ಟಿಎಪಿಎಂಸಿಎಸ್ ಚುನಾವಣೆ: ಅಚ್ಚರಿ ಬೆಳವಣಿಗೆ: ತೂಬಗೆರೆ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ರಂಗಪ್ಪ ನಾಮಪತ್ರ ವಾಪಸ್

ಟಿಎಪಿಎಂಸಿಎಸ್ ಚುನಾವಣೆಯಲ್ಲಿ ಅಚ್ಚರಿ ಬೆಳವಣಿಗೆ ಇಂದು ನಡೆದಿದೆ. ತೂಬಗೆರೆ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ರಂಗಪ್ಪ ನಾಮಪತ್ರ ವಾಪಸ್ ಪಡೆಯುವ ಮೂಲಕ ಮಾಜಿ ಶಾಸಕ ಟಿ.ವೆಂಕಟರಮಣಯ್ಯ,  ಚುಂಚೇಗೌಡ ವಿರುದ್ಧ ಕಿಡಿಕಾರಿದ್ದಾರೆ….

ನ.2 ರಂದು ಟಿಎಪಿಎಂಸಿಎಸ್ ಚುನಾವಣೆ ನಡೆಯಲಿದ್ದು, ಈಗಾಗಲೇ 45ಕ್ಕೂ ಹೆಚ್ಚು ನಾಮಪತ್ರಗಳು ಸಲ್ಲಿಕೆಯಾಗಿದ್ದು, ಇಂದು ನಾಮಪತ್ರ ಹಿಂತೆಗೆದುಕೊಳ್ಳುವುದಕ್ಕೆ ಕೊನೆ ದಿನವಾಗಿದೆ. ಈ ಹಿನ್ನೆಲೆ ಶಾಸಕ ಟಿ.ವೆಂಕಟರಮಣಯ್ಯ ಹಾಗೂ ಚುಂಚೇಗೌಡರ ಜೆಡಿಎಸ್ ಜೊತೆಗಿನ ನಂಟನ್ನು  ವಿರೋಧಿಸಿ ತೂಬಗೆರೆ ಕಾಂಗ್ರೆಸ್ ಮುಖಂಡ ಸಮ್ಮುಖದಲ್ಲಿ ತೂಬಗೆರೆ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ರಂಗಪ್ಪ ನಾಮಪತ್ರ ವಾಪಸ್ ಪಡೆದು ಎಲ್ಲರಲ್ಲಿ ಅಚ್ಚರಿ ಮೂಡಿಸಿದ್ದಾರೆ….

ನಾಮಪತ್ರ ಹಿಂತೆಗೆತ ವಿಚಾರಕ್ಕೆ ಸಂಬಂಧಿಸಿದಂತೆ ಮಾಧ್ಯಮದವರೊಂದಿಗೆ ಮಾತನಾಡಿದ ರಂಗಪ್ಪ, ದೊಡ್ಡಬಳ್ಳಾಪುರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಮುಖಂಡರು ದೇವನಹಳ್ಳಿ ವಿಧಾನಸಭಾ ಕ್ಷೇತ್ರಕ್ಕೆ ಒಳಪಡುವ ತೂಬಗೆರೆ ಕಾಂಗ್ರೆಸ್ ಮುಖಂಡರನ್ನು ಕಡೆಗಣಿಸುತ್ತಿದ್ದಾರೆ ಎಂದು ಆರೋಪಿಸಿ, ಜೆಡಿಎಸ್ ಪಕ್ಷದ ಅಭ್ಯರ್ಥಿಗಳನ್ನು ಅಧಿಕೃತವಾಗಿ ಪಕ್ಷಕ್ಕೆ ಸೇರಿಸಿಕೊಳ್ಳದೇ ಪರೋಕ್ಷವಾಗಿ ಜೆಡಿಎಸ್ ಅಭ್ಯರ್ಥಿಗಳನ್ನು ಜೊತೆಗೆ ಕರೆದುಕೊಂಡು ಚುನಾವಣೆ ಪ್ರಚಾರ ಮಾಡುತ್ತಿದ್ದಾರೆ. ಇದು ಕಾಂಗ್ರೆಸ್ ಪಕ್ಷಕ್ಕೆ ಮುಜುಗರ ತರುವ ವಿಚಾರವಾಗಿದೆ. ಇದು ಮುಂಬರುವ ಜಿಲ್ಲಾ, ತಾಲೂಕು ಪಂಚಾಯಿತಿ ಚುನಾವಣೆಗಳ ಮೇಲೆ ಪರಿಣಾಮ ಬೀರಲಿದೆ ಎಂದು ಹೇಳಿದರು.

