Categories: ವಿದೇಶ

ಟರ್ಕಿಯಲ್ಲಿ ಭೀಕರ ಭೂಕಂಪ; ಜನರ ಜೀವ ರಕ್ಷಣೆಗೆ ತೆರಳಿದ NDRF ತಂಡ

ಟರ್ಕಿಯ ಪ್ರಮುಖ ನಗರ ಮತ್ತು ಪ್ರಾಂತೀಯ ರಾಜಧಾನಿಯಾದ ಗಾಜಿಯಾಂಟೆಪ್‌ ಸಮೀಪ 17.9 ಕಿ.ಮೀ. ಆಳದಲ್ಲಿ ಸೋಮವಾರ ಮುಂಜಾನೆ 4.17ರ ಹೊತ್ತಿಗೆ 7.8 ತೀವ್ರತೆಯ ಭೂಕಂಪ ಸಂಭವಿಸಿತ್ತು. ಇದರಿಂದಾಗಿ ಹಲವು ನಗರಗಳಲ್ಲಿ ಕಟ್ಟಡಗಳು ಕುಸಿದಿವೆ. ನೆರೆಯ ದೇಶ ಸಿರಿಯಾದಲ್ಲೂ ತೀವ್ರ ಹಾನಿಯುಂಟಾಗಿದೆ. ಮಧ್ಯಪ್ರಾಚ್ಯ ದೇಶಗಳಾದ ಲೆಬನಾನ್‌, ಸೈಪ್ರಸ್‌, ಇಸ್ರೇಲ್ ಹಾಗೂ ಈಜಿಪ್ಟ್‌ನಲ್ಲಿಯೂ ಭೂಮಿ ಕಂಪಿಸಿತ್ತು.

ಈವರೆಗೆ 120ಕ್ಕೂ ಹೆಚ್ಚು ಸಲ ಭೂಮಿ ಕಂಪಿಸಿರುವುದು ವರದಿಯಾಗಿದೆ.

ದುರಂತದಲ್ಲಿ ಇದುವರೆಗೆ ಸುಮಾರು 4,500ಕ್ಕೂ ಹೆಚ್ಚು ಜನರು ಮೃತಪಟ್ಟಿದ್ದಾರೆ. 20 ಸಾವಿರಕ್ಕೂ ಹೆಚ್ಚು‌ ಜನ ಗಾಯಗೊಂಡಿದ್ದಾರೆ. ಟರ್ಕಿಯಲ್ಲಿ ಈವರೆಗೆ ಸುಮಾರು 3 ಸಾವಿರ ಮಂದಿ ಹಾಗೂ ಸಿರಿಯಾದಲ್ಲಿ 1,500 ಜನರು ಮೃತಪಟ್ಟಿದ್ದಾರೆ ಎಂದು ಉನ್ನತ ಮೂಲಗಳಿಂದ ತಿಳಿದುಬಂದಿದೆ.

ಟರ್ಕಿಯಲ್ಲಿ ಭೀಕರ ಭೂಕಂಪದಿಂದ ಸಾವಿರಾರು ಜನ ಸಾವನ್ನಪ್ಪಿರುವುದು ದುಃಖದ ಸಂಗತಿ. ಟರ್ಕಿಯ ಈ ಕ್ಲಿಷ್ಟ ಪರಿಸ್ಥಿತಿಯ ನಿರ್ವಹಣೆ ಹಾಗೂ ಜನರ ಜೀವದ ರಕ್ಷಣೆಗೆ ಸಹಾಯಕವಾಗಲು ಭಾರತದ ರಾಷ್ಟ್ರೀಯ ವಿಪತ್ತು ನಿರ್ವಹಣಾ ತಂಡ (NDRF)ದ ಸಿಬ್ಬಂದಿ ಹಾಗೂ ಶ್ವಾನದಳವನ್ನು ಹೊತ್ತ ವಾಯುಸೇನೆಯ C-17 ವಿಮಾನ ಸೋಮವಾರ ರಾತ್ರಿ ಟರ್ಕಿಗೆ ತೆರಳಿದೆ.

ಅವಶೇಷಗಳಡಿ ಸಿಲುಕಿರುವವರ ರಕ್ಷಣಾ ಕಾರ್ಯಾಚರಣೆ ಭರದಿಂದ ಸಾಗಿದೆ. ಸಿರಿಯಾ ಹಾಗೂ ಟರ್ಕಿಯ ಗಡಿ ಭಾಗ ಸ್ಮಶಾನಸದೃಶದಂತೆ ಗೋಚರಿಸುತ್ತಿದೆ. ಪ್ರಬಲ ಭೂಕಂಪ‌ ಸಂಭವಿಸಿ ಹಲವು ಗಂಟೆಗಳು ಕಳೆದರೂ ಲಘು ಕಂಪನಗಳು ಸಂಭವಿಸುತ್ತಲೇ ಇವೆ. ಕಟ್ಟಡಗಳು ಕುಸಿಯುತ್ತಿರುವ ದೃಶ್ಯಗಳು ಸಾಮಾನ್ಯವಾಗಿವೆ.

