ಟಿಎಪಿಎಂಸಿಎಸ್ ಚುನಾವಣೆ: ಎಎನ್ ಡಿಎ ಒಗ್ಗಟ್ಟು- ಎಲ್ಲಾ ಅಭ್ಯರ್ಥಿಗಳ ಗೆಲುವು ನಿಶ್ಚಿತ- ಬಿಜೆಪಿ ಬೆಂಗಳೂರು ಗ್ರಾಮಾಂತರ ಜಿಲ್ಲಾ ಕಾರ್ಯದರ್ಶಿ ಹಾಗೂ ವಕೀಲ ಪ್ರತಾಪ್

TAPMCS Election: ಕಳೆದ ಬಾರಿಯ ಚುನಾವಣೆಗಿಂತ ಈ ಬಾರಿಯ ಚುನಾವಣೆ ಬಹಳ ಭರ್ಜರಿಯಾಗಿ ನಡೆಯುತ್ತಿದೆ. ಐದು ಸಾವಿರಕ್ಕೂ ಹೆಚ್ಚು ಮತದಾರರಿದ್ದು, ಎಲ್ಲಾ ಮತದಾರರು ಸ್ವಯಂಪ್ರೇರಿತರಾಗಿ ಬಂದು ಮತದಾನ ಪ್ರಕ್ರಿಯೆಯಲ್ಲಿ‌ ಭಾಗಹಿಸುತ್ತಿದ್ದಾರೆ. ಎನ್ ಡಿಎ ಬೆಂಬಲಿತ‌ 8 ಅಭ್ಯರ್ಥಿಗಳ ಪರವಾಗಿ ಮತದಾರರು ಒಂದೇ ತೀರ್ಮಾನದಿಂದ ಒಲವು ವ್ಯಕ್ತಪಡಿಸುತ್ತಿದ್ದಾರೆ. ಅದಕ್ಕಾಗಿ ಪಕ್ಷದ ಮುಖಂಡರು, ಕಾರ್ಯಕರ್ತರು ಕಳೆದ ವಾರದಿಂದ ಶ್ರಮಪಟ್ಡಿದ್ದಾರೆ. ಎನ್ ಡಿಎ ಅಭ್ಯರ್ಥಿಗಳೆಲಾ ಗೆಲ್ಲುವ ನಿರೀಕ್ಷೆ ಇದೆ ಎಂದು ಬಿಜೆಪಿ ಬೆಂಗಳೂರು ಗ್ರಾಮಾಂತರ ಜಿಲ್ಲಾ ಕಾರ್ಯದರ್ಶಿ ಹಾಗೂ ವಕೀಲ ಪ್ರತಾಪ್ ಹೇಳಿದ್ದಾರೆ.

ಎನ್ ಡಿಎ ಕೂಟದಲ್ಲಿ ಬಿರುಕಿದೆ ಎಂದು ಕಾಂಗ್ರೆಸ್ ಪಕ್ಷದವರು ಸುಳ್ಳು ಸುದ್ದಿ ಹಬ್ಬಿಸುತ್ತಿದ್ದಾರೆ. ನಾವು ಜೆಡಿಎಸ್ ಮತ್ತು ಬಿಜೆಪಿ ಕಾರ್ಯಕರ್ತರು ಒಟ್ಟಾಗಿದ್ದೇವೆ. ನಮ್ಮಲ್ಲಿ ಯಾವ ಬಿರುಕಿಲ್ಲ. ಪಕ್ಷದ ಅಭ್ಯರ್ಥಿಗಳ ಗೆಲುವಿಗೆ ಶ್ರಮಪಡುತ್ತಿದ್ದೇವೆ ಎಂದರು.

ದೊಡ್ಡಬಳ್ಳಾಪುರ ತಾಲ್ಲೂಕು ವ್ಯವಸಾಯೋತ್ಪನ್ನ ಮಾರಾಟ ಸಹಕಾರ ಸಂಘದ (ಟಿಎಪಿಎಂಸಿಎಸ್) ಚುನಾವಣೆ ನ.2 ರಂದು ಬೆಳಗ್ಗೆ 9 ಗಂಟೆಯಿಂದ ಸಂಜೆ 4ವರೆಗೆ ನಗರದ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ (ಪ್ರೌಢ ಶಾಲಾ ವಿಭಾಗ) ಆಯೋಜನೆ ಮಾಡಲಾಗಿದ್ದು, ಬಿರುಸಿನಿಂದ ಮತದಾನ ನಡೆಯುತ್ತಿದೆ..

