ಜ.5ರಂದು ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ಸ್ವಾಮಿ ಬ್ರಹ್ಮರಥೋತ್ಸವ: ಡಿ.20ರಿಂದ ಘಾಟಿ ದನಗಳ ಜಾತ್ರೆ ಪ್ರಾರಂಭ: ರೈತರಿಂದ ಪೂರ್ವ ಸಿದ್ಧತೆ: ದನಗಳ ಮಾರಾಟ ಮತ್ತು ಪ್ರದರ್ಶನಕ್ಕೆ ದಿಬ್ಬ, ಶೆಡ್, ಪೆಂಡಾಲ್ ಗಳ ನಿರ್ಮಾಣ

ದೊಡ್ಡಬಳ್ಳಾಪುರ ತಾಲೂಕಿನ ಇತಿಹಾಸ ಪ್ರಸಿದ್ಧ ಶ್ರೀ ಘಾಟಿ ಸುಬ್ರಹ್ಮಣ್ಯ ಸ್ವಾಮಿ ದೇವಾಲಯದ ಬ್ರಹ್ಮರಥೋತ್ಸವವು ಜನವರಿ 05 ರಂದು ಜರುಗಲಿದೆ. ಇದಕ್ಕೂ ಮುನ್ನ ಡಿ.20ರಿಂದ ದನಗಳ ಜಾತ್ರೆ ಪ್ರಾರಂಭವಾಗಲಿದೆ. ಈಗಾಗಲೇ ಜಾತ್ರೆಗೆ ಬೇಕಾಗಿರುವ ಎಲ್ಲಾ ಸಿದ್ಧತಾ ಕಾರ್ಯಗಳು ಪ್ರಾರಂಭಗೊಂಡಿವೆ.

ಸದ್ಯ ದನಗಳ ಮಾರಾಟ ಮತ್ತು ಪ್ರದರ್ಶನಕ್ಕೆ ಸ್ಥಳಗಳನ್ನು ಗುರುತಿಸಿಕೊಂಡು ದಿಬ್ಬಗಳ ನಿರ್ಮಾಣ ಮತ್ತು ಶೆಡ್ ಗಳು, ಪೆಂಡಲ್ ನಿರ್ಮಾಣ ಕೆಲಸವನ್ನ ರೈತರು ಪ್ರಾರಂಭಿಸಿದ್ದಾರೆ.

ಮುಂಗಾರಿನಲ್ಲಿ ಮಳೆ ಆಶ್ರಯದಲ್ಲಿ ಬೆಳೆಯಲಾಗುವ ಬೆಳೆಗಳ ಕೊಯ್ಲು ಮುಕ್ತಾಯವಾದ ನಂತರ ಪ್ರಥಮ ಬಾರಿಗೆ ನಡೆಯುವ ಘಾಟಿ ಸುಬ್ರಹ್ಮಣ್ಯ ಜಾತ್ರೆಯಲ್ಲಿ ಕೃಷಿ ಕೆಲಸಕ್ಕೆ ಬೇಕಾಗುವ ಹೋರಿಗಳನ್ನು ಖರೀದಿಸಲು ರಾಜ್ಯದ ಬಳ್ಳಾರಿ, ದಾವಣಗೆರೆ, ರಾಯಚೂರು, ಬೀದರ್ ಸೇರಿದಂತೆ ವಿವಿಧ ಜಿಲ್ಲೆಗಳಿಂದ ಮಾತ್ರವಲ್ಲದೆ ಹೊರ ರಾಜ್ಯದ ತಮಿಳುನಾಡಿನ ಸೇಲಂ, ಹೊಸೂರು,ಆಂಧ್ರಪ್ರದೇಶದ ಹಿಂದೂಪುರ,ಅನಂತಪುರ,ಮಹಾರಾಷ್ಟ್ರದ ಕೊಲ್ಲಾಪುರ,ಸಾಂಗ್ಲಿ ಸೇರಿದಂತೆ ವಿವಿಧ ಕಡೆಗಳಿಂದಲು ರೈತರು ಬರುತ್ತಾರೆ.

