ಟಿಎಪಿಎಂಸಿಎಸ್ ಚುನಾವಣೆ: ಅಚ್ಚರಿ ಬೆಳವಣಿಗೆ: ತೂಬಗೆರೆ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ರಂಗಪ್ಪ ನಾಮಪತ್ರ ವಾಪಸ್

ಟಿಎಪಿಎಂಸಿಎಸ್ ಚುನಾವಣೆಯಲ್ಲಿ ಅಚ್ಚರಿ ಬೆಳವಣಿಗೆ ಇಂದು ನಡೆದಿದೆ. ತೂಬಗೆರೆ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ರಂಗಪ್ಪ ನಾಮಪತ್ರ ವಾಪಸ್ ಪಡೆಯುವ ಮೂಲಕ ಮಾಜಿ ಶಾಸಕ ಟಿ.ವೆಂಕಟರಮಣಯ್ಯ,  ಚುಂಚೇಗೌಡ ವಿರುದ್ಧ ಕಿಡಿಕಾರಿದ್ದಾರೆ….

ನ.2 ರಂದು ಟಿಎಪಿಎಂಸಿಎಸ್ ಚುನಾವಣೆ ನಡೆಯಲಿದ್ದು, ಈಗಾಗಲೇ 45ಕ್ಕೂ ಹೆಚ್ಚು ನಾಮಪತ್ರಗಳು ಸಲ್ಲಿಕೆಯಾಗಿದ್ದು, ಇಂದು ನಾಮಪತ್ರ ಹಿಂತೆಗೆದುಕೊಳ್ಳುವುದಕ್ಕೆ ಕೊನೆ ದಿನವಾಗಿದೆ. ಈ ಹಿನ್ನೆಲೆ ಶಾಸಕ ಟಿ.ವೆಂಕಟರಮಣಯ್ಯ ಹಾಗೂ ಚುಂಚೇಗೌಡರ ಜೆಡಿಎಸ್ ಜೊತೆಗಿನ ನಂಟನ್ನು  ವಿರೋಧಿಸಿ ತೂಬಗೆರೆ ಕಾಂಗ್ರೆಸ್ ಮುಖಂಡ ಸಮ್ಮುಖದಲ್ಲಿ ತೂಬಗೆರೆ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ರಂಗಪ್ಪ ನಾಮಪತ್ರ ವಾಪಸ್ ಪಡೆದು ಎಲ್ಲರಲ್ಲಿ ಅಚ್ಚರಿ ಮೂಡಿಸಿದ್ದಾರೆ….

ನಾಮಪತ್ರ ಹಿಂತೆಗೆತ ವಿಚಾರಕ್ಕೆ ಸಂಬಂಧಿಸಿದಂತೆ ಮಾಧ್ಯಮದವರೊಂದಿಗೆ ಮಾತನಾಡಿದ ರಂಗಪ್ಪ, ದೊಡ್ಡಬಳ್ಳಾಪುರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಮುಖಂಡರು ದೇವನಹಳ್ಳಿ ವಿಧಾನಸಭಾ ಕ್ಷೇತ್ರಕ್ಕೆ ಒಳಪಡುವ ತೂಬಗೆರೆ ಕಾಂಗ್ರೆಸ್ ಮುಖಂಡರನ್ನು ಕಡೆಗಣಿಸುತ್ತಿದ್ದಾರೆ ಎಂದು ಆರೋಪಿಸಿ, ಜೆಡಿಎಸ್ ಪಕ್ಷದ ಅಭ್ಯರ್ಥಿಗಳನ್ನು ಅಧಿಕೃತವಾಗಿ ಪಕ್ಷಕ್ಕೆ ಸೇರಿಸಿಕೊಳ್ಳದೇ ಪರೋಕ್ಷವಾಗಿ ಜೆಡಿಎಸ್ ಅಭ್ಯರ್ಥಿಗಳನ್ನು ಜೊತೆಗೆ ಕರೆದುಕೊಂಡು ಚುನಾವಣೆ ಪ್ರಚಾರ ಮಾಡುತ್ತಿದ್ದಾರೆ. ಇದು ಕಾಂಗ್ರೆಸ್ ಪಕ್ಷಕ್ಕೆ ಮುಜುಗರ ತರುವ ವಿಚಾರವಾಗಿದೆ. ಇದು ಮುಂಬರುವ ಜಿಲ್ಲಾ, ತಾಲೂಕು ಪಂಚಾಯಿತಿ ಚುನಾವಣೆಗಳ ಮೇಲೆ ಪರಿಣಾಮ ಬೀರಲಿದೆ ಎಂದು ಹೇಳಿದರು.

