ಜ.5ರಂದು ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ಸ್ವಾಮಿ ಬ್ರಹ್ಮರಥೋತ್ಸವ: ಡಿ.20ರಿಂದ ಘಾಟಿ ದನಗಳ ಜಾತ್ರೆ ಪ್ರಾರಂಭ: ರೈತರಿಂದ ಪೂರ್ವ ಸಿದ್ಧತೆ: ದನಗಳ ಮಾರಾಟ ಮತ್ತು ಪ್ರದರ್ಶನಕ್ಕೆ ದಿಬ್ಬ, ಶೆಡ್, ಪೆಂಡಾಲ್ ಗಳ ನಿರ್ಮಾಣ

ದೊಡ್ಡಬಳ್ಳಾಪುರ ತಾಲೂಕಿನ ಇತಿಹಾಸ ಪ್ರಸಿದ್ಧ ಶ್ರೀ ಘಾಟಿ ಸುಬ್ರಹ್ಮಣ್ಯ ಸ್ವಾಮಿ ದೇವಾಲಯದ ಬ್ರಹ್ಮರಥೋತ್ಸವವು ಜನವರಿ 05 ರಂದು ಜರುಗಲಿದೆ. ಇದಕ್ಕೂ ಮುನ್ನ ಡಿ.20ರಿಂದ ದನಗಳ ಜಾತ್ರೆ ಪ್ರಾರಂಭವಾಗಲಿದೆ. ಈಗಾಗಲೇ ಜಾತ್ರೆಗೆ ಬೇಕಾಗಿರುವ ಎಲ್ಲಾ ಸಿದ್ಧತಾ ಕಾರ್ಯಗಳು ಪ್ರಾರಂಭಗೊಂಡಿವೆ.

ಸದ್ಯ ದನಗಳ ಮಾರಾಟ ಮತ್ತು ಪ್ರದರ್ಶನಕ್ಕೆ ಸ್ಥಳಗಳನ್ನು ಗುರುತಿಸಿಕೊಂಡು ದಿಬ್ಬಗಳ ನಿರ್ಮಾಣ ಮತ್ತು ಶೆಡ್ ಗಳು, ಪೆಂಡಲ್ ನಿರ್ಮಾಣ ಕೆಲಸವನ್ನ ರೈತರು ಪ್ರಾರಂಭಿಸಿದ್ದಾರೆ.

ಮುಂಗಾರಿನಲ್ಲಿ ಮಳೆ ಆಶ್ರಯದಲ್ಲಿ ಬೆಳೆಯಲಾಗುವ ಬೆಳೆಗಳ ಕೊಯ್ಲು ಮುಕ್ತಾಯವಾದ ನಂತರ ಪ್ರಥಮ ಬಾರಿಗೆ ನಡೆಯುವ ಘಾಟಿ ಸುಬ್ರಹ್ಮಣ್ಯ ಜಾತ್ರೆಯಲ್ಲಿ ಕೃಷಿ ಕೆಲಸಕ್ಕೆ ಬೇಕಾಗುವ ಹೋರಿಗಳನ್ನು ಖರೀದಿಸಲು ರಾಜ್ಯದ ಬಳ್ಳಾರಿ, ದಾವಣಗೆರೆ, ರಾಯಚೂರು, ಬೀದರ್ ಸೇರಿದಂತೆ ವಿವಿಧ ಜಿಲ್ಲೆಗಳಿಂದ ಮಾತ್ರವಲ್ಲದೆ ಹೊರ ರಾಜ್ಯದ ತಮಿಳುನಾಡಿನ ಸೇಲಂ, ಹೊಸೂರು,ಆಂಧ್ರಪ್ರದೇಶದ ಹಿಂದೂಪುರ,ಅನಂತಪುರ,ಮಹಾರಾಷ್ಟ್ರದ ಕೊಲ್ಲಾಪುರ,ಸಾಂಗ್ಲಿ ಸೇರಿದಂತೆ ವಿವಿಧ ಕಡೆಗಳಿಂದಲು ರೈತರು ಬರುತ್ತಾರೆ.

