ಜ.5ರಂದು ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ಸ್ವಾಮಿ ಬ್ರಹ್ಮರಥೋತ್ಸವ: ಡಿ.20ರಿಂದ ಘಾಟಿ ದನಗಳ ಜಾತ್ರೆ ಪ್ರಾರಂಭ: ರೈತರಿಂದ ಪೂರ್ವ ಸಿದ್ಧತೆ: ದನಗಳ ಮಾರಾಟ ಮತ್ತು ಪ್ರದರ್ಶನಕ್ಕೆ ದಿಬ್ಬ, ಶೆಡ್, ಪೆಂಡಾಲ್ ಗಳ ನಿರ್ಮಾಣ

ದೊಡ್ಡಬಳ್ಳಾಪುರ ತಾಲೂಕಿನ ಇತಿಹಾಸ ಪ್ರಸಿದ್ಧ ಶ್ರೀ ಘಾಟಿ ಸುಬ್ರಹ್ಮಣ್ಯ ಸ್ವಾಮಿ ದೇವಾಲಯದ ಬ್ರಹ್ಮರಥೋತ್ಸವವು ಜನವರಿ 05 ರಂದು ಜರುಗಲಿದೆ. ಇದಕ್ಕೂ ಮುನ್ನ ಡಿ.20ರಿಂದ ದನಗಳ ಜಾತ್ರೆ ಪ್ರಾರಂಭವಾಗಲಿದೆ. ಈಗಾಗಲೇ ಜಾತ್ರೆಗೆ ಬೇಕಾಗಿರುವ ಎಲ್ಲಾ ಸಿದ್ಧತಾ ಕಾರ್ಯಗಳು ಪ್ರಾರಂಭಗೊಂಡಿವೆ.

ಸದ್ಯ ದನಗಳ ಮಾರಾಟ ಮತ್ತು ಪ್ರದರ್ಶನಕ್ಕೆ ಸ್ಥಳಗಳನ್ನು ಗುರುತಿಸಿಕೊಂಡು ದಿಬ್ಬಗಳ ನಿರ್ಮಾಣ ಮತ್ತು ಶೆಡ್ ಗಳು, ಪೆಂಡಲ್ ನಿರ್ಮಾಣ ಕೆಲಸವನ್ನ ರೈತರು ಪ್ರಾರಂಭಿಸಿದ್ದಾರೆ.

ಮುಂಗಾರಿನಲ್ಲಿ ಮಳೆ ಆಶ್ರಯದಲ್ಲಿ ಬೆಳೆಯಲಾಗುವ ಬೆಳೆಗಳ ಕೊಯ್ಲು ಮುಕ್ತಾಯವಾದ ನಂತರ ಪ್ರಥಮ ಬಾರಿಗೆ ನಡೆಯುವ ಘಾಟಿ ಸುಬ್ರಹ್ಮಣ್ಯ ಜಾತ್ರೆಯಲ್ಲಿ ಕೃಷಿ ಕೆಲಸಕ್ಕೆ ಬೇಕಾಗುವ ಹೋರಿಗಳನ್ನು ಖರೀದಿಸಲು ರಾಜ್ಯದ ಬಳ್ಳಾರಿ, ದಾವಣಗೆರೆ, ರಾಯಚೂರು, ಬೀದರ್ ಸೇರಿದಂತೆ ವಿವಿಧ ಜಿಲ್ಲೆಗಳಿಂದ ಮಾತ್ರವಲ್ಲದೆ ಹೊರ ರಾಜ್ಯದ ತಮಿಳುನಾಡಿನ ಸೇಲಂ, ಹೊಸೂರು,ಆಂಧ್ರಪ್ರದೇಶದ ಹಿಂದೂಪುರ,ಅನಂತಪುರ,ಮಹಾರಾಷ್ಟ್ರದ ಕೊಲ್ಲಾಪುರ,ಸಾಂಗ್ಲಿ ಸೇರಿದಂತೆ ವಿವಿಧ ಕಡೆಗಳಿಂದಲು ರೈತರು ಬರುತ್ತಾರೆ.

