Categories: ವಿದೇಶ

ಟರ್ಕಿಯಲ್ಲಿ ಭೀಕರ ಭೂಕಂಪ; ಜನರ ಜೀವ ರಕ್ಷಣೆಗೆ ತೆರಳಿದ NDRF ತಂಡ

ಟರ್ಕಿಯ ಪ್ರಮುಖ ನಗರ ಮತ್ತು ಪ್ರಾಂತೀಯ ರಾಜಧಾನಿಯಾದ ಗಾಜಿಯಾಂಟೆಪ್‌ ಸಮೀಪ 17.9 ಕಿ.ಮೀ. ಆಳದಲ್ಲಿ ಸೋಮವಾರ ಮುಂಜಾನೆ 4.17ರ ಹೊತ್ತಿಗೆ 7.8 ತೀವ್ರತೆಯ ಭೂಕಂಪ ಸಂಭವಿಸಿತ್ತು. ಇದರಿಂದಾಗಿ ಹಲವು ನಗರಗಳಲ್ಲಿ ಕಟ್ಟಡಗಳು ಕುಸಿದಿವೆ. ನೆರೆಯ ದೇಶ ಸಿರಿಯಾದಲ್ಲೂ ತೀವ್ರ ಹಾನಿಯುಂಟಾಗಿದೆ. ಮಧ್ಯಪ್ರಾಚ್ಯ ದೇಶಗಳಾದ ಲೆಬನಾನ್‌, ಸೈಪ್ರಸ್‌, ಇಸ್ರೇಲ್ ಹಾಗೂ ಈಜಿಪ್ಟ್‌ನಲ್ಲಿಯೂ ಭೂಮಿ ಕಂಪಿಸಿತ್ತು.

ಈವರೆಗೆ 120ಕ್ಕೂ ಹೆಚ್ಚು ಸಲ ಭೂಮಿ ಕಂಪಿಸಿರುವುದು ವರದಿಯಾಗಿದೆ.

ದುರಂತದಲ್ಲಿ ಇದುವರೆಗೆ ಸುಮಾರು 4,500ಕ್ಕೂ ಹೆಚ್ಚು ಜನರು ಮೃತಪಟ್ಟಿದ್ದಾರೆ. 20 ಸಾವಿರಕ್ಕೂ ಹೆಚ್ಚು‌ ಜನ ಗಾಯಗೊಂಡಿದ್ದಾರೆ. ಟರ್ಕಿಯಲ್ಲಿ ಈವರೆಗೆ ಸುಮಾರು 3 ಸಾವಿರ ಮಂದಿ ಹಾಗೂ ಸಿರಿಯಾದಲ್ಲಿ 1,500 ಜನರು ಮೃತಪಟ್ಟಿದ್ದಾರೆ ಎಂದು ಉನ್ನತ ಮೂಲಗಳಿಂದ ತಿಳಿದುಬಂದಿದೆ.

ಟರ್ಕಿಯಲ್ಲಿ ಭೀಕರ ಭೂಕಂಪದಿಂದ ಸಾವಿರಾರು ಜನ ಸಾವನ್ನಪ್ಪಿರುವುದು ದುಃಖದ ಸಂಗತಿ. ಟರ್ಕಿಯ ಈ ಕ್ಲಿಷ್ಟ ಪರಿಸ್ಥಿತಿಯ ನಿರ್ವಹಣೆ ಹಾಗೂ ಜನರ ಜೀವದ ರಕ್ಷಣೆಗೆ ಸಹಾಯಕವಾಗಲು ಭಾರತದ ರಾಷ್ಟ್ರೀಯ ವಿಪತ್ತು ನಿರ್ವಹಣಾ ತಂಡ (NDRF)ದ ಸಿಬ್ಬಂದಿ ಹಾಗೂ ಶ್ವಾನದಳವನ್ನು ಹೊತ್ತ ವಾಯುಸೇನೆಯ C-17 ವಿಮಾನ ಸೋಮವಾರ ರಾತ್ರಿ ಟರ್ಕಿಗೆ ತೆರಳಿದೆ.

ಅವಶೇಷಗಳಡಿ ಸಿಲುಕಿರುವವರ ರಕ್ಷಣಾ ಕಾರ್ಯಾಚರಣೆ ಭರದಿಂದ ಸಾಗಿದೆ. ಸಿರಿಯಾ ಹಾಗೂ ಟರ್ಕಿಯ ಗಡಿ ಭಾಗ ಸ್ಮಶಾನಸದೃಶದಂತೆ ಗೋಚರಿಸುತ್ತಿದೆ. ಪ್ರಬಲ ಭೂಕಂಪ‌ ಸಂಭವಿಸಿ ಹಲವು ಗಂಟೆಗಳು ಕಳೆದರೂ ಲಘು ಕಂಪನಗಳು ಸಂಭವಿಸುತ್ತಲೇ ಇವೆ. ಕಟ್ಟಡಗಳು ಕುಸಿಯುತ್ತಿರುವ ದೃಶ್ಯಗಳು ಸಾಮಾನ್ಯವಾಗಿವೆ.

