ಯಲಹಂಕ ತಾಲ್ಲೂಕಿನ ಚಲ್ಲಹಳ್ಳಿ ಗ್ರಾಮದ ವೇಣುಗೋಪಾಲಸ್ವಾಮಿ ದೇವಸ್ಥಾನ ಸನ್ನಿಧಿಯಿಂದ ಜನವರಿ 29ರ ಸೋಮವಾರದಂದು ಒಂದು ವಾರಗಳ ಕಾಲ ತಿರುಮಲ ತಿರುಪತಿ ದೇವಸ್ಥಾನಕ್ಕೆ 13ನೇ ವರ್ಷದ ಪಾದಯಾತ್ರೆ ಮೂಲಕ ಹರಿಸೇವೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.
ಹೆಸರಘಟ್ಟ ಹೋಬಳಿಯ ಚಲ್ಲಹಳ್ಳಿಯ ವೇಣುಗೋಪಾಲಸ್ವಾಮಿ ತಿರುಪತಿ ತಿರುಮಲ ಪಾದಯಾತ್ರಾ ಸೇವಾ ಸಮಿತಿ ವತಿಯಿಂದ 30ಕ್ಕೂ ಹೆಚ್ಚು ಭಕ್ತರು, 270ಕಿ.ಮೀ ನ್ನು 6ದಿನಗಳ ಕಾಲ ಪಾದಯಾತ್ರೆ ಮೂಲಕ ನಡೆದು, 7ನೇ ದಿನ ಮೆಟ್ಟಿಲುಗಳನ್ನು ಹತ್ತಿ ದೇವರ ದರ್ಶನ ಪಡೆಯಲಾಗುತ್ತದೆ.
ಕಳೆದ 12 ವರ್ಷದಿಂದ ಈ ಪಾದಯಾತ್ರೆ ಸೇವೆ ನಡೆಯುತ್ತಿದ್ದು, ಬೆಳಗ್ಗೆ 5ಗಂಟೆಯಿಂದ ಸಂಜೆ 6ಗಂಟೆಯವರೆಗೂ ಸೇವಾಕರ್ತರು ಪಾದಯಾತ್ರೆ ನಡೆಸಲಿದ್ದಾರೆ. ಪ್ರತಿದಿನ 30ರಿಂದ 40ಕಿ.ಮೀ. ಪಾದಸೇವೆ ನಡೆಯಲಿದೆ. ರಾತ್ರಿ ಯಾತ್ರೆ ಇರುವುದಿಲ್ಲ. ಮಾರ್ಗಮಧ್ಯೆ ಸಿಗುವ ಶಾಲೆಯ ಆವರಣ, ಮಠಗಳು ಸುಮುದಾಯಭವನ, ದೇವಾಲಯ ಆವರಣದಲ್ಲಿ ರಾತ್ರಿ ಉಳಿದುಕೊಂಡು ಬೆಳಗ್ಗೆ ಪ್ರಯಾಣ ಬೆಳೆಸಲಾಗುತ್ತದೆ ಎಂದು ಸೇವಾ ಸಮಿತಿಯ ಹಿರಿಯ ಯಾತ್ರಿ ಚೇತನ್ ಗೌಡ ಹೇಳಿದರು.
ದಾರಿಯಲ್ಲಿ ನಡೆಯುವಾಗ ಆಯಾಸವಾಗುತ್ತದೆ, ಕೆಲವರಿಗೆ ಕಾಲು ಬೊಬ್ಬೆ ಬರುತ್ತದೆ. ಆದರೆ ದಾರಿಯುದ್ದಕ್ಕೂ ಹಾಡು ಭಕ್ತಿಗೀತೆಗಳ ಮೂಲಕ ಗೋವಿಂದ ಗೋವಿಂದ ಎಂದು ನಾಮಸ್ಮರಣೆ ಮಾಡುವುದರಿಂದ ನೋವುಗಳನ್ನು ಮರೆಸುತ್ತದೆ. ಮಾರ್ಗದುದ್ದಕ್ಕೂ ಯಾತ್ರಿಗಳಿಗೆ ತಿಮ್ಮಪ್ಪನ ಭಕ್ತರು ನೀರು, ಹಾಲು ಕೋಸಂಬರಿ, ಚಹ ಬಿಸ್ಕೆಟ್ ನೀಡಿ ನಮಸ್ಕರಿಸಿ ಹೋಗುತ್ತಿರುವುದು ನಮಗೆ ಇನ್ನಷ್ಟು ಪ್ರೇರಣೆ ನೀಡುತ್ತದೆ ಎಂದು ಕಿರಿಯ ಪಾದಯಾತ್ರಿ ರಾಹುಲ್ ಅನುಭವವನ್ನು ತಿಳಿಸಿದರು.
