕೆ ಆಯ್ಕೆಯಾಗಲಿದ್ದಾರೆ ಎಂದು ತಿಳಿಸಿದರು.

ತೀರ್ಪು ಹಾಗೂ ಅಂಕಗಳನ್ನು ಪ್ರದರ್ಶಿಸಲು
ಅಂತಾರಾಷ್ಟ್ರೀಯ ಪಂದ್ಯಾವಳಿಯಲ್ಲಿ ಬಳಸುವ ಎಲೆಕ್ಟ್ರಾನಿಕ್ ಸಾಧನಗಳನ್ನು ಇಲ್ಲಿ ಬಳಸುತ್ತಿರುವುದು ವಿಶೇಷ ಎಂದು ಹೇಳಿದರು.

ಒಟ್ಟು 7 ಅಂಕಣಗಳಲ್ಲಿ ತಲಾ ಎರಡು‌ ನಿಮಿಷದ ಮೂರು ಪಂದ್ಯಗಳು ನಡೆಯಲಿವೆ ಎಂದರು.
ನಾರಾಯಣಸ್ವಾಮಿ ಮಾತನಾಡಿ, 2008 ರಲ್ಲಿ ಜಿಲ್ಲೆಯಲ್ಲಿ ಟೆಕ್ವಾಂಡೋ‌ ತರಬೇತಿ ಆರಂಭಿಸಲಾಯಿತು. ಪ್ರಸ್ತುತ ಜಿಲ್ಲೆಯ ನಾಲ್ಕೂ ತಾಲೂಕುಗಳಲ್ಲಿ ಟೆಕ್ವಾಂಡೋ ಕ್ರೀಡೆ ಚಾಲ್ತಿಯಲ್ಲಿದೆ. ಗ್ರಾಮಾಂತರ ಜಿಲ್ಲೆಯಿಂದ ಪಂದ್ಯಾವಳಿಯಲ್ಲಿ ಒಟ್ಟು 125 ಸ್ಪರ್ಧಾಳುಗಳು ಭಾಗವಹಿಸಲಿದ್ದಾರೆ. ರಾಷ್ಟ್ರಮಟ್ಟದಲ್ಲಿ ಸಬ್ ಜೂನಿಯರ್, ಕೆಡೆಟ್, ಜೂನಿಯರ್, ಸಿನಿಯರ್ ‌ಎಂಬ ನಾಲ್ಕು ವಿಭಾಗದಲ್ಲಿ ಪಂದ್ಯ‌ ನಡೆಯಲಿದೆ ಎಂದು ವಿವರಿಸಿದರು.

Ramesh Babu

Journalist

Recent Posts

ಕಾನೂನು ತೊಡಕಿಲ್ಲದ ಅರ್ಜಿಗಳು ನಿಗದಿತ ಕಾಲಮಿತಿಯೊಳಗೆ ವಿಲೇವಾರಿ- ಸಚಿವ ಕೆ.ಎಚ್ ಮುನಿಯಪ್ಪ

ಪ್ರಜಾ ಸೇವಾ ಆಂದೋಲದ ಮೂಲಕ ಜನರಿಂದ ಸ್ವೀಕರಿಸುವ ಅರ್ಜಿಗಳಿಗೆ ಕಾನೂನು ವ್ಯಾಪ್ತಿ ಹೊರತುಪಡಿಸಿ ಉಳಿದ ಅರ್ಜಿಗಳಿಗೆ ನಿಗದಿತ ಕಾಲಮಿತಿಯೊಳಗೆ ಪರಿಹಾರ…

19 minutes ago

ಸಾಹಿತ್ಯ ಪರಿಷತ್ ಚುನಾವಣೆ…..

ಸಾಹಿತ್ಯ ಪರಿಷತ್ ಚುನಾವಣೆ..... ನನ್ನ ಮತ........? ಕನ್ನಡ ಸಾಹಿತ್ಯ ಪರಿಷತ್ತಿನ ಚುನಾವಣೆ ಕನ್ನಡದ ಅಸ್ಮಿತೆಗೊಂದು ಸವಾಲು. ಭ್ರಷ್ಟರ ವಿರುದ್ಧ ಪ್ರಾಮಾಣಿಕರು,…

11 hours ago

ರಾಜ್ಯಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಬೆಂಗಳೂರು ಗ್ರಾಮಾಂತರದ ಇಬ್ಬರು ಶಿಕ್ಷಕರು ಆಯ್ಕೆ

ದೇವನಹಳ್ಳಿ: ಕರ್ನಾಟಕ ಸರ್ಕಾರದ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯು 2026–27ನೇ ಸಾಲಿನ ರಾಜ್ಯಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಆಯ್ಕೆಯಾದ…

22 hours ago

ಮೇಕೆದಾಟು ಯೋಜನೆ ಶೀಘ್ರ ಜಾರಿಗೆ ಸಚಿವರ ದೃಢ ಸಂಕಲ್ಪ: ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ

ಮೇಕೆದಾಟು ಯೋಜನೆಯ ಶೀಘ್ರ ಜಾರಿಗಾಗಿ ಜಲಸಂಪನ್ಮೂಲ ಸಚಿವರು ತೀವ್ರ ಒಲವು ತೋರಿದ್ದು, ಕಾಮಗಾರಿಗೆ ಇನ್ನಷ್ಟು ವೇಗ ನೀಡುವ ನಿಟ್ಟಿನಲ್ಲಿ ರಾಜ್ಯದ…

23 hours ago

ಶ್ರೀರಂಗವನದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಸಂಭ್ರಮ

ತೂಬಗೆರೆ: ಹೋಬಳಿಯ ಯದ್ದಲಹಳ್ಳಿ ಸಮೀಪದ ಶ್ರೀರಂಗವನದಲ್ಲಿರುವ ಶ್ರೀ ವೇಣುಗೋಪಾಲಕೃಷ್ಣ ದೇವಸ್ಥಾನದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಅಂಗವಾಗಿ ವಿಶೇಷ ಪೂಜೆ, ಅಭಿಷೇಕ ಹಾಗೂ…

23 hours ago

ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ-2026: ಹಕ್ಕು,ಆಕ್ಷೇಪಣೆ ಸಲ್ಲಿಕೆಗೆ ಸೆ. 23 ವರೆಗೆ ಅವಕಾಶ-ಡಿಸಿ ಅನುರಾಧ

ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆಗೆ ಸಂಬಂಧಿಸಿದಂತೆ ಕರಡು ಮತದಾರ ಪಟ್ಟಿ ಪ್ರಕಟಗೊಂಡಿದ್ದು ಮತದಾರರ ಪಟ್ಟಿಯಲ್ಲಿ ಹೆಸರಿಲ್ಲದ ಅರ್ಹ ಮತದಾರರು ಮತಗಟ್ಟೆ…

1 day ago