ಇಂದು ಟಿಎಪಿಎಂಸಿಎಸ್ ಚುನಾವಣೆ ಬಿರುಸಿನಿಂದ ನಡೆಯುತ್ತಿದ್ದು, ಅದೇರೀತಿ ಕೊನೆಗಳಿಯ ಕಸರತ್ತುಗಳನ್ನು ಆಯಾ ಪಕ್ಷಗಳ ನಾಯಕರು, ಮುಖಂಡರು, ಕಾರ್ಯಕರ್ತರು ನಡೆಸುತ್ತಿದ್ದಾರೆ. ಹಾಗೇ ಮತದಾರರು ಸಹ ಅಷ್ಟೇ ಉತ್ಸಾಹದಿಂದ ಮತದಾನ ಮಾಡುತ್ತಿದ್ದಾರೆ.
ದೊಡ್ಡಬಳ್ಳಾಪುರ ತಾಲ್ಲೂಕು ವ್ಯವಸಾಯೋತ್ಪನ್ನ ಮಾರಾಟ ಸಹಕಾರ ಸಂಘದ (ಟಿಎಪಿಎಂಸಿಎಸ್) ಚುನಾವಣೆ ನ.2 ರಂದು ಬೆಳಗ್ಗೆ 9 ಗಂಟೆಯಿಂದ ಸಂಜೆ 4ವರೆಗೆ ನಗರದ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ (ಪ್ರೌಢ ಶಾಲಾ ವಿಭಾಗ) ಆಯೋಜನೆ ಮಾಡಲಾಗಿದ್ದು, ಬಿರುಸಿನಿಂದ ಮತದಾನ ನಡೆಯುತ್ತಿದೆ..
ಬೆಳಗ್ಗೆ 11 ಗಂಟೆ ನಂತರ ಮತದಾನ ಚುರುಕುಗೊಂಡಿದೆ. ಇದೇ ವೇಳೆ ಮಾತನಾಡಿದ ಕೆಪಿಸಿಸಿ ಸದಸ್ಯ ಲಕ್ಷೀಪತಿ ಅವರು, ಮತದಾರರ ಒಲವು ನೋಡಿ ಹರ್ಷ ವ್ಯಕ್ತಪಡಿಸಿ, ಕಾಂಗ್ರೆಸ್ ನ ಗೆಲುವು ಶತಸಿದ್ಧ ಎಂದು ಹೇಳಿದರು.
ಎ ಮತ್ತು ಬಿ ತರಗತಿಯ ಎಲ್ಲಾ 13 ಸ್ಥಾನಗಳಿಗೂ ಕಾಂಗ್ರೆಸ್ ತಮ್ಮ ಬೆಂಬಲಿತ ಅಭ್ಯರ್ಥಿಗಳನ್ನು ಕಣಕ್ಕೆ ಇಳಿಸಿದೆ. ಈಗಾಗಲೇ ‘ಎ’ ತರಗತಿ ಐದು ಸ್ಥಾನಗಳನ್ನು ಗೆಲ್ಲುವ ಸಂಪೂರ್ಣ ಭರವಸೆ ಇದೆ. ಇವುಗಳನ್ನು ಹೊರತುಪಡಿಸಿ ಸರ್ಕಾರದಿಂದ ನಾಮನಿರ್ದೇಶನ ಸ್ಥಾನ, ಪಿಎಲ್ ಡಿ ಬ್ಯಾಂಕ್ ಮತ್ತು ಬಿಡಿಸಿಸಿ ಬ್ಯಾಂಕ್ ಪ್ರತಿನಿಧಿ ನಮ್ಮದೇ ಆಗಿವೆ. ಈ ಹಿನ್ನೆಲೆ ಕಾಂಗ್ರೆಸ್ ಟಿಎಪಿಎಂಸಿಎಸ್ ಚುಕ್ಕಾಣಿ ಹಿಡಿದೇ ಹಿಡುಯುತ್ತದೆ ಎಂದು ಹೇಳಿದರು…
ದೊಡ್ಡಬಳ್ಳಾಪುರ: ಇತ್ತೀಚಿನ ದಿನಗಳಲ್ಲಿ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಕಳ್ಳತನ ಪ್ರಕರಣಗಳು ಆತಂಕಕಾರಿ ಪ್ರಮಾಣದಲ್ಲಿ ಹೆಚ್ಚಾಗುತ್ತಿದ್ದು, ಜನಸಾಮಾನ್ಯರ ನೆಮ್ಮದಿ ಕದಡಿದೆ. ಮಹಿಳೆಯರ ಚಿನ್ನಾಭರಣ,…
ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಸೇರಿದಂತೆ ತಮ್ಮೊಂದಿಗೆ ಬುಧವಾರ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ 13 ಸಚಿವರಿಗೆ ಗುರುವಾರ ಖಾತೆ…
ಬೆಂಗಳೂರು ಗ್ರಾಮಾಂತರ ಜಿಲ್ಲಾ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿರವ ಸಮಾಜ ಕಲ್ಯಾಣ ಇಲಾಖೆ ವ್ಯಾಪ್ತಿಯಲ್ಲಿ ಬರುವ ವಸತಿ ಶಾಲೆಗಳಲ್ಲಿ ತಾತ್ಕಾಲಿಕವಾಗಿ ಗೌರವಧನ ಆಧಾರದ…
ಮಾವು ಮತ್ತು ಹಲಸು ಹಣ್ಣಿನ ಋತುಮಾನದ ಈ ಸಂದರ್ಭದಲ್ಲಿ ತೋಟಗಾರಿಕೆ ಇಲಾಖೆ ವತಿಯಿಂದ ರೈತರಿಗೆ ಹಾಗೂ ಗ್ರಾಹಕರಿಗೆ ಅನುಕೂಲವಾಗಲೆಂದು ಒಂದೇ…
ದೊಡ್ಡಬಳ್ಳಾಪುರ ನಗರದ ಡಿ ಕ್ರಾಸ್ ಬಳಿ ನಿಲ್ಲಿಸಿದ್ದ ಟಿವಿಎಸ್ ಎಕ್ಸ್ಎಲ್-100 ವಾಹನವನ್ನು ಕಳ್ಳನೊಬ್ಬ ಕಳವು ಮಾಡಿಕೊಂಡು ಹೋಗಿರುವ ಘಟನೆ ಬುಧವಾರ…
ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ(KPCC)ಯ ನೂತನ ಅಧ್ಯಕ್ಷರಾಗಿ ಬಿ.ಕೆ ಹರಿಪ್ರಸಾದ್ ಅವರನ್ನು ನೇಮಕ ಮಾಡಲಾಗಿದೆ. ಡಿಕೆ ಶಿವಕುಮಾರ್ ಅವರು ಬುಧವಾರ…