ಟಿಎಪಿಎಂಸಿಎಸ್ ಚುನಾವಣೆ ಸೋಲಿಗೆ ನಾನೇ ನೇರ ಕಾರಣ. ಸೋಲಿನ ಸಂಪೂರ್ಣ ಜವಾಬ್ದಾರಿ ಶಾಸಕನಾಗಿ ನಾನೇ ತೆಗೆದುಕೊಳ್ಳುತ್ತೇನೆ ಎಂದು ಶಾಸಕ ಧೀರಜ್ ಮುನಿರಾಜ್ ಹೇಳಿದರು.
ದೊಡ್ಡಬಳ್ಳಾಪುರ ತಾಲೂಕಿನ ವ್ಯವಸಾಯ ಉತ್ಪನ್ನ ಮಾರಾಟ ಸಹಕಾರ ಸಂಘದ ಚುನಾವಣೆ ನ.2ರಂದು ನಡೆಯಿತು. ಈ ಚುನಾವಣೆಯಲ್ಲಿ ಎನ್ ಡಿಎ ಮೈತ್ರಿಕೂಟ ಸೋಲನ್ನು ಅನುಭವಿಸಿತ್ತು. ಈ ಕುರಿತು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನನಗೆ ಪಿಎಲ್ ಡಿ ಬ್ಯಾಂಕ್ ನಂತರ ಒಳ್ಳೆ ಅನುಭವವಾಗಿದೆ. ಪಿಎಲ್ ಡಿ ಬ್ಯಾಂಕ್ ಶೇರ್ ಗಳನ್ನು ಸೂಕ್ತರೀತಿಯಲ್ಲಿ ಕಟ್ಟಿಸಿಕೊಂಡಿರಲಿಲ್ಲ. ನನಗೆ ತಾಲೂಕು ಮಟ್ಟದ ಸಹಕಾರಿ ಕ್ಷೇತ್ರದ ಚುನಾವಣೆ ಹೊಸದು, ಅದು ನನಗೆ ಮೊದಲ ಅನುಭವ. ಈ ಹಿನ್ನೆಲೆ ಒಂದು ಚೂರು ಎಡವಿರಬಹುದು. ಸೋಲಿಗೆ ಸಂಪೂರ್ಣವಾಗಿ ನಂದೇ ಜವಾಬ್ದಾರಿಯಾಗಿರುತ್ತದೆ. ಮುಂದಿನ ದಿನಗಳಲ್ಲಿ ಎಲ್ಲವನ್ನೂ ಸರಿಪಡಿಸಿಕೊಂಡು, ಮುಂಬರುವ ಚುನಾವಣೆಗಳನ್ನು ಗೆದ್ದು ತಕ್ಕ ಪ್ರತ್ಯುತ್ತರ ನೀಡುವ ಪ್ರಯತ್ನ ಮಾಡುತ್ತೇವೆ ಎಂದರು.
ರಾಜಕೀಯ ಎಂದ ಮೇಲೆ ಸೋಲು ಗೆಲುವು ಇದ್ದದ್ದೇ. ಟಿಎಪಿಎಂಸಿಎಸ್ ಚುನಾವಣೆಯಲ್ಲಿ ಹೊಂದಾಣಿಕೆಯಾಗಿದ್ದರಿಂದ ನಮ್ಮ ಪಾರ್ಟಿ ಮತ್ತು ಅವರ ಪಾರ್ಟಿಯಲ್ಲಿ ಅಂತರಗಳಿತ್ತು. ಸ್ವಲ್ಪ ಸಿಂಡಿಕೇಟ್ ಗೆ ಕೆಲಸ ಮಾಡಿದ್ದರೆ ಎಲ್ಲರು ಗೆಲ್ಲುತ್ತಿದ್ದರು. ಮೃತ್ರಿಯಲ್ಲಿ ಸಮನ್ವಯ ಕೊರತೆ ಎದ್ದುಕಾಣುತ್ತಿತ್ತು. ಎಲ್ಲರು ಸಿಂಡಿಕೇಟ್ ಗೆ ಮತ ಹಾಕುತ್ತಾರೆ ಎಂದು ನಂಬಿದ್ದು ನನ್ನ ತಪ್ಪು, ನನ್ನ ಅತಿಯಾದ ಆತ್ಮವಿಶ್ವಾಸವೇ ನನಗೆ ಮುಳುವಾಯಿತು. ಹತ್ತಾರು ಆಸೆ ಆಮಿಷ, ವಿವಿಧ ತಂತ್ರಗರಿಕೆಗಳಲ್ಲಿ ನಾವು ವಿಫಲರಾಗಿದ್ದೇವೆ. ಈ ತಂತ್ರಗಾರಿಕೆಗೆ ಮುಂದಿನ ದಿನಗಳಲ್ಲಿ ತಕ್ಕ ಪ್ರತಿತಂತ್ರ ರೂಪಿಸಿ ಚುನಾವಣೆ ಎದುರಿಸುತ್ತೇವೆ ಎಂದರು.
