ಟಿಎಪಿಎಂಸಿಎಸ್ ಚುನಾವಣೆ: ಕಾಂಗ್ರೆಸ್ ನ‌ ಗೆಲುವು ಶತಸಿದ್ಧ- ಕೆಪಿಸಿಸಿ ಸದಸ್ಯ ಜಿ‌.ಲಕ್ಷ್ಮೀಪತಿ

ಇಂದು ಟಿಎಪಿಎಂಸಿಎಸ್ ಚುನಾವಣೆ ಬಿರುಸಿನಿಂದ ನಡೆಯುತ್ತಿದ್ದು, ಅದೇರೀತಿ‌ ಕೊನೆಗಳಿಯ ಕಸರತ್ತುಗಳನ್ನು ಆಯಾ ಪಕ್ಷಗಳ ನಾಯಕರು, ಮುಖಂಡರು, ಕಾರ್ಯಕರ್ತರು ನಡೆಸುತ್ತಿದ್ದಾರೆ. ಹಾಗೇ ಮತದಾರರು ಸಹ ಅಷ್ಟೇ ಉತ್ಸಾಹದಿಂದ ಮತದಾನ ಮಾಡುತ್ತಿದ್ದಾರೆ.

ದೊಡ್ಡಬಳ್ಳಾಪುರ ತಾಲ್ಲೂಕು ವ್ಯವಸಾಯೋತ್ಪನ್ನ ಮಾರಾಟ ಸಹಕಾರ ಸಂಘದ (ಟಿಎಪಿಎಂಸಿಎಸ್) ಚುನಾವಣೆ ನ.2 ರಂದು ಬೆಳಗ್ಗೆ 9 ಗಂಟೆಯಿಂದ ಸಂಜೆ 4ವರೆಗೆ ನಗರದ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ (ಪ್ರೌಢ ಶಾಲಾ ವಿಭಾಗ) ಆಯೋಜನೆ ಮಾಡಲಾಗಿದ್ದು, ಬಿರುಸಿನಿಂದ ಮತದಾನ ನಡೆಯುತ್ತಿದೆ..

ಬೆಳಗ್ಗೆ 11 ಗಂಟೆ ನಂತರ ಮತದಾನ ಚುರುಕುಗೊಂಡಿದೆ. ಇದೇ ವೇಳೆ ಮಾತನಾಡಿದ ಕೆಪಿಸಿಸಿ ಸದಸ್ಯ ಲಕ್ಷೀಪತಿ ಅವರು, ಮತದಾರರ ಒಲವು ನೋಡಿ ಹರ್ಷ ವ್ಯಕ್ತಪಡಿಸಿ, ಕಾಂಗ್ರೆಸ್ ನ‌ ಗೆಲುವು ಶತಸಿದ್ಧ ಎಂದು ಹೇಳಿದರು.

ಎ ಮತ್ತು ಬಿ ತರಗತಿಯ ಎಲ್ಲಾ 13 ಸ್ಥಾನಗಳಿಗೂ ಕಾಂಗ್ರೆಸ್ ತಮ್ಮ ಬೆಂಬಲಿತ ಅಭ್ಯರ್ಥಿಗಳನ್ನು ಕಣಕ್ಕೆ ಇಳಿಸಿದೆ. ಈಗಾಗಲೇ ‘ಎ’ ತರಗತಿ ಐದು ಸ್ಥಾನಗಳನ್ನು ಗೆಲ್ಲುವ‌ ಸಂಪೂರ್ಣ ಭರವಸೆ ಇದೆ. ಇವುಗಳನ್ನು ಹೊರತುಪಡಿಸಿ ಸರ್ಕಾರದಿಂದ ನಾಮನಿರ್ದೇಶನ ಸ್ಥಾನ, ಪಿಎಲ್ ಡಿ ಬ್ಯಾಂಕ್ ಮತ್ತು ಬಿಡಿಸಿಸಿ ಬ್ಯಾಂಕ್ ಪ್ರತಿನಿಧಿ ನಮ್ಮದೇ ಆಗಿವೆ. ಈ ಹಿನ್ನೆಲೆ ಕಾಂಗ್ರೆಸ್ ಟಿಎಪಿಎಂಸಿಎಸ್ ಚುಕ್ಕಾಣಿ ಹಿಡಿದೇ ಹಿಡುಯುತ್ತದೆ ಎಂದು ಹೇಳಿದರು…

