ಜ.24ರಂದು ನಗರದಲ್ಲಿ ಕಾಂಗ್ರೆಸ್ ಶಕ್ತಿ ಪ್ರದರ್ಶನ

ಇನ್ನೇನು ಕೆಲ ತಿಂಗಳಲ್ಲೇ ರಾಜ್ಯ ವಿಧಾನಸಭೆ ಚುನಾವಣೆ ನಡೆಯಲಿದೆ. ಚುನಾವಣೆಯನ್ನು ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಕಾಂಗ್ರೆಸ್, ಜೆಡಿಎಸ್, ಬಿಜೆಪಿ ಪಕ್ಷಗಳು ಮತದಾರರ ಮನಸ್ಸು ಗೆಲ್ಲಲು ನಾನಾ ರೀತಿಯ ರಣತಂತ್ರ, ಪ್ರತಿತಂತ್ರ ಹೆಣೆದು ಪಾದಯಾತ್ರೆ, ಸಮಾವೇಶ, ಉತ್ಸವ ಸೇರಿದಂತೆ ಇನ್ನಿತರ ಕಾರ್ಯಕ್ರಮಗಳನ್ನು ಮಾಡಲಾಗುತ್ತಿದೆ.

ಜ.24ರಂದು ದೊಡ್ಡಬಳ್ಳಾಪುರದಲ್ಲಿ ಪ್ರಜಾಧ್ವನಿ ಸಮಾವೇಶದ ಮೂಲಕ ಕಾಂಗ್ರೆಸ್ ಶಕ್ತಿ ಪ್ರದರ್ಶನ ಮಾಡಲು ಹೊರಟಿದೆ. ಪ್ರಜಾಧ್ವನಿ ಸಮಾವೇಶಕ್ಕೆ ಶಾಸಕ ಟಿ.ವೆಂಕಟರಮಣಯ್ಯ ನೇತೃತ್ವದಲ್ಲಿ ಸಕಲ ಸಿದ್ಧತೆ ನಡೆಸಲಾಗುತ್ತಿದೆ.

ನಗರದ ಭಗತ್ ಸಿಂಗ್ ಮೈದಾನದಲ್ಲಿ ಗಣ್ಯರ ವೇದಿಕೆ ಸಿದ್ದಪಡಿಸುತ್ತಿದ್ದು, 55 ಸಾವಿರ ಆಸನ, ಕುಡಿಯುವ ನೀರು, ಶೌಚಾಲಯ ವ್ಯವಸ್ಥೆ ಮಾಡಲಾಗುತ್ತಿದೆ.

ಕಾಂಗ್ರೆಸ್ ಮೀನುಗಾರರ ಘಟಕದ ರಾಜ್ಯಾಧ್ಯಕ್ಷ ಮಂಜುನಾಥ ಸುಣಗಾರ್ ಮಾತನಾಡಿ, ರಾಜ್ಯಾದ್ಯಂತ ಪ್ರಜಾಧ್ವನಿ ಸಮಾವೇಶಕ್ಕೆ ಸಾಕಷ್ಟು ಜನಮನ್ನಣೆ ಸಿಗುತ್ತಿದೆ. ನಾಳೆ ದೊಡ್ಡಬಳ್ಳಾಪುರದಲ್ಲಿಯೂ ಸಹ ಅಭೂತಪೂರ್ವ ಯಶಸ್ಸು ಕಾಣಲಿದೆ ಎಂದರು.