ಎ ತರಗತಿ ಬಿ ತರಗತಿಗೆ ನಮ್ಮ ಅಭ್ಯರ್ಥಿಗಳನ್ನು ಹಾಕಿದ್ದರೆ ನಾವೇ ಗೆಲ್ಲುತ್ತಿದ್ದೇವು. ಇನ್ನು ಮುಂದೆ ಮೈತ್ರಿ ಮಾಡಿಕೊಂಡರೆ ಯಾವ ರೀತಿ ಎಚ್ಚರದಿಂದ ಇರಬೇಕು ಎಂಬುದನ್ನು ಕಲಿತ್ತಿದ್ದೇನೆ. ನನ್ನ ಶಾಸಕ ಸ್ಥಾನದ ಚುನಾವಣೆ ನಾನು ಮಾಡಿಕೊಂಡಿದ್ದೇನೆ. ಎಂಪಿ ಚುನಾವಣೆ ಮಾಸ್ ಚುನಾವಣೆ ಅದರಲ್ಲಿ ಮೈತ್ರಿ ಮಾಡಿಕೊಂಡು ಅಲ್ಲೂ ಸ್ವಲ್ಪ ಸಮಸ್ಯೆಯಾಯಿತು. ಮೈತ್ರಿಯಿಂದಾಗಿ 5-10 ಸಾವಿರ ವೋಟ್ ಏರುಪೇರಾಯಿತು ಎಂದು ಹೇಳಿದರು.
ಕೆಲವರು ಸರ್ಕಾರಿ ಅಧಿಕಾರಿಗಳು, ಸರ್ಕಾರಿ ಸಂಸ್ಥೆಗಳನ್ನ, ವಿಎಸ್ಎಸ್ ಎನ್ ಕಾರ್ಯದರ್ಶಿಗಳನ್ನು ಸರಿಯಾಗಿ ಉಪಯೋಗಿಸಿಕೊಂಡರು. ಇದೆನ್ನೆಲ್ಲಾ ನನಗೆ ಅವರು ಹೇಳಿಕೊಡುತ್ತಿದ್ದಾರೆ. ಅದನ್ನ ಮುಂದಿನ ದಿನಗಳಲ್ಲಿ ಅಳವಡಿಸಿಕೊಂಡು ತಂತ್ರಗಾರಿಕೆ ಎಣಿಯುತ್ತೇನೆ ಎಂದು ತಿಳಿಸಿದರು.
ಕೋಲಾರ: ಅಮೆಜಾನ್ ಸಹಭಾಗಿತ್ವದ ಫ್ಲಿಪ್ ಕಾರ್ಟ್ ನಲ್ಲಿ ಲೀಟರ್ ಹಾಲನ್ನು ಒಂದು ರೂ. ಗೆ ಮಾರಾಟದ ಅವಕಾಶ ಕಲ್ಪಿಸಿರುವುದು ಅತ್ಯಂತ…
ಭೀಕರ ಅಪಘಾತದಲ್ಲಿ ಮೂವರು ರಿಸರ್ವ್ (ಮೀಸಲು ಪೊಲೀಸ್ ಪಡೆ) ಸಬ್ ಇನ್ಸ್ಪೆಕ್ಟರ್ಗಳು ಸಾವನ್ನಪ್ಪಿದ್ದು, ಇಬ್ಬರು ಗಾಯಗೊಂಡಿದ್ದಾರೆ. ಇದಲ್ಲದೆ, ಚಾಮರಾಜನಗರ ಮತ್ತು…
ಕಾನ್ಸಿರಾಮ್ ಅವರು 1978 ರಲ್ಲಿ ಅಖಿಲ ಭಾರತ ಹಿಂದುಳಿದ ಹಾಗೂ ಅಲ್ಪಸಂಖ್ಯಾತ ನೌಕರರ ಒಕ್ಕೂಟ (ಬಿಎಎಂಸಿಇಎಫ್) ಸ್ಥಾಪಿಸಿದ್ದರು. 1984ರಲ್ಲಿ ಬಹುಜನ್…
ಚಿಕ್ಕಮಗಳೂರು: ಪುರುಷ ಪ್ರಾಧಾನ್ಯತೆಯ ಸಂಪ್ರದಾಯಕ್ಕೆ ತಿಲಾಂಜಲಿ ಇಟ್ಟು, ಹೆಣ್ಣು ಮಕ್ಕಳೇ ತಮ್ಮ ತಂದೆಯ ಅಂತ್ಯಸಂಸ್ಕಾರ ನಡೆಸಿ ಲಿಂಗ ಸಮಾನತೆಯ ಸಂದೇಶ…
ಹೈದರಾಬಾದ್: ಮದುವೆಯಾಗಲು ನಿರಾಕರಿಸಿದ ಯುವತಿಯೊಬ್ಬಳಿಗೆ ಆಕೆಯ ಪ್ರಿಯಕರನೇ HIV ಪಾಸಿಟಿವ್ ಇಂಜಕ್ಷನ್ ಚುಚ್ಚಿದ ಆಘಾತಕಾರಿ ಘಟನೆ ಹೈದರಾಬಾದ್ನ ಮೆಡ್ಚಲ್ ಪ್ರದೇಶದಲ್ಲಿ…
ಸೇವೆಗಾಗಿ ಬಾಳು ಭಾರತ ಸೇವಾದಳ ಬೆಂಗಳೂರು ಗ್ರಾಮಾಂತರ ಜಿಲ್ಲೆ, ಭಾರತ ಸೇವಾದಳ ದೇವನಹಳ್ಳಿ ತಾಲೂಕು ಘಟಕ, ಕರ್ನಾಟಕ ರಾಜ್ಯ ಪ್ರಾಥಮಿಕ…