ಟಿಎಪಿಎಂಸಿಎಸ್ ಚುನಾವಣೆ ಸೋಲಿಗೆ ನಾನೇ ನೇರ ಕಾರಣ- ಸೋಲಿನ ಸಂಪೂರ್ಣ ಜವಾಬ್ದಾರಿ ಶಾಸಕನಾಗಿ ನಾನೇ ತೆಗೆದುಕೊಳ್ಳುತ್ತೇನೆ- ಶಾಸಕ ಧೀರಜ್‌ ಮುನಿರಾಜ್

ಟಿಎಪಿಎಂಸಿಎಸ್ ಚುನಾವಣೆ ಸೋಲಿಗೆ ನಾನೇ ನೇರ ಕಾರಣ. ಸೋಲಿನ ಸಂಪೂರ್ಣ ಜವಾಬ್ದಾರಿ ಶಾಸಕನಾಗಿ ನಾನೇ ತೆಗೆದುಕೊಳ್ಳುತ್ತೇನೆ ಎಂದು ಶಾಸಕ ಧೀರಜ್‌ ಮುನಿರಾಜ್ ಹೇಳಿದರು.

ದೊಡ್ಡಬಳ್ಳಾಪುರ ತಾಲೂಕಿನ ವ್ಯವಸಾಯ ಉತ್ಪನ್ನ ಮಾರಾಟ ಸಹಕಾರ ಸಂಘದ ಚುನಾವಣೆ ನ.2ರಂದು ನಡೆಯಿತು. ಈ ಚುನಾವಣೆಯಲ್ಲಿ ಎನ್ ಡಿಎ ಮೈತ್ರಿಕೂಟ ಸೋಲನ್ನು ಅನುಭವಿಸಿತ್ತು. ಈ ಕುರಿತು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನನಗೆ ಪಿಎಲ್ ಡಿ ಬ್ಯಾಂಕ್ ನಂತರ ಒಳ್ಳೆ ಅನುಭವವಾಗಿದೆ. ಪಿಎಲ್ ಡಿ ಬ್ಯಾಂಕ್ ಶೇರ್ ಗಳನ್ನು ಸೂಕ್ತರೀತಿಯಲ್ಲಿ ಕಟ್ಟಿಸಿಕೊಂಡಿರಲಿಲ್ಲ. ನನಗೆ ತಾಲೂಕು ಮಟ್ಟದ ಸಹಕಾರಿ ಕ್ಷೇತ್ರದ ಚುನಾವಣೆ ಹೊಸದು, ಅದು ನನಗೆ ಮೊದಲ ಅನುಭವ. ಈ ಹಿನ್ನೆಲೆ ಒಂದು ಚೂರು ಎಡವಿರಬಹುದು. ಸೋಲಿಗೆ ಸಂಪೂರ್ಣವಾಗಿ ನಂದೇ ಜವಾಬ್ದಾರಿಯಾಗಿರುತ್ತದೆ.‌ ಮುಂದಿನ ದಿನಗಳಲ್ಲಿ ಎಲ್ಲವನ್ನೂ ಸರಿಪಡಿಸಿಕೊಂಡು, ಮುಂಬರುವ ಚುನಾವಣೆಗಳನ್ನು ಗೆದ್ದು ತಕ್ಕ ಪ್ರತ್ಯುತ್ತರ ನೀಡುವ ಪ್ರಯತ್ನ ಮಾಡುತ್ತೇವೆ ಎಂದರು.

