ಜ.29ರಿಂದ ತಿರುಪತಿ ತಿಮ್ಮಪ್ಪನ ದರ್ಶನಕ್ಕೆ ಪಾದಯಾತ್ರೆ

ಯಲಹಂಕ ತಾಲ್ಲೂಕಿನ ಚಲ್ಲಹಳ್ಳಿ ಗ್ರಾಮದ ವೇಣುಗೋಪಾಲಸ್ವಾಮಿ ದೇವಸ್ಥಾನ ಸನ್ನಿಧಿಯಿಂದ ಜನವರಿ 29ರ ಸೋಮವಾರದಂದು ಒಂದು ವಾರಗಳ ಕಾಲ ತಿರುಮಲ ತಿರುಪತಿ ದೇವಸ್ಥಾನಕ್ಕೆ 13ನೇ ವರ್ಷದ ಪಾದಯಾತ್ರೆ ಮೂಲಕ ಹರಿಸೇವೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.

ಹೆಸರಘಟ್ಟ ಹೋಬಳಿಯ ಚಲ್ಲಹಳ್ಳಿಯ ವೇಣುಗೋಪಾಲಸ್ವಾಮಿ ತಿರುಪತಿ ತಿರುಮಲ ಪಾದಯಾತ್ರಾ ಸೇವಾ ಸಮಿತಿ ವತಿಯಿಂದ 30ಕ್ಕೂ ಹೆಚ್ಚು ಭಕ್ತರು, 270ಕಿ.ಮೀ ನ್ನು 6ದಿನಗಳ ಕಾಲ ಪಾದಯಾತ್ರೆ ಮೂಲಕ ನಡೆದು, 7ನೇ ದಿನ ಮೆಟ್ಟಿಲುಗಳನ್ನು ಹತ್ತಿ ದೇವರ ದರ್ಶನ ಪಡೆಯಲಾಗುತ್ತದೆ.

ಕಳೆದ 12 ವರ್ಷದಿಂದ ಈ ಪಾದಯಾತ್ರೆ ಸೇವೆ ನಡೆಯುತ್ತಿದ್ದು, ಬೆಳಗ್ಗೆ 5ಗಂಟೆಯಿಂದ ಸಂಜೆ 6ಗಂಟೆಯವರೆಗೂ ಸೇವಾಕರ್ತರು ಪಾದಯಾತ್ರೆ ನಡೆಸಲಿದ್ದಾರೆ. ಪ್ರತಿದಿನ 30ರಿಂದ 40ಕಿ.ಮೀ. ಪಾದಸೇವೆ ನಡೆಯಲಿದೆ. ರಾತ್ರಿ ಯಾತ್ರೆ ಇರುವುದಿಲ್ಲ. ಮಾರ್ಗಮಧ್ಯೆ ಸಿಗುವ ಶಾಲೆಯ ಆವರಣ, ಮಠಗಳು ಸುಮುದಾಯಭವನ, ದೇವಾಲಯ ಆವರಣದಲ್ಲಿ ರಾತ್ರಿ ಉಳಿದುಕೊಂಡು ಬೆಳಗ್ಗೆ ಪ್ರಯಾಣ ಬೆಳೆಸಲಾಗುತ್ತದೆ ಎಂದು ಸೇವಾ ಸಮಿತಿಯ ಹಿರಿಯ ಯಾತ್ರಿ ಚೇತನ್ ಗೌಡ ಹೇಳಿದರು.

ದಾರಿಯಲ್ಲಿ ನಡೆಯುವಾಗ ಆಯಾಸವಾಗುತ್ತದೆ, ಕೆಲವರಿಗೆ ಕಾಲು ಬೊಬ್ಬೆ ಬರುತ್ತದೆ. ಆದರೆ ದಾರಿಯುದ್ದಕ್ಕೂ ಹಾಡು ಭಕ್ತಿಗೀತೆಗಳ ಮೂಲಕ ಗೋವಿಂದ ಗೋವಿಂದ ಎಂದು ನಾಮಸ್ಮರಣೆ ಮಾಡುವುದರಿಂದ ನೋವುಗಳನ್ನು ಮರೆಸುತ್ತದೆ. ಮಾರ್ಗದುದ್ದಕ್ಕೂ ಯಾತ್ರಿಗಳಿಗೆ ತಿಮ್ಮಪ್ಪನ ಭಕ್ತರು ನೀರು, ಹಾಲು ಕೋಸಂಬರಿ, ಚಹ ಬಿಸ್ಕೆಟ್ ನೀಡಿ   ನಮಸ್ಕರಿಸಿ ಹೋಗುತ್ತಿರುವುದು ನಮಗೆ ಇನ್ನಷ್ಟು ಪ್ರೇರಣೆ ನೀಡುತ್ತದೆ ಎಂದು ಕಿರಿಯ ಪಾದಯಾತ್ರಿ ರಾಹುಲ್ ಅನುಭವವನ್ನು ತಿಳಿಸಿದರು.

