ಯಲಹಂಕ ತಾಲ್ಲೂಕಿನ ಚಲ್ಲಹಳ್ಳಿ ಗ್ರಾಮದ ವೇಣುಗೋಪಾಲಸ್ವಾಮಿ ದೇವಸ್ಥಾನ ಸನ್ನಿಧಿಯಿಂದ ಜನವರಿ 29ರ ಸೋಮವಾರದಂದು ಒಂದು ವಾರಗಳ ಕಾಲ ತಿರುಮಲ ತಿರುಪತಿ ದೇವಸ್ಥಾನಕ್ಕೆ 13ನೇ ವರ್ಷದ ಪಾದಯಾತ್ರೆ ಮೂಲಕ ಹರಿಸೇವೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.
ಹೆಸರಘಟ್ಟ ಹೋಬಳಿಯ ಚಲ್ಲಹಳ್ಳಿಯ ವೇಣುಗೋಪಾಲಸ್ವಾಮಿ ತಿರುಪತಿ ತಿರುಮಲ ಪಾದಯಾತ್ರಾ ಸೇವಾ ಸಮಿತಿ ವತಿಯಿಂದ 30ಕ್ಕೂ ಹೆಚ್ಚು ಭಕ್ತರು, 270ಕಿ.ಮೀ ನ್ನು 6ದಿನಗಳ ಕಾಲ ಪಾದಯಾತ್ರೆ ಮೂಲಕ ನಡೆದು, 7ನೇ ದಿನ ಮೆಟ್ಟಿಲುಗಳನ್ನು ಹತ್ತಿ ದೇವರ ದರ್ಶನ ಪಡೆಯಲಾಗುತ್ತದೆ.
ಕಳೆದ 12 ವರ್ಷದಿಂದ ಈ ಪಾದಯಾತ್ರೆ ಸೇವೆ ನಡೆಯುತ್ತಿದ್ದು, ಬೆಳಗ್ಗೆ 5ಗಂಟೆಯಿಂದ ಸಂಜೆ 6ಗಂಟೆಯವರೆಗೂ ಸೇವಾಕರ್ತರು ಪಾದಯಾತ್ರೆ ನಡೆಸಲಿದ್ದಾರೆ. ಪ್ರತಿದಿನ 30ರಿಂದ 40ಕಿ.ಮೀ. ಪಾದಸೇವೆ ನಡೆಯಲಿದೆ. ರಾತ್ರಿ ಯಾತ್ರೆ ಇರುವುದಿಲ್ಲ. ಮಾರ್ಗಮಧ್ಯೆ ಸಿಗುವ ಶಾಲೆಯ ಆವರಣ, ಮಠಗಳು ಸುಮುದಾಯಭವನ, ದೇವಾಲಯ ಆವರಣದಲ್ಲಿ ರಾತ್ರಿ ಉಳಿದುಕೊಂಡು ಬೆಳಗ್ಗೆ ಪ್ರಯಾಣ ಬೆಳೆಸಲಾಗುತ್ತದೆ ಎಂದು ಸೇವಾ ಸಮಿತಿಯ ಹಿರಿಯ ಯಾತ್ರಿ ಚೇತನ್ ಗೌಡ ಹೇಳಿದರು.
ದಾರಿಯಲ್ಲಿ ನಡೆಯುವಾಗ ಆಯಾಸವಾಗುತ್ತದೆ, ಕೆಲವರಿಗೆ ಕಾಲು ಬೊಬ್ಬೆ ಬರುತ್ತದೆ. ಆದರೆ ದಾರಿಯುದ್ದಕ್ಕೂ ಹಾಡು ಭಕ್ತಿಗೀತೆಗಳ ಮೂಲಕ ಗೋವಿಂದ ಗೋವಿಂದ ಎಂದು ನಾಮಸ್ಮರಣೆ ಮಾಡುವುದರಿಂದ ನೋವುಗಳನ್ನು ಮರೆಸುತ್ತದೆ. ಮಾರ್ಗದುದ್ದಕ್ಕೂ ಯಾತ್ರಿಗಳಿಗೆ ತಿಮ್ಮಪ್ಪನ ಭಕ್ತರು ನೀರು, ಹಾಲು ಕೋಸಂಬರಿ, ಚಹ ಬಿಸ್ಕೆಟ್ ನೀಡಿ ನಮಸ್ಕರಿಸಿ ಹೋಗುತ್ತಿರುವುದು ನಮಗೆ ಇನ್ನಷ್ಟು ಪ್ರೇರಣೆ ನೀಡುತ್ತದೆ ಎಂದು ಕಿರಿಯ ಪಾದಯಾತ್ರಿ ರಾಹುಲ್ ಅನುಭವವನ್ನು ತಿಳಿಸಿದರು.
