ಯಲಹಂಕ ತಾಲ್ಲೂಕಿನ ಚಲ್ಲಹಳ್ಳಿ ಗ್ರಾಮದ ವೇಣುಗೋಪಾಲಸ್ವಾಮಿ ದೇವಸ್ಥಾನ ಸನ್ನಿಧಿಯಿಂದ ಜನವರಿ 29ರ ಸೋಮವಾರದಂದು ಒಂದು ವಾರಗಳ ಕಾಲ ತಿರುಮಲ ತಿರುಪತಿ ದೇವಸ್ಥಾನಕ್ಕೆ 13ನೇ ವರ್ಷದ ಪಾದಯಾತ್ರೆ ಮೂಲಕ ಹರಿಸೇವೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.
ಹೆಸರಘಟ್ಟ ಹೋಬಳಿಯ ಚಲ್ಲಹಳ್ಳಿಯ ವೇಣುಗೋಪಾಲಸ್ವಾಮಿ ತಿರುಪತಿ ತಿರುಮಲ ಪಾದಯಾತ್ರಾ ಸೇವಾ ಸಮಿತಿ ವತಿಯಿಂದ 30ಕ್ಕೂ ಹೆಚ್ಚು ಭಕ್ತರು, 270ಕಿ.ಮೀ ನ್ನು 6ದಿನಗಳ ಕಾಲ ಪಾದಯಾತ್ರೆ ಮೂಲಕ ನಡೆದು, 7ನೇ ದಿನ ಮೆಟ್ಟಿಲುಗಳನ್ನು ಹತ್ತಿ ದೇವರ ದರ್ಶನ ಪಡೆಯಲಾಗುತ್ತದೆ.
ಕಳೆದ 12 ವರ್ಷದಿಂದ ಈ ಪಾದಯಾತ್ರೆ ಸೇವೆ ನಡೆಯುತ್ತಿದ್ದು, ಬೆಳಗ್ಗೆ 5ಗಂಟೆಯಿಂದ ಸಂಜೆ 6ಗಂಟೆಯವರೆಗೂ ಸೇವಾಕರ್ತರು ಪಾದಯಾತ್ರೆ ನಡೆಸಲಿದ್ದಾರೆ. ಪ್ರತಿದಿನ 30ರಿಂದ 40ಕಿ.ಮೀ. ಪಾದಸೇವೆ ನಡೆಯಲಿದೆ. ರಾತ್ರಿ ಯಾತ್ರೆ ಇರುವುದಿಲ್ಲ. ಮಾರ್ಗಮಧ್ಯೆ ಸಿಗುವ ಶಾಲೆಯ ಆವರಣ, ಮಠಗಳು ಸುಮುದಾಯಭವನ, ದೇವಾಲಯ ಆವರಣದಲ್ಲಿ ರಾತ್ರಿ ಉಳಿದುಕೊಂಡು ಬೆಳಗ್ಗೆ ಪ್ರಯಾಣ ಬೆಳೆಸಲಾಗುತ್ತದೆ ಎಂದು ಸೇವಾ ಸಮಿತಿಯ ಹಿರಿಯ ಯಾತ್ರಿ ಚೇತನ್ ಗೌಡ ಹೇಳಿದರು.
ದಾರಿಯಲ್ಲಿ ನಡೆಯುವಾಗ ಆಯಾಸವಾಗುತ್ತದೆ, ಕೆಲವರಿಗೆ ಕಾಲು ಬೊಬ್ಬೆ ಬರುತ್ತದೆ. ಆದರೆ ದಾರಿಯುದ್ದಕ್ಕೂ ಹಾಡು ಭಕ್ತಿಗೀತೆಗಳ ಮೂಲಕ ಗೋವಿಂದ ಗೋವಿಂದ ಎಂದು ನಾಮಸ್ಮರಣೆ ಮಾಡುವುದರಿಂದ ನೋವುಗಳನ್ನು ಮರೆಸುತ್ತದೆ. ಮಾರ್ಗದುದ್ದಕ್ಕೂ ಯಾತ್ರಿಗಳಿಗೆ ತಿಮ್ಮಪ್ಪನ ಭಕ್ತರು ನೀರು, ಹಾಲು ಕೋಸಂಬರಿ, ಚಹ ಬಿಸ್ಕೆಟ್ ನೀಡಿ ನಮಸ್ಕರಿಸಿ ಹೋಗುತ್ತಿರುವುದು ನಮಗೆ ಇನ್ನಷ್ಟು ಪ್ರೇರಣೆ ನೀಡುತ್ತದೆ ಎಂದು ಕಿರಿಯ ಪಾದಯಾತ್ರಿ ರಾಹುಲ್ ಅನುಭವವನ್ನು ತಿಳಿಸಿದರು.