ದನಗಳ ಜಾತ್ರೆಗೆ ತಮಿಳುನಾಡು, ಆಂಧ್ರ ಹಾಗೂ ರಾಜ್ಯದ ಮೂಲೆ ಮೂಲೆಗಳಿಂದ ಬರುವ ರೈತರಿಗೆ ದೇವಾಲಯದ ವತಿಯಿಂದ ಕುಡಿಯುವ ನೀರು, ವಿದ್ಯುತ್ ಸೌಲಭ್ಯ ಹಾಗೂ ರೈತರಿಗೆ ಬೆಳಗ್ಗೆ ತಿಂಡಿ ಮಧ್ಯಾಹ್ನ ಊಟ ಏರ್ಪಡಿಸಲಾಗುತ್ತದೆ. ಜಾತ್ರೆಗೆ ಬರುವ ಎತ್ತುಗಳಿಗೆ ಯಾವುದೇ ಸುಂಕವಿಲ್ಲ ಎಂದು ಘಾಟಿ ದೇವಾಲಯದ ಆಡಳಿತಾಧಿಕಾರಿ ನಾರಾಯಣಸ್ವಾಮಿ ಹೇಳಿದ್ದಾರೆ.

ರಾಸುಗಳಿಗೆ ಕುಡಿಯುವ ನೀರು, ಮೇವು, ಲಸಿಕೆ, ದನಗಳನ್ನು ಕಟ್ಟಿಹಾಕುವ ಶೆಡ್ ಗಳಿಗೆ ಸಮರ್ಪಕ ವಿದ್ಯುತ್ ಸಂಪರ್ಕ, ರೈತರಿಗೆ ಉಚಿತ ಊಟದ ವ್ಯವಸ್ಥೆ ಕಲ್ಪಿಸಿ ಎಂದು ಸಂಬಂಧಿತ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸೂಚಿಸಿದ್ದಾರೆ.

ಜಾತ್ರೆಯಲ್ಲಿ ಅಮೃತ್ ಮಹಲ್, ಹಳ್ಳಿಕಾರ್ ಸೇರಿದಂತೆ ಸ್ಥಳೀಯ ನಾಟಿ ಹೋರಿಗಳು ಹೆಚ್ಚಿನ ಸಂಖ್ಯೆಯಲ್ಲಿ ಮಾರಾಟಕ್ಕೆ ಬರುತ್ತವೆ. ಹೀಗಾಗಿಯೇ ಹೆಚ್ಚಿನ ಸಂಖ್ಯೆಯಲ್ಲಿ ಹೊರ ಜಿಲ್ಲೆ, ಹೊರ ರಾಜ್ಯದ ರೈತರು ಕೃಷಿ ಕೆಲಸಗಳಿಗೆ ಹೋರಿಗಳ ಖರೀದಿಗೆ ಬರುತ್ತಾರೆ.

Ramesh Babu

Journalist

Recent Posts

ರೈಲಿಗೆ ಸಿಲುಕಿ ಅಪರಿಚಿತ ವ್ಯಕ್ತಿ ಸಾವು: ವಾರಸುದಾರರ ಪತ್ತೆಗೆ ರೈಲ್ವೆ ಪೊಲೀಸರ ಮನವಿ

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ರೈಲ್ವೆ ಪೊಲೀಸ್ ಠಾಣೆ ವ್ಯಾಪ್ತಿಯ ಒಡ್ಡರಹಳ್ಳಿ ಮತ್ತು ಮಾಕಳೀದುರ್ಗ ರೈಲು ನಿಲ್ದಾಣಗಳ ನಡುವಿನ ಮಾಕಳಿ ಗೋಶಾಲೆ ಸಮೀಪದ…