ಒಳ್ಳೆಯ ಮಳೆಯಾಗಿ ಬೆಳೆಯಾಗಲಿ ಎಂದು ಪಾದಯಾತ್ರೆಯಲ್ಲಿ ಶ್ರದ್ಧಾ ಭಕ್ತಿಯಿಂದ ಭಾಗವಹಿಸುತ್ತಿದ್ದೇನೆ ದೇಹ ಮತ್ತು ಮನಸ್ಸಿನ ಮೇಲೆ ಉತ್ತಮ ಪರಿಣಾಮ ಬಿರಿದೆ. ರಕ್ತ ಶುದ್ಧಿಯಾಗುತ್ತದೆ. ದೇಹ ಹಗುರವಾಗಿರುತ್ತದೆ ಎಂದು ನಂಜುಂಡಪ್ಪ ಹೇಳುತ್ತಾರೆ.
ಪಶು ಆಹಾರಗಳ ಬೆಲೆ ಏರಿಕೆ.. ಬೇಸಿಗೆಯಿಂದಾಗಿ ಹಾಲು ಉತ್ಪಾದನೆ ಕುಂಠಿತ.. ಹಸುಗಳಲ್ಲಿ ಹೆಚ್ಚಿದ ಕೆಚ್ಚಲುಬಾವು ರೋಗ.. ರಾಸುಗಳಿಗೆ ಮೇವು ಇಲ್ಲದೆ…
ಇಂದು ನವದೆಹಲಿಯಲ್ಲಿ ಕೇಂದ್ರ ಪ್ರವಾಸೋದ್ಯಮ ಸಚಿವರಾದ ಶ್ರೀ ಗಜೇಂದ್ರ ಸಿಂಗ್ ಶೇಖಾವತ್ ಅವರನ್ನು ಭೇಟಿ ಮಾಡಿ, 'ಪ್ರಸಾದ್ 2.0' (PRASHAD…
ದೊಡ್ಡಬಳ್ಳಾಪುರ: ಮಹಿಳಾ ದಿನ ಕೇವಲ ಒಂದು ದಿನದ ಆಚರಣೆಯಲ್ಲ ಬದಲಾಗಿ ಮಹಿಳೆಯರ ಸಮಾನತೆಗಾಗಿ ನಡೆಯುತ್ತಿರುವ ನಿರಂತರ ಹೋರಾಟದ ಸಂಕೇತ ಎಂದು…
ಕೇಂದ್ರ ಮೀಸಲು ಪೊಲೀಸ್ ಪಡೆ (CRPF) 87ನೇ ಸ್ಥಾಪನಾ ದಿನಾಚರಣೆ ಹಿನ್ನೆಲೆ ಕರ್ನಾಟಕ ಮತ್ತು ಕೇರಳ ವಲಯದ CRPF ಬೆಂಗಳೂರು…
ಮದ್ಯಪ್ರಾಚ್ಯಗಳ ದೇಶಗಳಲ್ಲಿ ನಡೆಯುತ್ತಿರುವ ಯುದ್ದಗಳಿಂದಾಗಿ ಎಲ್.ಪಿ.ಜಿ ಕೊರತೆ ದೇಶಕ್ಕೆ ಎದುರಾಗಿದೆ. ಹೋಟೆಲ್ ಗಳಲ್ಲಿ ವಾಣಿಜ್ಯ ಸಿಲಿಂಡರ್ ಗಳ ಅಭಾವ ಸೃಷ್ಟಿಯಾಗಿ…
ಮಧ್ಯಪ್ರಾಚ್ಯದಲ್ಲಿ ಯುದ್ಧದ ಹಿನ್ನೆಲೆಯಲ್ಲಿ ರಾಜ್ಯದ ಹಲವೆಡೆ ಗ್ಯಾಸ್ ಸಿಲಿಂಡರ್ ಪೂರೈಕೆಯಲ್ಲಿ ಅಭಾವದ ಪರಿಸ್ಥಿತಿ ಸೃಷ್ಟಿಯಾಗಿರುವ ವರದಿಗಳ ನಡುವೆ ಗೃಹ ಬಳಕೆಯ…