ಜ.5ರಂದು ಮತದಾರರ ಅಂತಿಮ ಪಟ್ಟಿ ಪ್ರಕಟ: ಜಿಲ್ಲಾ ಮತದಾರರ ನೋಂದಣಿ ಅಧಿಕಾರಿ ಎನ್.ತೇಜಸ್ ಕುಮಾರ್

ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ ಮುಕ್ತಾಯವಾಗಿದ್ದು ಜ.5 ರಂದು ಅಂತಿಮ ಪಟ್ಟಿ ಪ್ರಕಟಿಸಲಾಗುವುದು ಎಂದು ಉಪವಿಭಾಗಾಧಿಕಾರಿ ಹಾಗೂ ಜಿಲ್ಲಾ ಮತದಾರರ ನೋಂದಣಿ ಅಧಿಕಾರಿ ಎನ್.ತೇಜಸ್ ಕುಮಾರ್ ಹೇಳಿದರು.

ಅವರು ಈ ಬಗ್ಗೆ ಮಾಹಿತಿ ನೀಡಿ, ಚುನಾವಣಾ ಆಯೋಗದ ನಿರ್ದೇಶನದಂತೆ ನ.9 ರಿಂದ ಡಿ.8 ರವರೆಗೆ ಮತದಾರರಿಂದ ಬಂದಿದ್ದ ಆಕ್ಷೇಪಣೆಗಳನ್ನು ಸ್ವೀಕರಿಸಿ, ಬೂತ್ ಮಟ್ಟದ ಅಧಿಕಾರಿಗಳು ಪ್ರತಿ ಮನೆಗಳಿಗು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಡಿ.9 ರಿಂದ 26 ರವರಿಗೆ ಮತದಾರರಿಂದ ಬಂದಿದ್ದ ಎಲ್ಲಾ ಆಕ್ಷೇಪಣೆಗಳನ್ನು ಸರಿಪಡಿಸಲಾಗಿದೆ. ಮತದಾರರ ಪಟ್ಟಿ ಪರಿಷ್ಕರಣೆ ಸಮಯದಲ್ಲಿ ಜಿಲ್ಲಾ ನೋಡಲ್ ಅಧಿಕಾರಿಗಳು ಸೇರಿದಂತೆ ವಿವಿಧ ಹಂತದ ಅಧಿಕಾರಿಗಳಿಗು ಮತಗಟ್ಟೆ ವ್ಯಾಪ್ತಿಯಲ್ಲಿನ ಮನೆಗಳಿಗೆ ಭೇಟಿ ನೀಡಿ ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ ಕುರಿತು ಮತದಾರರಿಂದಲು ಸಹ ಅಭಿಪ್ರಾಯಗಳನ್ನು ಪಡೆದಿದ್ದಾರೆ.

ಕುಟುಂಬದ ಸದಸ್ಯರು ಮರಣ ಹೊಂದಿರುವಂತಹ ಸಂದರ್ಭಗಳಲ್ಲಿ ಮತದಾರರ ಪಟ್ಟಿಯಲ್ಲಿ ಹೆಸರು ತೆಗೆಯುವಂತೆ ಜನರೇ ಸ್ವಯಂ ಪ್ರೇರಣಿಯಿಂದ ಸೂಕ್ತ ದಾಖಲಾತಿಗಳನ್ನು ನೀಡಿ ಹೆಸರುಗಳನ್ನು ತೆಗೆಸಿದ್ದಾರೆ. ಇದರಿಂದ ಮತದಾರರ ಪಟ್ಟಿಯಲ್ಲಿ ಮರಣ ಹೊಂದಿದವರ ಹೆಸರುಗಳು ಹಾಗೆಯೇ ಉಳಿಯುವುದು ತಪ್ಪಿದೆ ಎಂದರು.

ಜಿಲ್ಲೆಯ ನಾಲ್ಕು ತಾಲ್ಲೂಕುಗಳಲ್ಲಿನ 1,137 ಮತಗಟ್ಟೆಗಳ ಮತದಾರರಿಂದ ಈಗಾಗಲೇ ಬಂದಿರುವ ಎಲ್ಲಾ ಆಕ್ಷೇಪಣೆಗಳನ್ನು ಪರಿಶೀಲಿಸಿ ಮತದಾರರ ಪಟ್ಟಿಯನ್ನು ಶುದ್ದೀಕರಿಸಲಾಗಿದೆ. ಜ.5 ರಂದು ನೋಂದಾಯಿತ ರಾಜಕೀಯ ಪಕ್ಷಗಳ ಮುಖಂಡರ ಸಭೆ ನಡೆಸಿ ಮತದಾರರ ಪಟ್ಟಿಯನ್ನು ಉಚಿತವಾಗಿ ನೀಡಲಾಗುವುದು.

