ಜ.5ರಂದು ಮತದಾರರ ಅಂತಿಮ ಪಟ್ಟಿ ಪ್ರಕಟ: ಜಿಲ್ಲಾ ಮತದಾರರ ನೋಂದಣಿ ಅಧಿಕಾರಿ ಎನ್.ತೇಜಸ್ ಕುಮಾರ್

ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ ಮುಕ್ತಾಯವಾಗಿದ್ದು ಜ.5 ರಂದು ಅಂತಿಮ ಪಟ್ಟಿ ಪ್ರಕಟಿಸಲಾಗುವುದು ಎಂದು ಉಪವಿಭಾಗಾಧಿಕಾರಿ ಹಾಗೂ ಜಿಲ್ಲಾ ಮತದಾರರ ನೋಂದಣಿ ಅಧಿಕಾರಿ ಎನ್.ತೇಜಸ್ ಕುಮಾರ್ ಹೇಳಿದರು.

ಅವರು ಈ ಬಗ್ಗೆ ಮಾಹಿತಿ ನೀಡಿ, ಚುನಾವಣಾ ಆಯೋಗದ ನಿರ್ದೇಶನದಂತೆ ನ.9 ರಿಂದ ಡಿ.8 ರವರೆಗೆ ಮತದಾರರಿಂದ ಬಂದಿದ್ದ ಆಕ್ಷೇಪಣೆಗಳನ್ನು ಸ್ವೀಕರಿಸಿ, ಬೂತ್ ಮಟ್ಟದ ಅಧಿಕಾರಿಗಳು ಪ್ರತಿ ಮನೆಗಳಿಗು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಡಿ.9 ರಿಂದ 26 ರವರಿಗೆ ಮತದಾರರಿಂದ ಬಂದಿದ್ದ ಎಲ್ಲಾ ಆಕ್ಷೇಪಣೆಗಳನ್ನು ಸರಿಪಡಿಸಲಾಗಿದೆ. ಮತದಾರರ ಪಟ್ಟಿ ಪರಿಷ್ಕರಣೆ ಸಮಯದಲ್ಲಿ ಜಿಲ್ಲಾ ನೋಡಲ್ ಅಧಿಕಾರಿಗಳು ಸೇರಿದಂತೆ ವಿವಿಧ ಹಂತದ ಅಧಿಕಾರಿಗಳಿಗು ಮತಗಟ್ಟೆ ವ್ಯಾಪ್ತಿಯಲ್ಲಿನ ಮನೆಗಳಿಗೆ ಭೇಟಿ ನೀಡಿ ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ ಕುರಿತು ಮತದಾರರಿಂದಲು ಸಹ ಅಭಿಪ್ರಾಯಗಳನ್ನು ಪಡೆದಿದ್ದಾರೆ.

ಕುಟುಂಬದ ಸದಸ್ಯರು ಮರಣ ಹೊಂದಿರುವಂತಹ ಸಂದರ್ಭಗಳಲ್ಲಿ ಮತದಾರರ ಪಟ್ಟಿಯಲ್ಲಿ ಹೆಸರು ತೆಗೆಯುವಂತೆ ಜನರೇ ಸ್ವಯಂ ಪ್ರೇರಣಿಯಿಂದ ಸೂಕ್ತ ದಾಖಲಾತಿಗಳನ್ನು ನೀಡಿ ಹೆಸರುಗಳನ್ನು ತೆಗೆಸಿದ್ದಾರೆ. ಇದರಿಂದ ಮತದಾರರ ಪಟ್ಟಿಯಲ್ಲಿ ಮರಣ ಹೊಂದಿದವರ ಹೆಸರುಗಳು ಹಾಗೆಯೇ ಉಳಿಯುವುದು ತಪ್ಪಿದೆ ಎಂದರು.