Ramesh Babu

Journalist

Recent Posts

ನಿಷೇಧದ ನಡುವೆಯೂ ಡಿಜೆ ಬಳಕೆ: ವಾಹನ ವಶ, ಪ್ರಕರಣ ದಾಖಲು

ದೊಡ್ಡಬಳ್ಳಾಪುರ: ಜಿಲ್ಲೆಯಲ್ಲಿ ಡಿಜೆ ಬಳಕೆಗೆ ನಿಷೇಧವಿದ್ದರೂ ಗಣೇಶೋತ್ಸವ ಮೆರವಣಿಗೆಯಲ್ಲಿ ಡಿಜೆ ಬಳಸಿದ ಆರೋಪದ ಮೇರೆಗೆ ಡಿಜೆ ವಾಹನವನ್ನು ಜಪ್ತಿ ಮಾಡಿರುವ…

5 hours ago

ಲಾಡ್ಜ್‌ನಲ್ಲಿ ಮಹಿಳೆ ಸಾವು ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ಕೊಲೆ ಶಂಕಿತ ಪತಿ ಆನಂದ್ ನೇಣಿಗೆ ಶರಣು

ದೊಡ್ಡಬಳ್ಳಾಪುರ: ಪತಿಯೊಂದಿಗೆ ಲಾಡ್ಜ್‌ಗೆ ತೆರಳಿದ್ದ 21 ವರ್ಷದ ಮಹಿಳೆ ಅನುಮಾನಾಸ್ಪದವಾಗಿ ಮೃತಪಟ್ಟ ಪ್ರಕರಣಕ್ಕೆ ಇದೀಗ ಬಿಗ್ ಟ್ವಿಸ್ಟ್ ಸಿಕ್ಕಿದೆ. ಪ್ರಕರಣದಲ್ಲಿ…

7 hours ago

ಕಾಂಗ್ರೆಸ್‌ನಲ್ಲಿ ಒಗ್ಗಟ್ಟು ಅಗತ್ಯ- ಕೆಪಿಸಿಸಿ ಸದಸ್ಯ ಎಸ್.ಆರ್. ಮುನಿರಾಜ್

ದೊಡ್ಡಬಳ್ಳಾಪುರ: ಕಾಂಗ್ರೆಸ್‌ನಲ್ಲಿ ಒಗ್ಗಟ್ಟು ಅಗತ್ಯವಾಗಿದ್ದು, ಮುಖಂಡರು ಹಾಗೂ ಕಾರ್ಯಕರ್ತರು ಒಟ್ಟಾಗಿ ಕೆಲಸ ಮಾಡಿದರೆ ಮುಂಬರುವ ಎಲ್ಲ ಚುನಾವಣೆಗಳಲ್ಲೂ ಪಕ್ಷದ ಗೆಲುವು…

10 hours ago

ಅಂಗನವಾಡಿ ಕಾರ್ಯಕರ್ತೆ/ ಸಹಾಯಕಿ ಹುದ್ದೆಗಳ ತಾತ್ಕಾಲಿಕ ಆಯ್ಕೆಪಟ್ಟಿ ಪ್ರಕಟ: ಆಕ್ಷೇಪಣೆ ಆಹ್ವಾನ

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿಯರ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ತಾತ್ಕಾಲಿಕ ಆಯ್ಕೆ ಪಟ್ಟಿ…

1 day ago

ಬರದ ಬವಣೆಗೆ ಸಿಲುಕಿದ ದೊಡ್ಡಬಳ್ಳಾಪುರ: ಬರಪೀಡಿತ ಪಟ್ಟಿಗೆ ಸೇರ್ಪಡೆ

ಬೆಂಗಳೂರು ಗ್ರಾಮಾಂತರ: ಮಳೆ ಕೊರತೆ ಹಾಗೂ ಬೆಳೆ ನಷ್ಟದಿಂದ ಸಂಕಷ್ಟಕ್ಕೆ ಸಿಲುಕಿದ್ದ ದೊಡ್ಡಬಳ್ಳಾಪುರ ತಾಲೂಕು ಇದೀಗ ಬರಪೀಡಿತ ತಾಲೂಕುಗಳ ಪಟ್ಟಿಗೆ…

1 day ago

50 ಲಕ್ಷ ಲಂಚ ಪಡೆಯುವಾಗ ತಹಶೀಲ್ದಾರ್ ಲೋಕಾಯುಕ್ತ ಬಲೆಗೆ!

ಧಾರವಾಡ: ಭೂಮಿಯ ‘ಅ-ಖರಾಬ್’ ತೆರವುಗೊಳಿಸಲು 1 ಕೋಟಿ ಲಂಚಕ್ಕೆ ಬೇಡಿಕೆ ಇಟ್ಟ ಆರೋಪ ಧಾರವಾಡ ತಹಶೀಲ್ದಾರ್ ಸಚ್ಚಿದಾನಂದ ಕುಚನೂರ್ ವಿರುದ್ಧ…

1 day ago