ಮತದಾರರ ಪಟ್ಟಿಯಲ್ಲಿ ಅರ್ಹ ಮತದಾರರು ಹೆಸರು ಸೇರ್ಪಡೆಮಾಡುವುದು ಸೇರಿದಂತೆ ಯಾವುದೇ ರೀತಿಯ ತಿದ್ದುಪಡಿಗಳು ಇದ್ದರೆ ಚುನಾವಣ ದಿನಾಂಕ ಘೋಷಣೆಯಾದ ನಂತರ ನಾಮಪತ್ರ ಸಲ್ಲಿಕೆಯ ಅಂತಿನ ದಿನದವರೆಗೂ ಅರ್ಜಿಗಳನ್ನು ಸಲ್ಲಿಸಲು ಅವಕಾಶ ಇರಲಿದೆ ಎಂದರು.

ಮತದರರ ಪಟ್ಟಿಯನ್ನು ಜಿಲ್ಲಾಧಿಕಾರಿಗಳ ಕಚೇರಿಯಿಂದ ಮೊದಲುಗೊಂಡು ಎಲ್ಲಾ ತಾಲ್ಲೂಕು ಕಚೇರಿಗಳು ಹಾಗೂ ಪ್ರತಿ ಮತಗಟ್ಟೆಗಳಲ್ಲೂ ಮತದಾರರ ಅಂತಿಮ ಪಟ್ಟಿಯನ್ನು ಸಾರ್ವಜನಿಕರ ಮಾಹಿತಿಗಾಗಿ ಪ್ರಕಟಿಸಲಾಗುವುದು. ಅಲ್ಲದೆ ಆನ್ ಲೈನ್ನಲ್ಲೂ ಸಹ ಮತದಾರರು ತಮ್ಮ ಹೆಸರುಗಳು ಪಟ್ಟಿಯಲ್ಲಿ ಇರುವ ಬಗ್ಗೆ ಪರಿಶೀಲನೆ ನಡೆಸಿಕೊಳ್ಳಬಹುದಾಗಿದೆ ಎಂದರು.

ಈ ಸಂದರ್ಭದಲ್ಲಿ ಚುನಾವಣಾ ವಿಭಾಗದ ತಹಶೀಲ್ದಾರ್ ಬಸವರಾಜ್ ತೆನ್ನಹಳ್ಳಿ, ಚುನಾವಣ ಶಾಖೆಯ ರಘುನಂದನ್ ಇದ್ದರು.

Ramesh Babu

Journalist

Recent Posts

ಕೇವಲ 200 ರೂ. ಬಾಕಿ ಹಣ ಕೇಳಿದ್ದಕ್ಕೆ ಕಾಫಿ-ಟೀ ಅಂಗಡಿ ಮಾಲೀಕನ ಕೊಲೆ

ದೊಡ್ಡಬಳ್ಳಾಪುರ: ಕೇವಲ 200 ರೂಪಾಯಿ ಬಾಕಿ ಹಣ ಕೇಳಿದ್ದಕ್ಕೆ ಕಾಫಿ-ಟೀ ಅಂಗಡಿ ಮಾಲೀಕನ ಮೇಲೆ ದೊಣ್ಣೆಯಿಂದ ಹಲ್ಲೆ ನಡೆಸಿ ಕೊಲೆ…

5 hours ago

2025–26 ಹಣಕಾಸು ವರ್ಷದಲ್ಲಿ ಕೆಂಪೇಗೌಡ ವಿಮಾನ ನಿಲ್ದಾಣದ ದಾಖಲೆ ಬೆಳವಣಿಗೆ

ಬೆಂಗಳೂರು: ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ 2025–26ನೇ ಹಣಕಾಸು ವರ್ಷದಲ್ಲಿ ಪ್ರಯಾಣಿಕರ ಸಂಚಾರ ಮತ್ತು ಸರಕು ಸಾಗಣೆ ಎರಡೂ ವಿಭಾಗಗಳಲ್ಲಿ…

