Categories: ವಿದೇಶ

ಟರ್ಕಿಯಲ್ಲಿ ಭೀಕರ ಭೂಕಂಪ; ಜನರ ಜೀವ ರಕ್ಷಣೆಗೆ ತೆರಳಿದ NDRF ತಂಡ

ಟರ್ಕಿಯ ಪ್ರಮುಖ ನಗರ ಮತ್ತು ಪ್ರಾಂತೀಯ ರಾಜಧಾನಿಯಾದ ಗಾಜಿಯಾಂಟೆಪ್‌ ಸಮೀಪ 17.9 ಕಿ.ಮೀ. ಆಳದಲ್ಲಿ ಸೋಮವಾರ ಮುಂಜಾನೆ 4.17ರ ಹೊತ್ತಿಗೆ 7.8 ತೀವ್ರತೆಯ ಭೂಕಂಪ ಸಂಭವಿಸಿತ್ತು. ಇದರಿಂದಾಗಿ ಹಲವು ನಗರಗಳಲ್ಲಿ ಕಟ್ಟಡಗಳು ಕುಸಿದಿವೆ. ನೆರೆಯ ದೇಶ ಸಿರಿಯಾದಲ್ಲೂ ತೀವ್ರ ಹಾನಿಯುಂಟಾಗಿದೆ. ಮಧ್ಯಪ್ರಾಚ್ಯ ದೇಶಗಳಾದ ಲೆಬನಾನ್‌, ಸೈಪ್ರಸ್‌, ಇಸ್ರೇಲ್ ಹಾಗೂ ಈಜಿಪ್ಟ್‌ನಲ್ಲಿಯೂ ಭೂಮಿ ಕಂಪಿಸಿತ್ತು.

ಈವರೆಗೆ 120ಕ್ಕೂ ಹೆಚ್ಚು ಸಲ ಭೂಮಿ ಕಂಪಿಸಿರುವುದು ವರದಿಯಾಗಿದೆ.

ದುರಂತದಲ್ಲಿ ಇದುವರೆಗೆ ಸುಮಾರು 4,500ಕ್ಕೂ ಹೆಚ್ಚು ಜನರು ಮೃತಪಟ್ಟಿದ್ದಾರೆ. 20 ಸಾವಿರಕ್ಕೂ ಹೆಚ್ಚು‌ ಜನ ಗಾಯಗೊಂಡಿದ್ದಾರೆ. ಟರ್ಕಿಯಲ್ಲಿ ಈವರೆಗೆ ಸುಮಾರು 3 ಸಾವಿರ ಮಂದಿ ಹಾಗೂ ಸಿರಿಯಾದಲ್ಲಿ 1,500 ಜನರು ಮೃತಪಟ್ಟಿದ್ದಾರೆ ಎಂದು ಉನ್ನತ ಮೂಲಗಳಿಂದ ತಿಳಿದುಬಂದಿದೆ.

ಟರ್ಕಿಯಲ್ಲಿ ಭೀಕರ ಭೂಕಂಪದಿಂದ ಸಾವಿರಾರು ಜನ ಸಾವನ್ನಪ್ಪಿರುವುದು ದುಃಖದ ಸಂಗತಿ. ಟರ್ಕಿಯ ಈ ಕ್ಲಿಷ್ಟ ಪರಿಸ್ಥಿತಿಯ ನಿರ್ವಹಣೆ ಹಾಗೂ ಜನರ ಜೀವದ ರಕ್ಷಣೆಗೆ ಸಹಾಯಕವಾಗಲು ಭಾರತದ ರಾಷ್ಟ್ರೀಯ ವಿಪತ್ತು ನಿರ್ವಹಣಾ ತಂಡ (NDRF)ದ ಸಿಬ್ಬಂದಿ ಹಾಗೂ ಶ್ವಾನದಳವನ್ನು ಹೊತ್ತ ವಾಯುಸೇನೆಯ C-17 ವಿಮಾನ ಸೋಮವಾರ ರಾತ್ರಿ ಟರ್ಕಿಗೆ ತೆರಳಿದೆ.

ಅವಶೇಷಗಳಡಿ ಸಿಲುಕಿರುವವರ ರಕ್ಷಣಾ ಕಾರ್ಯಾಚರಣೆ ಭರದಿಂದ ಸಾಗಿದೆ. ಸಿರಿಯಾ ಹಾಗೂ ಟರ್ಕಿಯ ಗಡಿ ಭಾಗ ಸ್ಮಶಾನಸದೃಶದಂತೆ ಗೋಚರಿಸುತ್ತಿದೆ. ಪ್ರಬಲ ಭೂಕಂಪ‌ ಸಂಭವಿಸಿ ಹಲವು ಗಂಟೆಗಳು ಕಳೆದರೂ ಲಘು ಕಂಪನಗಳು ಸಂಭವಿಸುತ್ತಲೇ ಇವೆ. ಕಟ್ಟಡಗಳು ಕುಸಿಯುತ್ತಿರುವ ದೃಶ್ಯಗಳು ಸಾಮಾನ್ಯವಾಗಿವೆ.

