ಜ.29ರಿಂದ ತಿರುಪತಿ ತಿಮ್ಮಪ್ಪನ ದರ್ಶನಕ್ಕೆ ಪಾದಯಾತ್ರೆ

ಯಲಹಂಕ ತಾಲ್ಲೂಕಿನ ಚಲ್ಲಹಳ್ಳಿ ಗ್ರಾಮದ ವೇಣುಗೋಪಾಲಸ್ವಾಮಿ ದೇವಸ್ಥಾನ ಸನ್ನಿಧಿಯಿಂದ ಜನವರಿ 29ರ ಸೋಮವಾರದಂದು ಒಂದು ವಾರಗಳ ಕಾಲ ತಿರುಮಲ ತಿರುಪತಿ ದೇವಸ್ಥಾನಕ್ಕೆ 13ನೇ ವರ್ಷದ ಪಾದಯಾತ್ರೆ ಮೂಲಕ ಹರಿಸೇವೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.

ಹೆಸರಘಟ್ಟ ಹೋಬಳಿಯ ಚಲ್ಲಹಳ್ಳಿಯ ವೇಣುಗೋಪಾಲಸ್ವಾಮಿ ತಿರುಪತಿ ತಿರುಮಲ ಪಾದಯಾತ್ರಾ ಸೇವಾ ಸಮಿತಿ ವತಿಯಿಂದ 30ಕ್ಕೂ ಹೆಚ್ಚು ಭಕ್ತರು, 270ಕಿ.ಮೀ ನ್ನು 6ದಿನಗಳ ಕಾಲ ಪಾದಯಾತ್ರೆ ಮೂಲಕ ನಡೆದು, 7ನೇ ದಿನ ಮೆಟ್ಟಿಲುಗಳನ್ನು ಹತ್ತಿ ದೇವರ ದರ್ಶನ ಪಡೆಯಲಾಗುತ್ತದೆ.

ಕಳೆದ 12 ವರ್ಷದಿಂದ ಈ ಪಾದಯಾತ್ರೆ ಸೇವೆ ನಡೆಯುತ್ತಿದ್ದು, ಬೆಳಗ್ಗೆ 5ಗಂಟೆಯಿಂದ ಸಂಜೆ 6ಗಂಟೆಯವರೆಗೂ ಸೇವಾಕರ್ತರು ಪಾದಯಾತ್ರೆ ನಡೆಸಲಿದ್ದಾರೆ. ಪ್ರತಿದಿನ 30ರಿಂದ 40ಕಿ.ಮೀ. ಪಾದಸೇವೆ ನಡೆಯಲಿದೆ. ರಾತ್ರಿ ಯಾತ್ರೆ ಇರುವುದಿಲ್ಲ. ಮಾರ್ಗಮಧ್ಯೆ ಸಿಗುವ ಶಾಲೆಯ ಆವರಣ, ಮಠಗಳು ಸುಮುದಾಯಭವನ, ದೇವಾಲಯ ಆವರಣದಲ್ಲಿ ರಾತ್ರಿ ಉಳಿದುಕೊಂಡು ಬೆಳಗ್ಗೆ ಪ್ರಯಾಣ ಬೆಳೆಸಲಾಗುತ್ತದೆ ಎಂದು ಸೇವಾ ಸಮಿತಿಯ ಹಿರಿಯ ಯಾತ್ರಿ ಚೇತನ್ ಗೌಡ ಹೇಳಿದರು.

ದಾರಿಯಲ್ಲಿ ನಡೆಯುವಾಗ ಆಯಾಸವಾಗುತ್ತದೆ, ಕೆಲವರಿಗೆ ಕಾಲು ಬೊಬ್ಬೆ ಬರುತ್ತದೆ. ಆದರೆ ದಾರಿಯುದ್ದಕ್ಕೂ ಹಾಡು ಭಕ್ತಿಗೀತೆಗಳ ಮೂಲಕ ಗೋವಿಂದ ಗೋವಿಂದ ಎಂದು ನಾಮಸ್ಮರಣೆ ಮಾಡುವುದರಿಂದ ನೋವುಗಳನ್ನು ಮರೆಸುತ್ತದೆ. ಮಾರ್ಗದುದ್ದಕ್ಕೂ ಯಾತ್ರಿಗಳಿಗೆ ತಿಮ್ಮಪ್ಪನ ಭಕ್ತರು ನೀರು, ಹಾಲು ಕೋಸಂಬರಿ, ಚಹ ಬಿಸ್ಕೆಟ್ ನೀಡಿ   ನಮಸ್ಕರಿಸಿ ಹೋಗುತ್ತಿರುವುದು ನಮಗೆ ಇನ್ನಷ್ಟು ಪ್ರೇರಣೆ ನೀಡುತ್ತದೆ ಎಂದು ಕಿರಿಯ ಪಾದಯಾತ್ರಿ ರಾಹುಲ್ ಅನುಭವವನ್ನು ತಿಳಿಸಿದರು.

