Categories: ವಿದೇಶ

ಟರ್ಕಿಯಲ್ಲಿ ಭೀಕರ ಭೂಕಂಪ; ಜನರ ಜೀವ ರಕ್ಷಣೆಗೆ ತೆರಳಿದ NDRF ತಂಡ

ಟರ್ಕಿಯ ಪ್ರಮುಖ ನಗರ ಮತ್ತು ಪ್ರಾಂತೀಯ ರಾಜಧಾನಿಯಾದ ಗಾಜಿಯಾಂಟೆಪ್‌ ಸಮೀಪ 17.9 ಕಿ.ಮೀ. ಆಳದಲ್ಲಿ ಸೋಮವಾರ ಮುಂಜಾನೆ 4.17ರ ಹೊತ್ತಿಗೆ 7.8 ತೀವ್ರತೆಯ ಭೂಕಂಪ ಸಂಭವಿಸಿತ್ತು. ಇದರಿಂದಾಗಿ ಹಲವು ನಗರಗಳಲ್ಲಿ ಕಟ್ಟಡಗಳು ಕುಸಿದಿವೆ. ನೆರೆಯ ದೇಶ ಸಿರಿಯಾದಲ್ಲೂ ತೀವ್ರ ಹಾನಿಯುಂಟಾಗಿದೆ. ಮಧ್ಯಪ್ರಾಚ್ಯ ದೇಶಗಳಾದ ಲೆಬನಾನ್‌, ಸೈಪ್ರಸ್‌, ಇಸ್ರೇಲ್ ಹಾಗೂ ಈಜಿಪ್ಟ್‌ನಲ್ಲಿಯೂ ಭೂಮಿ ಕಂಪಿಸಿತ್ತು.

ಈವರೆಗೆ 120ಕ್ಕೂ ಹೆಚ್ಚು ಸಲ ಭೂಮಿ ಕಂಪಿಸಿರುವುದು ವರದಿಯಾಗಿದೆ.

ದುರಂತದಲ್ಲಿ ಇದುವರೆಗೆ ಸುಮಾರು 4,500ಕ್ಕೂ ಹೆಚ್ಚು ಜನರು ಮೃತಪಟ್ಟಿದ್ದಾರೆ. 20 ಸಾವಿರಕ್ಕೂ ಹೆಚ್ಚು‌ ಜನ ಗಾಯಗೊಂಡಿದ್ದಾರೆ. ಟರ್ಕಿಯಲ್ಲಿ ಈವರೆಗೆ ಸುಮಾರು 3 ಸಾವಿರ ಮಂದಿ ಹಾಗೂ ಸಿರಿಯಾದಲ್ಲಿ 1,500 ಜನರು ಮೃತಪಟ್ಟಿದ್ದಾರೆ ಎಂದು ಉನ್ನತ ಮೂಲಗಳಿಂದ ತಿಳಿದುಬಂದಿದೆ.

ಟರ್ಕಿಯಲ್ಲಿ ಭೀಕರ ಭೂಕಂಪದಿಂದ ಸಾವಿರಾರು ಜನ ಸಾವನ್ನಪ್ಪಿರುವುದು ದುಃಖದ ಸಂಗತಿ. ಟರ್ಕಿಯ ಈ ಕ್ಲಿಷ್ಟ ಪರಿಸ್ಥಿತಿಯ ನಿರ್ವಹಣೆ ಹಾಗೂ ಜನರ ಜೀವದ ರಕ್ಷಣೆಗೆ ಸಹಾಯಕವಾಗಲು ಭಾರತದ ರಾಷ್ಟ್ರೀಯ ವಿಪತ್ತು ನಿರ್ವಹಣಾ ತಂಡ (NDRF)ದ ಸಿಬ್ಬಂದಿ ಹಾಗೂ ಶ್ವಾನದಳವನ್ನು ಹೊತ್ತ ವಾಯುಸೇನೆಯ C-17 ವಿಮಾನ ಸೋಮವಾರ ರಾತ್ರಿ ಟರ್ಕಿಗೆ ತೆರಳಿದೆ.

ಅವಶೇಷಗಳಡಿ ಸಿಲುಕಿರುವವರ ರಕ್ಷಣಾ ಕಾರ್ಯಾಚರಣೆ ಭರದಿಂದ ಸಾಗಿದೆ. ಸಿರಿಯಾ ಹಾಗೂ ಟರ್ಕಿಯ ಗಡಿ ಭಾಗ ಸ್ಮಶಾನಸದೃಶದಂತೆ ಗೋಚರಿಸುತ್ತಿದೆ. ಪ್ರಬಲ ಭೂಕಂಪ‌ ಸಂಭವಿಸಿ ಹಲವು ಗಂಟೆಗಳು ಕಳೆದರೂ ಲಘು ಕಂಪನಗಳು ಸಂಭವಿಸುತ್ತಲೇ ಇವೆ. ಕಟ್ಟಡಗಳು ಕುಸಿಯುತ್ತಿರುವ ದೃಶ್ಯಗಳು ಸಾಮಾನ್ಯವಾಗಿವೆ.

Ramesh Babu

Journalist

Recent Posts

ಹಣ ಕೇಂದ್ರೀಕೃತ ಸಮಾಜಕ್ಕೆ ಬದಲಾಗಿ ಮನುಷ್ಯತ್ವ ಕೇಂದ್ರಿತ ಸಮಾಜ ನಿರ್ಮಾಣವಾಗಲಿ…..