ರಾಜಕೀಯ ಎಂದ ಮೇಲೆ ಸೋಲು ಗೆಲುವು ಇದ್ದದ್ದೇ. ಟಿಎಪಿಎಂಸಿಎಸ್ ಚುನಾವಣೆಯಲ್ಲಿ ಹೊಂದಾಣಿಕೆಯಾಗಿದ್ದರಿಂದ ನಮ್ಮ ಪಾರ್ಟಿ ಮತ್ತು ಅವರ ಪಾರ್ಟಿಯಲ್ಲಿ ಅಂತರಗಳಿತ್ತು. ಸ್ವಲ್ಪ ಸಿಂಡಿಕೇಟ್ ಗೆ ಕೆಲಸ ಮಾಡಿದ್ದರೆ ಎಲ್ಲರು ಗೆಲ್ಲುತ್ತಿದ್ದರು. ಮೃತ್ರಿಯಲ್ಲಿ ಸಮನ್ವಯ ಕೊರತೆ ಎದ್ದುಕಾಣುತ್ತಿತ್ತು.‌ ಎಲ್ಲರು ಸಿಂಡಿಕೇಟ್ ಗೆ ಮತ ಹಾಕುತ್ತಾರೆ ಎಂದು ನಂಬಿದ್ದು ನನ್ನ ತಪ್ಪು, ನನ್ನ ಅತಿಯಾದ ಆತ್ಮವಿಶ್ವಾಸವೇ ನನಗೆ ಮುಳುವಾಯಿತು.‌ ಹತ್ತಾರು ಆಸೆ ಆಮಿಷ, ವಿವಿಧ ತಂತ್ರಗರಿಕೆಗಳಲ್ಲಿ ನಾವು ವಿಫಲರಾಗಿದ್ದೇವೆ. ಈ ತಂತ್ರಗಾರಿಕೆಗೆ ಮುಂದಿನ ದಿನಗಳಲ್ಲಿ ತಕ್ಕ ಪ್ರತಿತಂತ್ರ ರೂಪಿಸಿ ಚುನಾವಣೆ ಎದುರಿಸುತ್ತೇವೆ ಎಂದರು.

ಎ ತರಗತಿ ಬಿ ತರಗತಿಗೆ ನಮ್ಮ ಅಭ್ಯರ್ಥಿಗಳನ್ನು ಹಾಕಿದ್ದರೆ ನಾವೇ ಗೆಲ್ಲುತ್ತಿದ್ದೇವು. ಇನ್ನು ಮುಂದೆ ಮೈತ್ರಿ ಮಾಡಿಕೊಂಡರೆ ಯಾವ ರೀತಿ ಎಚ್ಚರದಿಂದ ಇರಬೇಕು ಎಂಬುದನ್ನು ಕಲಿತ್ತಿದ್ದೇನೆ. ನನ್ನ ಶಾಸಕ ಸ್ಥಾನದ ಚುನಾವಣೆ ನಾನು ಮಾಡಿಕೊಂಡಿದ್ದೇನೆ. ಎಂಪಿ ಚುನಾವಣೆ ಮಾಸ್ ಚುನಾವಣೆ ಅದರಲ್ಲಿ ಮೈತ್ರಿ ಮಾಡಿಕೊಂಡು ಅಲ್ಲೂ ಸ್ವಲ್ಪ ಸಮಸ್ಯೆಯಾಯಿತು.‌ ಮೈತ್ರಿಯಿಂದಾಗಿ 5-10 ಸಾವಿರ ವೋಟ್ ಏರುಪೇರಾಯಿತು ಎಂದು ಹೇಳಿದರು.

ಕೆಲವರು ಸರ್ಕಾರಿ ಅಧಿಕಾರಿಗಳು, ಸರ್ಕಾರಿ ಸಂಸ್ಥೆಗಳನ್ನ, ವಿಎಸ್‌ಎಸ್ ಎನ್ ಕಾರ್ಯದರ್ಶಿಗಳನ್ನು ಸರಿಯಾಗಿ ಉಪಯೋಗಿಸಿಕೊಂಡರು. ಇದೆನ್ನೆಲ್ಲಾ ನನಗೆ ಅವರು ಹೇಳಿಕೊಡುತ್ತಿದ್ದಾರೆ. ಅದನ್ನ ಮುಂದಿನ ದಿನಗಳಲ್ಲಿ ಅಳವಡಿಸಿಕೊಂಡು ತಂತ್ರಗಾರಿಕೆ ಎಣಿಯುತ್ತೇನೆ ಎಂದು ತಿಳಿಸಿದರು.

Ramesh Babu

Journalist

Recent Posts

ಒಂದು ವರ್ಷದೊಳಗೆ ಎತ್ತಿನಹೊಳೆ ನೀರು- ಸಚಿವ ಕೆ.ಎಚ್ ಮುನಿಯಪ್ಪ

ಎತ್ತಿನಹೊಳೆ ಯೋಜನೆ ಕಾಮಗಾರಿಯು ತ್ವರಿತಗತಿಯಲ್ಲಿ ಸಾಗುತ್ತಿದ್ದು ಒಂದು ವರ್ಷದಲ್ಲಿ ಜಿಲ್ಲೆಗೆ ನೀರು ಹರಿಯುವ ವಿಶ್ವಾಸವಿದೆ ಎಂದು ಆಹಾರ ನಾಗರಿಕ ಸರಬರಾಜು…

