Categories: ವಿದೇಶ

ಟರ್ಕಿಯಲ್ಲಿ ಭೀಕರ ಭೂಕಂಪ; ಜನರ ಜೀವ ರಕ್ಷಣೆಗೆ ತೆರಳಿದ NDRF ತಂಡ

ಟರ್ಕಿಯ ಪ್ರಮುಖ ನಗರ ಮತ್ತು ಪ್ರಾಂತೀಯ ರಾಜಧಾನಿಯಾದ ಗಾಜಿಯಾಂಟೆಪ್‌ ಸಮೀಪ 17.9 ಕಿ.ಮೀ. ಆಳದಲ್ಲಿ ಸೋಮವಾರ ಮುಂಜಾನೆ 4.17ರ ಹೊತ್ತಿಗೆ 7.8 ತೀವ್ರತೆಯ ಭೂಕಂಪ ಸಂಭವಿಸಿತ್ತು. ಇದರಿಂದಾಗಿ ಹಲವು ನಗರಗಳಲ್ಲಿ ಕಟ್ಟಡಗಳು ಕುಸಿದಿವೆ. ನೆರೆಯ ದೇಶ ಸಿರಿಯಾದಲ್ಲೂ ತೀವ್ರ ಹಾನಿಯುಂಟಾಗಿದೆ. ಮಧ್ಯಪ್ರಾಚ್ಯ ದೇಶಗಳಾದ ಲೆಬನಾನ್‌, ಸೈಪ್ರಸ್‌, ಇಸ್ರೇಲ್ ಹಾಗೂ ಈಜಿಪ್ಟ್‌ನಲ್ಲಿಯೂ ಭೂಮಿ ಕಂಪಿಸಿತ್ತು.

ಈವರೆಗೆ 120ಕ್ಕೂ ಹೆಚ್ಚು ಸಲ ಭೂಮಿ ಕಂಪಿಸಿರುವುದು ವರದಿಯಾಗಿದೆ.

ದುರಂತದಲ್ಲಿ ಇದುವರೆಗೆ ಸುಮಾರು 4,500ಕ್ಕೂ ಹೆಚ್ಚು ಜನರು ಮೃತಪಟ್ಟಿದ್ದಾರೆ. 20 ಸಾವಿರಕ್ಕೂ ಹೆಚ್ಚು‌ ಜನ ಗಾಯಗೊಂಡಿದ್ದಾರೆ. ಟರ್ಕಿಯಲ್ಲಿ ಈವರೆಗೆ ಸುಮಾರು 3 ಸಾವಿರ ಮಂದಿ ಹಾಗೂ ಸಿರಿಯಾದಲ್ಲಿ 1,500 ಜನರು ಮೃತಪಟ್ಟಿದ್ದಾರೆ ಎಂದು ಉನ್ನತ ಮೂಲಗಳಿಂದ ತಿಳಿದುಬಂದಿದೆ.

ಟರ್ಕಿಯಲ್ಲಿ ಭೀಕರ ಭೂಕಂಪದಿಂದ ಸಾವಿರಾರು ಜನ ಸಾವನ್ನಪ್ಪಿರುವುದು ದುಃಖದ ಸಂಗತಿ. ಟರ್ಕಿಯ ಈ ಕ್ಲಿಷ್ಟ ಪರಿಸ್ಥಿತಿಯ ನಿರ್ವಹಣೆ ಹಾಗೂ ಜನರ ಜೀವದ ರಕ್ಷಣೆಗೆ ಸಹಾಯಕವಾಗಲು ಭಾರತದ ರಾಷ್ಟ್ರೀಯ ವಿಪತ್ತು ನಿರ್ವಹಣಾ ತಂಡ (NDRF)ದ ಸಿಬ್ಬಂದಿ ಹಾಗೂ ಶ್ವಾನದಳವನ್ನು ಹೊತ್ತ ವಾಯುಸೇನೆಯ C-17 ವಿಮಾನ ಸೋಮವಾರ ರಾತ್ರಿ ಟರ್ಕಿಗೆ ತೆರಳಿದೆ.

ಅವಶೇಷಗಳಡಿ ಸಿಲುಕಿರುವವರ ರಕ್ಷಣಾ ಕಾರ್ಯಾಚರಣೆ ಭರದಿಂದ ಸಾಗಿದೆ. ಸಿರಿಯಾ ಹಾಗೂ ಟರ್ಕಿಯ ಗಡಿ ಭಾಗ ಸ್ಮಶಾನಸದೃಶದಂತೆ ಗೋಚರಿಸುತ್ತಿದೆ. ಪ್ರಬಲ ಭೂಕಂಪ‌ ಸಂಭವಿಸಿ ಹಲವು ಗಂಟೆಗಳು ಕಳೆದರೂ ಲಘು ಕಂಪನಗಳು ಸಂಭವಿಸುತ್ತಲೇ ಇವೆ. ಕಟ್ಟಡಗಳು ಕುಸಿಯುತ್ತಿರುವ ದೃಶ್ಯಗಳು ಸಾಮಾನ್ಯವಾಗಿವೆ.