ಚುಂಚೇಗೌಡರು ಬಿಡಿಸಿಸಿ ಬ್ಯಾಂಕ್ ಅಧ್ಯಕ್ಷರಾಗುವ ಏಕೈಕ ಕಾರಣಕ್ಕೆ ಜೆಡಿಎಸ್ ಅಭ್ಯರ್ಥಿ ಜೊತೆ ಕೈಜೋಡಿಸಿದ್ದಾರೆ…. ಇದಕ್ಕೆ ಮಾಜಿ ಶಾಸಕ ಟಿ.ವೆಂಕಟರಮಣಯ್ಯನವರ ಸಹಮತವಿದೆ… ಕಳೆದ ಬಾರಿ ಟಿಎಪಿಎಂಸಿಎಸ್ ಅಧ್ಯಕ್ಷ ಸ್ಥಾನ ನೀಡುವ ಭರವಸೆ ನೀಡಿದರು. ಆದರೆ, ಸಹಕಾರ ಕ್ಷೇತ್ರದ ಗಂಧಗಾಳಿ ಗೊತ್ತಿಲ್ಲದವರನ್ನು ಅಧ್ಯಕ್ಷರನ್ನಾಗಿ ಮಾಡಿ ನಮಗೆ ಅನ್ಯಾಯ ಮಾಡಿದ್ದಾರೆ. ತೂಬಗೆರೆಯನ್ನು ಪದೇ ಪದೇ ಕಡೆಗಣಿಸಿದ್ದಾರೆ. ಇದರಿಂದ ಬೇಸತ್ತು ನಾಮಪತ್ರ ಹಿಂತೆಗೆದುಕೊಳ್ಳಲಾಗಿದೆ ಎಂದರು.

ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಚ್ ಮುನಿಯಪ್ಪನವರ ನೇತೃತ್ವದಲ್ಲಿ, ಮಾರ್ಗದರ್ಶನದಲ್ಲಿ ತೂಬಗೆರೆಯಲ್ಲಿ ಕಾಂಗ್ರೆಸ್ ಪಕ್ಷವನ್ನು ಸದೃಢಪಡಿಸುತ್ತೇವೆ ಎಂದರು..

ಈ ವೇಳೆ ತೂಬಗರೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರವಿ‌ಸಿದ್ದಪ್ಪ, ಕಾಂಗ್ರೆಸ್ ಮುಖಂಡರಾದ ಗೋಪಾಲ ನಾಯ್ಕ್, ಗಂಗಸಂದ್ರ ಶ್ರೀಧರ್, ಮುರುಳಿ, ಆರ್.ವಿ ಮಹೇಶ್ ಕುಮಾರ್, ಮುನಿರಾಜು, ಆರ್ ವಿ ಶಿವಕುಮಾರ್ ಸೇರಿದಂತೆ ಇತರರು ಉಪಸ್ಥಿತರಿದ್ದರು..

Ramesh Babu

Journalist

Recent Posts

ಬೆಂ. ಗ್ರಾ ಜಿಲ್ಲೆಯಲ್ಲಿ ಶೇ.87.44ರಷ್ಟು ಎನ್ಯುಮರೇಷನ್ ಫಾರ್ಮ್ ವಿತರಣೆ- ಡಿಸಿ ಡಾ.ಕೆ ಎನ್ ಅನುರಾಧ

ಜಿಲ್ಲೆಯಲ್ಲಿ ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಪ್ರಗತಿಯಲ್ಲಿದ್ದು, ಶೇಕಡ 87.44% ಗಣತಿ ನಮೂನೆ ಮತದಾರರಿಗೆ ವಿತರಿಸಲಾಗಿದೆ ಎಂದು…

