Categories: ವಿದೇಶ

ಟರ್ಕಿಯಲ್ಲಿ ಭೀಕರ ಭೂಕಂಪ; ಜನರ ಜೀವ ರಕ್ಷಣೆಗೆ ತೆರಳಿದ NDRF ತಂಡ

ಟರ್ಕಿಯ ಪ್ರಮುಖ ನಗರ ಮತ್ತು ಪ್ರಾಂತೀಯ ರಾಜಧಾನಿಯಾದ ಗಾಜಿಯಾಂಟೆಪ್‌ ಸಮೀಪ 17.9 ಕಿ.ಮೀ. ಆಳದಲ್ಲಿ ಸೋಮವಾರ ಮುಂಜಾನೆ 4.17ರ ಹೊತ್ತಿಗೆ 7.8 ತೀವ್ರತೆಯ ಭೂಕಂಪ ಸಂಭವಿಸಿತ್ತು. ಇದರಿಂದಾಗಿ ಹಲವು ನಗರಗಳಲ್ಲಿ ಕಟ್ಟಡಗಳು ಕುಸಿದಿವೆ. ನೆರೆಯ ದೇಶ ಸಿರಿಯಾದಲ್ಲೂ ತೀವ್ರ ಹಾನಿಯುಂಟಾಗಿದೆ. ಮಧ್ಯಪ್ರಾಚ್ಯ ದೇಶಗಳಾದ ಲೆಬನಾನ್‌, ಸೈಪ್ರಸ್‌, ಇಸ್ರೇಲ್ ಹಾಗೂ ಈಜಿಪ್ಟ್‌ನಲ್ಲಿಯೂ ಭೂಮಿ ಕಂಪಿಸಿತ್ತು.

ಈವರೆಗೆ 120ಕ್ಕೂ ಹೆಚ್ಚು ಸಲ ಭೂಮಿ ಕಂಪಿಸಿರುವುದು ವರದಿಯಾಗಿದೆ.

ದುರಂತದಲ್ಲಿ ಇದುವರೆಗೆ ಸುಮಾರು 4,500ಕ್ಕೂ ಹೆಚ್ಚು ಜನರು ಮೃತಪಟ್ಟಿದ್ದಾರೆ. 20 ಸಾವಿರಕ್ಕೂ ಹೆಚ್ಚು‌ ಜನ ಗಾಯಗೊಂಡಿದ್ದಾರೆ. ಟರ್ಕಿಯಲ್ಲಿ ಈವರೆಗೆ ಸುಮಾರು 3 ಸಾವಿರ ಮಂದಿ ಹಾಗೂ ಸಿರಿಯಾದಲ್ಲಿ 1,500 ಜನರು ಮೃತಪಟ್ಟಿದ್ದಾರೆ ಎಂದು ಉನ್ನತ ಮೂಲಗಳಿಂದ ತಿಳಿದುಬಂದಿದೆ.

ಟರ್ಕಿಯಲ್ಲಿ ಭೀಕರ ಭೂಕಂಪದಿಂದ ಸಾವಿರಾರು ಜನ ಸಾವನ್ನಪ್ಪಿರುವುದು ದುಃಖದ ಸಂಗತಿ. ಟರ್ಕಿಯ ಈ ಕ್ಲಿಷ್ಟ ಪರಿಸ್ಥಿತಿಯ ನಿರ್ವಹಣೆ ಹಾಗೂ ಜನರ ಜೀವದ ರಕ್ಷಣೆಗೆ ಸಹಾಯಕವಾಗಲು ಭಾರತದ ರಾಷ್ಟ್ರೀಯ ವಿಪತ್ತು ನಿರ್ವಹಣಾ ತಂಡ (NDRF)ದ ಸಿಬ್ಬಂದಿ ಹಾಗೂ ಶ್ವಾನದಳವನ್ನು ಹೊತ್ತ ವಾಯುಸೇನೆಯ C-17 ವಿಮಾನ ಸೋಮವಾರ ರಾತ್ರಿ ಟರ್ಕಿಗೆ ತೆರಳಿದೆ.

ಅವಶೇಷಗಳಡಿ ಸಿಲುಕಿರುವವರ ರಕ್ಷಣಾ ಕಾರ್ಯಾಚರಣೆ ಭರದಿಂದ ಸಾಗಿದೆ. ಸಿರಿಯಾ ಹಾಗೂ ಟರ್ಕಿಯ ಗಡಿ ಭಾಗ ಸ್ಮಶಾನಸದೃಶದಂತೆ ಗೋಚರಿಸುತ್ತಿದೆ. ಪ್ರಬಲ ಭೂಕಂಪ‌ ಸಂಭವಿಸಿ ಹಲವು ಗಂಟೆಗಳು ಕಳೆದರೂ ಲಘು ಕಂಪನಗಳು ಸಂಭವಿಸುತ್ತಲೇ ಇವೆ. ಕಟ್ಟಡಗಳು ಕುಸಿಯುತ್ತಿರುವ ದೃಶ್ಯಗಳು ಸಾಮಾನ್ಯವಾಗಿವೆ.