ದನಗಳ ಜಾತ್ರೆಗೆ ತಮಿಳುನಾಡು, ಆಂಧ್ರ ಹಾಗೂ ರಾಜ್ಯದ ಮೂಲೆ ಮೂಲೆಗಳಿಂದ ಬರುವ ರೈತರಿಗೆ ದೇವಾಲಯದ ವತಿಯಿಂದ ಕುಡಿಯುವ ನೀರು, ವಿದ್ಯುತ್ ಸೌಲಭ್ಯ ಹಾಗೂ ರೈತರಿಗೆ ಬೆಳಗ್ಗೆ ತಿಂಡಿ ಮಧ್ಯಾಹ್ನ ಊಟ ಏರ್ಪಡಿಸಲಾಗುತ್ತದೆ. ಜಾತ್ರೆಗೆ ಬರುವ ಎತ್ತುಗಳಿಗೆ ಯಾವುದೇ ಸುಂಕವಿಲ್ಲ ಎಂದು ಘಾಟಿ ದೇವಾಲಯದ ಆಡಳಿತಾಧಿಕಾರಿ ನಾರಾಯಣಸ್ವಾಮಿ ಹೇಳಿದ್ದಾರೆ.

ರಾಸುಗಳಿಗೆ ಕುಡಿಯುವ ನೀರು, ಮೇವು, ಲಸಿಕೆ, ದನಗಳನ್ನು ಕಟ್ಟಿಹಾಕುವ ಶೆಡ್ ಗಳಿಗೆ ಸಮರ್ಪಕ ವಿದ್ಯುತ್ ಸಂಪರ್ಕ, ರೈತರಿಗೆ ಉಚಿತ ಊಟದ ವ್ಯವಸ್ಥೆ ಕಲ್ಪಿಸಿ ಎಂದು ಸಂಬಂಧಿತ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸೂಚಿಸಿದ್ದಾರೆ.

ಜಾತ್ರೆಯಲ್ಲಿ ಅಮೃತ್ ಮಹಲ್, ಹಳ್ಳಿಕಾರ್ ಸೇರಿದಂತೆ ಸ್ಥಳೀಯ ನಾಟಿ ಹೋರಿಗಳು ಹೆಚ್ಚಿನ ಸಂಖ್ಯೆಯಲ್ಲಿ ಮಾರಾಟಕ್ಕೆ ಬರುತ್ತವೆ. ಹೀಗಾಗಿಯೇ ಹೆಚ್ಚಿನ ಸಂಖ್ಯೆಯಲ್ಲಿ ಹೊರ ಜಿಲ್ಲೆ, ಹೊರ ರಾಜ್ಯದ ರೈತರು ಕೃಷಿ ಕೆಲಸಗಳಿಗೆ ಹೋರಿಗಳ ಖರೀದಿಗೆ ಬರುತ್ತಾರೆ.

Ramesh Babu

Journalist

Recent Posts

9 ತಿಂಗಳಲ್ಲಿ ಬಮೂಲ್ ಒಕ್ಕೂಟಕ್ಕೆ 60 ಕೋಟಿ ಲಾಭ: ಸಂಪೂರ್ಣ ರೈತರ ಖಾತೆಗೆ ಲಾಭಾಂಶ ಹಣ

ಪಶು ಆಹಾರಗಳ ಬೆಲೆ ಏರಿಕೆ.. ಬೇಸಿಗೆಯಿಂದಾಗಿ ಹಾಲು ಉತ್ಪಾದನೆ ಕುಂಠಿತ.. ಹಸುಗಳಲ್ಲಿ ಹೆಚ್ಚಿದ ಕೆಚ್ಚಲುಬಾವು ರೋಗ.. ರಾಸುಗಳಿಗೆ ಮೇವು ಇಲ್ಲದೆ…

2 hours ago

ಶ್ರೀ ಘಾಟಿ ಸುಬ್ರಹ್ಮಣ್ಯ ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಚಿಂತನೆ: ₹184 ಕೋಟಿ ಮೊತ್ತದ ಕೇಂದ್ರ ಸರ್ಕಾರದ ಯೋಜನೆಗೆ ಶೀಘ್ರವೇ ಅನುಮೋದನೆ – ಸಂಸದ ಡಾ.ಕೆ‌ ಸುಧಾಕರ್

ಇಂದು ನವದೆಹಲಿಯಲ್ಲಿ ಕೇಂದ್ರ ಪ್ರವಾಸೋದ್ಯಮ ಸಚಿವರಾದ ಶ್ರೀ ಗಜೇಂದ್ರ ಸಿಂಗ್ ಶೇಖಾವತ್ ಅವರನ್ನು ಭೇಟಿ ಮಾಡಿ, 'ಪ್ರಸಾದ್ 2.0' (PRASHAD…