Ramesh Babu

Journalist

Recent Posts

ರಾಷ್ಟ್ರೀಯ ಸಾಹಿತ್ಯ ಸೌರಭದಲ್ಲಿ ಕವಿ ರವಿಕುಮಾರ್ ಅವರ ‘ಅಂಚಿನ ತೊರೆ’ ಕವನ ಸಂಕಲನ ಲೋಕಾರ್ಪಣೆ

ಉಡುಪಿ: ಉಡುಪಿ ಜಿಲ್ಲೆಯ ಕೋಟದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ರಾಜ್ಯ ಜ್ಞಾನಗಂಗಾ ಸಾಹಿತ್ಯ…

2 hours ago

ನಾಡಕಚೇರಿ ಸರ್ವರ್ ಪದೇ ಪದೇ ಡೌನ್: ರಾಜ್ಯಾದ್ಯಂತ ಜನರಿಗೆ ಸಂಕಷ್ಟ – ತುರ್ತು ಪರಿಹಾರಕ್ಕೆ ಸರ್ಕಾರ ಮುಂದಾಗಬೇಕಿದೆ

ಬೆಂಗಳೂರು: ರಾಜ್ಯದ ಸಾರ್ವಜನಿಕರಿಗೆ ಅಗತ್ಯ ಪ್ರಮಾಣಪತ್ರಗಳು ಮತ್ತು ಕಂದಾಯ ಇಲಾಖೆಯ ವಿವಿಧ ಸೇವೆಗಳನ್ನು ಒದಗಿಸುವ ನಾಡಕಚೇರಿ ಸೇವೆ ಕಳೆದ ಕೆಲವು…

9 hours ago

ಮಧುರನಹೊಸಹಳ್ಳಿಯಲ್ಲಿ ವಿಜೃಂಭಣೆಯಿಂದ ಆಷಾಡ ಏಕಾದಶಿ ಆಚರಣೆ

ದೊಡ್ಡಬಳ್ಳಾಪುರ: ತಾಲೂಕಿನ ಮಧುರನಹೊಸಹಳ್ಳಿ ಗ್ರಾಮದಲ್ಲಿ ವರ್ಷದ ಮೊದಲ ಹಬ್ಬವೆಂದು ಪರಿಗಣಿಸಲ್ಪಡುವ ಆಷಾಡ ಏಕಾದಶಿಯನ್ನು ಭಕ್ತಿ, ಸಂಭ್ರಮ ಹಾಗೂ ಸಾಂಪ್ರದಾಯಿಕ ವೈಭವದೊಂದಿಗೆ…

10 hours ago

ಬಾಶೆಟ್ಟಿಹಳ್ಳಿ ಯೂ-ಟರ್ನ್‌ನಲ್ಲಿ ಕೆಟ್ಟು ನಿಂತ ಟ್ರಕ್: ಯಲಹಂಕ–ಹಿಂದೂಪುರ ಹೆದ್ದಾರಿಯಲ್ಲಿ ಭಾರೀ ಟ್ರಾಫಿಕ್ ಜಾಮ್

ದೊಡ್ಡಬಳ್ಳಾಪುರ: ಬಾಶೆಟ್ಟಿಹಳ್ಳಿ ಸಮೀಪದ ಯಲಹಂಕ–ಹಿಂದೂಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಯೂ-ಟರ್ನ್ ಪಡೆಯುವ ವೇಳೆ ಟ್ರಕ್ ಏಕಾಏಕಿ ಕೆಟ್ಟು ನಿಂತ ಪರಿಣಾಮ ಕೆಲಕಾಲ…

1 day ago

ಹೆದ್ದಾರಿ ಸ್ಕೈವಾಕ್‌ಗಳ ಕನಸು ಇನ್ನೂ ಅಪೂರ್ಣ…: ದಾಬಸ್‌ಪೇಟೆ–ಹೊಸಕೋಟೆ ಹೆದ್ದಾರಿಯಲ್ಲಿ ಆಮೆಗತಿಯ ಕಾಮಗಾರಿ: ಜೀವ ಕೈಯಲ್ಲಿ ಹಿಡಿದು ರಸ್ತೆ ದಾಟುವ ಜನರು

ಬೆಂಗಳೂರು ಗ್ರಾಮಾಂತರ: ರಾಜ್ಯದ ಪ್ರಮುಖ ಸಂಪರ್ಕ ಮಾರ್ಗಗಳಲ್ಲಿ ಒಂದಾಗಿರುವ 84 ಕಿ.ಮೀ. ಉದ್ದದ ದಾಬಸ್‌ಪೇಟೆ–ಹೊಸಕೋಟೆ ರಾಷ್ಟ್ರೀಯ ಹೆದ್ದಾರಿ-648ರಲ್ಲಿ ಸಾರ್ವಜನಿಕರ ಸುರಕ್ಷಿತ…

1 day ago

ಬೆಂಗಳೂರು ಗ್ರಾಮಾಂತರದಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ ಬಿರುಸು: 15,721 ಮೃತರ ಹೆಸರು ಪತ್ತೆ

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ-2026ರ (ಎಸ್ಐಆರ್) ಪ್ರಕ್ರಿಯೆ ಬಿರುಸಿನಿಂದ ಸಾಗುತ್ತಿದ್ದು, ಜಿಲ್ಲೆಯಾದ್ಯಂತ ಒಟ್ಟು 15,721 ಮೃತರ…

2 days ago