ಜ.21 ಹಾಗೂ 22 ರಂದು ನಗರದ ಆರ್.ಎಲ್ ಜಾಲಪ್ಪ ತಾಂತ್ರಿಕ ಮಹಾವಿದ್ಯಾಲಯದಲ್ಲಿ ರಾಜ್ಯ ಮಟ್ಟದ ಟೇಕ್ವಾಂಡೋ ಪಂದ್ಯಾವಳಿ ನಡೆಯಲಿದೆ.
ಪಂದ್ಯಾವಳಿಯಲ್ಲಿ ಒಟ್ಟು 18 ಜಿಲ್ಲೆಗಳು ಹಾಗೂ 34 ಕ್ಲಬ್ ಗಳಿಂದ 1,150 ಸ್ಪರ್ಧಾಳುಗಳು ಭಾಗವಹಿಸಲಿದ್ದಾರೆ ಎಂದು ಕರ್ನಾಟಕ ಟೇಕ್ವಾಂಡೊ ಅಸೋಸಿಯೇಷನ್ ಅಧ್ಯಕ್ಷ ಟಿ. ಪ್ರವೀಣಕುಮಾರ್ ತಿಳಿಸಿದರು.
ನಗರದ ಪ್ರವಾಸಿ ಮಂದಿರದಲ್ಲಿ ಶುಕ್ರವಾರ ಪತ್ರಿಕಾಗೋಷ್ಠಿ ಉದ್ದೇಶಿಸಿ ಮಾತನಾಡಿದರು. ಭಾರತ ಸರ್ಕಾರ, ಭಾರತೀಯ ಒಲಿಂಪಿಕ್ ಅಸೋಸಿಯೇಷನ್ ಹಾಗೂ ರಾಜ್ಯ ಟೆಕ್ವಾಂಡೋ ಅಸೋಸಿಯೇಷನ್ ವತಿಯಿಂದ ಎರಡು ದಿನಗಳ 39ನೇ ರಾಜ್ಯಮಟ್ಟದ ಸಬ್ ಜೂನಿಯರ್, ಜೂನಿಯರ್ ಹಾಗೂ ಸೀನಿಯರ್ ಮಟ್ಟದ ಟೆಕ್ವಾಂಡೋ ಪಂದ್ಯಾವಳಿ ನಡೆಯಲಿದೆ ಎಂದರು.
ಅಸೋಸಿಯೇಷನ್ ಕಾರ್ಯದರ್ಶಿ ಕೃಷ್ಣಮೂರ್ತಿ ಮಾತನಾಡಿ, ಪಂದ್ಯಾವಳಿಯಲ್ಲಿ 8 ರಿಂದ 50 ವರ್ಷ ವಯೋಮಾನದವರು ಭಾಗವಹಿಸಲಿದ್ದಾರೆ. ವಿಜೇತರಿಗೆ ಚಿನ್ನದ ಪದಕ ನೀಡಲಾಗುವುದು. ರಾಜ್ಯಮಟ್ಟದಲ್ಲಿ ವಿಜೇತರಾದವರನ್ನು ಪುದುಚೇರಿ ಹಾಗೂ ವಿಶಾಖಪಟ್ಟಣದಲ್ಲಿ ನಡೆಯುವ ರಾಷ್ಟ್ರ ಮಟ್ಟದ ಟೇಕ್ವಾಂಡೋ ಪಂದ್ಯಾವಳಿಗೆ ಕಳುಹಿಸಿಕೊಡಲಾಗುವುದು ಎಂದರು.
ವಿಶಾಖಪಟ್ಟಣದಲ್ಲಿ ಜೂನಿಯರ್( 8 ವರ್ಷದಿಂದ 17 ವರ್ಷದೊಳಗಿನ) , ಪುದುಚೇರಿಯಲ್ಲಿ ಸೀನಿಯರ್(17 ವರ್ಷಕ್ಕಿಂತ ಮೇಲ್ಪಟ್ಟು) ಚಾಂಪಿಯನ್ ಶಿಪ್ ನಡೆಯಲಿದೆ. ಇಲ್ಲಿ ಗೆದ್ದವರು ಅಂತಾರಾಷ್ಟ್ರೀಯ ಮಟ್ಟಕ್ಕೆ ಆಯ್ಕೆಯಾಗಲಿದ್ದಾರೆ ಎಂದು ತಿಳಿಸಿದರು.
ತೀರ್ಪು ಹಾಗೂ ಅಂಕಗಳನ್ನು ಪ್ರದರ್ಶಿಸಲು
ಅಂತಾರಾಷ್ಟ್ರೀಯ ಪಂದ್ಯಾವಳಿಯಲ್ಲಿ ಬಳಸುವ ಎಲೆಕ್ಟ್ರಾನಿಕ್ ಸಾಧನಗಳನ್ನು ಇಲ್ಲಿ ಬಳಸುತ್ತಿರುವುದು ವಿಶೇಷ ಎಂದು ಹೇಳಿದರು.