2 hours ago

ಪತ್ನಿಯ ಶೀಲ ಶಂಕಿಸಿ ಗೃಹಿಣಿಯ ಕೊಲೆ: ಪತಿ ಬಂಧನಕ್ಕೆ ಬಲೆ

ಚಿಕ್ಕಬಳ್ಳಾಪುರ: ಪತ್ನಿಯ ಶೀಲದ ಬಗ್ಗೆ ಅನುಮಾನ ಹಾಗೂ ಹಣಕಾಸಿನ ವಿಚಾರಕ್ಕೆ ಸಂಬಂಧಿಸಿದ ಕುಟುಂಬ ಕಲಹದ ಹಿನ್ನೆಲೆಯಲ್ಲಿ ಗೃಹಿಣಿಯನ್ನು ಪತಿಯೇ ಕೊಲೆ…

2 hours ago

ಕೌಟುಂಬಿಕ ಕಲಹ ಡಬಲ್ ಮರ್ಡರ್: ಅಕ್ಕ-ತಂಗಿಯ ಹತ್ಯೆ, ಆರೋಪಿ ಪೊಲೀಸರಿಗೆ ಶರಣು

ಚಿಂತಾಮಣಿ: ಕಳೆದ ಕೆಲವು ದಿನಗಳಿಂದ ನಡೆಯುತ್ತಿದ್ದ ಕೌಟುಂಬಿಕ ಕಲಹ ಕೊನೆಗೆ ಭೀಕರ ತಿರುವು ಪಡೆದು, ವ್ಯಕ್ತಿಯೊಬ್ಬ ತನ್ನ ಪತ್ನಿ ಹಾಗೂ…

2 hours ago

ಪ್ರತಿ ಲೀಟರ್ ಹಾಲಿಗೆ 10‌ ರೂ. ಪ್ರೋತ್ಸಾಹಧನ ಹೆಚ್ಚಳಕ್ಕೆ ಆಗ್ರಹ: ಜು.9ರಂದು ಸಿಎಂಗೆ ಮನವಿ ಸಲ್ಲಿಕೆ

ದೊಡ್ಡಬಳ್ಳಾಪುರ: ಹೈನುಗಾರಿಕೆಗೆ ಅಗತ್ಯವಾದ ಹಿಂಡಿ, ಬೂಸ, ಮೇವು ಸೇರಿದಂತೆ ಕಚ್ಚಾ ವಸ್ತುಗಳ ಬೆಲೆ ನಿರಂತರ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ರೈತರ ಸಂಕಷ್ಟವನ್ನು…

7 hours ago

ಜು.7 ರಂದು ಕೆಲ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ

ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಜು.7 ರಂದು 66/11 ಕೆವಿ ಡಿಕ್ರಾಸ್ ಉಪ ವಿದ್ಯುತ್ ಕೇಂದ್ರದಿಂದ ಹೊರವೊಮ್ಮುವ F15-Tropical Flavours ಮತ್ತು 220/66/11ಕೆವಿ…

13 hours ago

ಬ್ಲಾಕ್‌ಸ್ಪಾಟ್‌ಗಳೀಗ ಸುಂದರ ತಾಣ: ಕಸ ಸುರಿಯುತ್ತಿದ್ದ ಪ್ರದೇಶಗಳಿಗೆ ಸುಣ್ಣ ಬಣ್ಣ ಬಳಿದು ಅಲಂಕಾರ: ಹೊಸ ಪ್ರಯೋಗಕ್ಕೆ ಮುಂದಾದ ನಗರಸಭೆ

ದೊಡ್ಡಬಳ್ಳಾಪುರ ನಗರದ ರಸ್ತೆ ಬದಿ, ಖಾಲಿ ಜಾಗಗಳು ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ಕಸದ ರಾಶಿ ಕಾಣುವುದು ಸಾಮಾನ್ಯ ದೃಶ್ಯವಾಗಿತ್ತು. ಸ್ವಚ್ಛತಾ…

13 hours ago