ಟಿಎಪಿಎಂಸಿಎಸ್ ಚುನಾವಣೆಯಲ್ಲಿ ಅಚ್ಚರಿ ಬೆಳವಣಿಗೆ ಇಂದು ನಡೆದಿದೆ. ತೂಬಗೆರೆ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ರಂಗಪ್ಪ ನಾಮಪತ್ರ ವಾಪಸ್ ಪಡೆಯುವ ಮೂಲಕ ಮಾಜಿ ಶಾಸಕ ಟಿ.ವೆಂಕಟರಮಣಯ್ಯ, ಚುಂಚೇಗೌಡ ವಿರುದ್ಧ ಕಿಡಿಕಾರಿದ್ದಾರೆ….
ನ.2 ರಂದು ಟಿಎಪಿಎಂಸಿಎಸ್ ಚುನಾವಣೆ ನಡೆಯಲಿದ್ದು, ಈಗಾಗಲೇ 45ಕ್ಕೂ ಹೆಚ್ಚು ನಾಮಪತ್ರಗಳು ಸಲ್ಲಿಕೆಯಾಗಿದ್ದು, ಇಂದು ನಾಮಪತ್ರ ಹಿಂತೆಗೆದುಕೊಳ್ಳುವುದಕ್ಕೆ ಕೊನೆ ದಿನವಾಗಿದೆ. ಈ ಹಿನ್ನೆಲೆ ಶಾಸಕ ಟಿ.ವೆಂಕಟರಮಣಯ್ಯ ಹಾಗೂ ಚುಂಚೇಗೌಡರ ಜೆಡಿಎಸ್ ಜೊತೆಗಿನ ನಂಟನ್ನು ವಿರೋಧಿಸಿ ತೂಬಗೆರೆ ಕಾಂಗ್ರೆಸ್ ಮುಖಂಡ ಸಮ್ಮುಖದಲ್ಲಿ ತೂಬಗೆರೆ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ರಂಗಪ್ಪ ನಾಮಪತ್ರ ವಾಪಸ್ ಪಡೆದು ಎಲ್ಲರಲ್ಲಿ ಅಚ್ಚರಿ ಮೂಡಿಸಿದ್ದಾರೆ….
ನಾಮಪತ್ರ ಹಿಂತೆಗೆತ ವಿಚಾರಕ್ಕೆ ಸಂಬಂಧಿಸಿದಂತೆ ಮಾಧ್ಯಮದವರೊಂದಿಗೆ ಮಾತನಾಡಿದ ರಂಗಪ್ಪ, ದೊಡ್ಡಬಳ್ಳಾಪುರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಮುಖಂಡರು ದೇವನಹಳ್ಳಿ ವಿಧಾನಸಭಾ ಕ್ಷೇತ್ರಕ್ಕೆ ಒಳಪಡುವ ತೂಬಗೆರೆ ಕಾಂಗ್ರೆಸ್ ಮುಖಂಡರನ್ನು ಕಡೆಗಣಿಸುತ್ತಿದ್ದಾರೆ ಎಂದು ಆರೋಪಿಸಿ, ಜೆಡಿಎಸ್ ಪಕ್ಷದ ಅಭ್ಯರ್ಥಿಗಳನ್ನು ಅಧಿಕೃತವಾಗಿ ಪಕ್ಷಕ್ಕೆ ಸೇರಿಸಿಕೊಳ್ಳದೇ ಪರೋಕ್ಷವಾಗಿ ಜೆಡಿಎಸ್ ಅಭ್ಯರ್ಥಿಗಳನ್ನು ಜೊತೆಗೆ ಕರೆದುಕೊಂಡು ಚುನಾವಣೆ ಪ್ರಚಾರ ಮಾಡುತ್ತಿದ್ದಾರೆ. ಇದು ಕಾಂಗ್ರೆಸ್ ಪಕ್ಷಕ್ಕೆ ಮುಜುಗರ ತರುವ ವಿಚಾರವಾಗಿದೆ. ಇದು ಮುಂಬರುವ ಜಿಲ್ಲಾ, ತಾಲೂಕು ಪಂಚಾಯಿತಿ ಚುನಾವಣೆಗಳ ಮೇಲೆ ಪರಿಣಾಮ ಬೀರಲಿದೆ ಎಂದು ಹೇಳಿದರು.