ಒಟ್ಟು 7 ಅಂಕಣಗಳಲ್ಲಿ ತಲಾ ಎರಡು ನಿಮಿಷದ ಮೂರು ಪಂದ್ಯಗಳು ನಡೆಯಲಿವೆ ಎಂದರು.
ನಾರಾಯಣಸ್ವಾಮಿ ಮಾತನಾಡಿ, 2008 ರಲ್ಲಿ ಜಿಲ್ಲೆಯಲ್ಲಿ ಟೆಕ್ವಾಂಡೋ ತರಬೇತಿ ಆರಂಭಿಸಲಾಯಿತು. ಪ್ರಸ್ತುತ ಜಿಲ್ಲೆಯ ನಾಲ್ಕೂ ತಾಲೂಕುಗಳಲ್ಲಿ ಟೆಕ್ವಾಂಡೋ ಕ್ರೀಡೆ ಚಾಲ್ತಿಯಲ್ಲಿದೆ. ಗ್ರಾಮಾಂತರ ಜಿಲ್ಲೆಯಿಂದ ಪಂದ್ಯಾವಳಿಯಲ್ಲಿ ಒಟ್ಟು 125 ಸ್ಪರ್ಧಾಳುಗಳು ಭಾಗವಹಿಸಲಿದ್ದಾರೆ. ರಾಷ್ಟ್ರಮಟ್ಟದಲ್ಲಿ ಸಬ್ ಜೂನಿಯರ್, ಕೆಡೆಟ್, ಜೂನಿಯರ್, ಸಿನಿಯರ್ ಎಂಬ ನಾಲ್ಕು ವಿಭಾಗದಲ್ಲಿ ಪಂದ್ಯ ನಡೆಯಲಿದೆ ಎಂದು ವಿವರಿಸಿದರು.
ದೊಡ್ಡಬಳ್ಳಾಪುರ: ನಗರದ 66/11 ಕೆವಿ ಡಿ.ಕ್ರಾಸ್ ವಿದ್ಯುತ್ ಉಪಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಕೈಗೊಳ್ಳಲಾಗಿರುವ ಹಿನ್ನೆಲೆಯಲ್ಲಿ ಆ.18ರಂದು ಬೆಳಿಗ್ಗೆ 10ರಿಂದ…
ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರಕ್ಕೆ ನೂತನ ಅಧ್ಯಕ್ಷರು ಹಾಗೂ ಸದಸ್ಯರನ್ನು ನೇಮಕ ಮಾಡಲಾಗಿದೆ. ಮಾಜಿ ಶಾಸಕ ಟಿ.ವೆಂಕಟರಮಣಯ್ಯ ಅವರನ್ನು ಅಧ್ಯಕ್ಷರಾಗಿ,…
ದೊಡ್ಡಬಳ್ಳಾಪುರ: ಉತ್ತಮ ಸಮಾಜ ನಿರ್ಮಾಣಕ್ಕೆ ಶಿಕ್ಷಣವೇ ಭದ್ರ ಬುನಾದಿಯಾಗಿದ್ದು, ಮಕ್ಕಳಿಗೆ ಗುಣಮಟ್ಟದ ಶಿಕ್ಷಣದ ಜೊತೆಗೆ ಉತ್ತಮ ಕಲಿಕಾ ವಾತಾವರಣ ಕಲ್ಪಿಸುವಲ್ಲಿ…
ದೇವನಹಳ್ಳಿ/ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಹಾಗೂ ದೊಡ್ಡಬಳ್ಳಾಪುರ ತಾಲೂಕಿನ ವ್ಯಾಪ್ತಿಯಲ್ಲಿ ಮುಂಜಾನೆ ಸಂಭವಿಸಿದ ಎರಡು ಪ್ರತ್ಯೇಕ ರಸ್ತೆ ಅಪಘಾತಗಳಲ್ಲಿ…
ದೇವನಹಳ್ಳಿ: ಸ್ವಾತಂತ್ರ್ಯ ದಿನಾಚರಣೆ ಹಾಗೂ ವಾರಾಂತ್ಯದ ರಜೆ ಹಿನ್ನೆಲೆಯಲ್ಲಿ ದೇವನಹಳ್ಳಿ ಹೊರವಲಯದ ಬೈಪಾಸ್ ನಲ್ಲಿ ಪುಂಡರು ಗುಂಪು ಗುಂಪಾಗಿ ಆಟೋ,…
80ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ನಗರದ ಭಗತ್ ಸಿಂಗ್ ಕ್ರೀಡಾಂಗಣದಲ್ಲಿ ತಾಲೂಕು ಆಡಳಿತ ವತಿಯಿಂದ ಸ್ವಾತಂತ್ರ್ಯ ದಿನಾಚರಣೆಯನ್ನು ಅದ್ದೂರಿಯಾಗಿ ಆಚರಿಸಲಾಯಿತು.…