ಜ.29ರಿಂದ ತಿರುಪತಿ ತಿಮ್ಮಪ್ಪನ ದರ್ಶನಕ್ಕೆ ಪಾದಯಾತ್ರೆ

ಯಲಹಂಕ ತಾಲ್ಲೂಕಿನ ಚಲ್ಲಹಳ್ಳಿ ಗ್ರಾಮದ ವೇಣುಗೋಪಾಲಸ್ವಾಮಿ ದೇವಸ್ಥಾನ ಸನ್ನಿಧಿಯಿಂದ ಜನವರಿ 29ರ ಸೋಮವಾರದಂದು ಒಂದು ವಾರಗಳ ಕಾಲ ತಿರುಮಲ ತಿರುಪತಿ ದೇವಸ್ಥಾನಕ್ಕೆ 13ನೇ ವರ್ಷದ ಪಾದಯಾತ್ರೆ ಮೂಲಕ ಹರಿಸೇವೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.

ಹೆಸರಘಟ್ಟ ಹೋಬಳಿಯ ಚಲ್ಲಹಳ್ಳಿಯ ವೇಣುಗೋಪಾಲಸ್ವಾಮಿ ತಿರುಪತಿ ತಿರುಮಲ ಪಾದಯಾತ್ರಾ ಸೇವಾ ಸಮಿತಿ ವತಿಯಿಂದ 30ಕ್ಕೂ ಹೆಚ್ಚು ಭಕ್ತರು, 270ಕಿ.ಮೀ ನ್ನು 6ದಿನಗಳ ಕಾಲ ಪಾದಯಾತ್ರೆ ಮೂಲಕ ನಡೆದು, 7ನೇ ದಿನ ಮೆಟ್ಟಿಲುಗಳನ್ನು ಹತ್ತಿ ದೇವರ ದರ್ಶನ ಪಡೆಯಲಾಗುತ್ತದೆ.

ಕಳೆದ 12 ವರ್ಷದಿಂದ ಈ ಪಾದಯಾತ್ರೆ ಸೇವೆ ನಡೆಯುತ್ತಿದ್ದು, ಬೆಳಗ್ಗೆ 5ಗಂಟೆಯಿಂದ ಸಂಜೆ 6ಗಂಟೆಯವರೆಗೂ ಸೇವಾಕರ್ತರು ಪಾದಯಾತ್ರೆ ನಡೆಸಲಿದ್ದಾರೆ. ಪ್ರತಿದಿನ 30ರಿಂದ 40ಕಿ.ಮೀ. ಪಾದಸೇವೆ ನಡೆಯಲಿದೆ. ರಾತ್ರಿ ಯಾತ್ರೆ ಇರುವುದಿಲ್ಲ. ಮಾರ್ಗಮಧ್ಯೆ ಸಿಗುವ ಶಾಲೆಯ ಆವರಣ, ಮಠಗಳು ಸುಮುದಾಯಭವನ, ದೇವಾಲಯ ಆವರಣದಲ್ಲಿ ರಾತ್ರಿ ಉಳಿದುಕೊಂಡು ಬೆಳಗ್ಗೆ ಪ್ರಯಾಣ ಬೆಳೆಸಲಾಗುತ್ತದೆ ಎಂದು ಸೇವಾ ಸಮಿತಿಯ ಹಿರಿಯ ಯಾತ್ರಿ ಚೇತನ್ ಗೌಡ ಹೇಳಿದರು.

ದಾರಿಯಲ್ಲಿ ನಡೆಯುವಾಗ ಆಯಾಸವಾಗುತ್ತದೆ, ಕೆಲವರಿಗೆ ಕಾಲು ಬೊಬ್ಬೆ ಬರುತ್ತದೆ. ಆದರೆ ದಾರಿಯುದ್ದಕ್ಕೂ ಹಾಡು ಭಕ್ತಿಗೀತೆಗಳ ಮೂಲಕ ಗೋವಿಂದ ಗೋವಿಂದ ಎಂದು ನಾಮಸ್ಮರಣೆ ಮಾಡುವುದರಿಂದ ನೋವುಗಳನ್ನು ಮರೆಸುತ್ತದೆ. ಮಾರ್ಗದುದ್ದಕ್ಕೂ ಯಾತ್ರಿಗಳಿಗೆ ತಿಮ್ಮಪ್ಪನ ಭಕ್ತರು ನೀರು, ಹಾಲು ಕೋಸಂಬರಿ, ಚಹ ಬಿಸ್ಕೆಟ್ ನೀಡಿ   ನಮಸ್ಕರಿಸಿ ಹೋಗುತ್ತಿರುವುದು ನಮಗೆ ಇನ್ನಷ್ಟು ಪ್ರೇರಣೆ ನೀಡುತ್ತದೆ ಎಂದು ಕಿರಿಯ ಪಾದಯಾತ್ರಿ ರಾಹುಲ್ ಅನುಭವವನ್ನು ತಿಳಿಸಿದರು.