ಜಿಲ್ಲೆಯ ನಾಲ್ಕು ತಾಲ್ಲೂಕುಗಳಲ್ಲಿನ 1,137 ಮತಗಟ್ಟೆಗಳ ಮತದಾರರಿಂದ ಈಗಾಗಲೇ ಬಂದಿರುವ ಎಲ್ಲಾ ಆಕ್ಷೇಪಣೆಗಳನ್ನು ಪರಿಶೀಲಿಸಿ ಮತದಾರರ ಪಟ್ಟಿಯನ್ನು ಶುದ್ದೀಕರಿಸಲಾಗಿದೆ. ಜ.5 ರಂದು ನೋಂದಾಯಿತ ರಾಜಕೀಯ ಪಕ್ಷಗಳ ಮುಖಂಡರ ಸಭೆ ನಡೆಸಿ ಮತದಾರರ ಪಟ್ಟಿಯನ್ನು ಉಚಿತವಾಗಿ ನೀಡಲಾಗುವುದು.

ಮತದಾರರ ಪಟ್ಟಿಯಲ್ಲಿ ಅರ್ಹ ಮತದಾರರು ಹೆಸರು ಸೇರ್ಪಡೆಮಾಡುವುದು ಸೇರಿದಂತೆ ಯಾವುದೇ ರೀತಿಯ ತಿದ್ದುಪಡಿಗಳು ಇದ್ದರೆ ಚುನಾವಣ ದಿನಾಂಕ ಘೋಷಣೆಯಾದ ನಂತರ ನಾಮಪತ್ರ ಸಲ್ಲಿಕೆಯ ಅಂತಿನ ದಿನದವರೆಗೂ ಅರ್ಜಿಗಳನ್ನು ಸಲ್ಲಿಸಲು ಅವಕಾಶ ಇರಲಿದೆ ಎಂದರು.

ಮತದರರ ಪಟ್ಟಿಯನ್ನು ಜಿಲ್ಲಾಧಿಕಾರಿಗಳ ಕಚೇರಿಯಿಂದ ಮೊದಲುಗೊಂಡು ಎಲ್ಲಾ ತಾಲ್ಲೂಕು ಕಚೇರಿಗಳು ಹಾಗೂ ಪ್ರತಿ ಮತಗಟ್ಟೆಗಳಲ್ಲೂ ಮತದಾರರ ಅಂತಿಮ ಪಟ್ಟಿಯನ್ನು ಸಾರ್ವಜನಿಕರ ಮಾಹಿತಿಗಾಗಿ ಪ್ರಕಟಿಸಲಾಗುವುದು. ಅಲ್ಲದೆ ಆನ್ ಲೈನ್ನಲ್ಲೂ ಸಹ ಮತದಾರರು ತಮ್ಮ ಹೆಸರುಗಳು ಪಟ್ಟಿಯಲ್ಲಿ ಇರುವ ಬಗ್ಗೆ ಪರಿಶೀಲನೆ ನಡೆಸಿಕೊಳ್ಳಬಹುದಾಗಿದೆ ಎಂದರು.

ಈ ಸಂದರ್ಭದಲ್ಲಿ ಚುನಾವಣಾ ವಿಭಾಗದ ತಹಶೀಲ್ದಾರ್ ಬಸವರಾಜ್ ತೆನ್ನಹಳ್ಳಿ, ಚುನಾವಣ ಶಾಖೆಯ ರಘುನಂದನ್ ಇದ್ದರು.

Ramesh Babu

Journalist

Recent Posts

ಗ್ಯಾಸ್ ಸೋರಿಕೆಯಿಂದ ಬೆಂಕಿ ಅವಘಡ: ಇಬ್ಬರು ಯುವಕರಿಗೆ ಸುಟ್ಟ ಗಾಯ

ದೊಡ್ಡಬಳ್ಳಾಪುರ: ರಾತ್ರಿ ವೇಳೆ ಗ್ಯಾಸ್ ಸ್ಟೌವ್ ಆನ್ ಸ್ಥಿತಿಯಲ್ಲಿಯೇ ಕೆಲಸಕ್ಕೆ ತೆರಳಿದ್ದ ಪರಿಣಾಮ ಬೆಳಗ್ಗೆ ಬೆಂಕಿ ಅವಘಡ ಸಂಭವಿಸಿ ಇಬ್ಬರು…