ಬದಲಾವಣೆ......... ರೋಗಗಳ ಆವಾಸಸ್ಥಾನವಾಗುತ್ತಿರುವ ಆಸ್ಪತ್ರೆಗಳು...... ರೋಗಿಗಳ ತವರುಮನೆಯಂತಾಗುತ್ತಿರುವ ಮೆಡಿಕಲ್ ಲ್ಯಾಬೋರೇಟರಿಗಳು..... ಅನಾಗರಿಕ ಸಮಾಜ ನಿರ್ಮಾಣಕ್ಕೆ ಕಾರಣವಾಗುತ್ತಿರುವ ಶಿಕ್ಷಣ ಸಂಸ್ಥೆಗಳು........ ಭ್ರಷ್ಟಾಚಾರದ…

3 hours ago

ವಿದೇಶದಲ್ಲಿ ಡೆವಿಲ್ ಸಿನಿಮಾ ಶೂಟಿಂಗ್ ಮುಗಿಸಿಕೊಂಡು ಬೆಂಗಳೂರಿಗೆ ವಾಪಸ್ ಆದ ನಟ ದರ್ಶನ್

ನಟ ದರ್ಶನ್ ವಿದೇಶದಲ್ಲಿ ಡೆವಿಲ್ ಸಿನಿಮಾ ಶೂಟಿಂಗ್ ಮುಗಿಸಿಕೊಂಡು ಬೆಂಗಳೂರಿಗೆ ವಾಪಸ್ ಆಗಿದ್ದಾರೆ. ಥಾಯ್ಲೆಂಡ್ ನಿಂದ ತಡ ರಾತ್ರಿ 11:45…

3 hours ago

ಭೀಮನ ಅಮವಾಸ್ಯೆ ದಿನದಂದು ಪತಿ ಕಾಲಿಗೆ ಪೂಜೆ ಮಾಡಿದ್ದ ಪತ್ನಿ ರಾತ್ರಿ ಅನುಮಾನಾಸ್ಪದ ರೀತಿಯಲ್ಲಿ ಸಾವು

ನಿನ್ನೆ(ಜು.24 ಗುರುವಾರ) ಭೀಮನ ಅಮವಾಸ್ಯೆ ಹಿನ್ನೆಲೆ ಪತಿ ಕಾಲಿಗೆ ಪೂಜೆ ಮಾಡಿದ್ದ ಪತ್ನಿ ರಾತ್ರಿ ಅನುಮಾನಾಸ್ಪದ ರೀತಿಯಲ್ಲಿ ಸಾವನ್ನಪ್ಪಿರುವ ಘಟನೆ…

14 hours ago

ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆಯಡಿ ರೈತರು ಬೆಳೆ ವಿಮೆಗೆ ನೊಂದಾಯಿಸಿ

ಜಿಲ್ಲೆಯಲ್ಲಿ ಪ್ರಕೃತಿ ವಿಕೋಪಗಳಿಂದ ಬೆಳೆ ನಷ್ಟ ಸಂಭವಿಸಿದರೆ ರೈತರಿಗೆ ಪರಿಹಾರ ನೀಡುವ ಮೂಲಕ ಆರ್ಥಿಕ ಭದ್ರತೆ ಒದಗಿಸುವ ಉದ್ದೇಶದಿಂದ ಪ್ರಧಾನ…

15 hours ago

ಜಿಲ್ಲಾ ಕೌಶಲ್ಯಾಭಿವೃದ್ಧಿ ಇಲಾಖೆಯ ಸಹಯೋಗದಿಂದ ವಿವಿಧ ಹುದ್ದೆಗಳಿಗೆ ನೇರ ಸಂದರ್ಶನ

ಜಿಲ್ಲಾ ಕೌಶಲ್ಯಾಭಿವೃದ್ಧಿ ಇಲಾಖೆ ಮಾನವ ಸಂಪನ್ಮೂಲ ಅಭಿವೃದ್ಧಿ ಕೇಂದ್ರ ಕೋಲಾರ ಇವರ ಸಹಯೋಗದಲ್ಲಿ ರೇಮಂಡ್ ಕಂಪನಿ ಸಮೂಹದ ಸಿಲ್ವರ್ ಸ್ಪಾರ್ಕ್…

15 hours ago

ಪ್ರತಿ ತಿಂಗಳ ಮೊದಲನೇ ಹಾಗೂ ಮೂರನೇ ಶನಿವಾರ ಜನಸ್ಪಂದನ ಕಾರ್ಯಕ್ರಮ- ಜಿಲ್ಲಾಧಿಕಾರಿ ಎ.ಬಿ ಬಸವರಾಜು

ಪ್ರತಿ ತಿಂಗಳ ಮೊದಲನೇ ಶನಿವಾರ ತಾಲೂಕು ಮಟ್ಟದ ಜನಸ್ಪಂದನ ಕಾರ್ಯಕ್ರಮವನ್ನು ಸ್ಥಳೀಯ ಶಾಸಕರ ಅಧ್ಯಕ್ಷತೆಯಲ್ಲಿ ಹಾಗೂ ಪ್ರತಿ ತಿಂಗಳ ಮೂರನೇ…

15 hours ago