ಒಳ್ಳೆಯ ಮಳೆಯಾಗಿ ಬೆಳೆಯಾಗಲಿ ಎಂದು ಪಾದಯಾತ್ರೆಯಲ್ಲಿ ಶ್ರದ್ಧಾ ಭಕ್ತಿಯಿಂದ ಭಾಗವಹಿಸುತ್ತಿದ್ದೇನೆ ದೇಹ ಮತ್ತು ಮನಸ್ಸಿನ ಮೇಲೆ ಉತ್ತಮ ಪರಿಣಾಮ ಬಿರಿದೆ. ರಕ್ತ ಶುದ್ಧಿಯಾಗುತ್ತದೆ. ದೇಹ ಹಗುರವಾಗಿರುತ್ತದೆ ಎಂದು ನಂಜುಂಡಪ್ಪ ಹೇಳುತ್ತಾರೆ.
ದೊಡ್ಡಬಳ್ಳಾಪುರ: ತಾಲೂಕಿನ ಗ್ರಾಮೀಣ ಭಾಗಗಳಲ್ಲಿ ಹದಗೆಟ್ಟಿರುವ ರಸ್ತೆಗಳು ಹಾಗೂ ಸಮರ್ಪಕ ನಿರ್ವಹಣೆ ಇಲ್ಲದ ಕೆಎಸ್ಆರ್ಟಿಸಿ ಬಸ್ಗಳಿಂದಾಗಿ ಸಾರ್ವಜನಿಕರು ನಿತ್ಯವೂ ಪರದಾಡುವಂತಾಗಿದೆ.…
ದೊಡ್ಡಬಳ್ಳಾಪುರ: ಗೌರಿ ಗಣೇಶ ಹಬ್ಬದ ಸಂಭ್ರಮ ನಾಡಿನಾದ್ಯಂತ ಮನೆಮಾಡಿದ್ದು, ದೊಡ್ಡಬಳ್ಳಾಪುರ ನಗರದಲ್ಲೂ ಗಣೇಶೋತ್ಸವದ ಕಳೆ ಹೆಚ್ಚಾಗಿದೆ. ನಗರದ ವಿವಿಧೆಡೆ ಗಣೇಶ…
ದೊಡ್ಡಬಳ್ಳಾಪುರ: ಗಣೇಶೋತ್ಸವದ ಹಿನ್ನೆಲೆಯಲ್ಲಿ ಗಣೇಶ ಮೂರ್ತಿಗಳ ವಿಸರ್ಜನೆಗೆ ಅನುಕೂಲವಾಗುವಂತೆ ಹೊಸಹಳ್ಳಿ ಪೊಲೀಸ್ ಠಾಣೆ ವತಿಯಿಂದ ಗುಂಡಮಗೆರೆ ಕೆರೆಯಲ್ಲಿ ವಿಶೇಷ ವ್ಯವಸ್ಥೆ…
ದೊಡ್ಡಬಳ್ಳಾಪುರ: ನಾಡಿನಾದ್ಯಂತ ಗೌರಿ ಗಣೇಶ ಹಬ್ಬದ ಸಂಭ್ರಮ ಮನೆಮಾಡಿದ್ದು, ದೊಡ್ಡಬಳ್ಳಾಪುರ ತಾಲ್ಲೂಕಿನ ತೂಬಗೆರೆ ಹೋಬಳಿಯಲ್ಲೂ ಹಬ್ಬದ ವಾತಾವರಣ ಕಳೆಗಟ್ಟಿದೆ. ವಿವಿಧೆಡೆ…
ಬೆಂಗಳೂರು ಗ್ರಾಮಾಂತರ: ಶಿಕ್ಷಣದ ಮಹತ್ವದ ಅರಿವು, ಶಾಲಾ ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ, ವಯಸ್ಕರ ಶಿಕ್ಷಣ ಹಾಗೂ ನಿರಂತರ ಸಾಕ್ಷರತಾ ಕಾರ್ಯಕ್ರಮಗಳ…
ಬೆಂಗಳೂರು: ಕರ್ನಾಟಕ ಪೊಲೀಸ್ ಇಲಾಖೆಯ ಗತವೈಭವಕ್ಕೆ ಸಾಕ್ಷಿಯಾಗಬಲ್ಲ ಸುಮಾರು 185 ವರ್ಷಗಳಷ್ಟು ಹಳೆಯದಾದ ಅಪರೂಪದ ಪೊಲೀಸ್ ಬಿಲ್ಲೆಯೊಂದು ಬೆಳಕಿಗೆ ಬಂದಿದೆ.…