Ramesh Babu

Journalist

Recent Posts

ಮಕ್ಕಳೇ ದೇಶದ ಆಸ್ತಿ, ಉತ್ತಮ ಶಿಕ್ಷಣದಿಂದ ಭವಿಷ್ಯ ನಿರ್ಮಾಣ- ಶಿವಕುಮಾರ್

ದೊಡ್ಡಬಳ್ಳಾಪುರ: ಉತ್ತಮ ಸಮಾಜ ನಿರ್ಮಾಣಕ್ಕೆ ಶಿಕ್ಷಣವೇ ಭದ್ರ ಬುನಾದಿಯಾಗಿದ್ದು, ಮಕ್ಕಳಿಗೆ ಗುಣಮಟ್ಟದ ಶಿಕ್ಷಣದ ಜೊತೆಗೆ ಉತ್ತಮ ಕಲಿಕಾ ವಾತಾವರಣ ಕಲ್ಪಿಸುವಲ್ಲಿ…

11 hours ago

ಬೆಂಗಳೂರು ಗ್ರಾಮಾಂತರದಲ್ಲಿ ಎರಡು ಪ್ರತ್ಯೇಕ ಅಪಘಾತ: ಇಬ್ಬರು ಸಾವು, ಹಲವರಿಗೆ ಗಾಯ

ದೇವನಹಳ್ಳಿ/ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಹಾಗೂ ದೊಡ್ಡಬಳ್ಳಾಪುರ ತಾಲೂಕಿನ ವ್ಯಾಪ್ತಿಯಲ್ಲಿ ಮುಂಜಾನೆ ಸಂಭವಿಸಿದ ಎರಡು ಪ್ರತ್ಯೇಕ ರಸ್ತೆ ಅಪಘಾತಗಳಲ್ಲಿ…

15 hours ago

ಸ್ವಾತಂತ್ರ್ಯ ದಿನದಂದೇ ಹೆದ್ದಾರಿಯಲ್ಲಿ ಪುಂಡರ ಡೆಡ್ಲಿ ವ್ಹೀಲಿಂಗ್

ದೇವನಹಳ್ಳಿ: ಸ್ವಾತಂತ್ರ್ಯ ದಿನಾಚರಣೆ ಹಾಗೂ ವಾರಾಂತ್ಯದ ರಜೆ ಹಿನ್ನೆಲೆಯಲ್ಲಿ ದೇವನಹಳ್ಳಿ ಹೊರವಲಯದ ಬೈಪಾಸ್ ನಲ್ಲಿ ಪುಂಡರು ಗುಂಪು ಗುಂಪಾಗಿ ಆಟೋ,…

15 hours ago

ಸ್ವಾತಂತ್ರ್ಯ ದಿನಾಚರಣೆಯಲ್ಲಿ ಆರೋಗ್ಯ ಕಾಳಜಿ; ಹೀಲಿನ್ ಆಸ್ಪತ್ರೆಯಿಂದ ಉಚಿತ ತಪಾಸಣಾ ಶಿಬಿರ

80ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ನಗರದ ಭಗತ್ ಸಿಂಗ್ ಕ್ರೀಡಾಂಗಣದಲ್ಲಿ ತಾಲೂಕು ಆಡಳಿತ ವತಿಯಿಂದ ಸ್ವಾತಂತ್ರ್ಯ ದಿನಾಚರಣೆಯನ್ನು ಅದ್ದೂರಿಯಾಗಿ ಆಚರಿಸಲಾಯಿತು.…

18 hours ago

ವಿಬಿ ಜಿ ರಾಮ್ ಜಿ: ಆ.15 ರಿಂದ ಜಾಬ್ ಕಾರ್ಡ್ ಮೇಳ

ಗ್ರಾಮೀಣರಿಗೆ ಸ್ಥಳೀಯವಾಗಿ ಉದ್ಯೋಗ ಒದಗಿಸುವ ವಿಕಸಿತ ಭಾರತ ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ) ಯೋಜನೆಯಡಿ (ವಿಬಿ…

1 day ago

ತೂಬಗೆರೆ ಸೊಸೈಟಿ ಅಧ್ಯಕ್ಷರಾಗಿ ವಾಸುದೇವ್, ಉಪಾಧ್ಯಕ್ಷರಾಗಿ ಸತ್ಯನಾರಾಯಣಸ್ವಾಮಿ ಅವಿರೋಧ ಆಯ್ಕೆ

ದೊಡ್ಡಬಳ್ಳಾಪುರ: ತಾಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಎನ್‌ಡಿಎ ಬೆಂಬಲಿತ ನಿರ್ದೇಶಕ ಟಿ.ಜಿ.…

2 days ago