ಯಲಹಂಕ ತಾಲ್ಲೂಕಿನ ಚಲ್ಲಹಳ್ಳಿ ಗ್ರಾಮದ ವೇಣುಗೋಪಾಲಸ್ವಾಮಿ ದೇವಸ್ಥಾನ ಸನ್ನಿಧಿಯಿಂದ ಜನವರಿ 29ರ ಸೋಮವಾರದಂದು ಒಂದು ವಾರಗಳ ಕಾಲ ತಿರುಮಲ ತಿರುಪತಿ ದೇವಸ್ಥಾನಕ್ಕೆ 13ನೇ ವರ್ಷದ ಪಾದಯಾತ್ರೆ ಮೂಲಕ ಹರಿಸೇವೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.
ಹೆಸರಘಟ್ಟ ಹೋಬಳಿಯ ಚಲ್ಲಹಳ್ಳಿಯ ವೇಣುಗೋಪಾಲಸ್ವಾಮಿ ತಿರುಪತಿ ತಿರುಮಲ ಪಾದಯಾತ್ರಾ ಸೇವಾ ಸಮಿತಿ ವತಿಯಿಂದ 30ಕ್ಕೂ ಹೆಚ್ಚು ಭಕ್ತರು, 270ಕಿ.ಮೀ ನ್ನು 6ದಿನಗಳ ಕಾಲ ಪಾದಯಾತ್ರೆ ಮೂಲಕ ನಡೆದು, 7ನೇ ದಿನ ಮೆಟ್ಟಿಲುಗಳನ್ನು ಹತ್ತಿ ದೇವರ ದರ್ಶನ ಪಡೆಯಲಾಗುತ್ತದೆ.
ಕಳೆದ 12 ವರ್ಷದಿಂದ ಈ ಪಾದಯಾತ್ರೆ ಸೇವೆ ನಡೆಯುತ್ತಿದ್ದು, ಬೆಳಗ್ಗೆ 5ಗಂಟೆಯಿಂದ ಸಂಜೆ 6ಗಂಟೆಯವರೆಗೂ ಸೇವಾಕರ್ತರು ಪಾದಯಾತ್ರೆ ನಡೆಸಲಿದ್ದಾರೆ. ಪ್ರತಿದಿನ 30ರಿಂದ 40ಕಿ.ಮೀ. ಪಾದಸೇವೆ ನಡೆಯಲಿದೆ. ರಾತ್ರಿ ಯಾತ್ರೆ ಇರುವುದಿಲ್ಲ. ಮಾರ್ಗಮಧ್ಯೆ ಸಿಗುವ ಶಾಲೆಯ ಆವರಣ, ಮಠಗಳು ಸುಮುದಾಯಭವನ, ದೇವಾಲಯ ಆವರಣದಲ್ಲಿ ರಾತ್ರಿ ಉಳಿದುಕೊಂಡು ಬೆಳಗ್ಗೆ ಪ್ರಯಾಣ ಬೆಳೆಸಲಾಗುತ್ತದೆ ಎಂದು ಸೇವಾ ಸಮಿತಿಯ ಹಿರಿಯ ಯಾತ್ರಿ ಚೇತನ್ ಗೌಡ ಹೇಳಿದರು.
ದಾರಿಯಲ್ಲಿ ನಡೆಯುವಾಗ ಆಯಾಸವಾಗುತ್ತದೆ, ಕೆಲವರಿಗೆ ಕಾಲು ಬೊಬ್ಬೆ ಬರುತ್ತದೆ. ಆದರೆ ದಾರಿಯುದ್ದಕ್ಕೂ ಹಾಡು ಭಕ್ತಿಗೀತೆಗಳ ಮೂಲಕ ಗೋವಿಂದ ಗೋವಿಂದ ಎಂದು ನಾಮಸ್ಮರಣೆ ಮಾಡುವುದರಿಂದ ನೋವುಗಳನ್ನು ಮರೆಸುತ್ತದೆ. ಮಾರ್ಗದುದ್ದಕ್ಕೂ ಯಾತ್ರಿಗಳಿಗೆ ತಿಮ್ಮಪ್ಪನ ಭಕ್ತರು ನೀರು, ಹಾಲು ಕೋಸಂಬರಿ, ಚಹ ಬಿಸ್ಕೆಟ್ ನೀಡಿ ನಮಸ್ಕರಿಸಿ ಹೋಗುತ್ತಿರುವುದು ನಮಗೆ ಇನ್ನಷ್ಟು ಪ್ರೇರಣೆ ನೀಡುತ್ತದೆ ಎಂದು ಕಿರಿಯ ಪಾದಯಾತ್ರಿ ರಾಹುಲ್ ಅನುಭವವನ್ನು ತಿಳಿಸಿದರು.