Ramesh Babu

Journalist

Recent Posts

ಗುರುಭವನದಲ್ಲಿ ಅದ್ಧೂರಿ ವಿಶ್ವ ಮಹಿಳಾ ದಿನಾಚರಣೆ

ಸೇವೆಗಾಗಿ ಬಾಳು ಭಾರತ ಸೇವಾದಳ ಬೆಂಗಳೂರು ಗ್ರಾಮಾಂತರ ಜಿಲ್ಲೆ, ಭಾರತ ಸೇವಾದಳ ದೇವನಹಳ್ಳಿ ತಾಲೂಕು ಘಟಕ, ಕರ್ನಾಟಕ ರಾಜ್ಯ ಪ್ರಾಥಮಿಕ…

8 hours ago

ಭೂದಾಖಲೆಗಳ ತಿದ್ದುಪಡಿಗಾಗಿ ಸಾರ್ವಜನಿಕರಿಂದ ಲಂಚಕ್ಕೆ ಬೇಡಿಕೆ: ಲೋಕಾ ಬಲೆಗೆ ಬಿದ್ದ ಭ್ರಷ್ಟ ಗ್ರಾಮ ಆಡಳಿತಾಧಿಕಾರಿ

ಭೂದಾಖಲೆಗಳ ತಿದ್ದುಪಡಿಗಾಗಿ ಸಾರ್ವಜನಿಕರಿಂದ ಹಣಕ್ಕೆ ಬೇಡಿಕೆಯಿಟ್ಟಿದ್ದ ಗ್ರಾಮ ಆಡಳಿತಾಧಿಕಾರಿಯೊಬ್ಬರು ಲೋಕಾಯುಕ್ತ ಪೊಲೀಸರ ಕಾರ್ಯಾಚರಣೆಯಲ್ಲಿ ಸಿಕ್ಕಿಬಿದ್ದಿದ್ದಾರೆ. ಉತ್ತರ ಕನ್ನಡ ಜಿಲ್ಲೆಯ ಜೋಯಿಡಾ…

9 hours ago

ಯುಗಾದಿ ಸಮಯದಲ್ಲಿ ಮತ್ತೆ ಚಿಗುರಿದ ಪ್ರೀತಿ: ವಿಚ್ಚೇದನಕ್ಕೆ ಅರ್ಜಿ ಸಲ್ಲಿಸಿದ್ದವರು ಕಟೆಕಟೆಯಲ್ಲಿ ಒಂದಾದರು: ಒಂದಾದ ದಂಪತಿಗೆ ಪ್ರೀತಿಯ ಪಾಠ ಹೇಳಿದ ನ್ಯಾಯಾಧೀಶರು

ಸಣ್ಣಪುಟ್ಟ ಜಗಳಗಳಿಂದ ಕೋರ್ಟಿನ ಮೆಟ್ಟಿಲೇರಿ ದೂರಾವಾಗಲು ನಿರ್ಧರಿಸಿದ್ದ ನಾಲ್ವರು ದಂಪತಿಗಳನ್ನು ಶನಿವಾರ ನಡೆದ ಲೋಕಾಅದಾಲತ್ ನಲ್ಲಿ ನ್ಯಾಯಾಧೀಶರುಗಳು ಹೇಳಿದ ಬುದ್ಧಿಮಾತಿನಿಂದ…

11 hours ago

ವಾರದೊಳಗೆ ಸಹಜ ಸ್ಥಿತಿಗೆ ಗ್ಯಾಸ್ ಸಿಲಿಂಡರ್ ಪೂರೈಕೆ- ಆಹಾರ ಸಚಿವ ಕೆ.ಎಚ್ ಮುನಿಯಪ್ಪ

ಕೊಲ್ಲಿ ದೇಶಗಳಲ್ಲಿ ಯುದ್ಧದ ಪರಿಸ್ಥಿತಿ ಹಿನ್ನೆಲೆಯಲ್ಲಿ ಉಂಟಾದ ಗೃಹ ಬಳಕೆ ಹಾಗೂ ವಾಣಿಜ್ಯ ಬಳಕೆ ಗ್ಯಾಸ್ ಸಿಲಿಂಡರ್ ಗಳ ಪೂರೈಕೆ…

12 hours ago

“ಗೃಹಬಳಕೆ ಸಿಲಿಂಡರ್ ವಾಣಿಜ್ಯ ಉದ್ದೇಶಕ್ಕಾಗಿ ಬಳಸಿದ್ದಲ್ಲಿ ಸೂಕ್ತ ಕಾನೂನು ಕ್ರಮ”

ಗೃಹಬಳಕೆ ಸಿಲಿಂಡರ್ ಅನ್ನು ವಾಣಿಜ್ಯ ಉದ್ದೇಶಕ್ಕಾಗಿ ಬಳಸಿದ್ದಲ್ಲಿ ಸೂಕ್ತ ಕಾನೂನುಕ್ರಮ ಕೈಗೊಳ್ಳಲು ಆಹಾರ ಸಚಿವರು ಸೂಚಿಸಿದ್ದು, ಅದರಂತೆ ಗೃಹ ಬಳಕೆ…

12 hours ago

ವಾಣಿಜ್ಯ ಗ್ಯಾಸ್ ಸಿಲಿಂಡರ್ ಸಮಸ್ಯೆ: ಆಹಾರ ಸಚಿವ ಕೆ.ಎಚ್.ಮುನಿಯಪ್ಪ ಏನಂದ್ರು ಗೊತ್ತಾ….?

ವಾಣಿಜ್ಯ ಗ್ಯಾಸ್ ಸಿಲಿಂಡರ್ ಸಮಸ್ಯೆ ಹಿನ್ನೆಲೆ ಆಹಾರ ಸಚಿವ ಕೆ.ಎಚ್.ಮುನಿಯಪ್ಪ ಪ್ರತಿಕ್ರಿಯೆ. ಈ ಸಮಸ್ಯೆ ಇನ್ನು ಒಂದು ವಾರಗಳ ಕಾಲ…

14 hours ago