Ramesh Babu

Journalist

Recent Posts

ಟಾಕ್ಸಿಕ್

ಕ್ರಿಯಾತ್ಮಕತೆ ಮತ್ತು ಪ್ರಯತ್ನಗಳಿಗೂ ಒಂದಷ್ಟು ಮಿತಿ ಇರುತ್ತದೆ. ಏಕೆಂದರೆ ನಾವು ಸಾಮಾನ್ಯ ಮನುಷ್ಯರು. ಹಣ, ಜನಪ್ರಿಯತೆ, ಅಧಿಕಾರ ಬಂದ ತಕ್ಷಣ…

8 hours ago

ಚಿ.ನಾ.ಹಳ್ಳಿ ತಾಲ್ಲೂಕಿಗೆ ಸಿಇಒ ದಿಢೀರ್ ಭೇಟಿ: ವಿವಿಧ ಅಭಿವೃದ್ಧಿ ಕಾಮಗಾರಿಗಳ ಪರಿಶೀಲನೆ

ಚಿಕ್ಕನಾಯಕನಹಳ್ಳಿ: ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಅಶ್ವಿಜ ಬಿ.ವಿ. ಅವರು ತಾಲ್ಲೂಕಿಗೆ ದಿಢೀರ್ ಭೇಟಿ ನೀಡಿ ವಿವಿಧ ಅಭಿವೃದ್ಧಿ…

20 hours ago

ಮಧ್ಯಪ್ರದೇಶದಲ್ಲಿ ಭೀಕರ ರಸ್ತೆ ಅಪಘಾತ: ಬೆಂಗಳೂರು ಸೈಬರ್ ಕ್ರೈಂ ಇನ್‌ಸ್ಪೆಕ್ಟರ್ ಸೇರಿ ನಾಲ್ವರು ಬಲಿ

ಬೆಂಗಳೂರು: ಆರೋಪಿಯ ಹುಡುಕಾಟಕ್ಕೆ ತೆರಳುತ್ತಿದ್ದ ಬೆಂಗಳೂರು ಸೈಬರ್ ಕ್ರೈಂ ತಂಡ ಪ್ರಯಾಣಿಸುತ್ತಿದ್ದ ಬಸ್ ಮಧ್ಯಪ್ರದೇಶದಲ್ಲಿ ಭೀಕರ ಅಪಘಾತಕ್ಕೀಡಾಗಿ, ಪೊಲೀಸ್ ಇನ್‌ಸ್ಪೆಕ್ಟರ್…

1 day ago

ರಕ್ಷಾ ಬಂಧನ ಮತ್ತು ಮದರ್ ತೆರೇಸಾ

ಮದರ್‌ ತೆರೇಸಾ - ಆಗಸ್ಟ್ 26, 1910..... ರಸ್ತೆ ಬದಿಯ ಹರಕಲು ಬಟ್ಟೆಯ ಭಿಕ್ಷುಕರನ್ನು ನೋಡಲೇ ಅಸಹ್ಯಪಡುವ ಪರಿಸ್ಥಿತಿ ಇರುವಾಗ…

1 day ago

ರೈತಪರ ಯೋಜನೆ : ವಿಬಿ-ಜಿ ರಾಮ್ ಜಿ ಯೋಜನೆ

ಚಿಕ್ಕನಾಯಕನಹಳ್ಳಿ: ರೈತರಿಗೆ ಅನುಕೂಲವಾಗಬೇಕೆಂಬ ಉದ್ದೇಶದಿಂದ ಜುಲೈ.1 ರಿಂದ ವಿಕಸಿತ ಭಾರತ್ ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ)…

2 days ago

ಮೂರು ತಾಲೂಕು ಬರದ ಪಟ್ಟಿಗೆ; ದೊಡ್ಡಬಳ್ಳಾಪುರಕ್ಕೆ ವಿನಾಯಿತಿ

ಬೆಂಗಳೂರು ಗ್ರಾಮಾಂತರ: ಮುಂಗಾರು ಮಳೆ ಕೊರತೆಯಿಂದ ರಾಜ್ಯದ 101 ತಾಲೂಕುಗಳನ್ನು ಬರಪೀಡಿತ ಎಂದು ಸರ್ಕಾರ ಘೋಷಿಸಿದ್ದು, ಬೆಂಗಳೂರು ಗ್ರಾಮಾಂತರ ಜಿಲ್ಲೆಯ…

2 days ago