TAPMCS Election: ಕಳೆದ ಬಾರಿಯ ಚುನಾವಣೆಗಿಂತ ಈ ಬಾರಿಯ ಚುನಾವಣೆ ಬಹಳ ಭರ್ಜರಿಯಾಗಿ ನಡೆಯುತ್ತಿದೆ. ಐದು ಸಾವಿರಕ್ಕೂ ಹೆಚ್ಚು ಮತದಾರರಿದ್ದು, ಎಲ್ಲಾ ಮತದಾರರು ಸ್ವಯಂಪ್ರೇರಿತರಾಗಿ ಬಂದು ಮತದಾನ ಪ್ರಕ್ರಿಯೆಯಲ್ಲಿ ಭಾಗಹಿಸುತ್ತಿದ್ದಾರೆ. ಎನ್ ಡಿಎ ಬೆಂಬಲಿತ 8 ಅಭ್ಯರ್ಥಿಗಳ ಪರವಾಗಿ ಮತದಾರರು ಒಂದೇ ತೀರ್ಮಾನದಿಂದ ಒಲವು ವ್ಯಕ್ತಪಡಿಸುತ್ತಿದ್ದಾರೆ. ಅದಕ್ಕಾಗಿ ಪಕ್ಷದ ಮುಖಂಡರು, ಕಾರ್ಯಕರ್ತರು ಕಳೆದ ವಾರದಿಂದ ಶ್ರಮಪಟ್ಡಿದ್ದಾರೆ. ಎನ್ ಡಿಎ ಅಭ್ಯರ್ಥಿಗಳೆಲಾ ಗೆಲ್ಲುವ ನಿರೀಕ್ಷೆ ಇದೆ ಎಂದು ಬಿಜೆಪಿ ಬೆಂಗಳೂರು ಗ್ರಾಮಾಂತರ ಜಿಲ್ಲಾ ಕಾರ್ಯದರ್ಶಿ ಹಾಗೂ ವಕೀಲ ಪ್ರತಾಪ್ ಹೇಳಿದ್ದಾರೆ.
ಎನ್ ಡಿಎ ಕೂಟದಲ್ಲಿ ಬಿರುಕಿದೆ ಎಂದು ಕಾಂಗ್ರೆಸ್ ಪಕ್ಷದವರು ಸುಳ್ಳು ಸುದ್ದಿ ಹಬ್ಬಿಸುತ್ತಿದ್ದಾರೆ. ನಾವು ಜೆಡಿಎಸ್ ಮತ್ತು ಬಿಜೆಪಿ ಕಾರ್ಯಕರ್ತರು ಒಟ್ಟಾಗಿದ್ದೇವೆ. ನಮ್ಮಲ್ಲಿ ಯಾವ ಬಿರುಕಿಲ್ಲ. ಪಕ್ಷದ ಅಭ್ಯರ್ಥಿಗಳ ಗೆಲುವಿಗೆ ಶ್ರಮಪಡುತ್ತಿದ್ದೇವೆ ಎಂದರು.
ದೊಡ್ಡಬಳ್ಳಾಪುರ ತಾಲ್ಲೂಕು ವ್ಯವಸಾಯೋತ್ಪನ್ನ ಮಾರಾಟ ಸಹಕಾರ ಸಂಘದ (ಟಿಎಪಿಎಂಸಿಎಸ್) ಚುನಾವಣೆ ನ.2 ರಂದು ಬೆಳಗ್ಗೆ 9 ಗಂಟೆಯಿಂದ ಸಂಜೆ 4ವರೆಗೆ ನಗರದ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ (ಪ್ರೌಢ ಶಾಲಾ ವಿಭಾಗ) ಆಯೋಜನೆ ಮಾಡಲಾಗಿದ್ದು, ಬಿರುಸಿನಿಂದ ಮತದಾನ ನಡೆಯುತ್ತಿದೆ..
ದೊಡ್ಡಬಳ್ಳಾಪುರ: ಜಿಲ್ಲೆಯಲ್ಲಿ ಡಿಜೆ ಬಳಕೆಗೆ ನಿಷೇಧವಿದ್ದರೂ ಗಣೇಶೋತ್ಸವ ಮೆರವಣಿಗೆಯಲ್ಲಿ ಡಿಜೆ ಬಳಸಿದ ಆರೋಪದ ಮೇರೆಗೆ ಡಿಜೆ ವಾಹನವನ್ನು ಜಪ್ತಿ ಮಾಡಿರುವ…
ದೊಡ್ಡಬಳ್ಳಾಪುರ: ಪತಿಯೊಂದಿಗೆ ಲಾಡ್ಜ್ಗೆ ತೆರಳಿದ್ದ 21 ವರ್ಷದ ಮಹಿಳೆ ಅನುಮಾನಾಸ್ಪದವಾಗಿ ಮೃತಪಟ್ಟ ಪ್ರಕರಣಕ್ಕೆ ಇದೀಗ ಬಿಗ್ ಟ್ವಿಸ್ಟ್ ಸಿಕ್ಕಿದೆ. ಪ್ರಕರಣದಲ್ಲಿ…
ದೊಡ್ಡಬಳ್ಳಾಪುರ: ಕಾಂಗ್ರೆಸ್ನಲ್ಲಿ ಒಗ್ಗಟ್ಟು ಅಗತ್ಯವಾಗಿದ್ದು, ಮುಖಂಡರು ಹಾಗೂ ಕಾರ್ಯಕರ್ತರು ಒಟ್ಟಾಗಿ ಕೆಲಸ ಮಾಡಿದರೆ ಮುಂಬರುವ ಎಲ್ಲ ಚುನಾವಣೆಗಳಲ್ಲೂ ಪಕ್ಷದ ಗೆಲುವು…
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿಯರ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ತಾತ್ಕಾಲಿಕ ಆಯ್ಕೆ ಪಟ್ಟಿ…
ಬೆಂಗಳೂರು ಗ್ರಾಮಾಂತರ: ಮಳೆ ಕೊರತೆ ಹಾಗೂ ಬೆಳೆ ನಷ್ಟದಿಂದ ಸಂಕಷ್ಟಕ್ಕೆ ಸಿಲುಕಿದ್ದ ದೊಡ್ಡಬಳ್ಳಾಪುರ ತಾಲೂಕು ಇದೀಗ ಬರಪೀಡಿತ ತಾಲೂಕುಗಳ ಪಟ್ಟಿಗೆ…
ಧಾರವಾಡ: ಭೂಮಿಯ ‘ಅ-ಖರಾಬ್’ ತೆರವುಗೊಳಿಸಲು 1 ಕೋಟಿ ಲಂಚಕ್ಕೆ ಬೇಡಿಕೆ ಇಟ್ಟ ಆರೋಪ ಧಾರವಾಡ ತಹಶೀಲ್ದಾರ್ ಸಚ್ಚಿದಾನಂದ ಕುಚನೂರ್ ವಿರುದ್ಧ…