ಕೇಂದ್ರ ಹಾಗೂ ರಾಜ್ಯ ಬಿಜೆಪಿ ಸರ್ಕಾರದ ದುರಾಡಳಿತದಿಂದ ಜನ ಈಗಾಗಲೇ ಬೇಸತ್ತು ಕಾಂಗ್ರೆಸ್ ನತ್ತ ಒಲವು ತೋರುತ್ತಿದ್ದಾರೆ. ಕಾಂಗ್ರೆಸ್ ಅಧಿಕಾರಕ್ಕೆ ಬರಬೇಕು ಎಂಬುದು ಜನರ ಅಭಿಲಾಷೆ ಆಗಿದೆ. ಆದ್ದರಿಂದ ಜನರ ಒಳಿತಿಗಾಗಿ, ರಾಜ್ಯದ ಅಭಿವೃದ್ಧಿಗಾಗಿ ಕಾಂಗ್ರೆಸ್ ಪಕ್ಷ ಅಧಿಕಾರಿಕ್ಕೆ ಬರುತ್ತದೆ. ಈ ನಿಟ್ಟಿನಲ್ಲಿ ನಾವು ಪೂರ್ವತಯಾರಿ ನಡೆಸುತ್ತಿದ್ದೇವೆ ಎಂದರು.

ಬೆಂಗಳೂರು ಗ್ರಾಮಾಂತರ ಜಿಲ್ಲೆಯನ್ನು ಯಾವ ರೀತಿ ಅಭಿವೃದ್ಧಿ ಮಾಡಬೇಕು, ಏನೆಲ್ಲಾ ಯೋಜನೆಗಳನ್ನು ರೂಪಿಸಿ ಜಾರಿಗೆ ತರಬೇಕು ಎಂಬುದನ್ನು ಸ್ಥಳೀಯ ನಾಯಕರು, ಶಾಸಕರ ಜೊತೆ ಚರ್ಚಿಸಿ ತೀರ್ಮಾನಿಸಲಾಗುವುದು ಎಂದರು.

ಕಾಂಗ್ರೆಸ್ ಪಕ್ಷ ಅಧಿಕಾರ ಚುಕ್ಕಾಣಿ ಹಿಡಿದರೆ ಮೀನುಗಾರರು ಬೋಟ್ ಖರೀದಿಸಲು ಸಬ್ಸಿಡಿ, 500 ಲೀಟರ್ ಸೀಮೆ ಎಣ್ಣೆ ಒದಗಿಸಲು ಕ್ರಮ ವಹಿಸಲಾಗುವುದು ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಈಗಾಗಲೇ ತಿಳಿಸಿದ್ದಾರೆ ಎಂದು ಹೇಳಿದರು.

Ramesh Babu

Journalist

Recent Posts

ರಾಜ್ಯದ ಸಿಎಂ ಆಗಿ ಡಿ.ಕೆ ಶಿವಕುಮಾರ್ ಪ್ರಮಾಣ ವಚನ ಸ್ವೀಕಾರ: ವೀರ ಗಂಗಾಧರ ಅಜ್ಜನ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕಾರ

ರಾಜ್ಯದ ಸಿಎಂ ಆಗಿ ಡಿ.ಕೆ ಶಿವಕುಮಾರ್ ಪ್ರಮಾಣ ವಚನ ಸ್ವೀಕಾರಿಸಿದ್ದಾರೆ. ಸಂವಿಧಾನದ ಪುಸ್ತಕ ಹಿಡಿದು, ವೀರ ಗಂಗಾಧರನ ಅಜ್ಜನ ಹೆಸರಿನಲ್ಲಿ…

52 minutes ago

ರಾಜ್ಯದ 25ನೇ ಸಿಎಂ ಆಗಿ ಡಿ.ಕೆ ಶಿವಕುಮಾರ್ ಪ್ರಮಾಣ ವಚನ ಸ್ವೀಕಾರ: ವೀರ ಗಂಗಾಧರ ಅಜ್ಜನ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕಾರ

ರಾಜ್ಯದ 25 ಸಿಎಂ ಆಗಿ ಡಿ.ಕೆ ಶಿವಕುಮಾರ್ ಪ್ರಮಾಣ ವಚನ ಸ್ವೀಕಾರಿಸಿದ್ದಾರೆ. ವೀರ ಗಂಗಾಧರನ ಅಜ್ಜನ ಹೆಸರಿನಲ್ಲಿ ಪ್ರಮಾಣ ವಚನ…