6 hours ago

ಡಿ.15ರಂದು ಕಾಣೆಯಾಗಿದ್ದ 15 ವರ್ಷದ ಬಾಲಕ ಇಂದು ಶವವಾಗಿ ಪತ್ತೆ

ಡಿ.15 ರಂದು ಕಾಣೆಯಾಗಿದ್ದ ಪ್ರಥಮ ಪಿಯುಸಿ ವಿದ್ಯಾರ್ಥಿ ಇಂದು ಶವವಾಗಿ ಪತ್ತೆಯಾಗಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ…

12 hours ago

ಬಸ್ಸಿನಲ್ಲಿ 55 ಲಕ್ಷ ಹಣ ಮತ್ತು ಬಿಲ್ಡಿಂಗ್ ಗೆ ಸಂಬಂಧಿಸಿದ ದಾಖಲಾತಿಗಳನ್ನು ಕಳವು ಮಾಡಿದ್ದ ಅಂತಾರಾಜ್ಯ ಕಳ್ಳರ ಬಂಧನ

ಬಸ್ಸಿನಲ್ಲಿ ಸಾಗಿಸುತ್ತಿದ್ದ 55 ಲಕ್ಷ ರೂ. ನಗದು ಹಾಗೂ ಕಟ್ಟಡಕ್ಕೆ ಸಂಬಂಧಿಸಿದ ದಾಖಲೆಗಳನ್ನು ಕಳವು ಮಾಡಿದ್ದ ಅಂತಾರಾಜ್ಯ ಕಳ್ಳರನ್ನ ಬಂಧಿಸುವಲ್ಲಿ…

13 hours ago

ಟಿಪ್ಪರ್ ಹಾಗೂ ಬೈಕ್ ನಡುವೆ ಮುಖಾಮುಖಿ ಡಿಕ್ಕಿ: ಒಂದೇ ಗ್ರಾಮದ ನಾಲ್ವರು ಯುವಕರು ದುರ್ಮರಣ: ಮುಗಿಲು ಮುಟ್ಟಿದ ಇಬ್ಬರು ಮಕ್ಕಳನ್ನು ಕಳೆದುಕೊಂಡ ತಾಯಿಯ ಆಕ್ರಂದನ: ಇಡೀ ಗ್ರಾಮದಲ್ಲಿ ಮನೆ ಮಾಡಿದ ಸೂತಕದ ವಾತಾವರಣ

ಟಿಪ್ಪರ್ ಹಾಗೂ ಬೈಕ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಒಂದೇ ಗ್ರಾಮದ ನಾಲ್ವರು ಯುವಕರು ಮೃತಪಟ್ಟಿರುವಂತಹ ಹೃದಯವಿದ್ರಾವಕ ಘಟನೆ ಚಿಕ್ಕಬಳ್ಳಾಪುರ…

16 hours ago

ಅಭಿಮಾನಿಗಳ ಅತಿರೇಕ….ಯಾಕಪ್ಪಾ, ಏನಾಗಿದೆ ಸಮಸ್ಯೆ…?

ಅಭಿಮಾನಿಗಳ ಅತಿರೇಕ.... ಹುಚ್ಚುತನದ ಪರಮಾವಧಿ..... ದಚ್ಚು - ಕಿಚ್ಚ. (ದರ್ಶನ್ - ಸುದೀಪ್) + (ಡೆವಿಲ್ - ಮಾರ್ಕ್)........ ಅವರ…

17 hours ago

ಸಾವಿರಾರು ಭಕ್ತಾದಿಗಳ ಸಮ್ಮುಖದಲ್ಲಿ ಅದ್ಧೂರಿಯಾಗಿ ನೆರವೇರಿದ ಘಾಟಿ ಸುಬ್ರಹ್ಮಣ್ಯ ಸ್ವಾಮಿ ಬ್ರಹ್ಮರಥೋತ್ಸವ

ದಕ್ಷಿಣ ಭಾರತದಲ್ಲಿ ನಾಗರಾಧನೆಗೆ ಸುಪ್ರಸಿದ್ಧಿ ಪಡೆದಿರುವ ಘಾಟಿ ಸುಬ್ರಹ್ಮಣ್ಯ ಸ್ವಾಮಿಯ ಬ್ರಹ್ಮರಥೋತ್ಸವ ಸಾವಿರಾರು ಭಕ್ತಾದಿಗಳ ಸಮ್ಮುಖದಲ್ಲಿಂದು ಅದ್ಧೂರಿಯಾಗಿ ನೆರವೇರಿತು. ತಾಲೂಕಿನ…

2 days ago