ದನಗಳ ಜಾತ್ರೆಗೆ ತಮಿಳುನಾಡು, ಆಂಧ್ರ ಹಾಗೂ ರಾಜ್ಯದ ಮೂಲೆ ಮೂಲೆಗಳಿಂದ ಬರುವ ರೈತರಿಗೆ ದೇವಾಲಯದ ವತಿಯಿಂದ ಕುಡಿಯುವ ನೀರು, ವಿದ್ಯುತ್ ಸೌಲಭ್ಯ ಹಾಗೂ ರೈತರಿಗೆ ಬೆಳಗ್ಗೆ ತಿಂಡಿ ಮಧ್ಯಾಹ್ನ ಊಟ ಏರ್ಪಡಿಸಲಾಗುತ್ತದೆ. ಜಾತ್ರೆಗೆ ಬರುವ ಎತ್ತುಗಳಿಗೆ ಯಾವುದೇ ಸುಂಕವಿಲ್ಲ ಎಂದು ಘಾಟಿ ದೇವಾಲಯದ ಆಡಳಿತಾಧಿಕಾರಿ ನಾರಾಯಣಸ್ವಾಮಿ ಹೇಳಿದ್ದಾರೆ.

ರಾಸುಗಳಿಗೆ ಕುಡಿಯುವ ನೀರು, ಮೇವು, ಲಸಿಕೆ, ದನಗಳನ್ನು ಕಟ್ಟಿಹಾಕುವ ಶೆಡ್ ಗಳಿಗೆ ಸಮರ್ಪಕ ವಿದ್ಯುತ್ ಸಂಪರ್ಕ, ರೈತರಿಗೆ ಉಚಿತ ಊಟದ ವ್ಯವಸ್ಥೆ ಕಲ್ಪಿಸಿ ಎಂದು ಸಂಬಂಧಿತ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸೂಚಿಸಿದ್ದಾರೆ.

ಜಾತ್ರೆಯಲ್ಲಿ ಅಮೃತ್ ಮಹಲ್, ಹಳ್ಳಿಕಾರ್ ಸೇರಿದಂತೆ ಸ್ಥಳೀಯ ನಾಟಿ ಹೋರಿಗಳು ಹೆಚ್ಚಿನ ಸಂಖ್ಯೆಯಲ್ಲಿ ಮಾರಾಟಕ್ಕೆ ಬರುತ್ತವೆ. ಹೀಗಾಗಿಯೇ ಹೆಚ್ಚಿನ ಸಂಖ್ಯೆಯಲ್ಲಿ ಹೊರ ಜಿಲ್ಲೆ, ಹೊರ ರಾಜ್ಯದ ರೈತರು ಕೃಷಿ ಕೆಲಸಗಳಿಗೆ ಹೋರಿಗಳ ಖರೀದಿಗೆ ಬರುತ್ತಾರೆ.

Ramesh Babu

Journalist

Recent Posts

ಘಾಟಿ ಕ್ಷೇತ್ರದಲ್ಲಿ ನಾಗರ ಪಂಚಮಿ ಸಂಭ್ರಮ

ದೊಡ್ಡಬಳ್ಳಾಪುರ: ನಾಗರಾಧನೆಗೆ ಪ್ರಸಿದ್ಧವಾಗಿರುವ ತಾಲೂಕಿನ ಘಾಟಿ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ಸೋಮವಾರ ನಾಗರ ಪಂಚಮಿ ಹಬ್ಬವನ್ನು ಭಕ್ತಿಭಾವದಿಂದ ಆಚರಿಸಲಾಯಿತು. ನಾಗರ ಪಂಚಮಿ…

