ಜ.7ರಂದು 5ನೇ ವರ್ಷದ ಶ್ರೀ ಸಿದ್ದಲಿಂಗೇಶ್ವರ ಜಯಂತೋತ್ಸವ

ಜ.7ರ ಭಾನುವಾರದಂದು ವಿವಿಧ ಮಠಗಳ ಮಠಾಧೀಶರನ್ನು ಒಳಗೊಂಡಂತೆ ಶ್ರೀ ಸಿದ್ಧಲಿಂಗ ಮಹಾಸ್ವಾಮಿಗಳ ದಿವ್ಯ ಸಾನಿಧ್ಯದಲ್ಲಿ ನಗರದ ಶ್ರೀ ಕ್ಷೇತ್ರ ದೊಡ್ಡ ಮಠದ 5ನೇ ವರ್ಷದ ಶ್ರೀ ಸಿದ್ಧಲಿಂಗೇಶ್ವರ ಜಯಂತೋತ್ಸವವನ್ನ ಅಯೋಜನೆ ಮಾಡಲಾಗಿದೆ ಎಂದು ದೊಡ್ಡ ಮಠದ ಶ್ರೀ ಸಿದ್ದಲಿಂಗ ಮಹಾಸ್ವಾಮಿಗಳು ತಿಳಿಸಿದರು.

ನಗರದ ದೊಡ್ಡಮಠದ ಆವರಣದಲ್ಲಿ ಆಯೋಜಿಸಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ನಗರದ ಪ್ರಮುಖ ರಸ್ತೆಗಳಲ್ಲಿ ಬೆಳ್ಳಿ ರಥದಲ್ಲಿ ಶ್ರೀ ಸಿದ್ಧಲಿಂಗೇಶ್ವರ ಮಹಾಸ್ವಾಮಿಗಳ ಪ್ರತಿಮೆಯನ್ನು ಮೆರವಣಿಗೆಯ ಮುಖಾಂತರ ಭಗತ್ ಸಿಂಗ್ ಕ್ರೀಡಾಂಗಣ ಸಮೀಪದಲ್ಲಿರುವ ಶ್ರೀ ಕ್ಷೇತ್ರ ದೊಡ್ಡ ಮಠಕ್ಕೆ ಆಗಮಿಸಲಿದೆ. ದೊಡ್ಡಮಠದ ಮರುಳ ಶಂಕರೇಶ್ವರ ಗದ್ದುಗೆ ದೇವಾಲಯಕ್ಕೆ ಬರಮಾಡಿಕೊಂಡು ಧಾರ್ಮಿಕ ಪೂಜಾ ಕಾರ್ಯಗಳನ್ನು ನೆರವೇರಿಸಲಾಗುವುದು ಎಂದರು.

ನಂತರ ಸಿದ್ದಗಂಗಾ ಮಠದ ಶ್ರೀ ಶ್ರೀ ಸಿದ್ದಲಿಂಗ ಮಹಾಸ್ವಾಮಿಗಳ ದಿವ್ಯ ಸಾನಿಧ್ಯದಲ್ಲಿ ಜ್ಞಾನ ದಾಸೋಹ, ನೋಟ್ ಬುಕ್ ವಿತರಣೆ, ಹಾಗೂ ಪ್ರಸಾದ ವಿನಿಯೋಗ ಕಾರ್ಯಕ್ರಮ ನಡೆಯಲಿದೆ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ನಿವೃತ್ತ ಶಿಕ್ಷಕ ಮಹಾಲಿಂಗ್ಯ, ಮುತ್ತಣ್ಣ, ಮೃತ್ಯುಂಜಯ, ಮಂಜುನಾಥ್ ಉಪಸ್ಥಿತರಿದ್ದರು.

Ramesh Babu

Journalist

Recent Posts

ಗೃಹರಕ್ಷಕರ ಹುದ್ದೆಗಳಿಗೆ ಅರ್ಜಿ ಆಹ್ವಾನ

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಖಾಲಿ ಇರುವ 349 ಗೃಹರಕ್ಷಕರ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿಗಳು ಮೇ…

3 hours ago

ಪ್ರಶ್ನೆ ಪತ್ರಿಕೆ ಬಯಲಾಗುತ್ತಲೇ ಇದೆ….

