Categories: ವಿದೇಶ

ಟರ್ಕಿಯಲ್ಲಿ ಭೀಕರ ಭೂಕಂಪ; ಜನರ ಜೀವ ರಕ್ಷಣೆಗೆ ತೆರಳಿದ NDRF ತಂಡ

ಟರ್ಕಿಯ ಪ್ರಮುಖ ನಗರ ಮತ್ತು ಪ್ರಾಂತೀಯ ರಾಜಧಾನಿಯಾದ ಗಾಜಿಯಾಂಟೆಪ್‌ ಸಮೀಪ 17.9 ಕಿ.ಮೀ. ಆಳದಲ್ಲಿ ಸೋಮವಾರ ಮುಂಜಾನೆ 4.17ರ ಹೊತ್ತಿಗೆ 7.8 ತೀವ್ರತೆಯ ಭೂಕಂಪ ಸಂಭವಿಸಿತ್ತು. ಇದರಿಂದಾಗಿ ಹಲವು ನಗರಗಳಲ್ಲಿ ಕಟ್ಟಡಗಳು ಕುಸಿದಿವೆ. ನೆರೆಯ ದೇಶ ಸಿರಿಯಾದಲ್ಲೂ ತೀವ್ರ ಹಾನಿಯುಂಟಾಗಿದೆ. ಮಧ್ಯಪ್ರಾಚ್ಯ ದೇಶಗಳಾದ ಲೆಬನಾನ್‌, ಸೈಪ್ರಸ್‌, ಇಸ್ರೇಲ್ ಹಾಗೂ ಈಜಿಪ್ಟ್‌ನಲ್ಲಿಯೂ ಭೂಮಿ ಕಂಪಿಸಿತ್ತು.

ಈವರೆಗೆ 120ಕ್ಕೂ ಹೆಚ್ಚು ಸಲ ಭೂಮಿ ಕಂಪಿಸಿರುವುದು ವರದಿಯಾಗಿದೆ.

ದುರಂತದಲ್ಲಿ ಇದುವರೆಗೆ ಸುಮಾರು 4,500ಕ್ಕೂ ಹೆಚ್ಚು ಜನರು ಮೃತಪಟ್ಟಿದ್ದಾರೆ. 20 ಸಾವಿರಕ್ಕೂ ಹೆಚ್ಚು‌ ಜನ ಗಾಯಗೊಂಡಿದ್ದಾರೆ. ಟರ್ಕಿಯಲ್ಲಿ ಈವರೆಗೆ ಸುಮಾರು 3 ಸಾವಿರ ಮಂದಿ ಹಾಗೂ ಸಿರಿಯಾದಲ್ಲಿ 1,500 ಜನರು ಮೃತಪಟ್ಟಿದ್ದಾರೆ ಎಂದು ಉನ್ನತ ಮೂಲಗಳಿಂದ ತಿಳಿದುಬಂದಿದೆ.

ಟರ್ಕಿಯಲ್ಲಿ ಭೀಕರ ಭೂಕಂಪದಿಂದ ಸಾವಿರಾರು ಜನ ಸಾವನ್ನಪ್ಪಿರುವುದು ದುಃಖದ ಸಂಗತಿ. ಟರ್ಕಿಯ ಈ ಕ್ಲಿಷ್ಟ ಪರಿಸ್ಥಿತಿಯ ನಿರ್ವಹಣೆ ಹಾಗೂ ಜನರ ಜೀವದ ರಕ್ಷಣೆಗೆ ಸಹಾಯಕವಾಗಲು ಭಾರತದ ರಾಷ್ಟ್ರೀಯ ವಿಪತ್ತು ನಿರ್ವಹಣಾ ತಂಡ (NDRF)ದ ಸಿಬ್ಬಂದಿ ಹಾಗೂ ಶ್ವಾನದಳವನ್ನು ಹೊತ್ತ ವಾಯುಸೇನೆಯ C-17 ವಿಮಾನ ಸೋಮವಾರ ರಾತ್ರಿ ಟರ್ಕಿಗೆ ತೆರಳಿದೆ.

ಅವಶೇಷಗಳಡಿ ಸಿಲುಕಿರುವವರ ರಕ್ಷಣಾ ಕಾರ್ಯಾಚರಣೆ ಭರದಿಂದ ಸಾಗಿದೆ. ಸಿರಿಯಾ ಹಾಗೂ ಟರ್ಕಿಯ ಗಡಿ ಭಾಗ ಸ್ಮಶಾನಸದೃಶದಂತೆ ಗೋಚರಿಸುತ್ತಿದೆ. ಪ್ರಬಲ ಭೂಕಂಪ‌ ಸಂಭವಿಸಿ ಹಲವು ಗಂಟೆಗಳು ಕಳೆದರೂ ಲಘು ಕಂಪನಗಳು ಸಂಭವಿಸುತ್ತಲೇ ಇವೆ. ಕಟ್ಟಡಗಳು ಕುಸಿಯುತ್ತಿರುವ ದೃಶ್ಯಗಳು ಸಾಮಾನ್ಯವಾಗಿವೆ.

