Categories: ವಿದೇಶ

ಟರ್ಕಿಯಲ್ಲಿ ಭೀಕರ ಭೂಕಂಪ; ಜನರ ಜೀವ ರಕ್ಷಣೆಗೆ ತೆರಳಿದ NDRF ತಂಡ

ಟರ್ಕಿಯ ಪ್ರಮುಖ ನಗರ ಮತ್ತು ಪ್ರಾಂತೀಯ ರಾಜಧಾನಿಯಾದ ಗಾಜಿಯಾಂಟೆಪ್‌ ಸಮೀಪ 17.9 ಕಿ.ಮೀ. ಆಳದಲ್ಲಿ ಸೋಮವಾರ ಮುಂಜಾನೆ 4.17ರ ಹೊತ್ತಿಗೆ 7.8 ತೀವ್ರತೆಯ ಭೂಕಂಪ ಸಂಭವಿಸಿತ್ತು. ಇದರಿಂದಾಗಿ ಹಲವು ನಗರಗಳಲ್ಲಿ ಕಟ್ಟಡಗಳು ಕುಸಿದಿವೆ. ನೆರೆಯ ದೇಶ ಸಿರಿಯಾದಲ್ಲೂ ತೀವ್ರ ಹಾನಿಯುಂಟಾಗಿದೆ. ಮಧ್ಯಪ್ರಾಚ್ಯ ದೇಶಗಳಾದ ಲೆಬನಾನ್‌, ಸೈಪ್ರಸ್‌, ಇಸ್ರೇಲ್ ಹಾಗೂ ಈಜಿಪ್ಟ್‌ನಲ್ಲಿಯೂ ಭೂಮಿ ಕಂಪಿಸಿತ್ತು.

ಈವರೆಗೆ 120ಕ್ಕೂ ಹೆಚ್ಚು ಸಲ ಭೂಮಿ ಕಂಪಿಸಿರುವುದು ವರದಿಯಾಗಿದೆ.

ದುರಂತದಲ್ಲಿ ಇದುವರೆಗೆ ಸುಮಾರು 4,500ಕ್ಕೂ ಹೆಚ್ಚು ಜನರು ಮೃತಪಟ್ಟಿದ್ದಾರೆ. 20 ಸಾವಿರಕ್ಕೂ ಹೆಚ್ಚು‌ ಜನ ಗಾಯಗೊಂಡಿದ್ದಾರೆ. ಟರ್ಕಿಯಲ್ಲಿ ಈವರೆಗೆ ಸುಮಾರು 3 ಸಾವಿರ ಮಂದಿ ಹಾಗೂ ಸಿರಿಯಾದಲ್ಲಿ 1,500 ಜನರು ಮೃತಪಟ್ಟಿದ್ದಾರೆ ಎಂದು ಉನ್ನತ ಮೂಲಗಳಿಂದ ತಿಳಿದುಬಂದಿದೆ.

ಟರ್ಕಿಯಲ್ಲಿ ಭೀಕರ ಭೂಕಂಪದಿಂದ ಸಾವಿರಾರು ಜನ ಸಾವನ್ನಪ್ಪಿರುವುದು ದುಃಖದ ಸಂಗತಿ. ಟರ್ಕಿಯ ಈ ಕ್ಲಿಷ್ಟ ಪರಿಸ್ಥಿತಿಯ ನಿರ್ವಹಣೆ ಹಾಗೂ ಜನರ ಜೀವದ ರಕ್ಷಣೆಗೆ ಸಹಾಯಕವಾಗಲು ಭಾರತದ ರಾಷ್ಟ್ರೀಯ ವಿಪತ್ತು ನಿರ್ವಹಣಾ ತಂಡ (NDRF)ದ ಸಿಬ್ಬಂದಿ ಹಾಗೂ ಶ್ವಾನದಳವನ್ನು ಹೊತ್ತ ವಾಯುಸೇನೆಯ C-17 ವಿಮಾನ ಸೋಮವಾರ ರಾತ್ರಿ ಟರ್ಕಿಗೆ ತೆರಳಿದೆ.

ಅವಶೇಷಗಳಡಿ ಸಿಲುಕಿರುವವರ ರಕ್ಷಣಾ ಕಾರ್ಯಾಚರಣೆ ಭರದಿಂದ ಸಾಗಿದೆ. ಸಿರಿಯಾ ಹಾಗೂ ಟರ್ಕಿಯ ಗಡಿ ಭಾಗ ಸ್ಮಶಾನಸದೃಶದಂತೆ ಗೋಚರಿಸುತ್ತಿದೆ. ಪ್ರಬಲ ಭೂಕಂಪ‌ ಸಂಭವಿಸಿ ಹಲವು ಗಂಟೆಗಳು ಕಳೆದರೂ ಲಘು ಕಂಪನಗಳು ಸಂಭವಿಸುತ್ತಲೇ ಇವೆ. ಕಟ್ಟಡಗಳು ಕುಸಿಯುತ್ತಿರುವ ದೃಶ್ಯಗಳು ಸಾಮಾನ್ಯವಾಗಿವೆ.