7 hours ago

ರೌಡಿಯಿಸಂ, ಗೂಂಡಾಗಿರಿ, ದೌರ್ಜನ್ಯದಿಂದ ಏನೂ ಪ್ರಯೋಜನವಿಲ್ಲ- ಕಾನೂನು ಬಾಹಿರ ಚಟುವಟಿಕೆ ಸಂಪೂರ್ಣವಾಗಿ ತ್ಯಜಿಸಬೇಕು- ಪೊಲೀಸ್ ಮೇಷ್ಟ್ರಿಂದ ರೌಡಿಗಳಿಗೆ ಕಾನೂನು ಪಾಠ: ಮಿಟ್ಟೆ ಗ್ಯಾಂಗ್ ಗೆ ವಿಶೇಷ ವಾರ್ನಿಂಗ್

ರೌಡಿಯಿಸಂ, ಗೂಂಡಾಗಿರಿ, ದೌರ್ಜನ್ಯದಿಂದ ಏನೂ ಪ್ರಯೋಜನವಿಲ್ಲ. ನೆಮ್ಮದಿ ಕಳೆದುಕೊಂಡು, ಕುಟಂಬದಿಂದ ದೂರಾವಾಗಿ ಭಯಭೀತಿಯಲ್ಲಿ ಜೀವನ ಮಾಡಬೇಕಷ್ಟೇ. ಹೀಗಾಗಿ ಅಕ್ರಮ, ಅನೈತಿಕ,…

20 hours ago

ಮದುವೆ ಸಂಭ್ರಮದ ನಡುವೆ ಬೈಕ್ ಗೆ ಬೆಂಕಿ ಇಟ್ಟ ಕಿಡಿಗೇಡಿಗಳು

ಚಿಕ್ಕಬಳ್ಳಾಪುರ: ಜಿಲ್ಲೆಯ ತಾಲೂಕಿನ ಅರಸನಹಳ್ಳಿಯಲ್ಲಿ ತಡರಾತ್ರಿ ಭೀಕರ ಘಟನೆಯೊಂದು ನಡೆದಿದೆ. ಮದುವೆ ಕಾರ್ಯಕ್ರಮವಿದ್ದ ಮನೆಯ ಮುಂದೆ ನಿಲ್ಲಿಸಿದ್ದ ವಾಹನಗಳಿಗೆ ಕಿಡಿಗೇಡಿಗಳು…

1 day ago

ಶನೇಶ್ವರ ಜಯಂತಿ ಹಾಗೂ ಅಮಾವಾಸ್ಯೆ ಹಿನ್ನೆಲೆ: ಮಧುರೆ ಶನೇಶ್ವರ ದೇವಸ್ಥಾನದಲ್ಲಿ ಅಪಾರ ಭಕ್ತಸಾಗರ

ಶನೇಶ್ವರ ಜಯಂತಿ ಹಾಗೂ ಅಮಾವಾಸ್ಯೆ ಒಂದೇ ದಿನ ಬಂದಿರುವ ಹಿನ್ನೆಲೆ ದೊಡ್ಡಬಳ್ಳಾಪುರ ತಾಲೂಕಿನ ಮಧುರೆ ಶನೇಶ್ವರ ದೇವಸ್ಥಾನದಲ್ಲಿ ಅಪಾರ ಭಕ್ತಸಾಗರ…

1 day ago

ಮೆಜೆಸ್ಟಿಕ್‌ನಿಂದ ಘಾಟಿ ಸುಬ್ರಮಣ್ಯಕ್ಕೆ ಬಿಎಂಟಿಸಿ ಹೊಸದಾಗಿ ನೇರ ಬಸ್‌ ಸೇವೆ ಆರಂಭ

ಬೆಂಗಳೂರು: ಬೆಂಗಳೂರು‌ ನಗರ ಹಾಗೂ ಗ್ರಾಮಾಂತರ ಭಾಗಗಳಿಗೆ ಪ್ರಯಾಣಿಸುವ ಸಾರ್ವಜನಿಕರಿಗೆ ಅನುಕೂಲವಾಗುವಂತೆ ಬಿಎಂಟಿಸಿ(Bangalore Metropolitan Transport Corporation) ಮೇ 18ರಿಂದ…

2 days ago