ಚುಂಚೇಗೌಡರು ಬಿಡಿಸಿಸಿ ಬ್ಯಾಂಕ್ ಅಧ್ಯಕ್ಷರಾಗುವ ಏಕೈಕ ಕಾರಣಕ್ಕೆ ಜೆಡಿಎಸ್ ಅಭ್ಯರ್ಥಿ ಜೊತೆ ಕೈಜೋಡಿಸಿದ್ದಾರೆ…. ಇದಕ್ಕೆ ಮಾಜಿ ಶಾಸಕ ಟಿ.ವೆಂಕಟರಮಣಯ್ಯನವರ ಸಹಮತವಿದೆ… ಕಳೆದ ಬಾರಿ ಟಿಎಪಿಎಂಸಿಎಸ್ ಅಧ್ಯಕ್ಷ ಸ್ಥಾನ ನೀಡುವ ಭರವಸೆ ನೀಡಿದರು. ಆದರೆ, ಸಹಕಾರ ಕ್ಷೇತ್ರದ ಗಂಧಗಾಳಿ ಗೊತ್ತಿಲ್ಲದವರನ್ನು ಅಧ್ಯಕ್ಷರನ್ನಾಗಿ ಮಾಡಿ ನಮಗೆ ಅನ್ಯಾಯ ಮಾಡಿದ್ದಾರೆ. ತೂಬಗೆರೆಯನ್ನು ಪದೇ ಪದೇ ಕಡೆಗಣಿಸಿದ್ದಾರೆ. ಇದರಿಂದ ಬೇಸತ್ತು ನಾಮಪತ್ರ ಹಿಂತೆಗೆದುಕೊಳ್ಳಲಾಗಿದೆ ಎಂದರು.
ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಚ್ ಮುನಿಯಪ್ಪನವರ ನೇತೃತ್ವದಲ್ಲಿ, ಮಾರ್ಗದರ್ಶನದಲ್ಲಿ ತೂಬಗೆರೆಯಲ್ಲಿ ಕಾಂಗ್ರೆಸ್ ಪಕ್ಷವನ್ನು ಸದೃಢಪಡಿಸುತ್ತೇವೆ ಎಂದರು..
ಈ ವೇಳೆ ತೂಬಗರೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರವಿಸಿದ್ದಪ್ಪ, ಕಾಂಗ್ರೆಸ್ ಮುಖಂಡರಾದ ಗೋಪಾಲ ನಾಯ್ಕ್, ಗಂಗಸಂದ್ರ ಶ್ರೀಧರ್, ಮುರುಳಿ, ಆರ್.ವಿ ಮಹೇಶ್ ಕುಮಾರ್, ಮುನಿರಾಜು, ಆರ್ ವಿ ಶಿವಕುಮಾರ್ ಸೇರಿದಂತೆ ಇತರರು ಉಪಸ್ಥಿತರಿದ್ದರು..
ಏ.25ರ ರಾತ್ರಿ ಕೋರ್ಟ್ ರಸ್ತೆಯಲ್ಲಿ ಭೀಕರ ಅಪಘಾತದಲ್ಲಿ ಇಬ್ಬರು ಯುವಕರು ದಾರುಣವಾಗಿ ಸಾವನ್ನಪ್ಪಿದ್ದರು. ರಸ್ತೆ ಇಕ್ಕೆಲಗಳಲ್ಲಿ ಬೀದಿ ದೀಪಗಳು ಬೆಳಗದ…
ದೇಶಭಕ್ತಿ ಮತ್ತು ದೇಶದ್ರೋಹ...... ಇದು ಬ್ರಿಟಿಷರ ಕಾಲದ್ದೇ ಅಥವಾ ಈ ಕಾಲಕ್ಕೂ ಅನ್ವಯಿಸುತ್ತದೆಯೇ..... ರಾಷ್ಟ್ರೀಯತೆ ಎಂಬ ಪರಿಕಲ್ಪನೆಯ ಸುತ್ತಾ....... ರಾಷ್ಟ್ರ…
ಟ್ರ್ಯಾಕ್ಟರ್ ಮತ್ತು ಬೈಕ್ ನಡುವೆ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ ಓರ್ವ ಬೈಕ್ ಸಾವನ್ನಪ್ಪಿದರೆ, ಮತ್ತೋರ್ವ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿರುವ ಘಟನೆ…
ಎಸ್ಎಸ್ಎಲ್ ಸಿ ಮತ್ತು ಪಿಯುಸಿ ಪರೀಕ್ಷೆಯಲ್ಲಿ ಶೇ.90ಕ್ಕೂ ಹೆಚ್ಚು ಅಂಕಗಳಿಸಿದ ಪತ್ರಕರ್ತರ ಮಕ್ಕಳ ಪ್ರತಿಭಾ ಪುರಸ್ಕಾರಕ್ಕಾಗಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ…
2025-26ನೇ ಸಾಲಿನ ಎಸ್.ಎಸ್.ಎಲ್.ಸಿ. ಪರೀಕ್ಷೆ-1 ರ ಫಲಿತಾಂಶ ಪ್ರಕಟಗೊಂಡಿದ್ದು, ದೊಡ್ಡಬಳ್ಳಾಪುರ ತಾಲೂಕಿನ ಕಂಟನಕುಂಟೆ ಗ್ರಾಮದ ಲಿಟ್ಲ್ ಮಾಸ್ಟರ್ ಪಬ್ಲಿಕ್ ಶಾಲೆಯು…
ಟೀ ಅಂಗಡಿ ಹುಡುಗನ ಮೇಲೆ ಪೊಲೀಸ್ ಇನ್ಸ್ ಪೆಕ್ಟರ್ ದರ್ಪ ಮೆರೆದಿರುವ ಘಟನೆ ದೇವನಹಳ್ಳಿಯ ಕನ್ನಮಂಗಲ ಗ್ರಾಮದಲ್ಲಿ ಹಾದುಹೋಗುವ ರಾಷ್ಟ್ರೀಯ…