ಒಳ್ಳೆಯ ಮಳೆಯಾಗಿ ಬೆಳೆಯಾಗಲಿ ಎಂದು ಪಾದಯಾತ್ರೆಯಲ್ಲಿ ಶ್ರದ್ಧಾ ಭಕ್ತಿಯಿಂದ  ಭಾಗವಹಿಸುತ್ತಿದ್ದೇನೆ ದೇಹ ಮತ್ತು ಮನಸ್ಸಿನ ಮೇಲೆ ಉತ್ತಮ ಪರಿಣಾಮ ಬಿರಿದೆ. ರಕ್ತ ಶುದ್ಧಿಯಾಗುತ್ತದೆ. ದೇಹ ಹಗುರವಾಗಿರುತ್ತದೆ ಎಂದು ನಂಜುಂಡಪ್ಪ ಹೇಳುತ್ತಾರೆ.

Ramesh Babu

Journalist

Recent Posts

ಪಾಲನಜೋಗಿಹಳ್ಳಿ ಬಳಿ ಅಪಘಾತ: ಬೈಕ್ ಗೆ ಕೆಎಸ್ ಆರ್ ಟಿಸಿ ಬಸ್ ಡಿಕ್ಕಿ: ಬೈಕ್ ಸವಾರ ಸ್ಥಳದಲ್ಲೇ ಸಾವು

ಬೈಕ್ ಗೆ ಕೆಎಸ್ ಆರ್ ಟಿಸಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಇಂದು…

49 minutes ago

ಚಿಂತಕರು ಸ್ವಾಮಿ ನಾವು ಚಿಂತಕರು….

ಚಿಂತನೆ ಮತ್ತು ಚಿಂತಕರು....... " ಹೃದಯಾಂತರಾಳದಿಂದ ಬರುವ ಮಾತುಗಳು ಹೃದಯವನ್ನು ‌ತಾಕುತ್ತವೆ " ರೂಮಿ........... ಕೃತಕತೆ ಮತ್ತು ಸಹಜತೆಯ ನಡುವಿನ…

2 hours ago

ದೊಡ್ಡಬಳ್ಳಾಪುರ ಕಾಂಗ್ರೆಸ್ ಕಾರ್ಮಿಕ ಘಟಕದ ನೂತನ ಅಧ್ಯಕ್ಷರಾಗಿ ನರಸಿಂಹ ಮೂರ್ತಿ ನೇಮಕ

ದೊಡ್ಡಬಳ್ಳಾಪುರ ಕಾಂಗ್ರೆಸ್ ಕಾರ್ಮಿಕ ಘಟಕದ ನೂತನ ಅಧ್ಯಕ್ಷರನ್ನಾಗಿ ನರಸಿಂಹ ಮೂರ್ತಿ ಅವರನ್ನು ಅಧಿಕೃತವಾಗಿ ನೇಮಕ ಮಾಡಿದ್ದೇವೆ. ಅವರು ಪಕ್ಷಕ್ಕಾಗಿ ಹಗಲಿರುಳು…

15 hours ago

ಪ್ರತಿಯೊಬ್ಬ ಭಾರತೀಯನ ತಲೆ ಮೇಲೆ ರೂ. 4.8 ಲಕ್ಷದಷ್ಟು ಸಾಲದ ಹೊರೆ ಇದೆ- ಸಿಎಂ‌ ಸಿದ್ದರಾಮಯ್ಯ

ಕನ್ನಡಿಗರು ತಮ್ಮ ಬೆವರ ಗಳಿಕೆಯಿಂದ ನೀಡುವ ಒಂದು ರೂಪಾಯಿ ತೆರಿಗೆಗೆ ಪ್ರತಿಯಾಗಿ ಕೇಂದ್ರ ಸರ್ಕಾರ ಹದಿನೈದು ಪೈಸೆ ಮಾತ್ರ ವಾಪಸ್ಸು…

16 hours ago

ಮದುವೆ ಮಾಡಿಸಲಿಲ್ಲವೆಂದು ತಾಯಿಯನ್ನೇ ಕೊಲೆಗೈದ ಪಾಪಿ ಪುತ್ರ

ಹಾಸನ ಜಿಲ್ಲೆ, ಚನ್ನರಾಯಪಟ್ಟಣ ತಾಲ್ಲೂಕಿನ, ಶ್ರವಣಬೆಳಗೊಳದಲ್ಲಿ ಪಾಪಿ ಪುತ್ರನೊಬ್ಬ ಮದುವೆ ಮಾಡಿಸಲಿಲ್ಲವೆಂದು ತಾಯಿಯನ್ನೇ ಕೊಲೆಗೈದಿದ್ದಾನೆ. ಗಂಗಮ್ಮ (65), ಕೊಲೆಯಾದ ಮಹಿಳೆ.…

17 hours ago

ವಿ. ಶಾಂತಕುಮಾರ್ ಹುಟ್ಟುಹಬ್ಬ: ರೋಗಿಗಳಿಗೆ ಹಣ್ಣು ಹಂಪಲು ವಿತರಣೆ

ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಪ್ರದೇಶ ಯೋಜನಾ ಪ್ರಾಧಿಕಾರ ಅಧ್ಯಕ್ಷರಾದ ವಿ. ಶಾಂತಕುಮಾರ್ ಅವರ ಹುಟ್ಟುಹಬ್ಬ ಅರ್ಥಪೂರ್ಣವಾಗಿ ಆಚರಿಸಲಾಗಿದೆ. ಕಾಂಗ್ರೆಸ್…

21 hours ago