ಇಂದು ಟಿಎಪಿಎಂಸಿಎಸ್ ಚುನಾವಣೆ ಬಿರುಸಿನಿಂದ ನಡೆಯುತ್ತಿದ್ದು, ಅದೇರೀತಿ ಕೊನೆಗಳಿಯ ಕಸರತ್ತುಗಳನ್ನು ಆಯಾ ಪಕ್ಷಗಳ ನಾಯಕರು, ಮುಖಂಡರು, ಕಾರ್ಯಕರ್ತರು ನಡೆಸುತ್ತಿದ್ದಾರೆ. ಹಾಗೇ ಮತದಾರರು ಸಹ ಅಷ್ಟೇ ಉತ್ಸಾಹದಿಂದ ಮತದಾನ ಮಾಡುತ್ತಿದ್ದಾರೆ.
ದೊಡ್ಡಬಳ್ಳಾಪುರ ತಾಲ್ಲೂಕು ವ್ಯವಸಾಯೋತ್ಪನ್ನ ಮಾರಾಟ ಸಹಕಾರ ಸಂಘದ (ಟಿಎಪಿಎಂಸಿಎಸ್) ಚುನಾವಣೆ ನ.2 ರಂದು ಬೆಳಗ್ಗೆ 9 ಗಂಟೆಯಿಂದ ಸಂಜೆ 4ವರೆಗೆ ನಗರದ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ (ಪ್ರೌಢ ಶಾಲಾ ವಿಭಾಗ) ಆಯೋಜನೆ ಮಾಡಲಾಗಿದ್ದು, ಬಿರುಸಿನಿಂದ ಮತದಾನ ನಡೆಯುತ್ತಿದೆ..
ಬೆಳಗ್ಗೆ 11 ಗಂಟೆ ನಂತರ ಮತದಾನ ಚುರುಕುಗೊಂಡಿದೆ. ಇದೇ ವೇಳೆ ಮಾತನಾಡಿದ ಕೆಪಿಸಿಸಿ ಸದಸ್ಯ ಲಕ್ಷೀಪತಿ ಅವರು, ಮತದಾರರ ಒಲವು ನೋಡಿ ಹರ್ಷ ವ್ಯಕ್ತಪಡಿಸಿ, ಕಾಂಗ್ರೆಸ್ ನ ಗೆಲುವು ಶತಸಿದ್ಧ ಎಂದು ಹೇಳಿದರು.
ಎ ಮತ್ತು ಬಿ ತರಗತಿಯ ಎಲ್ಲಾ 13 ಸ್ಥಾನಗಳಿಗೂ ಕಾಂಗ್ರೆಸ್ ತಮ್ಮ ಬೆಂಬಲಿತ ಅಭ್ಯರ್ಥಿಗಳನ್ನು ಕಣಕ್ಕೆ ಇಳಿಸಿದೆ. ಈಗಾಗಲೇ ‘ಎ’ ತರಗತಿ ಐದು ಸ್ಥಾನಗಳನ್ನು ಗೆಲ್ಲುವ ಸಂಪೂರ್ಣ ಭರವಸೆ ಇದೆ. ಇವುಗಳನ್ನು ಹೊರತುಪಡಿಸಿ ಸರ್ಕಾರದಿಂದ ನಾಮನಿರ್ದೇಶನ ಸ್ಥಾನ, ಪಿಎಲ್ ಡಿ ಬ್ಯಾಂಕ್ ಮತ್ತು ಬಿಡಿಸಿಸಿ ಬ್ಯಾಂಕ್ ಪ್ರತಿನಿಧಿ ನಮ್ಮದೇ ಆಗಿವೆ. ಈ ಹಿನ್ನೆಲೆ ಕಾಂಗ್ರೆಸ್ ಟಿಎಪಿಎಂಸಿಎಸ್ ಚುಕ್ಕಾಣಿ ಹಿಡಿದೇ ಹಿಡುಯುತ್ತದೆ ಎಂದು ಹೇಳಿದರು…
ಬಾಶೆಟ್ಟಿಹಳ್ಳಿ ಬಳಿ ಭೀಕರ ಅಪಘಾತವಾಗಿ ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮತ್ತೋರ್ವ ಯುವತಿಗೆ ಗಂಭೀರವಾಗಿ ಗಾಯಗೊಂಡಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ…
ದೊಡ್ಡಬಳ್ಳಾಪುರ: ಕ್ಷುಲ್ಲಕ ಕಾರಣಕ್ಕೆ ಹೆಣ್ಣು ಕೊಟ್ಟ ಮಾವನನ್ನೇ ಅಳಿಯ ಕೊಲೆಗೈದ ಘಟನೆ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯ ನೇರಳೇಘಟ್ಟ…
ಗೌರವಾನ್ವಿತ ಮುಖ್ಯಮಂತ್ರಿ ಶ್ರೀ ಡಿಕೆ ಶಿವಕುಮಾರ್ ಅವರೇ, ಪ್ರಜಾಪ್ರಭುತ್ವ ಎಂಬ ಪರಿಕಲ್ಪನೆಯ ಅತ್ಯದ್ಭುತ ಫಲಿತಾಂಶವೆಂದರೆ ಯಾವುದೋ ಹಳ್ಳಿಯಲ್ಲಿ, ಎಲ್ಲಿಯೋ ಹುಟ್ಟಿದ…
ದೇವನಹಳ್ಳಿ: ಭಾರತಮಾಲಾ ಪರಿಯೋಜನೆಯಡಿ ಅತ್ಯಾಧುನಿಕ ತಂತ್ರಜ್ಞಾನದೊಂದಿಗೆ ನಿರ್ಮಾಣಗೊಳ್ಳುತ್ತಿರುವ ಬೆಂಗಳೂರು–ಚೆನ್ನೈ ಎಕ್ಸ್ಪ್ರೆಸ್ವೇ ದೇಶದ ಎರಡು ಪ್ರಮುಖ ಆರ್ಥಿಕ ಶಕ್ತಿ ಕೇಂದ್ರಗಳಾದ ಬೆಂಗಳೂರು…
ದೊಡ್ಡಬಳ್ಳಾಪುರ: ಜೂ.13ರಂದು ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ತೊಗರಿಘಟ್ಟ ಗ್ರಾಮದಲ್ಲಿ ಕೃಷಿ ಹೊಂಡದಲ್ಲಿ ಆಟವಾಡಲು ಹೋಗಿದ್ದ ಇಬ್ಬರು ಮಕ್ಕಳು…
ಮುಖ್ಯಮಂತ್ರಿ ಶ್ರೀ ಡಿಕೆ ಶಿವಕುಮಾರ್ ಅವರು ಜಿಲ್ಲಾಧಿಕಾರಿಗಳು, ಎಸ್ಪಿ, ಸಿಇಒ, ಡಿಎಫ್ಒ ಹಾಗೂ ಹಿರಿಯ ಸರ್ಕಾರಿ ಅಧಿಕಾರಿಗಳೊಂದಿಗೆ ನಡೆಸಿದ ಪ್ರಗತಿ…