ಇಂದು ಟಿಎಪಿಎಂಸಿಎಸ್ ಚುನಾವಣೆ ಬಿರುಸಿನಿಂದ ನಡೆಯುತ್ತಿದ್ದು, ಅದೇರೀತಿ ಕೊನೆಗಳಿಯ ಕಸರತ್ತುಗಳನ್ನು ಆಯಾ ಪಕ್ಷಗಳ ನಾಯಕರು, ಮುಖಂಡರು, ಕಾರ್ಯಕರ್ತರು ನಡೆಸುತ್ತಿದ್ದಾರೆ. ಹಾಗೇ ಮತದಾರರು ಸಹ ಅಷ್ಟೇ ಉತ್ಸಾಹದಿಂದ ಮತದಾನ ಮಾಡುತ್ತಿದ್ದಾರೆ.
ದೊಡ್ಡಬಳ್ಳಾಪುರ ತಾಲ್ಲೂಕು ವ್ಯವಸಾಯೋತ್ಪನ್ನ ಮಾರಾಟ ಸಹಕಾರ ಸಂಘದ (ಟಿಎಪಿಎಂಸಿಎಸ್) ಚುನಾವಣೆ ನ.2 ರಂದು ಬೆಳಗ್ಗೆ 9 ಗಂಟೆಯಿಂದ ಸಂಜೆ 4ವರೆಗೆ ನಗರದ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ (ಪ್ರೌಢ ಶಾಲಾ ವಿಭಾಗ) ಆಯೋಜನೆ ಮಾಡಲಾಗಿದ್ದು, ಬಿರುಸಿನಿಂದ ಮತದಾನ ನಡೆಯುತ್ತಿದೆ..
ಬೆಳಗ್ಗೆ 11 ಗಂಟೆ ನಂತರ ಮತದಾನ ಚುರುಕುಗೊಂಡಿದೆ. ಇದೇ ವೇಳೆ ಮಾತನಾಡಿದ ಕೆಪಿಸಿಸಿ ಸದಸ್ಯ ಲಕ್ಷೀಪತಿ ಅವರು, ಮತದಾರರ ಒಲವು ನೋಡಿ ಹರ್ಷ ವ್ಯಕ್ತಪಡಿಸಿ, ಕಾಂಗ್ರೆಸ್ ನ ಗೆಲುವು ಶತಸಿದ್ಧ ಎಂದು ಹೇಳಿದರು.
ಎ ಮತ್ತು ಬಿ ತರಗತಿಯ ಎಲ್ಲಾ 13 ಸ್ಥಾನಗಳಿಗೂ ಕಾಂಗ್ರೆಸ್ ತಮ್ಮ ಬೆಂಬಲಿತ ಅಭ್ಯರ್ಥಿಗಳನ್ನು ಕಣಕ್ಕೆ ಇಳಿಸಿದೆ. ಈಗಾಗಲೇ ‘ಎ’ ತರಗತಿ ಐದು ಸ್ಥಾನಗಳನ್ನು ಗೆಲ್ಲುವ ಸಂಪೂರ್ಣ ಭರವಸೆ ಇದೆ. ಇವುಗಳನ್ನು ಹೊರತುಪಡಿಸಿ ಸರ್ಕಾರದಿಂದ ನಾಮನಿರ್ದೇಶನ ಸ್ಥಾನ, ಪಿಎಲ್ ಡಿ ಬ್ಯಾಂಕ್ ಮತ್ತು ಬಿಡಿಸಿಸಿ ಬ್ಯಾಂಕ್ ಪ್ರತಿನಿಧಿ ನಮ್ಮದೇ ಆಗಿವೆ. ಈ ಹಿನ್ನೆಲೆ ಕಾಂಗ್ರೆಸ್ ಟಿಎಪಿಎಂಸಿಎಸ್ ಚುಕ್ಕಾಣಿ ಹಿಡಿದೇ ಹಿಡುಯುತ್ತದೆ ಎಂದು ಹೇಳಿದರು…
2026-27ನೇ ಸಾಲಿನ ರಾಜ್ಯ ಬಜೆಟ್ ಮಂಡನೆಗೆ ದಿನಾಂಕ ಫಿಕ್ಸ್ ಆಗಿದೆ. ಸಿಎಂ ಕುರ್ಚಿ ಕಾಳಗದ ನಡುವೆಯೇ ಹಣಕಾಸು ಖಾತೆಯನ್ನ ಹೊಂದಿರುವ…
ಕೊಡಗಿನ ಬೆಡಗಿ ಬಹುಭಾಷಾ ನಟಿ ರಶ್ಮಿಕಾ ಮಂದಣ್ಣ ಮತ್ತು ಟಾಲಿವುಡ್ ನಟ ವಿಜಯ್ ದೇವರಕೊಂಡ ಹಲವು ವರ್ಷಗಳಿಂದ ಡೇಟಿಂಗ್ನಲ್ಲಿದ್ದಾರೆ ಎನ್ನುವುದು…
ಕಂಪನಿಗಳಲ್ಲಿ ಖಾಲಿ ಇರುವ ಹುದ್ದೆಗಳ ನೇಮಕ ಮಾಡಿಕೊಳ್ಳುವ ಸಂದರ್ಭದಲ್ಲಿ ಸ್ಥಳೀಯ ಅಭ್ಯರ್ಥಿಗಳಿಗೆ ಮೊದಲ ಆದ್ಯತೆ ನೀಡಲು ಜಿಲ್ಲಾ ಉಸ್ತುವಾರಿ ಸಚಿವರಾದ…
ಬಾಗೇಪಲ್ಲಿ ಕಾಂಗ್ರೆಸ್ ಶಾಸಕ ಎಸ್ ಎನ್ ಸುಬ್ಬಾರೆಡ್ಡಿ ಆಯ್ಕೆ ಅಸಿಂಧು ಎಂದು ಕರ್ನಾಟಕ ಹೈಕೋರ್ಟ್ ಆದೇಶ ನೀಡಿದೆ. ಚುನಾವಣಾ ಆಯೋಗ…
ನಮ್ಮ ಕಾರ್ಯಕರ್ತರನ್ನು ಮುಟ್ಟಬೇಡಿ, ಆಸೆ ಆಮಿಷವೊಡ್ಡಿ ನಿಮ್ಮ ಪಕ್ಷಕ್ಕೆ ಸೇರಿಸಿಕೊಳ್ಳಬೇಡಿ. ನಮ್ಮ ಕಾರ್ಯಕರ್ತರನ್ನು ನಿಮ್ಮ ಪಕ್ಷಕ್ಕೆ ಸೇರಿಸುತ್ತೇವೆ ಎಂದು ಹೇಳಿಲ್ಲ.…
ಮೊಬೈಲ್ ಚಾರ್ಜ್ ಆಗುತ್ತಿರುವಾಗ ಶಾರ್ಟ್ ಸರ್ಕಿಟ್ ಆಗಿ ಮನೆಯಲ್ಲಿ ದಟ್ಟಹೊಗೆ ಆವರಿಸಿಕೊಂಡು ಕೆಲಕಾಲ ಎಲ್ಲರಲ್ಲಿ ಆತಂಕ ಮೂಡಿಸಿದ್ದ ಘಟನೆ ದೊಡ್ಡಬಳ್ಳಾಪುರ…