59 minutes ago

ಅಧಿಕಾರಕ್ಕೇರುವ ಮುನ್ನವೇ ಟ್ರಬಲ್ ಶೂಟರ್ ಚಾಣಾಕ್ಷ ನಡೆ: ದೇವೇಗೌಡ-ಯಡಿಯೂರಪ್ಪ ಆಶೀರ್ವಾದ ಪಡೆದ ಡಿಕೆಶಿ

ಬೆಂಗಳೂರು: ರಾಜ್ಯದ ನೂತನ ಮುಖ್ಯಮಂತ್ರಿ ಆಗಿ ಅಧಿಕಾರ ಸ್ವೀಕರಿಸಲು ಸಜ್ಜಾಗಿರುವ ಡಿ.ಕೆ. ಶಿವಕುಮಾರ್ ಅವರು ಪ್ರಮಾಣ ವಚನಕ್ಕೂ ಮುನ್ನವೇ ತಮ್ಮ…

3 hours ago

ಡಿ.ಕೆ.ಶಿವಕುಮಾರ್ ಪದಗ್ರಹಣ: ಡಿಕೆಶಿ ಜೊತೆ ಓರ್ವ ಡಿಸಿಎಂ ಸೇರಿ 12 ಮಂದಿ ಸಚಿವರಾಗಿ ಪ್ರಮಾಣ ವಚನ….

ಇಂದು ಸಂಜೆ 4:05ಕ್ಕೆ ಲೋಕಭವನದ ಗಾಜಿನ ಮನೆಯಲ್ಲಿ ನಡೆಯಲಿರುವ ಸಮಾರಂಭದಲ್ಲಿ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಡಿ.ಕೆ.ಶಿವಕುಮಾರ್ ಅವರು ಪ್ರಮಾಣ ವಚನ…

4 hours ago

ಬಿಜೆಪಿಗೆ ಅಧಿಕಾರ ಸಿಕ್ಕಾಗ ಒಬಿಸಿ, ದಲಿತರ ರಾಜಕೀಯ ಪ್ರಾತಿನಿಧ್ಯ ಏಕೆ ನೆನಪಾಗಲಿಲ್ಲ?- ಪ್ರಿಯಾಂಕ್ ಖರ್ಗೆ ಪ್ರಶ್ನೆ

ಬಿಜೆಪಿ ನಾಯಕರಿಗೆ ಈಗ ಏಕಾಏಕಿ ದಲಿತ ಮತ್ತು ಹಿಂದುಳಿದ ಸಮುದಾಯಗಳ ರಾಜಕೀಯ ಪ್ರಾತಿನಿಧ್ಯದ ಬಗ್ಗೆ ಕಾಳಜಿ ಬಂದುಬಿಟ್ಟಿದೆ. ಕಾಲ, ಸಂದರ್ಭ…

4 hours ago

ಡಾ.ಜಿ.ಪರಮೇಶ್ವರ್ ಗೆ ಉಪಮುಖ್ಯಮಂತ್ರಿ ಸ್ಥಾನ.?: ಕಾಂಗ್ರೆಸ್ ಕಾರ್ಯಕಾರಿ ಸಮಿತಿ (CWC) ಸದಸ್ಯ ಸಿದ್ದರಾಮಯ್ಯ ಸುಳಿವು

ಇಂದು ಪ್ರಮಾಣ ವಚನ ಸ್ವೀಕಾರ ಸಮಾರಂಭಕ್ಕೂ ಮುನ್ನ, ನಿಯೋಜಿತ ಸಿಎಂ ಡಿ.ಕೆ.ಶಿವಕುಮಾರ್ ಅವರು ಕಾಂಗ್ರೆಸ್ ಕಾರ್ಯಕಾರಿ ಸಮಿತಿ (CWC) ಸದಸ್ಯ…

5 hours ago