Ramesh Babu

Journalist

Recent Posts

ಮದುವೆಗೆ ಹೆಣ್ಣು ಸಿಗದಿದ್ದಕ್ಕೆ ಒಂದೇ ದಿನ ಇಬ್ಬರು ಯುವಕರು ಆತ್ಮಹತ್ಯೆ….!

ಮದುವೆ ಮಾಡಿಕೊಳ್ಳಲು ಹೆಣ್ಣು ಸಿಗುತ್ತಿಲ್ಲವೆಂದು ಮನನೊಂದು ಒಂದೇ ದಿನ ರಾಜ್ಯದ ಇಬ್ಬರು ಯುವಕರು ಆತ್ಮಹತ್ಯೆಗೆ ಶರಣಾಗಿರುವ ದಾರುಣ ಘಟನೆಗಳು ಚಿಕ್ಕಮಗಳೂರು…

4 hours ago

ದೇವರ ಆಶೀರ್ವಾದದಿಂದಲೇ ಎರಡು ಬಾರಿ ಸಿಎಂ ಆಗಿದ್ದೇನೆ- ಸಿಎಂ ಸಿದ್ದರಾಮಯ್ಯ

ನಮ್ಮ ಮನೆ ದೇವರಾದ ರಾಮೇಶ್ವರ–ಸಿದ್ದೇಶ್ವರ ಸ್ವಾಮಿಗಳ ಆಶೀರ್ವಾದದಿಂದಲೇ ರಾಜ್ಯದಲ್ಲಿ ಎರಡು ಬಾರಿ ಮುಖ್ಯಮಂತ್ರಿಯಾಗಿ ಹಾಗೂ ಎರಡು ಬಾರಿ ವಿಪಕ್ಷ ನಾಯಕನಾಗಿ…

4 hours ago

ತೂಬಗೆರೆಯಲ್ಲಿಂದು ಉಚಿತ ಆರೋಗ್ಯ ತಪಾಸಣಾ ಶಿಬಿರ ಮತ್ತು ರಕ್ತದಾನ ಶಿಬಿರ: ಗ್ರಾಮೀಣ ಜನರ ಆರೋಗ್ಯ ಬಹಳ ಮುಖ್ಯ- ಡಾ. ಜ್ಞಾನೇಶ್ವರಿ

ಉಚಿತ ಆರೋಗ್ಯ ತಪಾಸಣಾ ಶಿಬಿರ ಮತ್ತು ರಕ್ತದಾನ ಶಿಬಿರ ಅತ್ಯಂತ ಅವಶ್ಯಕ. ಇಂತಹ ಶಿಬಿರಗಳು ಕಾಲಕಾಲಕ್ಕೆ ಗ್ರಾಮೀಣ ಭಾಗಗಳಲ್ಲಿ ನಡೆಯುತ್ತಲೇ…

5 hours ago

ಜಾತ್ರೆಯಲ್ಲಿ ವ್ಯಕ್ತಿಯ ಭೀಕರ ಕೊಲೆ

ಜಾತ್ರೆಯೊಂದರಲ್ಲಿ ವ್ಯಕ್ತಿಯ ಭೀಕರ ಕೊಲೆಯಾಗಿರುವ ಘಟನೆ ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ಹಣ್ಣಿಕೇರಿ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಸಂಗನಗೌಡ ಪಾಟೀಲ್…

12 hours ago

ಲಾರಿ-ಕಾರು ಮುಖಾಮುಖಿ ಡಿಕ್ಕಿ: ಸ್ಥಳದಲ್ಲೇ ಇಬ್ಬರು ಸಾವು

ಲಾರಿ-ಕಾರು ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ ಇಬ್ಬರು ಸಾವನ್ನಪ್ಪಿರುವ ಘಟನೆ ಚಿತ್ರದುರ್ಗ ಜಿಲ್ಲೆ ಮೊಳಕಾಲ್ಮೂರು ತಾಲ್ಲೂಕು ರಾಜಾಪುರ ಬಳಿ ನಡೆದಿದೆ. ಬೆಂಗಳೂರು…

13 hours ago

ಹಸಿವಿನ ಔಷಧಿ ಮತ್ತು ಮತದಾನ…..

ಇತ್ತೀಚೆಗೆ Social Media ಗಳಲ್ಲಿ ಅತ್ಯಂತ ಗಮನಸೆಳೆದ ಮನಮಿಡಿಯುವ ಚಿತ್ರ...... ಒಬ್ಬ ಬಾಲಕ ಡಾಕ್ಟರ್ ಬಳಿ " ಹಸಿವು ಹೋಗಲಾಡಿಸಲು…

16 hours ago