ಜ.7ರ ಭಾನುವಾರದಂದು ವಿವಿಧ ಮಠಗಳ ಮಠಾಧೀಶರನ್ನು ಒಳಗೊಂಡಂತೆ ಶ್ರೀ ಸಿದ್ಧಲಿಂಗ ಮಹಾಸ್ವಾಮಿಗಳ ದಿವ್ಯ ಸಾನಿಧ್ಯದಲ್ಲಿ ನಗರದ ಶ್ರೀ ಕ್ಷೇತ್ರ ದೊಡ್ಡ ಮಠದ 5ನೇ ವರ್ಷದ ಶ್ರೀ ಸಿದ್ಧಲಿಂಗೇಶ್ವರ ಜಯಂತೋತ್ಸವವನ್ನ ಅಯೋಜನೆ ಮಾಡಲಾಗಿದೆ ಎಂದು ದೊಡ್ಡ ಮಠದ ಶ್ರೀ ಸಿದ್ದಲಿಂಗ ಮಹಾಸ್ವಾಮಿಗಳು ತಿಳಿಸಿದರು.
ನಗರದ ದೊಡ್ಡಮಠದ ಆವರಣದಲ್ಲಿ ಆಯೋಜಿಸಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ನಗರದ ಪ್ರಮುಖ ರಸ್ತೆಗಳಲ್ಲಿ ಬೆಳ್ಳಿ ರಥದಲ್ಲಿ ಶ್ರೀ ಸಿದ್ಧಲಿಂಗೇಶ್ವರ ಮಹಾಸ್ವಾಮಿಗಳ ಪ್ರತಿಮೆಯನ್ನು ಮೆರವಣಿಗೆಯ ಮುಖಾಂತರ ಭಗತ್ ಸಿಂಗ್ ಕ್ರೀಡಾಂಗಣ ಸಮೀಪದಲ್ಲಿರುವ ಶ್ರೀ ಕ್ಷೇತ್ರ ದೊಡ್ಡ ಮಠಕ್ಕೆ ಆಗಮಿಸಲಿದೆ. ದೊಡ್ಡಮಠದ ಮರುಳ ಶಂಕರೇಶ್ವರ ಗದ್ದುಗೆ ದೇವಾಲಯಕ್ಕೆ ಬರಮಾಡಿಕೊಂಡು ಧಾರ್ಮಿಕ ಪೂಜಾ ಕಾರ್ಯಗಳನ್ನು ನೆರವೇರಿಸಲಾಗುವುದು ಎಂದರು.
ನಂತರ ಸಿದ್ದಗಂಗಾ ಮಠದ ಶ್ರೀ ಶ್ರೀ ಸಿದ್ದಲಿಂಗ ಮಹಾಸ್ವಾಮಿಗಳ ದಿವ್ಯ ಸಾನಿಧ್ಯದಲ್ಲಿ ಜ್ಞಾನ ದಾಸೋಹ, ನೋಟ್ ಬುಕ್ ವಿತರಣೆ, ಹಾಗೂ ಪ್ರಸಾದ ವಿನಿಯೋಗ ಕಾರ್ಯಕ್ರಮ ನಡೆಯಲಿದೆ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ನಿವೃತ್ತ ಶಿಕ್ಷಕ ಮಹಾಲಿಂಗ್ಯ, ಮುತ್ತಣ್ಣ, ಮೃತ್ಯುಂಜಯ, ಮಂಜುನಾಥ್ ಉಪಸ್ಥಿತರಿದ್ದರು.
ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಎರಡನೇ ಹಂತದಲ್ಲಿ 20 ಮಂದಿ ಶಾಸಕರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು. ಇದೇ…
ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಎರಡನೇ ಪಟ್ಟಿಯಲ್ಲಿ ಸಚಿವ ಸ್ಥಾನ ಪಡೆಯುವ ನಿರೀಕ್ಷೆಯಲ್ಲಿದ್ದ ಹೊಸಕೋಟೆ ಶಾಸಕ ಶರತ್ ಬಚ್ಚೇಗೌಡ…
ಬೆಂಗಳೂರು ಗ್ರಾಮಾಂತರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸರ್ಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಸಾವಿರಾರು ವಿದ್ಯಾರ್ಥಿಗಳ ಶಿಕ್ಷಣಕ್ಕೆ ಆಧಾರ್ ಕಾರ್ಡ್ ದೊಡ್ಡ…
ದೊಡ್ಡಬಳ್ಳಾಪುರ ತಾಲ್ಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಪತ್ತಿನ ಸಹಕಾರ ಸಂಘ (ಎಂ.ಪಿ.ಆರ್.ಎ.ಸಿ.ಎಸ್.)ದ 2026–2031ನೇ ಅವಧಿಯ ಆಡಳಿತ ಮಂಡಳಿ…
ದೊಡ್ಡಬಳ್ಳಾಪುರ: ಆಷಾಢ ಮಾಸದಲ್ಲಿ ಗಾಳಿಪಟ ಹಾರಿಸುವುದು ನಮ್ಮ ಭಾಗದ ಸಾಂಪ್ರದಾಯಿಕ ಆಚರಣೆಯಾಗಿದ್ದು, ಗಾಳಿಪಟವು ಒಂದು ಕಲೆಯಷ್ಟೇ ಅಲ್ಲ ಸಾಹಸದ ಪ್ರವೃತ್ತಿಯೂ…
ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಕರ್ನಾಟಕ ಸಿವಿಲ್ ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿ ಲಿಖಿತ ಪರೀಕ್ಷೆ ಭಾನುವಾರ ಯಾವುದೇ ಅಡಚಣೆ ಅಥವಾ…