ಒಳ್ಳೆಯ ಮಳೆಯಾಗಿ ಬೆಳೆಯಾಗಲಿ ಎಂದು ಪಾದಯಾತ್ರೆಯಲ್ಲಿ ಶ್ರದ್ಧಾ ಭಕ್ತಿಯಿಂದ  ಭಾಗವಹಿಸುತ್ತಿದ್ದೇನೆ ದೇಹ ಮತ್ತು ಮನಸ್ಸಿನ ಮೇಲೆ ಉತ್ತಮ ಪರಿಣಾಮ ಬಿರಿದೆ. ರಕ್ತ ಶುದ್ಧಿಯಾಗುತ್ತದೆ. ದೇಹ ಹಗುರವಾಗಿರುತ್ತದೆ ಎಂದು ನಂಜುಂಡಪ್ಪ ಹೇಳುತ್ತಾರೆ.

Ramesh Babu

Journalist

Recent Posts

ಬಡ ಕಾರ್ಮಿಕರ ಜೀವಕ್ಕೆ ಬೆಲೆ ಇಲ್ಲವೇ, ಲೇಸರ್ ಗಳ ಯುಗದಲ್ಲಿ ಪಟಾಕಿಗೇನು ಕೆಲಸ…..?

ಪಟಾಕಿ ದುರಂತಕ್ಕೆ ಯಾರು ಹೊಣೆ.... ಬಡ ಕಾರ್ಮಿಕರ ಜೀವಕ್ಕೆ ಬೆಲೆ ಇಲ್ಲವೇ, ಲೇಸರ್ ಗಳ ಯುಗದಲ್ಲಿ ಪಟಾಕಿಗೇನು ಕೆಲಸ..... ಲೇಸರ್…

7 hours ago

ನಾಳೆ (ಏ.23ರಂದು) ವಿವಿಧ ಊರುಗಳಲ್ಲಿ ವಿದ್ಯುತ್ ವ್ಯತ್ಯಯ

ದೊಡ್ಡಬಳ್ಳಾಪುರ ನಗರದಲ್ಲಿ ಏ.23 ರಂದು 66/11ಕೆವಿ ಡಿಕ್ರಾಸ್ ಉಪ ವಿದ್ಯುತ್ ಕೇಂದ್ರದಿಂದ ಹೊರಹೊಮ್ಮುವ F09-Rajaghatta, F03-Thalagavara, F12-Heggadihalli, F17- Nandi…

7 hours ago

ಖಾಯಂ ನೇಮಕಾತಿ, ಸಮಾನ ಕೆಲಸಕ್ಕೆ ಸಮಾನ ವೇತನಕ್ಕಾಗಿ ಪರವಾನಗಿ ಭೂಮಾಪಕರ ಪ್ರತಿಭಟನೆ

ಖಾಯಂ ನೇಮಕಾತಿ, ಕನಿಷ್ಠ ವೇತನ, ಸಮಾನ ಕೆಲಸಕ್ಕೆ ಸಮಾನ ವೇತನ ಸೇರಿ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಸರ್ಕಾರಿ ಪರವಾನಗಿ…

20 hours ago

ಪ್ರತಿಷ್ಠಿತ ಶಾಲೆಗಳಿಗೆ 6ನೇ ತರಗತಿ ಪ್ರವೇಶಾತಿಗೆ ಅರ್ಜಿ ಆಹ್ವಾನ

2026-27 ನೇ ಸಾಲಿನಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಪ್ರತಿಷ್ಠಿತ ಶಾಲೆಗಳಲ್ಲಿ 6ನೇ ತರಗತಿ(ಆಂಗ್ಲ ಮಾಧ್ಯಮ)ಗೆ ಸೇರಲು ಪರಿಶಿಷ್ಟ ಪಂಗಡದ ಪ್ರತಿಭಾವಂತ…

22 hours ago

ಕೆ-ಸೆಟ್ ಮತ್ತು ಯುಜಿಸಿ-ನೆಟ್ ಪರೀಕ್ಷೆಗಳಿಗೆ ತರಬೇತಿ

ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರದ ವತಿಯಿಂದ ರಾಜ್ಯ ಮಟ್ಟದ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆಗೆ…

22 hours ago

ಕೊಟ್ಟಿಗೆಮಾಚೇನಹಳ್ಳಿ ಗ್ರಾಮದಲ್ಲಿ ಹೆಚ್ಚಿದ ಕರಡಿ ಹಾವಳಿ: ಜೀವ ಭಯದಲ್ಲಿ ರೈತರು

ದೊಡ್ಡಬಳ್ಳಾಪುರ ತಾಲೂಕಿನ ಹೊಸಹಳ್ಳಿ ಸಮೀಪದ ಕೊಟ್ಟಿಗೆಮಾಚೇನಹಳ್ಳಿ ಗ್ರಾಮದಲ್ಲಿ ಕರಡಿ ಹಾವಳಿ ಮುಂದುವರಿದಿದೆ.. ರಾತ್ರೋರಾತ್ರಿ ರೈತರ ಹೊಲಗಳಿಗೆ ನುಗ್ಗಿ ಬಾಳೆ, ಹಲಸಿನ…

23 hours ago