ಟಿಎಪಿಎಂಸಿಎಸ್ ಚುನಾವಣೆ ಸೋಲಿಗೆ ನಾನೇ ನೇರ ಕಾರಣ- ಸೋಲಿನ ಸಂಪೂರ್ಣ ಜವಾಬ್ದಾರಿ ಶಾಸಕನಾಗಿ ನಾನೇ ತೆಗೆದುಕೊಳ್ಳುತ್ತೇನೆ- ಶಾಸಕ ಧೀರಜ್‌ ಮುನಿರಾಜ್

ಟಿಎಪಿಎಂಸಿಎಸ್ ಚುನಾವಣೆ ಸೋಲಿಗೆ ನಾನೇ ನೇರ ಕಾರಣ. ಸೋಲಿನ ಸಂಪೂರ್ಣ ಜವಾಬ್ದಾರಿ ಶಾಸಕನಾಗಿ ನಾನೇ ತೆಗೆದುಕೊಳ್ಳುತ್ತೇನೆ ಎಂದು ಶಾಸಕ ಧೀರಜ್‌ ಮುನಿರಾಜ್ ಹೇಳಿದರು.

ದೊಡ್ಡಬಳ್ಳಾಪುರ ತಾಲೂಕಿನ ವ್ಯವಸಾಯ ಉತ್ಪನ್ನ ಮಾರಾಟ ಸಹಕಾರ ಸಂಘದ ಚುನಾವಣೆ ನ.2ರಂದು ನಡೆಯಿತು. ಈ ಚುನಾವಣೆಯಲ್ಲಿ ಎನ್ ಡಿಎ ಮೈತ್ರಿಕೂಟ ಸೋಲನ್ನು ಅನುಭವಿಸಿತ್ತು. ಈ ಕುರಿತು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನನಗೆ ಪಿಎಲ್ ಡಿ ಬ್ಯಾಂಕ್ ನಂತರ ಒಳ್ಳೆ ಅನುಭವವಾಗಿದೆ. ಪಿಎಲ್ ಡಿ ಬ್ಯಾಂಕ್ ಶೇರ್ ಗಳನ್ನು ಸೂಕ್ತರೀತಿಯಲ್ಲಿ ಕಟ್ಟಿಸಿಕೊಂಡಿರಲಿಲ್ಲ. ನನಗೆ ತಾಲೂಕು ಮಟ್ಟದ ಸಹಕಾರಿ ಕ್ಷೇತ್ರದ ಚುನಾವಣೆ ಹೊಸದು, ಅದು ನನಗೆ ಮೊದಲ ಅನುಭವ. ಈ ಹಿನ್ನೆಲೆ ಒಂದು ಚೂರು ಎಡವಿರಬಹುದು. ಸೋಲಿಗೆ ಸಂಪೂರ್ಣವಾಗಿ ನಂದೇ ಜವಾಬ್ದಾರಿಯಾಗಿರುತ್ತದೆ.‌ ಮುಂದಿನ ದಿನಗಳಲ್ಲಿ ಎಲ್ಲವನ್ನೂ ಸರಿಪಡಿಸಿಕೊಂಡು, ಮುಂಬರುವ ಚುನಾವಣೆಗಳನ್ನು ಗೆದ್ದು ತಕ್ಕ ಪ್ರತ್ಯುತ್ತರ ನೀಡುವ ಪ್ರಯತ್ನ ಮಾಡುತ್ತೇವೆ ಎಂದರು.