1 hour ago

ದೊಡ್ಡಬಳ್ಳಾಪುರದಲ್ಲಿ ಆ.18ರಂದು ವಿದ್ಯುತ್ ವ್ಯತ್ಯಯ

ದೊಡ್ಡಬಳ್ಳಾಪುರ: ನಗರದ 66/11 ಕೆವಿ ಡಿ.ಕ್ರಾಸ್ ವಿದ್ಯುತ್ ಉಪಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಕೈಗೊಳ್ಳಲಾಗಿರುವ ಹಿನ್ನೆಲೆಯಲ್ಲಿ ಆ.18ರಂದು ಬೆಳಿಗ್ಗೆ 10ರಿಂದ…

22 hours ago

ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರಕ್ಕೆ ನೂತನ ಅಧ್ಯಕ್ಷ, ಸದಸ್ಯರ ನೇಮಕ: ಯೋಜಿತ ನಗರಾಭಿವೃದ್ಧಿಗೆ ಆದ್ಯತೆ- ಸದಸ್ಯ ಎಸ್.ಡಿ. ಮುನಿರಾಜು

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರಕ್ಕೆ ನೂತನ ಅಧ್ಯಕ್ಷರು ಹಾಗೂ ಸದಸ್ಯರನ್ನು ನೇಮಕ ಮಾಡಲಾಗಿದೆ. ಮಾಜಿ ಶಾಸಕ ಟಿ.ವೆಂಕಟರಮಣಯ್ಯ ಅವರನ್ನು ಅಧ್ಯಕ್ಷರಾಗಿ,…

1 day ago

ಮಕ್ಕಳೇ ದೇಶದ ಆಸ್ತಿ, ಉತ್ತಮ ಶಿಕ್ಷಣದಿಂದ ಭವಿಷ್ಯ ನಿರ್ಮಾಣ- ಶಿವಕುಮಾರ್

ದೊಡ್ಡಬಳ್ಳಾಪುರ: ಉತ್ತಮ ಸಮಾಜ ನಿರ್ಮಾಣಕ್ಕೆ ಶಿಕ್ಷಣವೇ ಭದ್ರ ಬುನಾದಿಯಾಗಿದ್ದು, ಮಕ್ಕಳಿಗೆ ಗುಣಮಟ್ಟದ ಶಿಕ್ಷಣದ ಜೊತೆಗೆ ಉತ್ತಮ ಕಲಿಕಾ ವಾತಾವರಣ ಕಲ್ಪಿಸುವಲ್ಲಿ…

2 days ago

ಬೆಂಗಳೂರು ಗ್ರಾಮಾಂತರದಲ್ಲಿ ಎರಡು ಪ್ರತ್ಯೇಕ ಅಪಘಾತ: ಇಬ್ಬರು ಸಾವು, ಹಲವರಿಗೆ ಗಾಯ

ದೇವನಹಳ್ಳಿ/ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಹಾಗೂ ದೊಡ್ಡಬಳ್ಳಾಪುರ ತಾಲೂಕಿನ ವ್ಯಾಪ್ತಿಯಲ್ಲಿ ಮುಂಜಾನೆ ಸಂಭವಿಸಿದ ಎರಡು ಪ್ರತ್ಯೇಕ ರಸ್ತೆ ಅಪಘಾತಗಳಲ್ಲಿ…

2 days ago

ಸ್ವಾತಂತ್ರ್ಯ ದಿನದಂದೇ ಹೆದ್ದಾರಿಯಲ್ಲಿ ಪುಂಡರ ಡೆಡ್ಲಿ ವ್ಹೀಲಿಂಗ್

ದೇವನಹಳ್ಳಿ: ಸ್ವಾತಂತ್ರ್ಯ ದಿನಾಚರಣೆ ಹಾಗೂ ವಾರಾಂತ್ಯದ ರಜೆ ಹಿನ್ನೆಲೆಯಲ್ಲಿ ದೇವನಹಳ್ಳಿ ಹೊರವಲಯದ ಬೈಪಾಸ್ ನಲ್ಲಿ ಪುಂಡರು ಗುಂಪು ಗುಂಪಾಗಿ ಆಟೋ,…

2 days ago