ಟಿಎಪಿಎಂಸಿಎಸ್ ಗೆ ನಾಮ ನಿರ್ದೇಶನ ಸದಸ್ಯರಾಗಿ ಎ.ಎನ್.ಹರೀಶ್ ಕುಮಾರ್ ನೇಮಕ

ದೊಡ್ಡಬಳ್ಳಾಪುರ ತಾಲೂಕು ವ್ಯವಸಾಯೋತ್ಪನ್ನ ಮಾರಾಟ ಸಹಕಾರ ಸಂಘದ ಆಡಳಿತ ಮಂಡಳಿಗೆ ಆರೂಢಿಯ ಎ.ಎನ್.ಹರೀಶ್ ಕುಮಾರ್ ಅವರನ್ನು ಸದಸ್ಯರನ್ನಾಗಿ ನಾಮನಿರ್ದೇಶನ ಮಾಡಲಾಗಿದೆ.

ಈ ಕುರಿತಂತೆ ಸರ್ಕಾರದ ಅಧೀನ ಕಾರ್ಯದರ್ಶಿ ಸಹಕಾರ ಇಲಾಖೆಯ ಆರ್.ವಿ.ರಾಘವನ್ ಅವರು ಗುರುವಾರ ಸಂಜೆ ಅಧಿಸೂಚನೆ ಹೊರಡಿಸಿದೆ.

ನಾಮ ನಿರ್ದೇಶನ ಸದಸ್ಯರಾಗಿ ನೇಮಕವಾದ ಹರೀಶ್ ಅವರನ್ನು ಮಾಜಿ ಶಾಸಕರಾದ ಟಿ.ವೆಂಕಟರಮಣಯ್ಯ, ಆರ್.ಜಿ.ವೆಂಕಟಾಚಲಯ್ಯಮ, ಜಿಪಂ ಮಾಜಿ ಸದಸ್ಯ ಚುಂಚೆಗೌಡ, ತಾಪಂ ಮಾಜಿ ಅಧ್ಯಕ್ಷ ಡಿ.ಸಿ.ಶಶಿಧರ್, ಕೆಪಿಸಿಸಿ ಸದಸ್ಯ ಜಿ.ಲಕ್ಮೀಪತಿ, ಎಪಿಎಂಸಿ ಮಾಜಿ ಅಧ್ಯಕ್ಷರಾದ ವಿಶ್ವನಾಥ್ ರೆಡ್ಡಿ, ನಾರನಹಳ್ಳಿ ಗೋವಿಂದ ರಾಜು, ಮತ್ತಿತರರಿದ್ದರು ಅಭಿನಂದನೆ ಸಲ್ಲಿಸಿದ್ದಾರೆ.

Leave a Reply

Your email address will not be published. Required fields are marked *