6 hours ago

ಬರ ವೀಕ್ಷಣೆ ನಡೆಸಿದ ಸಚಿವ ಕೆ.ಎಚ್ ಮುನಿಯಪ್ಪ: ಬೆಳೆ ವಿಮೆ ಮಾಡಿಸಲು ರೈತರಲ್ಲಿ ಮನವಿ

ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ಸಚಿವರಾದ ಕೆ.ಹೆಚ್ ಮುನಿಯಪ್ಪ ಅವರು ಇಂದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ…

1 day ago

28ಕ್ಕೂ ಹೆಚ್ಚು ಜಿಲ್ಲೆಗಳು ಬರದ ಸಂಕಷ್ಟದಲ್ಲಿ; ರೈತರಿಗೆ ತಕ್ಷಣ ₹10 ಸಾವಿರ ಕೋಟಿ ಪರಿಹಾರ ಪ್ಯಾಕೇಜ್ ಘೋಷಿಸಿ: ಬಿ.ವೈ. ವಿಜಯೇಂದ್ರ ಆಗ್ರಹ

ತುಮಕೂರು: ರಾಜ್ಯದ 28ಕ್ಕೂ ಹೆಚ್ಚು ಜಿಲ್ಲೆಗಳು ಸಮರ್ಪಕ ಮಳೆಯ ಕೊರತೆಯಿಂದ ತೀವ್ರ ಬರದ ಪರಿಸ್ಥಿತಿಯನ್ನು ಎದುರಿಸುತ್ತಿದ್ದು, ರೈತರ ಹಿತದೃಷ್ಟಿಯಿಂದ ರಾಜ್ಯ…

2 days ago

ಅತಿವೃಷ್ಟಿ–ಬರ ಎದುರಿಸಲು ಸಚಿವರಿಗೆ ಜಿಲ್ಲೆಗಳ ಉಸ್ತುವಾರಿ: ಯಾವ ಸಚಿವರಿಗೆ ಯಾವ ಜಿಲ್ಲೆ? ಸರ್ಕಾರದಿಂದ ಉಸ್ತುವಾರಿ ಪಟ್ಟಿ ಪ್ರಕಟ

ರಾಜ್ಯದಲ್ಲಿ ಉಂಟಾಗಿರುವ ಅತಿವೃಷ್ಟಿ ಹಾಗೂ ಬರ ಪರಿಸ್ಥಿತಿಯನ್ನು ಸಮರ್ಥವಾಗಿ ನಿಭಾಯಿಸಲು ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಸಚಿವ ಸಂಪುಟದ ಸದಸ್ಯರಿಗೆ…

2 days ago

ಲಯನ್ಸ್ ಕ್ಲಬ್ ಆಫ್ ಕೊನಘಟ್ಟ ಲೆಜೆಂಡ್ಸ್ ಅಧ್ಯಕ್ಷರಾಗಿ ಜಿ.ಲಕ್ಷ್ಮಿಪತಿ ಆಯ್ಕೆ

ದೊಡ್ಡಬಳ್ಳಾಪುರ: ಸಮಾಜ ಸೇವೆಯೇ ಲಯನ್ಸ್ ಕ್ಲಬ್‌ನ ಮೂಲ ಧ್ಯೇಯವಾಗಿದ್ದು, ನಿರಂತರವಾಗಿ ಸೇವಾ ಕಾರ್ಯಗಳನ್ನು ಮುಂದುವರಿಸಬೇಕು. ಲಯನ್ಸ್ ಕ್ಲಬ್ ಆಫ್ ಕೊನಘಟ್ಟ…

2 days ago

ಹುಣಸೂರು ಎಸಿ ಕಾವ್ಯಾರಾಣಿ ಲೋಕಾಯುಕ್ತ ಬಲೆಗೆ; ₹5.50 ಲಕ್ಷ ಲಂಚ ಸ್ವೀಕರಿಸುವ ವೇಳೆ ಟ್ರ್ಯಾಪ್

ಮೈಸೂರು: ಹುಣಸೂರು ಉಪ ವಿಭಾಗಾಧಿಕಾರಿ (ಎಸಿ) ಕಾವ್ಯಾರಾಣಿ ಅವರು ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ. ಲೋಕಾಯುಕ್ತ…

2 days ago