ಒಳ್ಳೆಯ ಮಳೆಯಾಗಿ ಬೆಳೆಯಾಗಲಿ ಎಂದು ಪಾದಯಾತ್ರೆಯಲ್ಲಿ ಶ್ರದ್ಧಾ ಭಕ್ತಿಯಿಂದ  ಭಾಗವಹಿಸುತ್ತಿದ್ದೇನೆ ದೇಹ ಮತ್ತು ಮನಸ್ಸಿನ ಮೇಲೆ ಉತ್ತಮ ಪರಿಣಾಮ ಬಿರಿದೆ. ರಕ್ತ ಶುದ್ಧಿಯಾಗುತ್ತದೆ. ದೇಹ ಹಗುರವಾಗಿರುತ್ತದೆ ಎಂದು ನಂಜುಂಡಪ್ಪ ಹೇಳುತ್ತಾರೆ.

Ramesh Babu

Journalist

Recent Posts

ತೂಬಗೆರೆ ಎಂ.ಪಿ.ಆರ್.ಎ.ಸಿ.ಎಸ್. ಚುನಾವಣೆ: ಬಿಜೆಪಿ–ಜೆಡಿಎಸ್ ಮೈತ್ರಿಗೆ ಸ್ಪಷ್ಟ ಬಹುಮತ

ದೊಡ್ಡಬಳ್ಳಾಪುರ ತಾಲ್ಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಪತ್ತಿನ ಸಹಕಾರ ಸಂಘ (ಎಂ.ಪಿ.ಆರ್.ಎ.ಸಿ.ಎಸ್.)ದ 2026–2031ನೇ ಅವಧಿಯ ಆಡಳಿತ ಮಂಡಳಿ…

7 hours ago

ಗಾಳಿಪಟವು ಒಂದು ಕಲೆಯಷ್ಟೇ ಅಲ್ಲ ಸಾಹಸದ ಪ್ರವೃತ್ತಿಯೂ ಆಗಿದೆ- ಪ್ರೊ. ಹಿ.ಚಿ. ಬೋರಲಿಂಗಯ್ಯ

ದೊಡ್ಡಬಳ್ಳಾಪುರ: ಆಷಾಢ ಮಾಸದಲ್ಲಿ ಗಾಳಿಪಟ ಹಾರಿಸುವುದು ನಮ್ಮ ಭಾಗದ ಸಾಂಪ್ರದಾಯಿಕ ಆಚರಣೆಯಾಗಿದ್ದು, ಗಾಳಿಪಟವು ಒಂದು ಕಲೆಯಷ್ಟೇ ಅಲ್ಲ ಸಾಹಸದ ಪ್ರವೃತ್ತಿಯೂ…

13 hours ago

ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿ ಪರೀಕ್ಷೆ ಸುಸೂತ್ರ; ದೊಡ್ಡಬಳ್ಳಾಪುರದ 7 ಕೇಂದ್ರಗಳಲ್ಲಿ ಯಶಸ್ವಿ ಆಯೋಜನೆ

ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಕರ್ನಾಟಕ ಸಿವಿಲ್ ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿ ಲಿಖಿತ ಪರೀಕ್ಷೆ ಭಾನುವಾರ ಯಾವುದೇ ಅಡಚಣೆ ಅಥವಾ…

15 hours ago

ಈ ಬಾರಿಯ ದಸರಾ ಉದ್ಘಾಟನೆ ಯಾರು ಮಾಡಿದರೆ ಉತ್ತಮ…..

ಇತ್ತೀಚೆಗೆ ಹೊಸದಾಗಿ ವಿಧಾನಪರಿಷತ್ ಸದಸ್ಯರಾಗಿ ಆಯ್ಕೆಯಾದ, ಡಾಕ್ಟರ್ ರಾಮ್ ಮನೋಹರ್ ಲೋಹಿಯಾ ವೇದಿಕೆಯ ಸಂಸ್ಥಾಪಕ ಅಧ್ಯಕ್ಷರಾದ ಶ್ರೀ ಮಳವಳ್ಳಿ ಶಿವಣ್ಣ…

2 days ago

ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಗೂಡ್ಸ್ ವಾಹನ: ತಪ್ಪಿದ ಭಾರೀ ಅನಾಹುತ

ದೊಡ್ಡಬಳ್ಳಾಪುರ: ನೆಲಮಂಗಲದಿಂದ ದೊಡ್ಡಬಳ್ಳಾಪುರದತ್ತ ಬರುತ್ತಿದ್ದ ಗೂಡ್ಸ್ ವಾಹನವು ಅರಳುಮಲ್ಲಿಗೆ ಗ್ರಾಮದ ಬಳಿ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ…

2 days ago

ಮದ್ಯಪಾನ, ಡ್ರಗ್ಸ್ ದುಶ್ಚಟಗಳಿಗೆ ಬಲಿಯಾಗದೆ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ- ಸಚಿವ ಕೆ.ಎಚ್ ಮುನಿಯಪ್ಪ

ಮದ್ಯಪಾನ, ಡ್ರಗ್ಸ್ ನಂತಹ ದುಶ್ಚಟಗಳಿಗೆ ಬಲಿಯಾಗದೆ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ ಎಂದು ಆಹಾರ, ನಾಗರೀಕ ಸರಬರಾಜು ಮತ್ತು ಗ್ರಾಹಕ…

2 days ago