Ramesh Babu

Journalist

Recent Posts

ಸಾಹಿತ್ಯ ಪರಿಷತ್ ಚುನಾವಣೆ…..

ಸಾಹಿತ್ಯ ಪರಿಷತ್ ಚುನಾವಣೆ..... ನನ್ನ ಮತ........? ಕನ್ನಡ ಸಾಹಿತ್ಯ ಪರಿಷತ್ತಿನ ಚುನಾವಣೆ ಕನ್ನಡದ ಅಸ್ಮಿತೆಗೊಂದು ಸವಾಲು. ಭ್ರಷ್ಟರ ವಿರುದ್ಧ ಪ್ರಾಮಾಣಿಕರು,…

1 hour ago

ರಾಜ್ಯಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಬೆಂಗಳೂರು ಗ್ರಾಮಾಂತರದ ಇಬ್ಬರು ಶಿಕ್ಷಕರು ಆಯ್ಕೆ

ದೇವನಹಳ್ಳಿ: ಕರ್ನಾಟಕ ಸರ್ಕಾರದ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯು 2026–27ನೇ ಸಾಲಿನ ರಾಜ್ಯಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಆಯ್ಕೆಯಾದ…

12 hours ago

ಮೇಕೆದಾಟು ಯೋಜನೆ ಶೀಘ್ರ ಜಾರಿಗೆ ಸಚಿವರ ದೃಢ ಸಂಕಲ್ಪ: ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ

ಮೇಕೆದಾಟು ಯೋಜನೆಯ ಶೀಘ್ರ ಜಾರಿಗಾಗಿ ಜಲಸಂಪನ್ಮೂಲ ಸಚಿವರು ತೀವ್ರ ಒಲವು ತೋರಿದ್ದು, ಕಾಮಗಾರಿಗೆ ಇನ್ನಷ್ಟು ವೇಗ ನೀಡುವ ನಿಟ್ಟಿನಲ್ಲಿ ರಾಜ್ಯದ…

13 hours ago

ಶ್ರೀರಂಗವನದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಸಂಭ್ರಮ

ತೂಬಗೆರೆ: ಹೋಬಳಿಯ ಯದ್ದಲಹಳ್ಳಿ ಸಮೀಪದ ಶ್ರೀರಂಗವನದಲ್ಲಿರುವ ಶ್ರೀ ವೇಣುಗೋಪಾಲಕೃಷ್ಣ ದೇವಸ್ಥಾನದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಅಂಗವಾಗಿ ವಿಶೇಷ ಪೂಜೆ, ಅಭಿಷೇಕ ಹಾಗೂ…

13 hours ago

ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ-2026: ಹಕ್ಕು,ಆಕ್ಷೇಪಣೆ ಸಲ್ಲಿಕೆಗೆ ಸೆ. 23 ವರೆಗೆ ಅವಕಾಶ-ಡಿಸಿ ಅನುರಾಧ

ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆಗೆ ಸಂಬಂಧಿಸಿದಂತೆ ಕರಡು ಮತದಾರ ಪಟ್ಟಿ ಪ್ರಕಟಗೊಂಡಿದ್ದು ಮತದಾರರ ಪಟ್ಟಿಯಲ್ಲಿ ಹೆಸರಿಲ್ಲದ ಅರ್ಹ ಮತದಾರರು ಮತಗಟ್ಟೆ…

16 hours ago

ರೈಲು ಡಿಕ್ಕಿಗೆ ಅಪರಿಚಿತ ವ್ಯಕ್ತಿ ಬಲಿ

ದೊಡ್ಡಬಳ್ಳಾಪುರ: ರೈಲಿಗೆ ಸಿಲುಕಿ ಗಂಭೀರವಾಗಿ ಗಾಯಗೊಂಡಿದ್ದ ಅಪರಿಚಿತ ವ್ಯಕ್ತಿಯೊಬ್ಬರು ಚಿಕಿತ್ಸೆ ಫಲಿಸದೆ ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರ ರೈಲು ನಿಲ್ದಾಣದ ಸಮೀಪ…

19 hours ago