ನೀಟ್ ಪ್ರಶ್ನೆ ಪತ್ರಿಕೆ ಬಯಲು.... ಪ್ರಶ್ನೆ ಪತ್ರಿಕೆ ಬಯಲಾಗುತ್ತಲೇ ಇದೆ. ನನಗೆ ಇದೇನು ದೊಡ್ಡ ಆಶ್ಚರ್ಯವಲ್ಲ. ಇಡೀ ಸಮಾಜದ ನಡೆಯುತ್ತಿರುವುದೇ…

6 hours ago

ಹವಾಮಾನ ವೈಪರಿತ್ಯಕ್ಕೆ ತತ್ತರಿಸಿದ ಕೃಷಿ: ಮಾವು, ದ್ರಾಕ್ಷಿ, ತರಕಾರಿ ಬೆಳೆಗಳಿಗೆ ಭಾರೀ ಹೊಡೆತ

ರಾಜ್ಯದ ಹಲವು ಭಾಗಗಳಲ್ಲಿ ಈ ಬಾರಿ ತೀವ್ರ ಬೇಸಿಗೆ ಮತ್ತು ಮಳೆ ಕೊರತೆಯಿಂದ ಕೃಷಿ ಚಟುವಟಿಕೆಗಳು ಸಂಕಷ್ಟಕ್ಕೆ ಸಿಲುಕಿವೆ. 2026-27ನೇ…

8 hours ago

ಸೈಕಲ್‌ಗೆ ಡಿಕ್ಕಿ ಹೊಡೆದು ನಿಯಂತ್ರಣ ತಪ್ಪಿದ ಬೈಕ್: ಮಹಿಳೆ ಸಾವು

ದೇವನಹಳ್ಳಿ: ರಸ್ತೆಯಲ್ಲಿ ತೆರಳುತ್ತಿದ್ದ ಸೈಕಲ್‌ಗೆ ದ್ವಿಚಕ್ರ ವಾಹನ ಡಿಕ್ಕಿ ಹೊಡೆದು, ಬಳಿಕ ಬೈಕ್ ಡಿವೈಡರ್‌ಗೆ ಅಪ್ಪಳಿಸಿದ ಪರಿಣಾಮ ಮಹಿಳೆಯೊಬ್ಬರು ಮೃತಪಟ್ಟಿರುವ…

19 hours ago

ಬೆಳೆಗಳಿಗೆ ಅಸಮರ್ಪಕ ರಸಗೊಬ್ಬರ ಬಳಕೆ: ಪರಿಸರದ ಮೇಲೆ ವ್ಯತಿರಿಕ್ತ ಪರಿಣಾಮ- ಮಣ್ಣು ವಿಜ್ಞಾನಿ ಡಾ. ಬಾಲಾಜಿ ನಾಯ್ಕ್

ಕೃಷಿ ವಿಜ್ಞಾನ ಕೇಂದ್ರದ ವತಿಯಿಂದ ದೊಡ್ಡಬಳ್ಳಾಪುರ ತಾಲ್ಲೂಕಿನ ಹಾದ್ರಿಪುರ ಗ್ರಾಮದಲ್ಲಿ ಸಮತೋಲಿತ ರಸಗೊಬ್ಬರಗಳ ಬಳಕೆ ಜಾಗೃತಿ ಅಭಿಯಾನ ಕಾರ್ಯಕ್ರಮವನ್ನು ಕೃಷಿ…

23 hours ago

ಬಾಲ್ಯ ವಿವಾಹ ತಡೆದ ಅಧಿಕಾರಿಗಳು: 16 ವರ್ಷದ ಬಾಲಕಿ ರಕ್ಷಣೆ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರದಲ್ಲಿ ನಡೆಯುತ್ತಿದ್ದ ಬಾಲ್ಯ ವಿವಾಹವನ್ನು ಅಧಿಕಾರಿಗಳು ತಡೆದು 16 ವರ್ಷದ ಬಾಲಕಿಯನ್ನು ರಕ್ಷಿಸಿದ ಘಟನೆ ನಡೆದಿದೆ.…

1 day ago