ಚುಂಚೇಗೌಡರು ಬಿಡಿಸಿಸಿ ಬ್ಯಾಂಕ್ ಅಧ್ಯಕ್ಷರಾಗುವ ಏಕೈಕ ಕಾರಣಕ್ಕೆ ಜೆಡಿಎಸ್ ಅಭ್ಯರ್ಥಿ ಜೊತೆ ಕೈಜೋಡಿಸಿದ್ದಾರೆ…. ಇದಕ್ಕೆ ಮಾಜಿ ಶಾಸಕ ಟಿ.ವೆಂಕಟರಮಣಯ್ಯನವರ ಸಹಮತವಿದೆ… ಕಳೆದ ಬಾರಿ ಟಿಎಪಿಎಂಸಿಎಸ್ ಅಧ್ಯಕ್ಷ ಸ್ಥಾನ ನೀಡುವ ಭರವಸೆ ನೀಡಿದರು. ಆದರೆ, ಸಹಕಾರ ಕ್ಷೇತ್ರದ ಗಂಧಗಾಳಿ ಗೊತ್ತಿಲ್ಲದವರನ್ನು ಅಧ್ಯಕ್ಷರನ್ನಾಗಿ ಮಾಡಿ ನಮಗೆ ಅನ್ಯಾಯ ಮಾಡಿದ್ದಾರೆ. ತೂಬಗೆರೆಯನ್ನು ಪದೇ ಪದೇ ಕಡೆಗಣಿಸಿದ್ದಾರೆ. ಇದರಿಂದ ಬೇಸತ್ತು ನಾಮಪತ್ರ ಹಿಂತೆಗೆದುಕೊಳ್ಳಲಾಗಿದೆ ಎಂದರು.

ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಚ್ ಮುನಿಯಪ್ಪನವರ ನೇತೃತ್ವದಲ್ಲಿ, ಮಾರ್ಗದರ್ಶನದಲ್ಲಿ ತೂಬಗೆರೆಯಲ್ಲಿ ಕಾಂಗ್ರೆಸ್ ಪಕ್ಷವನ್ನು ಸದೃಢಪಡಿಸುತ್ತೇವೆ ಎಂದರು..

ಈ ವೇಳೆ ತೂಬಗರೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರವಿ‌ಸಿದ್ದಪ್ಪ, ಕಾಂಗ್ರೆಸ್ ಮುಖಂಡರಾದ ಗೋಪಾಲ ನಾಯ್ಕ್, ಗಂಗಸಂದ್ರ ಶ್ರೀಧರ್, ಮುರುಳಿ, ಆರ್.ವಿ ಮಹೇಶ್ ಕುಮಾರ್, ಮುನಿರಾಜು, ಆರ್ ವಿ ಶಿವಕುಮಾರ್ ಸೇರಿದಂತೆ ಇತರರು ಉಪಸ್ಥಿತರಿದ್ದರು..

Ramesh Babu

Journalist

Recent Posts

ಬಿಜೆಪಿ – ಕಾಂಗ್ರೆಸ್ ನಡುವೆ SIR ಫೈಟ್: ಕಾಂಗ್ರೆಸ್ ನಾಯಕರ ವಿರುದ್ಧ ಸಂಸದ ಡಾ.ಕೆ.ಸುಧಾಕರ್ ಕಿಡಿ

ಬೆಂಗಳೂರು ಗ್ರಾಮಾಂತರ: ಮತದಾರರ ವಿಶೇಷ ತೀವ್ರ ಪಟ್ಟಿ ಪರಿಷ್ಕರಣೆ (SIR) ವಿಚಾರವಾಗಿ ಬಿಜೆಪಿ ಹಾಗೂ ಕಾಂಗ್ರೆಸ್ ಪಕ್ಷಗಳ ನಡುವೆ ರಾಜಕೀಯ…