Ramesh Babu

Journalist

Recent Posts

ಜು.7 ರಂದು ಕೆಲ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ

ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಜು.7 ರಂದು 66/11 ಕೆವಿ ಡಿಕ್ರಾಸ್ ಉಪ ವಿದ್ಯುತ್ ಕೇಂದ್ರದಿಂದ ಹೊರವೊಮ್ಮುವ F15-Tropical Flavours ಮತ್ತು 220/66/11ಕೆವಿ…

1 hour ago

ಬ್ಲಾಕ್‌ಸ್ಪಾಟ್‌ಗಳೀಗ ಸುಂದರ ತಾಣ: ಕಸ ಸುರಿಯುತ್ತಿದ್ದ ಪ್ರದೇಶಗಳಿಗೆ ಸುಣ್ಣ ಬಣ್ಣ ಬಳಿದು ಅಲಂಕಾರ: ಹೊಸ ಪ್ರಯೋಗಕ್ಕೆ ಮುಂದಾದ ನಗರಸಭೆ

ದೊಡ್ಡಬಳ್ಳಾಪುರ ನಗರದ ರಸ್ತೆ ಬದಿ, ಖಾಲಿ ಜಾಗಗಳು ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ಕಸದ ರಾಶಿ ಕಾಣುವುದು ಸಾಮಾನ್ಯ ದೃಶ್ಯವಾಗಿತ್ತು. ಸ್ವಚ್ಛತಾ…

1 hour ago

ಅಯೋಧ್ಯೆಯಲ್ಲಿ ಆರ್‌ಎಸ್‌ಎಸ್‌, ಬಿಜೆಪಿ ಪರವಾಗಿರುವವರಿಂದಲೇ ಲೂಟಿ: ಮಲ್ಲಿಕಾರ್ಜುನ ಖರ್ಗೆ ಆರೋಪ

ಬೆಂಗಳೂರು ಗ್ರಾಮಾಂತರ: ಅಯೋಧ್ಯೆಯಲ್ಲಿ ಆರ್‌ಎಸ್‌ಎಸ್‌ ಹಾಗೂ ಬಿಜೆಪಿ ಪರವಾಗಿರುವವರಿಂದಲೇ ಭಾರೀ ಪ್ರಮಾಣದ ಲೂಟಿ ನಡೆದಿದೆ ಎಂದು ರಾಜ್ಯಸಭೆ ವಿರೋಧ ಪಕ್ಷದ…

14 hours ago

ಇದು ಡಿ.ಕೆ. ಶಿವಕುಮಾರ್ ಸರ್ಕಾರವಲ್ಲ, ಜನರ ಸರ್ಕಾರ, ಸಂವಿಧಾನದ ಆಶಯಗಳಿಗೆ ಬದ್ಧವಾಗಿರುವ ಸರ್ಕಾರ- ಸಿಎಂ ಡಿಕೆಶಿ

ಸಂವಿಧಾನ ಶಿಲ್ಪಿ ಭಾರತರತ್ನ ಡಾ. ಬಿ.ಆರ್. ಅಂಬೇಡ್ಕರ್ ಅವರು ಯಾವುದೇ ಒಂದು ಸಮುದಾಯಕ್ಕಾಗಿ ಮಾತ್ರ ಹೋರಾಟ ನಡೆಸಿಲ್ಲ. ದೇಶದ ಪ್ರತಿಯೊಬ್ಬ…

15 hours ago

ಡಾ.ಬಿ.ಆರ್. ಅಂಬೇಡ್ಕರ್ ಪ್ರತಿಮೆ ಅನಾವರಣ: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಸಿಎಂ ಡಿಕೆಶಿ ಭಾಗಿ

ಬೆಂಗಳೂರು ಗ್ರಾಮಾಂತರ ಜಿಲ್ಲಾ ಆಡಳಿತ ಭವನದ ಆವರಣದಲ್ಲಿ ನಿರ್ಮಿಸಲಾಗಿರುವ ಸಂವಿಧಾನಶಿಲ್ಪಿ, ಭಾರತರತ್ನ ಡಾ. ಬಿ.ಆರ್. ಅಂಬೇಡ್ಕರ್ ಅವರ ಭವ್ಯ ಪ್ರತಿಮೆ…

17 hours ago

ನಾಳೆ ಡಾ.ಬಿ.ಆರ್. ಅಂಬೇಡ್ಕರ್ ಪ್ರತಿಮೆ ಅನಾವರಣ: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಸಿಎಂ ಡಿಕೆಶಿ ಭಾಗಿ: ಸಿದ್ಧತೆ ಪರಿಶೀಲಿಸಿದ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಚ್.ಮುನಿಯಪ್ಪ

ಬೆಂಗಳೂರು ಗ್ರಾಮಾಂತರ ಜಿಲ್ಲಾ ಆಡಳಿತ ಭವನದ ಆವರಣದಲ್ಲಿ ನಿರ್ಮಿಸಲಾಗಿರುವ ಸಂವಿಧಾನಶಿಲ್ಪಿ, ಭಾರತರತ್ನ ಡಾ. ಬಿ.ಆರ್. ಅಂಬೇಡ್ಕರ್ ಅವರ ಭವ್ಯ ಪ್ರತಿಮೆ…

2 days ago