1 hour ago

ವಸತಿ ಶಾಲೆಯಲ್ಲಿ ಅನುಮಾನಾಸ್ಪದ ವಿದ್ಯಾರ್ಥಿ ಸಾವು: ಶಿಕ್ಷಕರ ವಿರುದ್ಧ ಪೋಷಕರ ಆರೋಪ

ದೇವನಹಳ್ಳಿ: ವಸತಿ ಶಾಲೆಯಲ್ಲಿ ವ್ಯಾಸಂಗ ಮಾಡುತ್ತಿದ್ದ 12 ವರ್ಷದ ವಿದ್ಯಾರ್ಥಿಯೊಬ್ಬ ಅನುಮಾನಾಸ್ಪದ ರೀತಿಯಲ್ಲಿ ಮೃತಪಟ್ಟಿರುವ ಘಟನೆ ಬೆಂಗಳೂರು ಉತ್ತರ ತಾಲೂಕಿನ…

3 hours ago

ಭ್ರಷ್ಟಾಚಾರ ಆರೋಪ: ಮೂವರು ಅಧಿಕಾರಿಗಳ 14 ಸ್ಥಳಗಳಲ್ಲಿ ಲೋಕಾಯುಕ್ತ ದಾಳಿ

ಬೆಂಗಳೂರು: ಆದಾಯ ಮೀರಿ ಆಸ್ತಿ ಗಳಿಕೆ ಹಾಗೂ ಭ್ರಷ್ಟಾಚಾರದ ಆರೋಪಗಳ ಹಿನ್ನೆಲೆಯಲ್ಲಿ ಲೋಕಾಯುಕ್ತ ಅಧಿಕಾರಿಗಳು ರಾಜ್ಯದ ವಿವಿಧೆಡೆ ಏಕಕಾಲದಲ್ಲಿ ದಾಳಿ…

6 hours ago

2026ರಲ್ಲಿ ‘ಸೂಪರ್ ಎಲ್ ನಿನೊ’ ಆತಂಕ: ಭಾರತಕ್ಕೆ ಕಡಿಮೆ ಮಳೆ, ಕೃಷಿ ಮತ್ತು ಜಲಮೂಲಗಳ ಮೇಲೆ ಗಂಭೀರ ಪರಿಣಾಮದ ಎಚ್ಚರಿಕೆ

ನವದೆಹಲಿ: 2026ರಲ್ಲಿ ರೂಪುಗೊಳ್ಳುತ್ತಿರುವ "ಸೂಪರ್ ಎಲ್ ನಿನೊ" ಪರಿಣಾಮ ದೇಶದ ಮಾನ್ಸೂನ್ ಮೇಲೆ ಗಂಭೀರ ಪರಿಣಾಮ ಬೀರುವ ಸಾಧ್ಯತೆ ಇದೆ…

11 hours ago

‘SIR ಪ್ರಕ್ರಿಯೆಯಲ್ಲಿ ಗಂಭೀರ ಅಕ್ರಮ ಆರೋಪ: ಸಾಕ್ಷ್ಯಾಧಾರಗಳೊಂದಿಗೆ ಮುಖ್ಯ ಚುನಾವಣಾ ಆಯುಕ್ತರಿಗೆ ದೂರು’- ಆರ್ ಅಶೋಕ್

ದೆಹಲಿಯಲ್ಲಿ ಭಾರತದ ಮುಖ್ಯ ಚುನಾವಣಾ ಆಯುಕ್ತರಾದ ಶ್ರೀ ಜ್ಞಾನೇಶ್ ಕುಮಾರ್ ಅವರನ್ನು ಇಂದು ಕೇಂದ್ರ ಸಚಿವರಾದ ಎಚ್.ಡಿ. ಕುಮಾರಸ್ವಾಮಿ, ಶ್ರೀ…

23 hours ago

ಹಳಿ ದಾಟುವಾಗ ಯುವತಿಗೆ ರೈಲು ಡಿಕ್ಕಿ: ಸ್ಥಳದಲ್ಲೇ ಸಾವು

ದೇವನಹಳ್ಳಿ: ತನ್ನ ಗ್ರಾಮದ ಕಡೆಗೆ ತೆರಳಲು ಹೆದ್ದಾರಿ ಪಕ್ಕದ ರೈಲ್ವೇ ಹಳಿ ದಾಟಲು ಹೋದ ಕಾಲೇಜು ಯುವತಿ ರೈಲಿಗೆ ಸಿಲುಕಿ…

23 hours ago