ರಾಜಕೀಯ ಎಂದ ಮೇಲೆ ಸೋಲು ಗೆಲುವು ಇದ್ದದ್ದೇ. ಟಿಎಪಿಎಂಸಿಎಸ್ ಚುನಾವಣೆಯಲ್ಲಿ ಹೊಂದಾಣಿಕೆಯಾಗಿದ್ದರಿಂದ ನಮ್ಮ ಪಾರ್ಟಿ ಮತ್ತು ಅವರ ಪಾರ್ಟಿಯಲ್ಲಿ ಅಂತರಗಳಿತ್ತು. ಸ್ವಲ್ಪ ಸಿಂಡಿಕೇಟ್ ಗೆ ಕೆಲಸ ಮಾಡಿದ್ದರೆ ಎಲ್ಲರು ಗೆಲ್ಲುತ್ತಿದ್ದರು. ಮೃತ್ರಿಯಲ್ಲಿ ಸಮನ್ವಯ ಕೊರತೆ ಎದ್ದುಕಾಣುತ್ತಿತ್ತು.‌ ಎಲ್ಲರು ಸಿಂಡಿಕೇಟ್ ಗೆ ಮತ ಹಾಕುತ್ತಾರೆ ಎಂದು ನಂಬಿದ್ದು ನನ್ನ ತಪ್ಪು, ನನ್ನ ಅತಿಯಾದ ಆತ್ಮವಿಶ್ವಾಸವೇ ನನಗೆ ಮುಳುವಾಯಿತು.‌ ಹತ್ತಾರು ಆಸೆ ಆಮಿಷ, ವಿವಿಧ ತಂತ್ರಗರಿಕೆಗಳಲ್ಲಿ ನಾವು ವಿಫಲರಾಗಿದ್ದೇವೆ. ಈ ತಂತ್ರಗಾರಿಕೆಗೆ ಮುಂದಿನ ದಿನಗಳಲ್ಲಿ ತಕ್ಕ ಪ್ರತಿತಂತ್ರ ರೂಪಿಸಿ ಚುನಾವಣೆ ಎದುರಿಸುತ್ತೇವೆ ಎಂದರು.

ಎ ತರಗತಿ ಬಿ ತರಗತಿಗೆ ನಮ್ಮ ಅಭ್ಯರ್ಥಿಗಳನ್ನು ಹಾಕಿದ್ದರೆ ನಾವೇ ಗೆಲ್ಲುತ್ತಿದ್ದೇವು. ಇನ್ನು ಮುಂದೆ ಮೈತ್ರಿ ಮಾಡಿಕೊಂಡರೆ ಯಾವ ರೀತಿ ಎಚ್ಚರದಿಂದ ಇರಬೇಕು ಎಂಬುದನ್ನು ಕಲಿತ್ತಿದ್ದೇನೆ. ನನ್ನ ಶಾಸಕ ಸ್ಥಾನದ ಚುನಾವಣೆ ನಾನು ಮಾಡಿಕೊಂಡಿದ್ದೇನೆ. ಎಂಪಿ ಚುನಾವಣೆ ಮಾಸ್ ಚುನಾವಣೆ ಅದರಲ್ಲಿ ಮೈತ್ರಿ ಮಾಡಿಕೊಂಡು ಅಲ್ಲೂ ಸ್ವಲ್ಪ ಸಮಸ್ಯೆಯಾಯಿತು.‌ ಮೈತ್ರಿಯಿಂದಾಗಿ 5-10 ಸಾವಿರ ವೋಟ್ ಏರುಪೇರಾಯಿತು ಎಂದು ಹೇಳಿದರು.

ಕೆಲವರು ಸರ್ಕಾರಿ ಅಧಿಕಾರಿಗಳು, ಸರ್ಕಾರಿ ಸಂಸ್ಥೆಗಳನ್ನ, ವಿಎಸ್‌ಎಸ್ ಎನ್ ಕಾರ್ಯದರ್ಶಿಗಳನ್ನು ಸರಿಯಾಗಿ ಉಪಯೋಗಿಸಿಕೊಂಡರು. ಇದೆನ್ನೆಲ್ಲಾ ನನಗೆ ಅವರು ಹೇಳಿಕೊಡುತ್ತಿದ್ದಾರೆ. ಅದನ್ನ ಮುಂದಿನ ದಿನಗಳಲ್ಲಿ ಅಳವಡಿಸಿಕೊಂಡು ತಂತ್ರಗಾರಿಕೆ ಎಣಿಯುತ್ತೇನೆ ಎಂದು ತಿಳಿಸಿದರು.

Ramesh Babu

Journalist

Recent Posts

‘ಶಿಕ್ಷಕರು ವಿದ್ಯಾರ್ಥಿಗಳ ಭವಿಷ್ಯ ರೂಪಿಸುವ ಶಿಲ್ಪಿಗಳು’

ದೊಡ್ಡಬಳ್ಳಾಪುರ: ಇಂದಿನ ವಿದ್ಯಾರ್ಥಿಗಳಿಗೆ ಪಾಠ ಹೇಳಿಕೊಡಲು ಶಿಕ್ಷಕರಿಗೆ ಜ್ಞಾನವಷ್ಟೇ ಸಾಕಾಗುವುದಿಲ್ಲ. ಅಪಾರ ತಾಳ್ಮೆ, ಸಹನೆ, ನಯ-ವಿನಯ ಹಾಗೂ ಮಕ್ಕಳ ಮನಸ್ಸನ್ನು…