ಒಳ್ಳೆಯ ಮಳೆಯಾಗಿ ಬೆಳೆಯಾಗಲಿ ಎಂದು ಪಾದಯಾತ್ರೆಯಲ್ಲಿ ಶ್ರದ್ಧಾ ಭಕ್ತಿಯಿಂದ ಭಾಗವಹಿಸುತ್ತಿದ್ದೇನೆ ದೇಹ ಮತ್ತು ಮನಸ್ಸಿನ ಮೇಲೆ ಉತ್ತಮ ಪರಿಣಾಮ ಬಿರಿದೆ. ರಕ್ತ ಶುದ್ಧಿಯಾಗುತ್ತದೆ. ದೇಹ ಹಗುರವಾಗಿರುತ್ತದೆ ಎಂದು ನಂಜುಂಡಪ್ಪ ಹೇಳುತ್ತಾರೆ.
ಮದುವೆಯಾದ 45 ದಿನಕ್ಕೆ ನವವಿವಾಹಿತ ಪತ್ನಿಯಿಂದ ಕಿರುಕುಳ ಆರೋಪಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಪತ್ನಿಯ ವರ್ತನೆಯೇ ಸಾವಿಗೆ ಕಾರಣ ಎಂದು…
ಬೆಂಗಳೂರು ನಗರದ ಯಡಿಯೂರು ಕೆರೆ ಸಮೀಪದ ನಿವಾಸಿಯೊಬ್ಬರು ವರದಕ್ಷಿಣೆ ಕಿರುಕುಳಕ್ಕೆ ಬೇಸತ್ತು ಆತ್ಮಹ*ತ್ಯೆ ಮಾಡಿಕೊಂಡಿರುವ ದಾರುಣ ಘಟನೆ ಬೆಳಕಿಗೆ ಬಂದಿದೆ.…
ರಾಯಚೂರು: ಆಸ್ತಿ ಮೇಲಿನ ವ್ಯಾಮೋಹಕ್ಕೆ ಹೆತ್ತ ತಾಯಿಯ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಕೊಂದ ಹೃದಯವಿದ್ರಾವಕ ಘಟನೆ ರಾಯಚೂರು…
ಆಗ್ರಾ: ಆಗ್ರಾದಲ್ಲಿ ಚೀಲದಲ್ಲಿ ಯುವತಿಯ ಶಿರರಹಿತ ಶವ ಪತ್ತೆಯಾದ ಪ್ರಕರಣದಲ್ಲಿ ಯುವಕನೊಬ್ಬನನ್ನು ಬಂಧಿಸಲಾಗಿದೆ. ಆಗ್ರಾದ ಪಾರ್ವತಿ ವಿಹಾರ್ನಲ್ಲಿ ಜನವರಿ 24…
ಕೋಲಾರ: ರಾಜ್ಯ ಸರ್ಕಾರ 2023ರ ಪಿಟಿಸಿಎಲ್ ತಿದ್ದುಪಡಿ ಕಾಯ್ದೆಯ ವಿರುದ್ಧವಾಗಿ ಕಂದಾಯ ಇಲಾಖೆ, ನ್ಯಾಯಾಲಯಗಳು, ಹೈಕೋರ್ಟ್ ಮತ್ತು ಸುಪ್ರೀಂ ಕೋರ್ಟಿನಲ್ಲಿ…
ಒಂದು ಸುಂದರ ಸಂಸಾರ ಸಾಲದ ಸುಳಿಗೆ ಸಿಲುಕುವುದು ಎಂದರೆ ಅದು ಕೇವಲ ಆರ್ಥಿಕ ಬಿಕ್ಕಟ್ಟಲ್ಲ; ಅದು ಆ ಮನೆಯ ನೆಮ್ಮದಿಯ…