3 hours ago

ನಗರಸಭೆ ಉಪಾಧ್ಯಕ್ಷರಾಗಿ ವೆಂಕಟೇಶ್(ಬಂತಿ) ಅವಿರೋಧ ಆಯ್ಕೆ

ದೊಡ್ಡಬಳ್ಳಾಪುರ ನಗರಸಭೆ ಉಪಾಧ್ಯಕ್ಷರಾಗಿ ವೆಂಕಟೇಶ್(ಬಂತಿ) ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ದೊಡ್ಡಬಳ್ಳಾಪುರ ನಗರಸಭೆ ಉಪಾಧ್ಯಕ್ಷ ಸ್ಥಾನಕ್ಕೆ ಮಲ್ಲೇಶ್ ರಾಜೀನಾಮೆ ನೀಡಿದ್ದು, ತೆರವಾದ ಸ್ಥಾನಕ್ಕೆ…

6 hours ago

ಸ್ಪರ್ಶ್ ಆಸ್ಪತ್ರೆ ಹೆಣ್ಣೂರು ಒಂದು ವರ್ಷ ಪೂರ್ಣಗೊಳಿಸಿದೆ .ಉತ್ತರ ಬೆಂಗಳೂರಿನಲ್ಲಿ ಸಮಗ್ರ ಮಲ್ಟಿಸ್ಪೆಷಾಲಿಟಿ ಆರೈಕೆಯ ಹೆಚ್ಚುತ್ತಿರುವ ಅಗತ್ಯವನ್ನು ಪ್ರತಿಬಿಂಬಿಸುತ್ತದೆ

ಸ್ಪರ್ಶ್ ಆಸ್ಪತ್ರೆ, ಹೆಣ್ಣೂರು ತನ್ನ ಕಾರ್ಯಾಚರಣೆಯ ಒಂದು ವರ್ಷವನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದೆ. ಆಸ್ಪತ್ರೆಯ ಮೊದಲ ವರ್ಷದ ಕ್ಲಿನಿಕಲ್ ಅಂಕಿಅಂಶಗಳು ಉತ್ತರ…

8 hours ago

ಮತ್ತೆ ಪೆಟ್ರೋಲ್, ಡೀಸೆಲ್ ದರ ಏರಿಕೆ: ದರ‌‌ ಪಟ್ಟಿ‌ ಇಲ್ಲಿದೆ ನೋಡಿ

ನವದೆಹಲಿ: ದೇಶದಲ್ಲಿ ಪೆಟ್ರೋಲ್ ಹಾಗೂ ಡೀಸೆಲ್ ದರಗಳು ಮತ್ತೆ ಏರಿಕೆಯಾಗಿದ್ದು, ವಾಹನ ಸವಾರರಿಗೆ ಮತ್ತೊಂದು ಹೊರೆ ಬಿದ್ದಿದೆ. ಕೇಂದ್ರ ಸರ್ಕಾರ…

12 hours ago

“ಕಾಂಗ್ರೆಸ್ ನಡೆ – ಮತ ರಕ್ಷಣೆಯ ಕಡೆ”: ಕೆಪಿಸಿಸಿ ವತಿಯಿಂದ ಮಹತ್ವದ ಕಾರ್ಯಾಗಾರ: ಸಿಎಂ, ಡಿಸಿಎಂ‌ ಭಾಗಿ

ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯು ಚಿಕ್ಕಬಳ್ಳಾಪುರದ ನಂದಿಬೆಟ್ಟ ರಸ್ತೆಯ ಖಾಸಗಿ ಹೋಟೆಲ್‌ನಲ್ಲಿ‌ ಆಯೋಜಿಸಿದ್ದ "ಕಾಂಗ್ರೆಸ್ ನಡೆ-ಮತ ರಕ್ಷಣೆಯ ಕಡೆ" ಜಾಗೃತ…

14 hours ago

1 ವರ್ಷ 4 ತಿಂಗಳ ಮಗುವಿನ ಕಣ್ಣು ದಾನ: ಸಾವಿನಲ್ಲೂ ಮಾನವೀಯತೆ ಮೆರೆದ ಕುಟುಂಬ

ದೊಡ್ಡಬಳ್ಳಾಪುರ: ನಗರದ ದೇವರಾಜನಗರ ನಿವಾಸಿಗಳಾದ ಭರತ್ ಅವರ 1 ವರ್ಷ 4 ತಿಂಗಳ ಮಗ ಪೋಷಕ್ ಆರೋಗ್ಯದ ವ್ಯತ್ಯಯದಿಂದ ವಿಧಿವಶರಾದ…

2 days ago