Ramesh Babu

Journalist

Recent Posts

ಕೆ.ಸಿ.ವ್ಯಾಲಿಯಿಂದ ಜಿಲ್ಲೆಯ ರೈತರ ಬದುಕು ಹಸನು- ಕಾಂಗ್ರೆಸ್‌ ಮುಖಂಡ ಜನಪಹಳ್ಳಿ ನವೀನ್‌

ಕೋಲಾರ: ಕೆ.ಸಿ.ವ್ಯಾಲಿ ಯೋಜನೆಯಿಂದ ಅಂತರ್ಜಲ ಹೆಚ್ಚಿ ರೈತರ ಬದುಕು ಹಸನಾಗಿದ್ದು, ಜೆಡಿಎಸ್‌ ಪಕ್ಷ ಸೇರಿದಂತೆ ಕೆಲ ಮುಖಂಡರಿಂದ ದಾರಿ ತಪ್ಪಿಸುವ…

7 hours ago

ಸಾಲುಮರದ ತಿಮ್ಮಕ್ಕ ಅವರಿಗೆ ನುಡಿನಮನ

ದೊಡ್ಡಬಳ್ಳಾಪುರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ಮತ್ತು ಕನ್ನಡ ಜಾಗೃತ ಪರಿಷತ್ತು  ವತಿಯಿಂದ ಪದ್ಮಶ್ರೀ ಸಾಲುಮರದ ತಿಮ್ಮಕ್ಕ ಅವರಿಗೆ ನುಡಿನಮನ…

8 hours ago

ಆಲಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠ ಶಾಲೆಯ ಸಹ ಶಿಕ್ಷಕ ಅರುಣ್ ಅವರು ವರ್ಗಾವಣೆ: ಮಕ್ಕಳು, ಶಿಕ್ಷಕ ಭಾವುಕ

ಆಲಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠ ಶಾಲೆಯ ಸಹ ಶಿಕ್ಷಕ ಅರುಣ್ ಅವರು ವರ್ಗಾವಣೆಗೊಂಡಿದ್ದು, ಈ ಹಿನ್ನೆಲೆ ಇಂದು ಎಸ್…

10 hours ago

ಬಿಜೆಪಿ-ಜೆಡಿಎಸ್ ಸಂಸದರು ರಾಜ್ಯಕ್ಕೆ ಕೇಂದ್ರದಿಂದ ಆಗುತ್ತಿರುವ ಅನ್ಯಾಯದ ಬಗ್ಗೆ ಬಾಯಿಯನ್ನೇ ಬಿಡುತ್ತಿಲ್ಲ- ಸಿಎಂ ಸಿದ್ದರಾಮಯ್ಯ

ಬಿಜೆಪಿ-ಜೆಡಿಎಸ್ ಸಂಸದರು ರಾಜ್ಯಕ್ಕೆ ಕೇಂದ್ರದಿಂದ ಆಗುತ್ತಿರುವ ಅನ್ಯಾಯದ ಬಗ್ಗೆ ಬಾಯಿಯನ್ನೇ ಬಿಡುತ್ತಿಲ್ಲ.‌ ಪ್ರಹ್ಲಾದ್ ಜೋಶಿ ಕೂಡ ಒಂದೇ ಒಂದು ದಿನ…

18 hours ago

ಚುನಾವಣಾ ಫಲಿತಾಂಶದ ವಿಶ್ಲೇಷಣೆ…..

ಗೆದ್ದವರಿಗೆ ಅಭಿನಂದಿಸುತ್ತಾ, ಸೋತವರಿಗೆ ಸಾಂತ್ವನ ಹೇಳುತ್ತಾ, ಮತದಾರರಿಗೆ ಧನ್ಯವಾದಗಳನ್ನು ಅರ್ಪಿಸುತ್ತಾ, ಸಂವಿಧಾನಕ್ಕೆ ಸಲಾಂ ಹೊಡೆಯುತ್ತಾ, ನಮ್ಮ ಮುಗ್ದತೆ ಮತ್ತು ಮೂರ್ಖತನ…

20 hours ago

ಡಿ.13ರಂದು ರಾಷ್ಟ್ರೀಯ ಲೋಕ ಅದಾಲತ್: ರಾಜೀಯಾಗುವ ಪ್ರಕರಣಗಳ ವಿಲೇವಾರಿಗೊಳಿಸಲು ಸಭೆ

ಡಿ.13ರಂದು ರಾಷ್ಟ್ರೀಯ ಲೋಕ ಅದಾಲತ್ ನಡೆಯಲಿದ್ದು, ರಾಷ್ಟ್ರೀಯ ಲೋಕ ಅದಾಲತ್ ಮುಖೇನ ರಾಜೀಯಾಗುವ ಪ್ರಕರಣಗಳ ವಿಲೇವಾರಿಗೊಳಿಸುವಂತೆ ಕರ್ನಾಟಕ ರಾಜ್ಯ ಕಾನೂನು…

1 day ago