4 hours ago

ಬೆಸ್ಕಾಂ ವಿರುದ್ಧ ಒಣ ಮೆಣಸಿನಕಾಯಿ ಹೊಗೆ ಹೋರಾಟಕ್ಕೆ ರೈತರ ನಿರ್ಧಾರ

ಕೋಲಾರ : ಬರ ಹಾಗೂ ಬಿಸಿಲಿನ ತಾಪದಿಂದ ರೈತರ ಬೆಳೆಗಳು ಒಣಗುತ್ತಿರುವ ಸಂದರ್ಭದಲ್ಲಿ ಸಮರ್ಪಕ ಹಾಗೂ ಗುಣಮಟ್ಟದ ವಿದ್ಯುತ್ ಪೂರೈಕೆ…

5 hours ago

ಸೆ.7ರಂದು ದೊಡ್ಡಬಳ್ಳಾಪುರದ ಹಲವು ಪ್ರದೇಶಗಳಲ್ಲಿ ವಿದ್ಯುತ್ ಅಡಚಣೆ

ದೊಡ್ಡಬಳ್ಳಾಪುರ: ನಗರದಲ್ಲಿ ವಿದ್ಯುತ್ ಕಾಮಗಾರಿ ಕೈಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಸೆಪ್ಟೆಂಬರ್ 7ರಂದು ದೊಡ್ಡಬಳ್ಳಾಪುರದ ಹಲವು ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ. 66/11…

11 hours ago

ಗ್ರಾಮೀಣ ಪ್ರದೇಶದ ಕುಟುಂಬಗಳಿಗೆ ಉದ್ಯೋಗ ಭದ್ರತೆ : ಪಿಡಿಒ ಮುದ್ದಲಿಂಗಯ್ಯ

ಚಿಕ್ಕನಾಯಕನಹಳ್ಳಿ : ಗ್ರಾಮೀಣ ಪ್ರದೇಶದ ಕುಟುಂಬಗಳಿಗೆ ಉದ್ಯೋಗ ಭದ್ರತೆ ಒದಗಿಸುವಲ್ಲಿ ಹಾಗೂ ಆರ್ಥಿಕವಾಗಿ ಸಬಲಗೊಳಿಸುವಲ್ಲಿ 'ವಿಬಿ-ಜಿ ರಾಮ್ ಜಿ' ಯೋಜನೆಯು ಗ್ರಾಮಸ್ಥರಿಗೆ…

22 hours ago

ಬೆನಕನಹಳ್ಳ ಅಭಿವೃದ್ಧಿಗೆ ಮೂಲಸೌಕರ್ಯ ಅಗತ್ಯ: ನಿಸರ್ಗ ನಾರಾಯಣಸ್ವಾಮಿ

ದೊಡ್ಡಬಳ್ಳಾಪುರ: ಪುರಾತನ ದೇವಾಲಯಗಳು, ಧಾರ್ಮಿಕ ಮಹತ್ವ ಹಾಗೂ ಪ್ರಕೃತಿ ಸೌಂದರ್ಯದ ಸಂಗಮವಾಗಿರುವ ಬೆನಕನಹಳ್ಳವನ್ನು ಸಮರ್ಪಕ ಮೂಲಸೌಕರ್ಯಗಳೊಂದಿಗೆ ಅಭಿವೃದ್ಧಿಪಡಿಸಿದರೆ ಪ್ರಮುಖ ಧಾರ್ಮಿಕ…

23 hours ago

ಮೇಕೆ ವಿಚಾರಕ್ಕೆ ಗಲಾಟೆ; ವ್ಯಕ್ತಿಯ ಕೊಲೆ: ಮೂವರಿಗೆ ಶಿಕ್ಷೆ ಮುಖ್ಯ ಆರೋಪಿಗೆ ಜೀವಾವಧಿ ಶಿಕ್ಷೆ, ಇಬ್ಬರಿಗೆ ಜೈಲು ಶಿಕ್ಷೆ ಹಾಗೂ ದಂಡ

ದೊಡ್ಡಬಳ್ಳಾಪುರ: ಮೇಕೆ ಮಗುಗೆ ಗುದ್ದಿದ ವಿಚಾರವಾಗಿ ಉಂಟಾದ ಗಲಾಟೆ ಕೊಲೆಯಲ್ಲಿ ಅಂತ್ಯಗೊಂಡ ಪ್ರಕರಣದಲ್ಲಿ ಮೂವರು ಆರೋಪಿಗಳನ್ನು ಅಪರಾಧಿಗಳೆಂದು ತೀರ್ಪು ನೀಡಿರುವ…

24 hours ago