2 hours ago

ಮಹಿಳೆಯರು ಸ್ವಾವಲಂಬಿಗಳಾಗಿ ಬದುಕಬೇಕು- ಪೊಲೀಸ್ ಸಬ್ ಇನ್ಸ್ಪೆಕ್ಟರ್ ವರಲಕ್ಷ್ಮಿ .ವಿ

ದೊಡ್ಡಬಳ್ಳಾಪುರ: ಮಹಿಳಾ ದಿನ ಕೇವಲ ಒಂದು ದಿನದ ಆಚರಣೆಯಲ್ಲ ಬದಲಾಗಿ ಮಹಿಳೆಯರ ಸಮಾನತೆಗಾಗಿ ನಡೆಯುತ್ತಿರುವ ನಿರಂತರ ಹೋರಾಟದ ಸಂಕೇತ ಎಂದು…

21 hours ago

ಕೇಂದ್ರ ಮೀಸಲು ಪೊಲೀಸ್ ಪಡೆ (CRPF) 87ನೇ ಸ್ಥಾಪನಾ ದಿನಾಚರಣೆ: ಉಚಿತ ಆರೋಗ್ಯ ಶಿಬರ ಮತ್ತು ರಕ್ತದಾನ ಶಿಬಿರ ಆಯೋಜನೆ

ಕೇಂದ್ರ ಮೀಸಲು ಪೊಲೀಸ್ ಪಡೆ (CRPF) 87ನೇ ಸ್ಥಾಪನಾ ದಿನಾಚರಣೆ ಹಿನ್ನೆಲೆ ಕರ್ನಾಟಕ ಮತ್ತು ಕೇರಳ ವಲಯದ CRPF ಬೆಂಗಳೂರು…

21 hours ago

ವಾಣಿಜ್ಯ ಸಿಲಿಂಡರ್‌ಗಳ ಪೂರೈಕೆಯಲ್ಲಿ ವ್ಯತ್ಯಯ: ದೊಡ್ಡಬಳ್ಳಾಪುರಕ್ಕೆ ಕಳೆದ ಒಂದು ವಾರದಿಂದ ಬಾರದ ವಾಣಿಜ್ಯ ಸಿಲಿಂಡರ್ ಗಳು: ನಗರದ ಹೋಟೆಲ್ ಗಳು, ಘಾಟಿ ಕ್ಷೇತ್ರಕ್ಕೂ ತಟ್ಟಿದ ಬಿಸಿ: ಸೌದೆ ಒಲೆ ಮೊರೆ ಹೋದ ಜನ

ಮದ್ಯಪ್ರಾಚ್ಯಗಳ ದೇಶಗಳಲ್ಲಿ ನಡೆಯುತ್ತಿರುವ ಯುದ್ದಗಳಿಂದಾಗಿ ಎಲ್.ಪಿ.ಜಿ ಕೊರತೆ ದೇಶಕ್ಕೆ ಎದುರಾಗಿದೆ. ಹೋಟೆಲ್ ಗಳಲ್ಲಿ ವಾಣಿಜ್ಯ ಸಿಲಿಂಡರ್ ಗಳ ಅಭಾವ ಸೃಷ್ಟಿಯಾಗಿ…

22 hours ago

ಮಧ್ಯಪ್ರಾಚ್ಯದಲ್ಲಿ ಯುದ್ಧ ಹಿನ್ನೆಲೆ: ರಾಜ್ಯದ ಹಲವೆಡೆ ಗ್ಯಾಸ್ ಸಿಲಿಂಡರ್ ಪೂರೈಕೆಯಲ್ಲಿ ಅಭಾವ: ಗೃಹ ಬಳಕೆಯ ಗ್ಯಾಸ್ ಸಿಲಿಂಡರ್ ಸಮಸ್ಯೆ ಇಲ್ಲ- ಆಹಾರ ಸಚಿವ ಕೆ.ಎಚ್. ಮುನಿಯಪ್ಪ

ಮಧ್ಯಪ್ರಾಚ್ಯದಲ್ಲಿ ಯುದ್ಧದ ಹಿನ್ನೆಲೆಯಲ್ಲಿ ರಾಜ್ಯದ ಹಲವೆಡೆ ಗ್ಯಾಸ್ ಸಿಲಿಂಡರ್ ಪೂರೈಕೆಯಲ್ಲಿ ಅಭಾವದ ಪರಿಸ್ಥಿತಿ ಸೃಷ್ಟಿಯಾಗಿರುವ ವರದಿಗಳ ನಡುವೆ ಗೃಹ ಬಳಕೆಯ…

1 day ago