ಒಳ್ಳೆಯ ಮಳೆಯಾಗಿ ಬೆಳೆಯಾಗಲಿ ಎಂದು ಪಾದಯಾತ್ರೆಯಲ್ಲಿ ಶ್ರದ್ಧಾ ಭಕ್ತಿಯಿಂದ ಭಾಗವಹಿಸುತ್ತಿದ್ದೇನೆ ದೇಹ ಮತ್ತು ಮನಸ್ಸಿನ ಮೇಲೆ ಉತ್ತಮ ಪರಿಣಾಮ ಬಿರಿದೆ. ರಕ್ತ ಶುದ್ಧಿಯಾಗುತ್ತದೆ. ದೇಹ ಹಗುರವಾಗಿರುತ್ತದೆ ಎಂದು ನಂಜುಂಡಪ್ಪ ಹೇಳುತ್ತಾರೆ.
ಬೆಂಗಳೂರು ಗ್ರಾಮಾಂತರ: ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆಗೆ ಸಂಬಂಧಿಸಿದಂತೆ ಸೋಮವಾರ ಕರಡು ಮತದಾರರ ಪಟ್ಟಿ ಪ್ರಕಟವಾಗಿದ್ದು, ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ…
ದೊಡ್ಡಬಳ್ಳಾಪುರ: ವಿದ್ಯಾರ್ಥಿಗಳಲ್ಲಿ ಕ್ರೀಡಾ ಪ್ರತಿಭೆಯನ್ನು ಗುರುತಿಸಿ, ಅವರಿಗೆ ಉತ್ತಮ ತರಬೇತಿ ಹಾಗೂ ಅವಕಾಶ ಕಲ್ಪಿಸುವ ಉದ್ದೇಶದಿಂದ ನಗರದ ನ್ಯಾಷನಲ್ ಪ್ರೈಡ್…
ಪ್ರತಿಯೊಂದು ಮಗುವಿಗೂ ಶಿಕ್ಷಣ ದೊರೆಯಬೇಕು ಎಂಬ ಸರ್ಕಾರದ ಆಶಯದ ನಡುವೆಯೂ ನಾನಾ ಕಾರಣಗಳಿಂದ ಶಾಲೆಯಿಂದ ಹೊರಗುಳಿದಿರುವ ಹಾಗೂ ಶಾಲೆಗೆ…
ದೊಡ್ಡಬಳ್ಳಾಪುರ: ಪಾಕಿಸ್ತಾನಿ ಗ್ಯಾಂಗ್ಸ್ಟರ್ಗಳೊಂದಿಗೆ ಇನ್ಸ್ಟಾಗ್ರಾಂ ಮೂಲಕ ಸಂಪರ್ಕದಲ್ಲಿದ್ದ ಆರೋಪದ ಮೇರೆಗೆ ದೊಡ್ಡಬಳ್ಳಾಪುರ ನಗರ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ. ದೊಡ್ಡಬಳ್ಳಾಪುರ ನಗರದ…
ದೊಡ್ಡಬಳ್ಳಾಪುರ: ಶ್ರಾವಣ ಮಾಸದ ಶುಭ ಸಂದರ್ಭದಲ್ಲಿ ಆಚರಿಸಲಾಗುವ ವರಮಹಾಲಕ್ಷ್ಮಿ ಹಬ್ಬವನ್ನು ದೊಡ್ಡಬಳ್ಳಾಪುರ ತಾಲ್ಲೂಕಿನಾದ್ಯಂತ ಶುಕ್ರವಾರ ಭಕ್ತಿಭಾವ ಹಾಗೂ ಸಂಭ್ರಮದಿಂದ ಆಚರಿಸಲಾಯಿತು.…
ದೊಡ್ಡಬಳ್ಳಾಪುರ: ವರಮಹಾಲಕ್ಷ್ಮಿ ಹಬ್ಬದ ಪ್ರಯುಕ್ತ ತಾಲೂಕಿನ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಾಲಯದ ಆಡಳಿತ ಮಂಡಳಿ ವತಿಯಿಂದ…